AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಜೋಲ್ ಅಭಿನಯದ ‘ಸಲಾಮ್​ ವೆಂಕಿ’ ಚಿತ್ರದ ಟ್ರೈಲರ್ ಬಿಡುಗಡೆ; ಅತಿಥಿ ಪಾತ್ರದಲ್ಲಿ ಆಮಿರ್​ ಖಾನ್

‘ಸಲಾಮ್​ ವೆಂಕಿ'(salaam venky)ಟ್ರೈಲರ್ ಬಿಡುಗಡೆಯಾಗಿದ್ದು, ಕಾಜೋಲ್(kajol)ವಿಕಲಚೇತನ ಮಗನನ್ನು ನೋಡಿಕೊಳ್ಳುವ ತಾಯಿ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದಲ್ಲಿ ಆಮಿರ್ ಖಾನ್​ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕಾಜೋಲ್​ ಅವರು ಗುರುವಾರ (ನವೆಂಬರ್​ 10) ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಚಿತ್ರದ ಮೊದಲ ಪೊಸ್ಟ್​ ಹಂಚಿಕೊಳ್ಳುವ ಮೂಲಕ ನವೆಂಬರ್​ 14 ರಂದು ಸಿನಿಮಾದ ಟ್ರೇಲರ್​ ಬಿಡುಗಡೆ ಮಾಡುವ ವಿಚಾರವನ್ನು ಬಹಿರಂಗಪಡಿಸಿದ್ದರು.

ಕಾಜೋಲ್ ಅಭಿನಯದ ‘ಸಲಾಮ್​ ವೆಂಕಿ' ಚಿತ್ರದ ಟ್ರೈಲರ್ ಬಿಡುಗಡೆ; ಅತಿಥಿ ಪಾತ್ರದಲ್ಲಿ ಆಮಿರ್​ ಖಾನ್
ಕಾಜೋಲ್​, ಅಮೀರ್​ ಖಾನ್
TV9 Web
| Edited By: |

Updated on: Nov 14, 2022 | 5:38 PM

Share

ಕಾಜೋಲ್(kajol)ಅವರು ಮುಖ್ಯ ಪಾತ್ರದಲ್ಲಿ ನಟಿಸಿರುವ ‘ಸಲಾಮ್​ ವೆಂಕಿ'(salaam venky)ಚಿತ್ರದ ಟ್ರೈಲರ್​ ಸೋಮವಾರ (ನವೆಂಬರ್ 14) ಮಧ್ಯಾಹ್ನ ಬಿಡುಗಡೆಯಾಗಿದೆ. ಲಕ್ಷಾಂತರ ಅಭಿಮಾನಿಗಳು ಟ್ರೈಲರ್​ ವೀಕ್ಷಣೆ ಮಾಡಿದ್ದಾರೆ. ಚಿತ್ರದಲ್ಲಿ ವಿಶಾಲ್​ ಜೇತ್ವಾ, ರಾಹುಲ್​ ಬೋಸ್​, ರಾಜೀವ್​ ಖಂಡೇಲ್​ವಾಲ್​, ಅಹಾನಾ ಕುಮ್ರಾ ಮತ್ತು ಪ್ರಕಾಶ್​ರಾಜ್​ ಕೂಡ ನಟಿಸಿದ್ದಾರೆ. ಟ್ರೇಲರ್ ಕೊನೆಯಲ್ಲಿ ಆಮಿರ್ ​ಖಾನ್​ ಅವರು ಅತಿಥಿ ಪಾತ್ರ ಕಾಣಿಸಿದೆ.

