AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಸಿನಿಮಾ ಕೆಲಸ ಆರಂಭಿಸಿದ ಕಾಜೋಲ್​; ನಿರ್ದೇಶಕಿ ರೇವತಿ ಜೊತೆ ಕೈ ಜೋಡಿಸಿದ ನಟಿ

ಇತ್ತೀಚಿನ ವರ್ಷಗಳಲ್ಲಿ ಆಫ್​ ಬೀಟ್​ ಕಥೆಗಳನ್ನು ಆಯ್ಕೆ ಮಾಡಿಕೊಳ್ಳುತ್ತಿರುವ ಕಾಜೋಲ್​ ಅವರು ಈಗ ‘ಸಲಾಮ್​ ವೆಂಕಿ’ ಚಿತ್ರವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದರ ಶೂಟಿಂಗ್​ ಆರಂಭ ಆಗಿದೆ.

ಹೊಸ ಸಿನಿಮಾ ಕೆಲಸ ಆರಂಭಿಸಿದ ಕಾಜೋಲ್​; ನಿರ್ದೇಶಕಿ ರೇವತಿ ಜೊತೆ ಕೈ ಜೋಡಿಸಿದ ನಟಿ
ರೇವತಿ-ಕಾಜೋಲ್​
TV9 Web
| Edited By: |

Updated on: Feb 11, 2022 | 4:30 PM

Share

ಮದುವೆ ಆದ ಬಳಿಕ ನಟಿಯರು ಚಿತ್ರರಂಗದಲ್ಲಿ ಹಿನ್ನೆಲೆಗೆ ಸರಿಯುತ್ತಾರೆ ಎಂಬ ಮಾತಿತ್ತು. ಆದರೆ ನಂತರದ ದಿನಗಳಲ್ಲಿ ಕಾಲ ಬದಲಾಯಿತು. ಅನೇಕ ಸ್ಟಾರ್​ ನಟಿಯರು ಮದುವೆ, ಮಕ್ಕಳು ಆದ ಬಳಿಕವೂ ಹೀರೋಯಿನ್​ ಆಗಿಯೇ ಡಿಮ್ಯಾಂಡ್​ ಉಳಿಸಿಕೊಂಡಿದ್ದಾರೆ. ಬಾಲಿವುಡ್​ನಲ್ಲಿ ಹಲವು ನಟಿಯರು ಈ ವಿಚಾರದಲ್ಲಿ ಮಾದರಿ ಆಗಿದ್ದಾರೆ. ವಿದ್ಯಾ ಬಾಲನ್​, ರಾಣಿ ಮುಖರ್ಜಿ, ಕಾಜೋಲ್​ ಮುಂತಾದ ನಟಿಯರು ಈಗಲೂ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಅವರು ಆಯ್ಕೆ ಮಾಡಿಕೊಳ್ಳುವ ಸ್ಕ್ರಿಪ್ಟ್​ಗಳು ಕೂಡ ಭಿನ್ನವಾಗಿವೆ. ಈಗ ಕಾಜೋಲ್​ (Kajol) ಅವರು ಹೊಸ ಸಿನಿಮಾದ ಕೆಲಸದಲ್ಲಿ ಭಾಗಿ ಆಗಿದ್ದಾರೆ. ಈ ಚಿತ್ರಕ್ಕೆ ಖ್ಯಾತ ನಿರ್ದೇಶಕಿ ರೇವತಿ ಅವರು ಆ್ಯಕ್ಷನ್​-ಕಟ್​ ಹೇಳಲಿದ್ದಾರೆ. ಈ ಸಿನಿಮಾಗೆ ‘ಸಲಾಂ ವೆಂಕಿ’ (Salaam Venky Movie) ಎಂದು ಶೀರ್ಷಿಕೆ ಇಡಲಾಗಿದೆ. ಇದರ ಶೂಟಿಂಗ್​ ಆರಂಭವಾಗಿದ್ದು, ಮುಹೂರ್ತದ ಕೆಲವು ಫೋಟೋಗಳನ್ನು ಕಾಜೋಲ್​ ಶೇರ್​ ಮಾಡಿಕೊಂಡಿದ್ದಾರೆ. ಈ ಸಿನಿಮಾ ಬಗ್ಗೆ ಅವರಿಗೆ ಹೆಚ್ಚು ಉತ್ಸಾಹ ಇದೆ. ಆ ಬಗ್ಗೆ ಅವರು ಬರೆದುಕೊಂಡಿದ್ದಾರೆ. ರೇವತಿ (Director Revathy) ಮತ್ತು ಕಾಜೋಲ್​ ಕಾಂಬಿನೇಷನ್​ ಬಗ್ಗೆ ಸಿನಿಪ್ರಿಯರ ವಲಯದಲ್ಲಿ ನಿರೀಕ್ಷೆ ಸೃಷ್ಟಿ ಆಗಿದೆ.

