AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೂಟಿಂಗ್ ವೇಳೆಯೇ ಬಾಲಿವುಡ್​ ಖ್ಯಾತ ನಿರ್ದೇಶಕನಿಗೆ ತಾಲಿಬಾನಿಗಳಿಂದ ಬಂತು ಜೀವ ಬೆದರಿಕೆ

ಶೂಟಿಂಗ್​ ವೇಳೆ ತಾಲಿಬಾನಿಗಳಿಂದ ಜೀವ ಬೆದರಿಕೆ ಬಂದಿತ್ತು ಎಂಬ ವಿಚಾರವನ್ನು ಬಾಲಿವುಡ್​ನ ಖ್ಯಾತ ನಿರ್ದೇಶಕ ಕಬೀರ್​ ಖಾನ್​  ಹೇಳಿಕೊಂಡಿದ್ದಾರೆ.

ಶೂಟಿಂಗ್ ವೇಳೆಯೇ ಬಾಲಿವುಡ್​ ಖ್ಯಾತ ನಿರ್ದೇಶಕನಿಗೆ ತಾಲಿಬಾನಿಗಳಿಂದ ಬಂತು ಜೀವ ಬೆದರಿಕೆ
TV9 Web
| Edited By: |

Updated on: Aug 19, 2021 | 8:27 PM

Share

ಅಪ್ಘಾನಿಸ್ತಾನದ ಜನರ ಪಾಲಿಗೆ ತಾಲಿಬಾನಿಗಳು ವೈರಿಗಳಂತೆ ಕಾಡುತ್ತಿದ್ದಾರೆ. ಅವರ ಕ್ರೂರತೆಗೆ ಆ ದೇಶದ ಜನ ಬೆಚ್ಚಿ ಬಿದ್ದಿದ್ದಾರೆ. ಈ ಮಧ್ಯೆ ಅಲ್ಲಿಂದ ಪ್ರಾಣ ಉಳಿಸಿಕೊಂಡು ಬಂದ ಅನೇಕರು ತಮ್ಮ ಅನುಭವ ಹಂಚಿಕೊಳ್ಳುತ್ತಿದ್ದಾರೆ. ಅದೇ ರೀತಿ ಶೂಟಿಂಗ್​ ವೇಳೆ ತಾಲಿಬಾನಿಗಳಿಂದ ಜೀವ ಬೆದರಿಕೆ ಬಂದಿತ್ತು ಎಂಬ ವಿಚಾರವನ್ನು ಬಾಲಿವುಡ್​ನ ಖ್ಯಾತ ನಿರ್ದೇಶಕ ಕಬೀರ್​ ಖಾನ್​  ಹೇಳಿಕೊಂಡಿದ್ದಾರೆ.

‘ಅದು ನನ್ನ ಮೊದಲ ಸಿನಿಮಾ. ‘ಕಾಬೂಲ್​ ಎಕ್ಸ್​​ಪ್ರೆಸ್’​ (2006) ಶೂಟಿಂಗ್​ಗಾಗಿ ನಾನು ಅಪ್ಘಾನಿಸ್ತಾನಕ್ಕೆ ತೆರಳಿದ್ದೆ. ಆದಿತ್ಯ ಚೋಪ್ರಾ ಅವರು ಅಪ್ಘಾನಿಸ್ತಾನದಲ್ಲಿ ಶೂಟ್​ ಮಾಡೋದು ಕಷ್ಟ ಎಂದು ಹೇಳಿದ್ದರು.  ಆದರೆ, ಅಲ್ಲಿಯ ಜನರು ಸಿನಿಮಾ ಶೂಟ್​ಗೆ ಸಹಾಯ ಮಾಡಿದ್ದರು. ಈ ವೇಳೆ ತಾಲಿಬಾನಿಗಳಿಂದ ಜೀವ ಬೆದರಿಕೆ ಇತ್ತು. ಆದರೆ, ಅಲ್ಲಿನ ಜನರು ನನಗೆ ಸಂಪೂರ್ಣ ಬೆಂಬಲ ನೀಡಿದ್ದರು. ಈಗ ಅವರೇ ಕಷ್ಟಕ್ಕೆ ಸಿಲುಕಿದ್ದಾರೆ. ಅವರಿಗೆ ಸಹಾಯ ಮಾಡೋಕೆ ಆಗುತ್ತಿಲ್ಲ ಎನ್ನುವ ಬೇಸರ ನನಗಿದೆ’ ಎಂದಿದ್ದಾರೆ ಕಬೀರ್​ ಖಾನ್​.

