AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ ಪ್ರೇಕ್ಷಕರು ಎಂದಿಗೂ ಮರೆಯದ ‘ಡಿಡಿಎಲ್​ಜೆ’ ಸಿನಿಮಾಗೆ ಈಗ 28 ವರ್ಷ

ಭಾರತೀಯ ಸಿನಿಮಾ ಇತಿಹಾಸದಲ್ಲಿ ಅತಿ ಹೆಚ್ಚು ವರ್ಷಗಳ ಕಾಲ ಪ್ರದರ್ಶನ ಕಂಡ ಸಿನಿಮಾ ಎಂಬ ಖ್ಯಾತಿ ‘ಡಿಡಿಎಲ್​ಜೆ’ ಚಿತ್ರಕ್ಕೆ ಸಲ್ಲುತ್ತದೆ. ಶಾರುಖ್​ ಖಾನ್​ ಮತ್ತು ಕಾಜೋಲ್​ ನಟನೆಯ ಈ ಸಿನಿಮಾ ಮಾಡಿರುವ ಮೋಡಿ ಅಂಥದ್ದು. ಈ ಸಿನಿಮಾ ಮೇಲೆ ಅಭಿಮಾನಿಗಳು ತೋರಿಸಿದ ಪ್ರೀತಿಗೆ ಕಾಜೋಲ್​ ಅವರು ಧನ್ಯವಾದ ಸಲ್ಲಿಸಿದ್ದಾರೆ.

ಬಾಲಿವುಡ್​ ಪ್ರೇಕ್ಷಕರು ಎಂದಿಗೂ ಮರೆಯದ ‘ಡಿಡಿಎಲ್​ಜೆ’ ಸಿನಿಮಾಗೆ ಈಗ 28 ವರ್ಷ
ಶಾರುಖ್​ ಖಾನ್​, ಕಾಜೋಲ್​
ಮದನ್​ ಕುಮಾರ್​
|

Updated on: Oct 20, 2023 | 4:20 PM

Share

ಕೆಲವು ಸಿನಿಮಾಗಳು ಪ್ರೇಕ್ಷಕರ ಮನದಲ್ಲಿ ಶಾಶ್ವತವಾದ ಸ್ಥಾನ ಪಡೆದುಕೊಳ್ಳುತ್ತವೆ. ಬಾಲಿವುಡ್​ನ ‘ಡಿಡಿಎಲ್​ಜೆ’ (DDLJ) ಸಿನಿಮಾಗೆ ಆ ಸ್ಥಾನ ಸಿಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ ಎರಡೂವರೆ ದಶಕ ಕಳೆದಿದ್ದರೂ ಕೂಡ ಇದರ ಚಾರ್ಮ್​ ಕಡಿಮೆ ಆಗಿಲ್ಲ. ಇಂದಿಗೆ (ಅಕ್ಟೋಬರ್​ 20) ‘ಡಿಡಿಎಲ್​ಜೆ’ ಸಿನಿಮಾ 28 ವರ್ಷಗಳನ್ನು ಪೂರೈಸಿದೆ. ಈ ವಿಶೇಷ ಕ್ಷಣಕ್ಕಾಗಿ ನಟಿ ಕಾಜೋಲ್​ (Kajol) ಅವರು ಒಂದು ಪೋಸ್ಟ್​ ಮಾಡಿದ್ದಾರೆ. ಶಾರುಖ್​ ಖಾನ್​ (Shah Rukh Khan), ಕಾಜೋಲ್​, ಅಮರೀಶ್​ ಪುರಿ, ಅನುಪಮ್​ ಖೇರ್​ ಮುಂತಾದವರು ಮುಖ್ಯ ಭೂಮಿಕೆ ನಿಭಾಯಿಸಿದ ಈ ಸಿನಿಮಾ ಇಂದಿಗೂ ಎವರ್​ಗ್ರೀನ್​ ಆಗಿ ಉಳಿದುಕೊಂಡಿದೆ.

‘ದಿಲ್​ವಾಲೆ ದುಲ್ಹನಿಯಾ ಲೇ ಜಾಯೆಂಗೆ’ ಎಂಬುದು ‘ಡಿಡಿಎಲ್​ಜೆ’ ಶೀರ್ಷಿಕೆಯ ವಿಸ್ತೃತ ರೂಪ. 1995ರ ಅಕ್ಟೋಬರ್​ 20ರಂದು ಈ ಸಿನಿಮಾ ಬಿಡುಗಡೆ ಆಗಿತ್ತು. ಯಶ್​ ಚೋಪ್ರಾ ನಿರ್ಮಾಣದ ಈ ಚಿತ್ರಕ್ಕೆ ಆದಿತ್ಯ ಚೋಪ್ರಾ ನಿರ್ದೇಶನ ಮಾಡಿದ್ದರು. ಕರಣ್​ ಜೋಹರ್​ ಕೂಡ ಈ ಸಿನಿಮಾದಲ್ಲಿ ಒಂದು ಪಾತ್ರ ಮಾಡಿದ್ದರು. ಶಾರುಖ್​ ಖಾನ್​ ಮತ್ತು ಕಾಜೋಲ್​ ಅವರ ಕಾಂಬಿನೇಷನ್​ ನೋಡಿ ಪ್ರೇಕ್ಷಕರು ಸಖತ್​ ಇಷ್ಟಪಟ್ಟರು. ಅವರು ಚಿತ್ರರಂಗದಲ್ಲಿ ಭದ್ರವಾಗಿ ನೆಲೆ ಕಂಡುಕೊಳ್ಳಲು ಈ ಸಿನಿಮಾ ಕಾರಣವಾಯಿತು. ಆ ಸವಿ ನೆನಪುಗಳನ್ನು ಕಾಜೋಲ್​ ಈಗ ಮೆಲುಕು ಹಾಕಿದ್ದಾರೆ.

