AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರೀತಿ ಮೇಲೆ ಏಕೆ ಕೈ ಇಟ್ಟೆ?’; ಕಿಯಾರಾ ಅಡ್ವಾಣಿ ಮದುವೆ ಆದ ಸಿದ್ದಾರ್ಥ್​​ಗೆ ಶಾಹಿದ್ ಪ್ರಶ್ನೆ

ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಫೆಬ್ರವರಿ 7ರಂದು ಮದುವೆ ಆದರು. ರಾಜಸ್ಥಾನದ ಜೈಸಲ್ಮೇರ್​ನಲ್ಲಿ ಈ ವಿವಾಹ ನಡೆದಿದೆ. ಕಿಯಾರಾ ಹಾಗೂ ಸಿದ್ದಾರ್ಥ್ ಫೆ.7ರ ರಾತ್ರಿ ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ.

‘ಪ್ರೀತಿ ಮೇಲೆ ಏಕೆ ಕೈ ಇಟ್ಟೆ?’; ಕಿಯಾರಾ ಅಡ್ವಾಣಿ ಮದುವೆ ಆದ ಸಿದ್ದಾರ್ಥ್​​ಗೆ ಶಾಹಿದ್ ಪ್ರಶ್ನೆ
ಸಿದ್ದಾರ್ಥ್​-ಕಿಯಾರಾ
ರಾಜೇಶ್ ದುಗ್ಗುಮನೆ
|

Updated on: Feb 08, 2023 | 2:41 PM

Share

ಶಾಹಿದ್ ಕಪೂರ್ (Shahid Kapoor) ಹಾಗೂ ಕಿಯಾರಾ ಅಡ್ವಾಣಿ ನಟನೆಯ ‘ಕಬೀರ್ ಸಿಂಗ್​’ ಸಿನಿಮಾ ರಿಲೀಸ್ ಆಯಿತು. ಈ ಚಿತ್ರದಿಂದ ಶಾಹಿದ್ ಹಾಗೂ ಕಿಯಾರಾ ದೊಡ್ಡ ಗೆಲುವು ಕಂಡರು. ಈ ಚಿತ್ರದಲ್ಲಿ ಪ್ರೀತಿ ಪಾತ್ರ ಮಾಡಿದ್ದರು ಕಿಯಾರಾ. ಪ್ರೀತಿ ಬಿಟ್ಟು ಹೋದಾಗ ಕಬೀರ್ (ಶಾಹಿದ್​) ರಸ್ತೆ ಮೇಲೆ ಓಡುತ್ತಾನೆ. ಆಕೆಯನ್ನು ಬೇರೆಯವರು ಮುಟ್ಟಿದಾಗ ಅವರಿಗೆ ಹೊಡೆಯುತ್ತಾನೆ. ಈಗ ಕಿಯಾರಾ (Kiara Advani) ಹಾಗೂ ಸಿದ್ದಾರ್ಥ್​​ಗೆ ಮದುವೆ ಆದ ಬೆನ್ನಲ್ಲೇ ‘ಕಬೀರ್​ ಸಿಂಗ್’ ಚಿತ್ರದ ಪೋಸ್ಟರ್​ಗಳನ್ನು ಮೀಮ್​ಗಳಲ್ಲಿ ಬಳಕೆ ಮಾಡಿಕೊಳ್ಳಲಾಗುತ್ತಿದೆ.

ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಫೆಬ್ರವರಿ 7ರಂದು ಮದುವೆ ಆದರು. ರಾಜಸ್ಥಾನದ ಜೈಸಲ್ಮೇರ್​ನಲ್ಲಿ ಈ ವಿವಾಹ ನಡೆದಿದೆ. ಕಿಯಾರಾ ಹಾಗೂ ಸಿದ್ದಾರ್ಥ್ ಫೆ.7ರ ರಾತ್ರಿ ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಅನೇಕರು ಈ ದಂಪತಿಗೆ ಶುಭಾಶಯ ಕೋರಿದರೆ ಇನ್ನೂ ಕೆಲವರು ಮೀಮ್​ಗಳನ್ನು ಪೋಸ್ಟ್​ ಮಾಡುತ್ತಿದ್ದಾರೆ.