ಕಾಜೋಲ್​ ಸುಜಾತಾ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವಿಶಾಲ್​ ಜೇತ್ವಾ ವೆಂಕಿ ಎಂಬ ಪಾತ್ರವನ್ನು ಮಾಡುತ್ತಿದ್ದಾರೆ. ವೆಂಕಿಯು ವಿಲ್​ಚೇರ್​ ಮೇಲೆ ಕುಳಿತಿದ್ದಾನೆ. ತಾಯಿ ಸುಜಾತಾ, ಮಗ ವೆಂಕಿಯ ಜೀವನದ ಭಾಗವಾಗಿದ್ದಾಳೆ. ಟ್ರೇಲರ್​​​​ನಲ್ಲಿ ವೆಂಕಿಯು ಅವನ ಕೊನೆಯ ಬಯಕೆಯನ್ನು ಹೇಳುತ್ತಾನೆ. ಅದು ಏನು ಎಂಬುದು ಬಹಿರಂಗವಾಗಿಲ್ಲ. ಅದರೆ ಸುಜಾತಾ ಅದಕ್ಕೆ ನಿರಾಕರಿಸುತ್ತಾಳೆ. ತಾಯಿ-ಮಗನ ದೃಶ್ಯಗಳು ಪ್ರೇಕ್ಷಕರ ಕಣ್ಣನ್ನು ಒದ್ದೆಯಾಗಿಸುತ್ತವೆ.

ಇದನ್ನೂ ಓದಿ:Kajol: ಒಟಿಟಿ ಜಗತ್ತಿಗೆ ನಟಿ ಕಾಜೋಲ್​ ಎಂಟ್ರಿ; ಪ್ರತಿ ಎಪಿಸೋಡ್​ಗೆ ಪಡೆಯುವ ಸಂಭಾವನೆ ಇಷ್ಟೊಂದಾ?

ಸುಜಾತಾ ಮತ್ತು ಅವಳ ಮಗ ವೆಂಕಿ ಜೀವನದಲ್ಲಿ ನಡೆಯಬಹುದಾದ ನೋವು ಹಾಗೂ ಅದನ್ನು ನಗುವಿನ ಮೂಲಕ ಹೇಗೆ ಮರೆಯಬೇಕು ಎಂಬುದನ್ನು ಚಿತ್ರದಲ್ಲಿ ತೋರಿಸಲಾಗಿದೆ ಎಂಬುದಕ್ಕೆ ಟ್ರೇಲರ್ ಸಾಕ್ಷ್ಯ ನೀಡಿದೆ. ನೈಜ ಕಥೆಯನ್ನಾಧರಿಸಿದ ಈ ಸಿನಿಮಾದ ಟ್ರೈಲರ್​ಗೆ ಅಭಿಮಾನಿಗಳು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಅಭಿಮಾನಿಯೊಬ್ಬರು ‘ತುಂಬಾ ಹೃದಯ ಸ್ಪರ್ಶಿಯಾಗಿದೆ, ಸಿನಿಮಾ ನೋಡಲು ಕಾಯುತ್ತಿದ್ದೇನೆ’ ಎಂದು ಕಾಮೆಂಟ್​ ಮಾಡಿದ್ದಾರೆ.

ಈ ಸಿನಿಮಾವನ್ನು ರೇವತಿ ನಿರ್ದೇಶಿಸಿದ್ದು, ಸೂರಜ್​ ಸಿಂಗ್ ಹಾಗೂ ಶ್ರದ್ಧಾ ಅಗರ್​ವಾಲ್​ ನಿರ್ಮಾಣ ಮಾಡಿದ್ದಾರೆ. ಈ ಚಿತ್ರ ಡಿಸೆಂಬರ್​ 9ರಂದು ತೆರೆಯ ಮೇಲೆ ಬರಲಿದ್ದು, ಬಾಕ್ಸ್​ಆಫೀಸ್​ನಲ್ಲಿ ಎಷ್ಟರ ಮಟ್ಟಿಗೆ ಕಮಾಯಿ ಮಾಡುತ್ತದೆ ಎಂದು ಕಾದುನೋಡಬೇಕಾಗಿದೆ.

ಇನ್ನಷ್ಟು ಮನರಂಜನಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ 

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