AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಾಯಣ ಸಿನಿಮಾದಲ್ಲಿ ಯಶ್​ಗೆ ಕಾಜಲ್ ಅಗರ್​ವಾಲ್ ಜೋಡಿ; ಮಂಡೋದರಿ ಪಾತ್ರದಲ್ಲಿ ‘ಮಗಧೀರ’ ಚೆಲುವೆ

ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ ಕಾಜಲ್ ಅಗರ್​ವಾಲ್ ಅವರಿಗೆ ಈಗಲೂ ಅಷ್ಟೇ ಬೇಡಿಕೆ ಇದೆ. ‘ರಾಮಾಯಣ’ ಸಿನಿಮಾದಲ್ಲಿ ಮಂಡೋದರಿ ಪಾತ್ರಕ್ಕಾಗಿ ಅವರನ್ನು ಆಯ್ಕೆ ಮಾಡಲಾಗಿದೆ ಎಂಬ ಸುದ್ದಿ ಕೇಳಿಬಂದಿದೆ. ರಾವಣನಾಗಿ ನಟಿಸುತ್ತಿರುವ ಯಶ್ ಜೊತೆ ಕಾಜಲ್ ಅಗರ್​ವಾಲ್ ಅವರು ತೆರೆ ಹಂಚಿಕೊಳ್ಳಲಿದ್ದಾರೆ.

ರಾಮಾಯಣ ಸಿನಿಮಾದಲ್ಲಿ ಯಶ್​ಗೆ ಕಾಜಲ್ ಅಗರ್​ವಾಲ್ ಜೋಡಿ; ಮಂಡೋದರಿ ಪಾತ್ರದಲ್ಲಿ ‘ಮಗಧೀರ’ ಚೆಲುವೆ
Kajal Aggarwal, Yash
ಮದನ್​ ಕುಮಾರ್​
|

Updated on: May 16, 2025 | 5:00 PM

Share

ಬಾಲಿವುಡ್​ನಲ್ಲಿ ಸಿದ್ಧವಾಗುತ್ತಿರುವ ‘ರಾಮಾಯಣ’ (Ramayana) ಸಿನಿಮಾ ಮೇಲೆ ಇರುವ ನಿರೀಕ್ಷೆ ಅಷ್ಟಿಷ್ಟಲ್ಲ. ಪಾತ್ರವರ್ಗದ ಕಾರಣದಿಂದಲೇ ಈ ಸಿನಿಮಾ ಹೈಪ್ ಕ್ರಿಯೇಟ್ ಮಾಡಿದೆ. ಅದರಲ್ಲೂ ‘ರಾಕಿಂಗ್ ಸ್ಟಾರ್’ ಯಶ್ (Yash) ಅವರು ಈ ಸಿನಿಮಾದಲ್ಲಿ ರಾವಣನ ಪಾತ್ರ ಮಾಡುತ್ತಿರುವುದರಿಂದ ಅಭಿಮಾನಿಗಳಲ್ಲಿ ನಿರೀಕ್ಷೆ ಡಬಲ್ ಆಗಿದೆ. ರಾಮಾಯಣದಲ್ಲಿ ಹಲವು ಪ್ರಮುಖ ಪಾತ್ರಗಳು ಇವೆ. ಅವುಗಳಿಗೆ ಕಲಾವಿದರ ಆಯ್ಕೆ ನಡೆಯುತ್ತಿದೆ. ರಾವಣನ ಪತ್ನಿ ಮಂಡೋದರಿ ಪಾತ್ರದಲ್ಲಿ ನಟಿಸಲು ಕಾಜಲ್ ಅಗರ್​ವಾಲ್ (Kajal Aggarwal) ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

‘ರಾಮಾಯಣ’ ಸಿನಿಮಾದಲ್ಲಿ ರಣಬೀರ್ ಕಪೂರ್ ಅವರು ರಾಮನಾಗಿ ನಟಿಸುತ್ತಿದ್ದಾರೆ. ಸೀತೆಯ ಪಾತ್ರದಲ್ಲಿ ಸಾಯಿ ಪಲ್ಲವಿ ಅವರು ಅಭಿನಯಿಸುತ್ತಿದ್ದಾರೆ. ನಿತೇಶ್ ತಿವಾರಿ ನಿರ್ದೇಶನ ಮಾಡುತ್ತಿರುವ ಈ ಸಿನಿಮಾಗೆ ಚಿತ್ರೀಕರಣ ನಡೆಯುತ್ತಿದೆ. ಯಶ್ ಕೂಡ ಶೂಟಿಂಗ್​ನಲ್ಲಿ ಭಾಗಿಯಾಗಿದ್ದಾರೆ. ಅವರ ಜೊತೆ ಕಾಜಲ್ ಅಗರ್​ವಾಲ್​ ಕೂಡ ನಟಿಸುತ್ತಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.