ಇದನ್ನೂ ಓದಿ
Image
ಸಿದ್ದಾರ್ಥ್​ ಮಲ್ಹೋತ್ರ-ಕಿಯಾರಾ ಅಡ್ವಾಣಿ ಮಧ್ಯೆ ಇರೋ ವಯಸ್ಸಿನ ಅಂತರ ಇಷ್ಟೊಂದಾ?
Image
ಕಿಯಾರಾ ಅಡ್ವಾಣಿ-ಸಿದ್ದಾರ್ಥ್ ಮಲ್ಹೋತ್ರ ವಿವಾಹದ ಕ್ಷಣದ ಫೋಟೋ ವೈರಲ್
Image
ಕಿಯಾರಾ-ಸಿದ್ದಾರ್ಥ್​ ಮದುವೆಯಲ್ಲಿ ಮೊಬೈಲ್ ಬಳಸೋ ಹಾಗಿಲ್ಲ; ಅತಿಥಿಗಳಿಗೆ ಸೂಚನೆ
Image
ಮದುವೆ ನಡೆಯೋ ಸ್ಥಳಕ್ಕೆ ಆಗಮಿಸಿದ ನಟಿ ಕಿಯಾರಾ ಅಡ್ವಾಣಿ; ಖಚಿತವಾಯ್ತು ಸುದ್ದಿ

‘ಕಬೀರ್ ಸಿಂಗ್​’ ಸಿನಿಮಾದಲ್ಲಿ ಪ್ರೀತಿ ಮದುವೆ ವೇಳೆ ಕಬೀರ್ ಇಂಜಕ್ಷನ್ ತೆಗೆದುಕೊಳ್ಳುತ್ತಾನೆ. ಹಲವು ಗಂಟೆ ಆತನಿಗೆ ಪ್ರಜ್ಞೆ ಇರುವುದಿಲ್ಲ. ಕಬೀರ್ ಬೆಡ್​ ಮೇಲೆ ಮಲಗಿರುವ ಫೋಟೋನ ಕಿಯಾರಾ ಮದುವೆ ಫೋಟೋ ಪೋಸ್ಟ್​ನ ಕಮೆಂಟ್ ಬಾಕ್ಸ್​​ನಲ್ಲಿ ಹಾಕಿರುವ ಫ್ಯಾನ್ಸ್ ‘ನಿಮ್ಮ ಫೋಟೋ ನೋಡಿ ಶಾಹಿದ್ ಕಪೂರ್ ಇಂಜಕ್ಷನ್ ತೆಗೆದುಕೊಂಡು ಮಲಗಿರಬಹುದು’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: ಕಿಯಾರಾ ಅಡ್ವಾಣಿ-ಸಿದ್ದಾರ್ಥ್ ಮಲ್ಹೋತ್ರ ವಿವಾಹದ ಕ್ಷಣದ ಫೋಟೋ ವೈರಲ್

ಇನ್ನೂ ಕೆಲವರು ಶಾಹಿದ್ ಕಪೂರ್ ರಸ್ತೆಯಮೇಲೆ ಓಡಿ ಬರುತ್ತಿರುವ ವಿಡಿಯೋನ ಅಪ್​ಲೋಡ್ ಮಾಡಿದ್ದಾರೆ. ‘ಕಿಯಾರಾ ಹಾಗೂ ಸಿದ್ದಾರ್ಥ್ ಮದುವೆ ನಿಲ್ಲಿಸೋಕೆ ಶಾಹಿದ್ ಓಡಿ ಬರುತ್ತಿದ್ದಾರೆ ಎಂದು ಕಾಲೆಳೆದಿದ್ದಾರೆ. ‘ಈಗ ಕಬೀರ್ ಸಿಂಗ್​ನ ಪರಿಸ್ಥಿತಿ’ ಎಂದು ಶಾಹಿದ್ ಮದ್ಯಪಾನ ಮಾಡುತ್ತಿರುವ ಫೋಟೋನ ಪೋಸ್ಟ್ ಮಾಡಲಾಗಿದೆ. ‘ಪ್ರೀತಿ ಮೇಲೆ ಏಕೆ ಕೈ ಇಟ್ಟೆ’ ಎಂದು ಶಾಹಿದ್ ಕೂಗುತ್ತಿರುವ ಫೋಟೋಗಳನ್ನು ಪೋಸ್ಟ್ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!