AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮೊಘಲರೇ ನಿಜವಾಗಿ ಈ ದೇಶ ಕಟ್ಟಿದ್ದು; ಅವರ ಬಗ್ಗೆ ಕೆಟ್ಟ ಮಾತು ಸರಿಯಲ್ಲ’: ನಿರ್ದೇಶಕ ಕಬೀರ್​ ಖಾನ್​

Kabir Khan: ಬಾಲಿವುಡ್​ನಲ್ಲಿ ಅನೇಕ ಹಿಟ್​ ಸಿನಿಮಾಗಳನ್ನು ನೀಡಿದವರು ಕಬೀರ್​ ಖಾನ್​. ಈಗ ಅವರು ಮೊಘಲರ ಬಗ್ಗೆ ಈ ರೀತಿ ಹೇಳಿಕೆ ನೀಡಿರುವುದು ಚರ್ಚೆಗೆ ಕಾರಣ ಆಗುತ್ತಿದೆ.

‘ಮೊಘಲರೇ ನಿಜವಾಗಿ ಈ ದೇಶ ಕಟ್ಟಿದ್ದು; ಅವರ ಬಗ್ಗೆ ಕೆಟ್ಟ ಮಾತು ಸರಿಯಲ್ಲ’: ನಿರ್ದೇಶಕ ಕಬೀರ್​ ಖಾನ್​
ಕಬೀರ್ ಖಾನ್​
TV9 Web
| Edited By: |

Updated on: Aug 26, 2021 | 9:03 AM

Share

ಭಾರತದಲ್ಲಿ ಆಡಳಿತ ನಡೆಸಿದ ಮುಸ್ಲಿಂ ರಾಜರನ್ನು ಸಿನಿಮಾಗಳಲ್ಲಿ ಕೆಟ್ಟದಾಗಿ ಬಿಂಬಿಸಲಾಗಿದೆ ಎಂದು ಬಾಲಿವುಡ್​ ನಿರ್ದೇಶಕ ಕಬೀರ್​ ಖಾನ್​ ಅಭಿಪ್ರಾಯ ಪಟ್ಟಿದ್ದಾರೆ. ಖಾಸಗಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ಬಗ್ಗೆ ವಿವರವಾಗಿ ಮಾತನಾಡಿದ್ದಾರೆ. ‘ಹಲವು ಸಿನಿಮಾಗಳಲ್ಲಿ ಮೊಘಲರನ್ನು ದುಷ್ಟರಂತೆ ತೋರಿಸಲಾಗಿದೆ. ಆದರೆ ಅವರೇ ನಿಜವಾಗಿ ಈ ದೇಶವನ್ನು ಕಟ್ಟಿದವರು’ ಎಂದು ಕಬೀರ್​ ಖಾನ್​ ಹೇಳಿರುವುದು ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಡಿಸ್ನಿ ಪ್ಲಸ್​ ಹಾಟ್​ಸ್ಟಾರ್​ನಲ್ಲಿ ‘ದಿ ಎಂಪೈರ್​’ ಸೀರಿಸ್​ ಬಿಡುಗಡೆ ಆಗಲು ಸಜ್ಜಾಗಿರುವ ಈ ಸಮಯದಲ್ಲಿ ಅವರು ಇಂಥ ಹೇಳಿಕೆ ನೀಡಿದ್ದಾರೆ.

ಬಾಲಿವುಡ್​ನಲ್ಲಿ ಅನೇಕ ಹಿಟ್​ ಸಿನಿಮಾಗಳನ್ನು ನೀಡಿದವರು ಕಬೀರ್​ ಖಾನ್​. ಬಜರಂಗಿ ಭಾಯಿಜಾನ್​, ಏಕ್​ ಥಾ ಟೈಗರ್​, ಕಾಬೂಲ್ ಎಕ್ಸ್​ಪ್ರೆಸ್​ ಮುಂತಾದ ಸಿನಿಮಾಗಳ ಮೂಲಕ ಅವರು ಫೇಮಸ್​ ಆಗಿದ್ದಾರೆ. 1983ರಲ್ಲಿ ಭಾರತ ಕ್ರಿಕೆಟ್​ ತಂಡ ವಿಶ್ವಕಪ್​ ಗೆದ್ದ ಘಟನೆಯನ್ನೇ ಆಧರಿಸಿ ತಯಾರಾಗಿರುವ ‘83’ ಚಿತ್ರಕ್ಕೂ ಕಬೀರ್​ ಖಾನ್​ ಅವರದ್ದೇ ನಿರ್ದೇಶನವಿದೆ. ಈಗ ಅವರು ಮೊಘಲರ ಬಗ್ಗೆ ಈ ರೀತಿ ಹೇಳಿಕೆ ನೀಡಿದ್ದಾರೆ.