ಪಾತ್ರವರ್ಗದ ಬಗ್ಗೆ ಚಿತ್ರತಂಡದವರು ಅಧಿಕೃತವಾಗಿ ಹೇಳಿಕೆ ನೀಡಿಲ್ಲ. ಹಾಗಿದ್ದರೂ ಕೂಡ ಅನೇಕ ಮಾಹಿತಿ ಲೀಕ್ ಆಗಿದೆ. ಚಿತ್ರತಂಡದ ಆಪ್ತ ಮೂಲಗಳು ಹೇಳಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ. ರಾಮಾಯಣದಲ್ಲಿ ಮಂಡೋದರಿ ಪಾತ್ರ ಕೂಡ ಪ್ರಮುಖವಾಗಿ ಬರಲಿದೆ. ಆ ಪಾತ್ರಕ್ಕೆ ಯಾವ ನಟಿ ಸೂಕ್ತ ಎನಿಸುತ್ತಾರೆ ಎಂಬ ಚರ್ಚೆ ನಡೆದಿತ್ತು. ಅಂತಿಮವಾಗಿ ಕಾಜಲ್ ಅಗರ್ವಾಲ್ ಆಯ್ಕೆ ಆಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ
Image
‘ರಾಮಾಯಣ’ ಬಿಡುಗಡೆ ದಿನಾಂಕ ಘೋಷಣೆ: ಯಶ್ ಫಸ್ಟ್ ಲುಕ್​ಗೆ ಹೆಚ್ಚಿತು ಬೇಡಿಕೆ
Image
ಅಬ್ಬಬ್ಬಾ... ‘ರಾಮಾಯಣ’ ಸಿನಿಮಾ ಬಜೆಟ್​ ಬರೋಬ್ಬರಿ 835 ಕೋಟಿ ರೂಪಾಯಿ?
Image
‘ರಾಮಾಯಣ’ ಚಿತ್ರತಂಡದಿಂದ ಕಾಪಿರೈಟ್​ ಉಲ್ಲಂಘನೆ? ನಿರ್ಮಾಪಕರಿಗೆ ನೋಟಿಸ್​
Image
ರಾಮಾಯಣ ಸಿನಿಮಾಗಾಗಿ ಹಳ್ಳಿಗೆ ಹೋಗಿ ತರಬೇತಿ ಪಡೆಯುತ್ತಿರುವ ರಣಬೀರ್​ ಕಪೂರ್​

ಈ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿದ್ಧವಾಗುತ್ತಿದೆ. ಹಾಗಾಗಿ ಎಲ್ಲ ಭಾಷೆಗಳಲ್ಲೂ ಪರಿಚಿತವಾಗಿರುವ ನಟಿಯನ್ನೇ ಆಯ್ಕೆ ಮಾಡಿಕೊಳ್ಳಬೇಕು ಎಂಬುದು ಚಿತ್ರತಂಡದ ಉದ್ದೇಶ. ಆದ್ದರಿಂದ ಕಾಜಲ್ ಅಗರ್​ವಾಲ್ ಅವರನ್ನು ಆಯ್ಕೆ ಮಾಡಲಾಗಿದೆ. ‘ಮಗಧೀರ’ ಸಿನಿಮಾದಲ್ಲಿ ಕಾಜಲ್ ಅವರು ರಾಣಿ ಪಾತ್ರ ಮಾಡಿ ಗಮನ ಸೆಳೆದಿದ್ದರು. ಈಗ ಅವರು ಮಂಡೋದರಿ ಪಾತ್ರದಲ್ಲಿ ಯಾವ ರೀತಿ ಕಾಣಿಸುತ್ತಾರೆ ಎಂಬುದನ್ನು ನೋಡಲು ಫ್ಯಾನ್ಸ್ ಕಾದಿದ್ದಾರೆ.

ಇದನ್ನೂ ಓದಿ: 38 ವರ್ಷ ಕಳೆದರೂ ‘ರಾಮಾಯಣ’ ಧಾರಾವಾಹಿ ದಾಖಲೆ ಯಾರೂ ಮುರಿದಿಲ್ಲ; ಇಲ್ಲಿದೆ ಲೆಕ್ಕ

ದಕ್ಷಿಣ ಭಾರತದ ಚಿತ್ರರಂಗ ಮತ್ತು ಬಾಲಿವುಡ್​ನಲ್ಲಿ ಕಾಜಲ್ ಅಗರ್​ವಾಲ್ ಅವರಿಗೆ ಬೇಡಿಕೆ ಇದೆ. ಇತ್ತೀಚೆಗೆ ಅವರು ಸಲ್ಮಾನ್ ಖಾನ್ ಅಭಿನಯದ ‘ಸಿಕಂದರ್’ ಚಿತ್ರದಲ್ಲಿ ನಟಿಸಿದ್ದರು. ಈಗ ಅವರಿಗೆ 39 ವರ್ಷ ವಯಸ್ಸು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