AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಸಿನಿಮಾ ಕೆಲಸ ಆರಂಭಿಸಿದ ಕಾಜೋಲ್​; ನಿರ್ದೇಶಕಿ ರೇವತಿ ಜೊತೆ ಕೈ ಜೋಡಿಸಿದ ನಟಿ

ಇತ್ತೀಚಿನ ವರ್ಷಗಳಲ್ಲಿ ಆಫ್​ ಬೀಟ್​ ಕಥೆಗಳನ್ನು ಆಯ್ಕೆ ಮಾಡಿಕೊಳ್ಳುತ್ತಿರುವ ಕಾಜೋಲ್​ ಅವರು ಈಗ ‘ಸಲಾಮ್​ ವೆಂಕಿ’ ಚಿತ್ರವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದರ ಶೂಟಿಂಗ್​ ಆರಂಭ ಆಗಿದೆ.

ಹೊಸ ಸಿನಿಮಾ ಕೆಲಸ ಆರಂಭಿಸಿದ ಕಾಜೋಲ್​; ನಿರ್ದೇಶಕಿ ರೇವತಿ ಜೊತೆ ಕೈ ಜೋಡಿಸಿದ ನಟಿ
ರೇವತಿ-ಕಾಜೋಲ್​
TV9 Web
| Edited By: |

Updated on: Feb 11, 2022 | 4:30 PM

Share

ಮದುವೆ ಆದ ಬಳಿಕ ನಟಿಯರು ಚಿತ್ರರಂಗದಲ್ಲಿ ಹಿನ್ನೆಲೆಗೆ ಸರಿಯುತ್ತಾರೆ ಎಂಬ ಮಾತಿತ್ತು. ಆದರೆ ನಂತರದ ದಿನಗಳಲ್ಲಿ ಕಾಲ ಬದಲಾಯಿತು. ಅನೇಕ ಸ್ಟಾರ್​ ನಟಿಯರು ಮದುವೆ, ಮಕ್ಕಳು ಆದ ಬಳಿಕವೂ ಹೀರೋಯಿನ್​ ಆಗಿಯೇ ಡಿಮ್ಯಾಂಡ್​ ಉಳಿಸಿಕೊಂಡಿದ್ದಾರೆ. ಬಾಲಿವುಡ್​ನಲ್ಲಿ ಹಲವು ನಟಿಯರು ಈ ವಿಚಾರದಲ್ಲಿ ಮಾದರಿ ಆಗಿದ್ದಾರೆ. ವಿದ್ಯಾ ಬಾಲನ್​, ರಾಣಿ ಮುಖರ್ಜಿ, ಕಾಜೋಲ್​ ಮುಂತಾದ ನಟಿಯರು ಈಗಲೂ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಅವರು ಆಯ್ಕೆ ಮಾಡಿಕೊಳ್ಳುವ ಸ್ಕ್ರಿಪ್ಟ್​ಗಳು ಕೂಡ ಭಿನ್ನವಾಗಿವೆ. ಈಗ ಕಾಜೋಲ್​ (Kajol) ಅವರು ಹೊಸ ಸಿನಿಮಾದ ಕೆಲಸದಲ್ಲಿ ಭಾಗಿ ಆಗಿದ್ದಾರೆ. ಈ ಚಿತ್ರಕ್ಕೆ ಖ್ಯಾತ ನಿರ್ದೇಶಕಿ ರೇವತಿ ಅವರು ಆ್ಯಕ್ಷನ್​-ಕಟ್​ ಹೇಳಲಿದ್ದಾರೆ. ಈ ಸಿನಿಮಾಗೆ ‘ಸಲಾಂ ವೆಂಕಿ’ (Salaam Venky Movie) ಎಂದು ಶೀರ್ಷಿಕೆ ಇಡಲಾಗಿದೆ. ಇದರ ಶೂಟಿಂಗ್​ ಆರಂಭವಾಗಿದ್ದು, ಮುಹೂರ್ತದ ಕೆಲವು ಫೋಟೋಗಳನ್ನು ಕಾಜೋಲ್​ ಶೇರ್​ ಮಾಡಿಕೊಂಡಿದ್ದಾರೆ. ಈ ಸಿನಿಮಾ ಬಗ್ಗೆ ಅವರಿಗೆ ಹೆಚ್ಚು ಉತ್ಸಾಹ ಇದೆ. ಆ ಬಗ್ಗೆ ಅವರು ಬರೆದುಕೊಂಡಿದ್ದಾರೆ. ರೇವತಿ (Director Revathy) ಮತ್ತು ಕಾಜೋಲ್​ ಕಾಂಬಿನೇಷನ್​ ಬಗ್ಗೆ ಸಿನಿಪ್ರಿಯರ ವಲಯದಲ್ಲಿ ನಿರೀಕ್ಷೆ ಸೃಷ್ಟಿ ಆಗಿದೆ.