ಇದನ್ನೂ ಓದಿ: Kajol: ಜನಾಂಗೀಯ ನಿಂದನೆ ಮಾಡುವಂತಹ ಪದ ಬಳಸಿದ ಕಾಜೋಲ್​​​ ವಿಡಿಯೋ ವೈರಲ್​; ನೆಟ್ಟಿಗರಿಂದ ಕ್ಲಾಸ್​

ಲವ್​, ಕಾಮಿಡಿ, ಫ್ಯಾಮಿಲಿ ಸೆಂಟಿಮೆಂಟ್​ ಮುಂತಾದ ಅಂಶಗಳನ್ನು ಒಳಗೊಂಡ ಕಥೆ ‘ಡಿಡಿಎಲ್​ಜೆ’ ಸಿನಿಮಾದಲ್ಲಿದೆ. ಈಗಾಗಲೇ ಮದುವೆ ನಿಶ್ಚಯ ಆಗಿರುವ ಹುಡುಗಿಯನ್ನು ಹೀರೋ ಪ್ರೀತಿಸುತ್ತಾನೆ. ಆಕೆಯನ್ನು ಪಡೆದುಕೊಳ್ಳಲು ಆತ ಸಖತ್​ ಕಷ್ಟಪಡುತ್ತಾನೆ. ಆ ಕಹಾನಿಗೆ ಜನರು ಮನ ಸೋತರು. ಜತಿನ್​-ಲಲಿತ್​ ಸಂಗೀತ ನಿರ್ದೇಶನ ಮಾಡಿದ ಹಾಡುಗಳು ಭಾರಿ ಜನಪ್ರಿಯತೆ ಪಡೆದುಕೊಂಡವು. ಇಂದಿಗೂ ಈ ಗೀತೆಗಳು ಕೇಳುಗರ ಫೇವರಿಟ್​ ಆಗಿ ಉಳಿದುಕೊಂಡಿವೆ. ಪ್ರತಿ ಬಾಲಿವುಡ್​ ಪ್ರೇಮಿಯ ಹೃದಯದಲ್ಲಿ ಈ ಸಾಂಗ್ಸ್​ ಗುನುಗುಡುತ್ತಿವೆ.

View this post on Instagram

A post shared by Kajol Devgan (@kajol)

ಭಾರತೀಯ ಸಿನಿಮಾ ಇತಿಹಾಸದಲ್ಲಿ ಅತಿ ಹೆಚ್ಚು ವರ್ಷಗಳ ಕಾಲ ಪ್ರದರ್ಶನ ಕಂಡ ಚಿತ್ರ ಎಂಬ ಖ್ಯಾತಿ ‘ಡಿಡಿಎಲ್​ಜೆ’ ಸಿನಿಮಾಗೆ ಸಲ್ಲುತ್ತದೆ. 1995ರಿಂದು ಇಂದಿನ ತನಕ ಮುಂಬೈನ ‘ಮರಾಠ ಮಂದಿರ’ ಥಿಯೇಟರ್​ನಲ್ಲಿ ಈ ಸಿನಿಮಾ ಪ್ರದರ್ಶನ ಕಾಣುತ್ತಲೇ ಇದೆ. ಪ್ರತಿ ದಿನ ಮಾರ್ಗಿಂಗ್​ ಶೋ ‘ಡಿಡಿಎಲ್​ಜೆ’ ಚಿತ್ರಕ್ಕೆ ಮೀಸಲಾಗಿದೆ. ಆ ಮೂಲಕ ಈ ಕ್ಲಾಸಿಕ್ ಚಿತ್ರಕ್ಕೆ ಗೌರವ ಸಲ್ಲಿಸಲಾಗುತ್ತಿದೆ. ಅಭಿಮಾನಿಗಳು ಈ ಪರಿ ಪ್ರೀತಿ ತೋರಿಸುತ್ತಿರುವುದಕ್ಕೆ ಕಾಜೋಲ್​ ಅವರು ಧನ್ಯವಾದ ಸಲ್ಲಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!