AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೂಟಿಂಗ್ ವೇಳೆಯೇ ಬಾಲಿವುಡ್​ ಖ್ಯಾತ ನಿರ್ದೇಶಕನಿಗೆ ತಾಲಿಬಾನಿಗಳಿಂದ ಬಂತು ಜೀವ ಬೆದರಿಕೆ

ಶೂಟಿಂಗ್​ ವೇಳೆ ತಾಲಿಬಾನಿಗಳಿಂದ ಜೀವ ಬೆದರಿಕೆ ಬಂದಿತ್ತು ಎಂಬ ವಿಚಾರವನ್ನು ಬಾಲಿವುಡ್​ನ ಖ್ಯಾತ ನಿರ್ದೇಶಕ ಕಬೀರ್​ ಖಾನ್​  ಹೇಳಿಕೊಂಡಿದ್ದಾರೆ.

ಶೂಟಿಂಗ್ ವೇಳೆಯೇ ಬಾಲಿವುಡ್​ ಖ್ಯಾತ ನಿರ್ದೇಶಕನಿಗೆ ತಾಲಿಬಾನಿಗಳಿಂದ ಬಂತು ಜೀವ ಬೆದರಿಕೆ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Aug 19, 2021 | 8:27 PM

Share

ಅಪ್ಘಾನಿಸ್ತಾನದ ಜನರ ಪಾಲಿಗೆ ತಾಲಿಬಾನಿಗಳು ವೈರಿಗಳಂತೆ ಕಾಡುತ್ತಿದ್ದಾರೆ. ಅವರ ಕ್ರೂರತೆಗೆ ಆ ದೇಶದ ಜನ ಬೆಚ್ಚಿ ಬಿದ್ದಿದ್ದಾರೆ. ಈ ಮಧ್ಯೆ ಅಲ್ಲಿಂದ ಪ್ರಾಣ ಉಳಿಸಿಕೊಂಡು ಬಂದ ಅನೇಕರು ತಮ್ಮ ಅನುಭವ ಹಂಚಿಕೊಳ್ಳುತ್ತಿದ್ದಾರೆ. ಅದೇ ರೀತಿ ಶೂಟಿಂಗ್​ ವೇಳೆ ತಾಲಿಬಾನಿಗಳಿಂದ ಜೀವ ಬೆದರಿಕೆ ಬಂದಿತ್ತು ಎಂಬ ವಿಚಾರವನ್ನು ಬಾಲಿವುಡ್​ನ ಖ್ಯಾತ ನಿರ್ದೇಶಕ ಕಬೀರ್​ ಖಾನ್​  ಹೇಳಿಕೊಂಡಿದ್ದಾರೆ.

‘ಅದು ನನ್ನ ಮೊದಲ ಸಿನಿಮಾ. ‘ಕಾಬೂಲ್​ ಎಕ್ಸ್​​ಪ್ರೆಸ್’​ (2006) ಶೂಟಿಂಗ್​ಗಾಗಿ ನಾನು ಅಪ್ಘಾನಿಸ್ತಾನಕ್ಕೆ ತೆರಳಿದ್ದೆ. ಆದಿತ್ಯ ಚೋಪ್ರಾ ಅವರು ಅಪ್ಘಾನಿಸ್ತಾನದಲ್ಲಿ ಶೂಟ್​ ಮಾಡೋದು ಕಷ್ಟ ಎಂದು ಹೇಳಿದ್ದರು.  ಆದರೆ, ಅಲ್ಲಿಯ ಜನರು ಸಿನಿಮಾ ಶೂಟ್​ಗೆ ಸಹಾಯ ಮಾಡಿದ್ದರು. ಈ ವೇಳೆ ತಾಲಿಬಾನಿಗಳಿಂದ ಜೀವ ಬೆದರಿಕೆ ಇತ್ತು. ಆದರೆ, ಅಲ್ಲಿನ ಜನರು ನನಗೆ ಸಂಪೂರ್ಣ ಬೆಂಬಲ ನೀಡಿದ್ದರು. ಈಗ ಅವರೇ ಕಷ್ಟಕ್ಕೆ ಸಿಲುಕಿದ್ದಾರೆ. ಅವರಿಗೆ ಸಹಾಯ ಮಾಡೋಕೆ ಆಗುತ್ತಿಲ್ಲ ಎನ್ನುವ ಬೇಸರ ನನಗಿದೆ’ ಎಂದಿದ್ದಾರೆ ಕಬೀರ್​ ಖಾನ್​.

