AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮೊಘಲರೇ ನಿಜವಾಗಿ ಈ ದೇಶ ಕಟ್ಟಿದ್ದು; ಅವರ ಬಗ್ಗೆ ಕೆಟ್ಟ ಮಾತು ಸರಿಯಲ್ಲ’: ನಿರ್ದೇಶಕ ಕಬೀರ್​ ಖಾನ್​

Kabir Khan: ಬಾಲಿವುಡ್​ನಲ್ಲಿ ಅನೇಕ ಹಿಟ್​ ಸಿನಿಮಾಗಳನ್ನು ನೀಡಿದವರು ಕಬೀರ್​ ಖಾನ್​. ಈಗ ಅವರು ಮೊಘಲರ ಬಗ್ಗೆ ಈ ರೀತಿ ಹೇಳಿಕೆ ನೀಡಿರುವುದು ಚರ್ಚೆಗೆ ಕಾರಣ ಆಗುತ್ತಿದೆ.

‘ಮೊಘಲರೇ ನಿಜವಾಗಿ ಈ ದೇಶ ಕಟ್ಟಿದ್ದು; ಅವರ ಬಗ್ಗೆ ಕೆಟ್ಟ ಮಾತು ಸರಿಯಲ್ಲ’: ನಿರ್ದೇಶಕ ಕಬೀರ್​ ಖಾನ್​
ಕಬೀರ್ ಖಾನ್​
TV9 Web
| Edited By: |

Updated on: Aug 26, 2021 | 9:03 AM

Share

ಭಾರತದಲ್ಲಿ ಆಡಳಿತ ನಡೆಸಿದ ಮುಸ್ಲಿಂ ರಾಜರನ್ನು ಸಿನಿಮಾಗಳಲ್ಲಿ ಕೆಟ್ಟದಾಗಿ ಬಿಂಬಿಸಲಾಗಿದೆ ಎಂದು ಬಾಲಿವುಡ್​ ನಿರ್ದೇಶಕ ಕಬೀರ್​ ಖಾನ್​ ಅಭಿಪ್ರಾಯ ಪಟ್ಟಿದ್ದಾರೆ. ಖಾಸಗಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ಬಗ್ಗೆ ವಿವರವಾಗಿ ಮಾತನಾಡಿದ್ದಾರೆ. ‘ಹಲವು ಸಿನಿಮಾಗಳಲ್ಲಿ ಮೊಘಲರನ್ನು ದುಷ್ಟರಂತೆ ತೋರಿಸಲಾಗಿದೆ. ಆದರೆ ಅವರೇ ನಿಜವಾಗಿ ಈ ದೇಶವನ್ನು ಕಟ್ಟಿದವರು’ ಎಂದು ಕಬೀರ್​ ಖಾನ್​ ಹೇಳಿರುವುದು ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಡಿಸ್ನಿ ಪ್ಲಸ್​ ಹಾಟ್​ಸ್ಟಾರ್​ನಲ್ಲಿ ‘ದಿ ಎಂಪೈರ್​’ ಸೀರಿಸ್​ ಬಿಡುಗಡೆ ಆಗಲು ಸಜ್ಜಾಗಿರುವ ಈ ಸಮಯದಲ್ಲಿ ಅವರು ಇಂಥ ಹೇಳಿಕೆ ನೀಡಿದ್ದಾರೆ.

ಬಾಲಿವುಡ್​ನಲ್ಲಿ ಅನೇಕ ಹಿಟ್​ ಸಿನಿಮಾಗಳನ್ನು ನೀಡಿದವರು ಕಬೀರ್​ ಖಾನ್​. ಬಜರಂಗಿ ಭಾಯಿಜಾನ್​, ಏಕ್​ ಥಾ ಟೈಗರ್​, ಕಾಬೂಲ್ ಎಕ್ಸ್​ಪ್ರೆಸ್​ ಮುಂತಾದ ಸಿನಿಮಾಗಳ ಮೂಲಕ ಅವರು ಫೇಮಸ್​ ಆಗಿದ್ದಾರೆ. 1983ರಲ್ಲಿ ಭಾರತ ಕ್ರಿಕೆಟ್​ ತಂಡ ವಿಶ್ವಕಪ್​ ಗೆದ್ದ ಘಟನೆಯನ್ನೇ ಆಧರಿಸಿ ತಯಾರಾಗಿರುವ ‘83’ ಚಿತ್ರಕ್ಕೂ ಕಬೀರ್​ ಖಾನ್​ ಅವರದ್ದೇ ನಿರ್ದೇಶನವಿದೆ. ಈಗ ಅವರು ಮೊಘಲರ ಬಗ್ಗೆ ಈ ರೀತಿ ಹೇಳಿಕೆ ನೀಡಿದ್ದಾರೆ.