‘ಭಿನ್ನ ದೃಷ್ಟಿಕೋನಗಳು ಇರಬಹುದು. ನೀವು ಮೊಘಲರನ್ನು ಕೆಟ್ಟವರು ಎಂದು ಬಿಂಬಿಸುವುದಾದರೆ ಅದಕ್ಕೆ ಸೂಕ್ತ ಸಾಕ್ಷಿಗಳನ್ನು ನೀಡಿ. ಅವರು ಯಾಕೆ ವಿಲನ್​ ಆಗಿದ್ದರು ಎಂಬುದನ್ನು ಸಂಶೋಧನೆ, ಅಧ್ಯಯನಗಳ ಮೂಲಕ ತಿಳಿಸಿಕೊಡಿ. ಸರಿಯಾಗಿ ​ಇತಿಹಾಸ ನೋಡಿದಾಗ ಅವರನ್ನು ಕೆಟ್ಟವರು ಎಂದು ಹೇಳುವುದನ್ನು ಒಪ್ಪಿಕೊಳ್ಳುವುದು ಕಷ್ಟ ಆಗುತ್ತದೆ. ನನಗೆ ಅನಿಸಿದಂತೆ ಅವರೇ ನಿಜವಾಗಿ ದೇಶ ಕಟ್ಟಿದವರು’ ಎಂದು ಕಬೀರ್​ ಖಾನ್​ ಹೇಳಿದ್ದಾರೆ.

‘ಮೊಘಲರನ್ನು ನೀವು ಕೊಲೆಗಡುಕರು ಎನ್ನುತ್ತೀರಿ. ಅದಕ್ಕೆ ಸಾಕ್ಷಿ ಏನಿದೆ? ಮುಕ್ತವಾಗಿ ಚರ್ಚೆ ಮಾಡಿ. ಭಾರತವನ್ನು ಆಳಿದ ಮುಸ್ಲಿಂ ರಾಜರ ಮೇಲೆ ಆರೋಪ ಹೊರಿಸುವುದು ಇಂದು ತುಂಬ ಸುಲಭದ ಕೆಲಸವಾಗಿದೆ. ಅಂಥ ಸಿನಿಮಾಗಳ ಬಗ್ಗೆ ನನಗೆ ಗೌರವ ಇಲ್ಲ. ಇದು ನನ್ನ ವೈಯಕ್ತಿಕ ಅಭಿಪ್ರಾಯ’ ಎಂದು ಕಬೀರ್​ ಖಾನ್​ ಹೇಳಿದ್ದಾರೆ.

ಅಫ್ಘಾನಿಸ್ತಾನದ ಪ್ರಸ್ತುತ ಪರಿಸ್ಥಿತಿ ಬಗ್ಗೆಯೂ ಕಬೀರ್​ ಖಾನ್​ ಇತ್ತೀಚೆಗೆ ಮಾತನಾಡಿದ್ದರು. ‘ನನ್ನ ಮೊದಲ ಸಿನಿಮಾ ‘ಕಾಬೂಲ್​ ಎಕ್ಸ್​​ಪ್ರೆಸ್’​ ಶೂಟಿಂಗ್​ಗಾಗಿ ನಾನು ಅಪ್ಘಾನಿಸ್ತಾನಕ್ಕೆ ತೆರಳಿದ್ದೆ. ಆದಿತ್ಯ ಚೋಪ್ರಾ ಅವರು ಅಪ್ಘಾನಿಸ್ತಾನದಲ್ಲಿ ಶೂಟ್​ ಮಾಡೋದು ಕಷ್ಟ ಎಂದು ಹೇಳಿದ್ದರು. ಆದರೆ, ಅಲ್ಲಿಯ ಜನರು ಸಿನಿಮಾ ಶೂಟ್​ಗೆ ಸಹಾಯ ಮಾಡಿದ್ದರು. ಈ ವೇಳೆ ತಾಲಿಬಾನಿಗಳಿಂದ ಜೀವ ಬೆದರಿಕೆ ಇತ್ತು. ಆದರೆ, ಅಲ್ಲಿನ ಜನರು ನನಗೆ ಸಂಪೂರ್ಣ ಬೆಂಬಲ ನೀಡಿದ್ದರು. ಈಗ ಅವರೇ ಕಷ್ಟಕ್ಕೆ ಸಿಲುಕಿದ್ದಾರೆ. ಅವರಿಗೆ ಸಹಾಯ ಮಾಡೋಕೆ ಆಗುತ್ತಿಲ್ಲ ಎನ್ನುವ ಬೇಸರ ನನಗಿದೆ’ ಎಂದು ಕಬೀರ್​ ಖಾನ್​ ಹೇಳಿದ್ದರು.

ಇದನ್ನೂ ಓದಿ:

ಅಫ್ಘಾನಿಸ್ತಾನದ ಜೊತೆ ನಟ ಸಲ್ಮಾನ್ ಖಾನ್​ಗೆ ಇದೆ ಒಂದು ಸಂಬಂಧ; ಏನದು?

ಮೃತದೇಹದೊಂದಿಗೂ ಸೆಕ್ಸ್ ಮಾಡಿದ ತಾಲಿಬಾನಿಗಳು; ಅಫ್ಘಾನಿಸ್ತಾನದಿಂದ ತಪ್ಪಿಸಿಕೊಂಡು ಬಂದ ಮಹಿಳೆ ಹೇಳಿದ ಆಘಾತಕಾರಿ ಸಂಗತಿ

Follow Us
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ವಿದ್ಯಾರ್ಥಿಗಳೇ ಗಮನಿಸಿ: SSLC ಫೇಲ್​​ ಆದವರಿಗೆ 3ನೇ ಬಾರಿ ಪರೀಕ್ಷೆ ಇರಲ್ಲ
ವಿದ್ಯಾರ್ಥಿಗಳೇ ಗಮನಿಸಿ: SSLC ಫೇಲ್​​ ಆದವರಿಗೆ 3ನೇ ಬಾರಿ ಪರೀಕ್ಷೆ ಇರಲ್ಲ