‘ಅಪ್ಘಾನಿಸ್ತಾನದಲ್ಲಿ ಸಿನಿಮಾವನ್ನು ತಾಲಿಬಾನಿಗಳು ಬ್ಯಾನ್​ ಮಾಡಿದ್ದಾರೆ. ಈ ಕಾರಣಕ್ಕೆ ಅಲ್ಲಿನ ಚಿತ್ರರಂಗ ಸಂಪೂರ್ಣ ನಾಶವಾಗಿದೆ. ಈ ಬಗ್ಗೆ ಮಾತನಾಡಿರುವ ಕಬೀರ್ ಖಾನ್​, ‘ಅಲ್ಲಿಯೂ ಸಿನಿಮಾ ರಂಗದಲ್ಲಿ ತೊಡಗಿಕೊಂಡವರಿದ್ದಾರೆ. ಆದರೆ, ಅವರು ತಾಲಿಬಾನಿಗಳಿಂದ ಟಾರ್ಗೆಟ್​ಗೆ ಒಳಗಾಗುತ್ತಿದ್ದಾರೆ. ಈ ಮೊದಲು ತಾಲಿಬಾನಿಗಳು ಆಕ್ರಮಣ ಮಾಡಿದಾಗ ಫೋಟೋಗ್ರಫಿ, ಸಿನಿಮಾಗಳನ್ನು ಬ್ಯಾನ್​ ಮಾಡಿದ್ದರು. ತಾಲಿಬಾನಿಗಳು ದೇಶಬಿಟ್ಟ ನಂತರದಲ್ಲಿ ಆಪ್ಘನ್ನರು ಸಾಕಷ್ಟು ಸಿನಿಮಾಗಳನ್ನು ಮಾಡಿದ್ದರು. ಆದರೆ ಈಗ ಅಲ್ಲಿನ ಚಿತ್ರರಂಗ ಏನಾಗುತ್ತದೆ ಎಂದು ಹೇಳೋಕೆ ಸಾಧ್ಯವಿಲ್ಲ’ ಎಂದಿದ್ದಾರೆ.

ಅಪ್ಘಾನಿಸ್ತಾನವನ್ನು ತಾಲಿಬಾನ್​ ಉಗ್ರರು ವಶಕ್ಕೆ ಪಡೆದಿದ್ದಾರೆ. ಅಲ್ಲಿ ಹಿಂಸಾಚಾರ ಪ್ರಕರಣಗಳು ಹೆಚ್ಚುತ್ತಿದ್ದು, ಇಡೀ ವಿಶ್ವ ಮರುಕ ವ್ಯಕ್ತಪಡಿಸುತ್ತಿದೆ. ಸಾಕಷ್ಟು ಜನರು ಅಪ್ಘಾನಿಸ್ತಾನದಿಂದ ಪಲಾಯನ ಮಾಡಲು ಎಲ್ಲಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಮತ್ತೊಂದು ಕಡೆ ತಾಲಿಬಾನಿಗಳ ಅಟ್ಟಹಾಸ ಜೋರಾಗಿದೆ. ಎಲ್ಲೆಂದರಲ್ಲಿ ಹಿಂಸೆ ನೀಡುತ್ತಿದ್ದಾರೆ. ಈ ವಿಚಾರ ಭಾರತದಲ್ಲೂ ಚರ್ಚೆ ಆಗುತ್ತಿದೆ.

ಇದನ್ನೂ ಓದಿ: ಧಾರವಾಡದಲ್ಲಿ ಅಪ್ಘಾನಿಸ್ತಾನದ ವಿದ್ಯಾರ್ಥಿಗಳು; ತಾಯ್ನಾಡಿನ ದುಸ್ಥಿತಿ, ಕುಟುಂಬದವರನ್ನು ನೆನೆದು ಕಣ್ಣೀರು

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