‘ಭಿನ್ನ ದೃಷ್ಟಿಕೋನಗಳು ಇರಬಹುದು. ನೀವು ಮೊಘಲರನ್ನು ಕೆಟ್ಟವರು ಎಂದು ಬಿಂಬಿಸುವುದಾದರೆ ಅದಕ್ಕೆ ಸೂಕ್ತ ಸಾಕ್ಷಿಗಳನ್ನು ನೀಡಿ. ಅವರು ಯಾಕೆ ವಿಲನ್​ ಆಗಿದ್ದರು ಎಂಬುದನ್ನು ಸಂಶೋಧನೆ, ಅಧ್ಯಯನಗಳ ಮೂಲಕ ತಿಳಿಸಿಕೊಡಿ. ಸರಿಯಾಗಿ ​ಇತಿಹಾಸ ನೋಡಿದಾಗ ಅವರನ್ನು ಕೆಟ್ಟವರು ಎಂದು ಹೇಳುವುದನ್ನು ಒಪ್ಪಿಕೊಳ್ಳುವುದು ಕಷ್ಟ ಆಗುತ್ತದೆ. ನನಗೆ ಅನಿಸಿದಂತೆ ಅವರೇ ನಿಜವಾಗಿ ದೇಶ ಕಟ್ಟಿದವರು’ ಎಂದು ಕಬೀರ್​ ಖಾನ್​ ಹೇಳಿದ್ದಾರೆ.

‘ಮೊಘಲರನ್ನು ನೀವು ಕೊಲೆಗಡುಕರು ಎನ್ನುತ್ತೀರಿ. ಅದಕ್ಕೆ ಸಾಕ್ಷಿ ಏನಿದೆ? ಮುಕ್ತವಾಗಿ ಚರ್ಚೆ ಮಾಡಿ. ಭಾರತವನ್ನು ಆಳಿದ ಮುಸ್ಲಿಂ ರಾಜರ ಮೇಲೆ ಆರೋಪ ಹೊರಿಸುವುದು ಇಂದು ತುಂಬ ಸುಲಭದ ಕೆಲಸವಾಗಿದೆ. ಅಂಥ ಸಿನಿಮಾಗಳ ಬಗ್ಗೆ ನನಗೆ ಗೌರವ ಇಲ್ಲ. ಇದು ನನ್ನ ವೈಯಕ್ತಿಕ ಅಭಿಪ್ರಾಯ’ ಎಂದು ಕಬೀರ್​ ಖಾನ್​ ಹೇಳಿದ್ದಾರೆ.

ಅಫ್ಘಾನಿಸ್ತಾನದ ಪ್ರಸ್ತುತ ಪರಿಸ್ಥಿತಿ ಬಗ್ಗೆಯೂ ಕಬೀರ್​ ಖಾನ್​ ಇತ್ತೀಚೆಗೆ ಮಾತನಾಡಿದ್ದರು. ‘ನನ್ನ ಮೊದಲ ಸಿನಿಮಾ ‘ಕಾಬೂಲ್​ ಎಕ್ಸ್​​ಪ್ರೆಸ್’​ ಶೂಟಿಂಗ್​ಗಾಗಿ ನಾನು ಅಪ್ಘಾನಿಸ್ತಾನಕ್ಕೆ ತೆರಳಿದ್ದೆ. ಆದಿತ್ಯ ಚೋಪ್ರಾ ಅವರು ಅಪ್ಘಾನಿಸ್ತಾನದಲ್ಲಿ ಶೂಟ್​ ಮಾಡೋದು ಕಷ್ಟ ಎಂದು ಹೇಳಿದ್ದರು. ಆದರೆ, ಅಲ್ಲಿಯ ಜನರು ಸಿನಿಮಾ ಶೂಟ್​ಗೆ ಸಹಾಯ ಮಾಡಿದ್ದರು. ಈ ವೇಳೆ ತಾಲಿಬಾನಿಗಳಿಂದ ಜೀವ ಬೆದರಿಕೆ ಇತ್ತು. ಆದರೆ, ಅಲ್ಲಿನ ಜನರು ನನಗೆ ಸಂಪೂರ್ಣ ಬೆಂಬಲ ನೀಡಿದ್ದರು. ಈಗ ಅವರೇ ಕಷ್ಟಕ್ಕೆ ಸಿಲುಕಿದ್ದಾರೆ. ಅವರಿಗೆ ಸಹಾಯ ಮಾಡೋಕೆ ಆಗುತ್ತಿಲ್ಲ ಎನ್ನುವ ಬೇಸರ ನನಗಿದೆ’ ಎಂದು ಕಬೀರ್​ ಖಾನ್​ ಹೇಳಿದ್ದರು.

ಇದನ್ನೂ ಓದಿ:

ಅಫ್ಘಾನಿಸ್ತಾನದ ಜೊತೆ ನಟ ಸಲ್ಮಾನ್ ಖಾನ್​ಗೆ ಇದೆ ಒಂದು ಸಂಬಂಧ; ಏನದು?

ಮೃತದೇಹದೊಂದಿಗೂ ಸೆಕ್ಸ್ ಮಾಡಿದ ತಾಲಿಬಾನಿಗಳು; ಅಫ್ಘಾನಿಸ್ತಾನದಿಂದ ತಪ್ಪಿಸಿಕೊಂಡು ಬಂದ ಮಹಿಳೆ ಹೇಳಿದ ಆಘಾತಕಾರಿ ಸಂಗತಿ

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?