ನೈಜ ಘಟನೆ ಆಧಾರಿತವಾಗಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಆಫ್​ ಬೀಟ್​ ಕಥೆಗಳನ್ನು ಆಯ್ಕೆ ಮಾಡಿಕೊಳ್ಳುತ್ತಿರುವ ಕಾಜೋಲ್​ ಅವರು ಈಗ ‘ಸಲಾಮ್​ ವೆಂಕಿ’ ಚಿತ್ರವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ‘ಹೇಳಲೇಬೇಕಾದ ಒಂದು ಕಥೆಯ ಪಯಣವನ್ನು ನಾವಿಂದು ಆರಂಭಿಸಿದ್ದೇವೆ. ನಂಬಲು ಅಸಾಧ್ಯವಾದ ನೈಜ ಕಥೆಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ನಾವು ಕಾದಿದ್ದೇವೆ’ ಎಂದು ಕಾಜೋಲ್​ ಟ್ವೀಟ್​ ಮಾಡಿದ್ದಾರೆ.

ಸೂರಜ್​ ಸಿಂಗ್​, ಶ್ರದ್ಧಾ ಅಗರ್​ವಾಲ್​, ವರ್ಷಾ ಕುಕ್ರೇಜಾ ಅವರು ‘ಸಲಾಮ್​ ವೆಂಕಿ’ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಮೊದಲ ಹಂತದ ಶೂಟಿಂಗ್​ಗೆ ಚಾಲನೆ ನೀಡಲಾಗಿದೆ. ಜೀವನದಲ್ಲಿ ಅಸಾಧಾರಣ ಸವಾಲುಗಳನ್ನು ಎದುರಿಸಿದ ತಾಯಿಯೊಬ್ಬಳ ಕಥೆಯನ್ನು ಈ ಸಿನಿಮಾದಲ್ಲಿ ಹೇಳಲಾಗುತ್ತದೆ. ಸದ್ಯಕ್ಕೆ ‘ಸಲಾಮ್​ ವೆಂಕಿ’ ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ಬಹಿರಂಗ ಆಗಿಲ್ಲ. ಅಭಿಮಾನಿಗಳು, ಸ್ನೇಹಿತರು ಮತ್ತು ಸೆಲೆಬ್ರಿಟಿಗಳು ಕಾಜೋಲ್​ ಅವರ ಈ ಹೊಸ ಚಿತ್ರಕ್ಕೆ ಶುಭ ಹಾರೈಸಿದ್ದಾರೆ.

ಭಿನ್ನವಾದ ಸಿನಿಮಾಗಳನ್ನು ನಿರ್ದೇಶಿಸುವ ಮೂಲಕ ರೇವತಿ ಗುರುತಿಸಿಕೊಂಡಿದ್ದಾರೆ. ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಹಲವಾರು ಸಿನಿಮಾಗಳಲ್ಲಿ ಅಭಿನಯಿಸಿರುವ ಅವರು ರಾಷ್ಟ್ರ ಪ್ರಶಸ್ತಿ ಮತ್ತು ಫಿಲ್ಮ್​ಫೇರ್​ ಪ್ರಶಸ್ತಿಗಳನ್ನು ಕೂಡ ಪಡೆದುಕೊಂಡಿದ್ದಾರೆ. ಇಂಥ ಪ್ರತಿಭಾವಂತ ನಿರ್ದೇಶಕಿಯ ಜೊತೆ ಕಾಜೋಲ್​ ಕೈ ಜೋಡಿಸಿರುವುದು ಅವರ ಅಭಿಮಾನಿಗಳಿಗೆ ಸಂತಸ ತಂದಿದೆ.

ಕಾಜೋಲ್ ನಟಿಸಿದ್ದ ‘ತ್ರಿಭಂಗ’ ಸಿನಿಮಾ ಕಳೆದ ವರ್ಷ ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗಿತ್ತು. ಆ ಚಿತ್ರಕ್ಕೆ ವಿಮರ್ಶಕರಿಂದ ಮೆಚ್ಚುಗೆ ವ್ಯಕ್ತವಾಗಿತ್ತು. ಸಿನಿಮಾಗಳ ಆಯ್ಕೆಯಲ್ಲಿ ಹೆಚ್ಚು ಚ್ಯೂಸಿ ಆಗಿರುವ ಕಾಜೋಲ್​ ಅವರು ಈಗ ‘ಸಲಾಮ್​ ವೆಂಕಿ’ ಚಿತ್ರ ಆಯ್ಕೆ ಮಾಡಿಕೊಂಡಿರುವುದರಿಂದ ನಿರೀಕ್ಷೆ ಸೃಷ್ಟಿ ಆಗಿದೆ.

ಇದನ್ನೂ ಓದಿ:

ಈ ಕೆಟ್ಟ ಚಟ ಬಿಡೋಕೆ ತುಂಬಾನೇ ಪ್ರಯತ್ನಿಸುತ್ತಿದ್ದಾರೆ ನಟಿ ಕಾಜೋಲ್​

ಬಾಲಿವುಡ್​ನಲ್ಲಿ ಲಿಂಗ ತಾರತಮ್ಯ; ಸ್ಟಾರ್​ ನಟರಿಂದ ವಿದ್ಯಾ ಬಾಲನ್​ಗೆ ಈ ಒಂದು ಕಷ್ಟ ತಪ್ಪಿರಲಿಲ್ಲ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