‘ಅಪ್ಘಾನಿಸ್ತಾನದಲ್ಲಿ ಸಿನಿಮಾವನ್ನು ತಾಲಿಬಾನಿಗಳು ಬ್ಯಾನ್​ ಮಾಡಿದ್ದಾರೆ. ಈ ಕಾರಣಕ್ಕೆ ಅಲ್ಲಿನ ಚಿತ್ರರಂಗ ಸಂಪೂರ್ಣ ನಾಶವಾಗಿದೆ. ಈ ಬಗ್ಗೆ ಮಾತನಾಡಿರುವ ಕಬೀರ್ ಖಾನ್​, ‘ಅಲ್ಲಿಯೂ ಸಿನಿಮಾ ರಂಗದಲ್ಲಿ ತೊಡಗಿಕೊಂಡವರಿದ್ದಾರೆ. ಆದರೆ, ಅವರು ತಾಲಿಬಾನಿಗಳಿಂದ ಟಾರ್ಗೆಟ್​ಗೆ ಒಳಗಾಗುತ್ತಿದ್ದಾರೆ. ಈ ಮೊದಲು ತಾಲಿಬಾನಿಗಳು ಆಕ್ರಮಣ ಮಾಡಿದಾಗ ಫೋಟೋಗ್ರಫಿ, ಸಿನಿಮಾಗಳನ್ನು ಬ್ಯಾನ್​ ಮಾಡಿದ್ದರು. ತಾಲಿಬಾನಿಗಳು ದೇಶಬಿಟ್ಟ ನಂತರದಲ್ಲಿ ಆಪ್ಘನ್ನರು ಸಾಕಷ್ಟು ಸಿನಿಮಾಗಳನ್ನು ಮಾಡಿದ್ದರು. ಆದರೆ ಈಗ ಅಲ್ಲಿನ ಚಿತ್ರರಂಗ ಏನಾಗುತ್ತದೆ ಎಂದು ಹೇಳೋಕೆ ಸಾಧ್ಯವಿಲ್ಲ’ ಎಂದಿದ್ದಾರೆ.

ಅಪ್ಘಾನಿಸ್ತಾನವನ್ನು ತಾಲಿಬಾನ್​ ಉಗ್ರರು ವಶಕ್ಕೆ ಪಡೆದಿದ್ದಾರೆ. ಅಲ್ಲಿ ಹಿಂಸಾಚಾರ ಪ್ರಕರಣಗಳು ಹೆಚ್ಚುತ್ತಿದ್ದು, ಇಡೀ ವಿಶ್ವ ಮರುಕ ವ್ಯಕ್ತಪಡಿಸುತ್ತಿದೆ. ಸಾಕಷ್ಟು ಜನರು ಅಪ್ಘಾನಿಸ್ತಾನದಿಂದ ಪಲಾಯನ ಮಾಡಲು ಎಲ್ಲಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಮತ್ತೊಂದು ಕಡೆ ತಾಲಿಬಾನಿಗಳ ಅಟ್ಟಹಾಸ ಜೋರಾಗಿದೆ. ಎಲ್ಲೆಂದರಲ್ಲಿ ಹಿಂಸೆ ನೀಡುತ್ತಿದ್ದಾರೆ. ಈ ವಿಚಾರ ಭಾರತದಲ್ಲೂ ಚರ್ಚೆ ಆಗುತ್ತಿದೆ.

ಇದನ್ನೂ ಓದಿ: ಧಾರವಾಡದಲ್ಲಿ ಅಪ್ಘಾನಿಸ್ತಾನದ ವಿದ್ಯಾರ್ಥಿಗಳು; ತಾಯ್ನಾಡಿನ ದುಸ್ಥಿತಿ, ಕುಟುಂಬದವರನ್ನು ನೆನೆದು ಕಣ್ಣೀರು

Follow Us
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!