ನೈಜ ಘಟನೆ ಆಧಾರಿತವಾಗಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಆಫ್​ ಬೀಟ್​ ಕಥೆಗಳನ್ನು ಆಯ್ಕೆ ಮಾಡಿಕೊಳ್ಳುತ್ತಿರುವ ಕಾಜೋಲ್​ ಅವರು ಈಗ ‘ಸಲಾಮ್​ ವೆಂಕಿ’ ಚಿತ್ರವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ‘ಹೇಳಲೇಬೇಕಾದ ಒಂದು ಕಥೆಯ ಪಯಣವನ್ನು ನಾವಿಂದು ಆರಂಭಿಸಿದ್ದೇವೆ. ನಂಬಲು ಅಸಾಧ್ಯವಾದ ನೈಜ ಕಥೆಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ನಾವು ಕಾದಿದ್ದೇವೆ’ ಎಂದು ಕಾಜೋಲ್​ ಟ್ವೀಟ್​ ಮಾಡಿದ್ದಾರೆ.

ಸೂರಜ್​ ಸಿಂಗ್​, ಶ್ರದ್ಧಾ ಅಗರ್​ವಾಲ್​, ವರ್ಷಾ ಕುಕ್ರೇಜಾ ಅವರು ‘ಸಲಾಮ್​ ವೆಂಕಿ’ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಮೊದಲ ಹಂತದ ಶೂಟಿಂಗ್​ಗೆ ಚಾಲನೆ ನೀಡಲಾಗಿದೆ. ಜೀವನದಲ್ಲಿ ಅಸಾಧಾರಣ ಸವಾಲುಗಳನ್ನು ಎದುರಿಸಿದ ತಾಯಿಯೊಬ್ಬಳ ಕಥೆಯನ್ನು ಈ ಸಿನಿಮಾದಲ್ಲಿ ಹೇಳಲಾಗುತ್ತದೆ. ಸದ್ಯಕ್ಕೆ ‘ಸಲಾಮ್​ ವೆಂಕಿ’ ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ಬಹಿರಂಗ ಆಗಿಲ್ಲ. ಅಭಿಮಾನಿಗಳು, ಸ್ನೇಹಿತರು ಮತ್ತು ಸೆಲೆಬ್ರಿಟಿಗಳು ಕಾಜೋಲ್​ ಅವರ ಈ ಹೊಸ ಚಿತ್ರಕ್ಕೆ ಶುಭ ಹಾರೈಸಿದ್ದಾರೆ.

ಭಿನ್ನವಾದ ಸಿನಿಮಾಗಳನ್ನು ನಿರ್ದೇಶಿಸುವ ಮೂಲಕ ರೇವತಿ ಗುರುತಿಸಿಕೊಂಡಿದ್ದಾರೆ. ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಹಲವಾರು ಸಿನಿಮಾಗಳಲ್ಲಿ ಅಭಿನಯಿಸಿರುವ ಅವರು ರಾಷ್ಟ್ರ ಪ್ರಶಸ್ತಿ ಮತ್ತು ಫಿಲ್ಮ್​ಫೇರ್​ ಪ್ರಶಸ್ತಿಗಳನ್ನು ಕೂಡ ಪಡೆದುಕೊಂಡಿದ್ದಾರೆ. ಇಂಥ ಪ್ರತಿಭಾವಂತ ನಿರ್ದೇಶಕಿಯ ಜೊತೆ ಕಾಜೋಲ್​ ಕೈ ಜೋಡಿಸಿರುವುದು ಅವರ ಅಭಿಮಾನಿಗಳಿಗೆ ಸಂತಸ ತಂದಿದೆ.

ಕಾಜೋಲ್ ನಟಿಸಿದ್ದ ‘ತ್ರಿಭಂಗ’ ಸಿನಿಮಾ ಕಳೆದ ವರ್ಷ ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗಿತ್ತು. ಆ ಚಿತ್ರಕ್ಕೆ ವಿಮರ್ಶಕರಿಂದ ಮೆಚ್ಚುಗೆ ವ್ಯಕ್ತವಾಗಿತ್ತು. ಸಿನಿಮಾಗಳ ಆಯ್ಕೆಯಲ್ಲಿ ಹೆಚ್ಚು ಚ್ಯೂಸಿ ಆಗಿರುವ ಕಾಜೋಲ್​ ಅವರು ಈಗ ‘ಸಲಾಮ್​ ವೆಂಕಿ’ ಚಿತ್ರ ಆಯ್ಕೆ ಮಾಡಿಕೊಂಡಿರುವುದರಿಂದ ನಿರೀಕ್ಷೆ ಸೃಷ್ಟಿ ಆಗಿದೆ.

ಇದನ್ನೂ ಓದಿ:

ಈ ಕೆಟ್ಟ ಚಟ ಬಿಡೋಕೆ ತುಂಬಾನೇ ಪ್ರಯತ್ನಿಸುತ್ತಿದ್ದಾರೆ ನಟಿ ಕಾಜೋಲ್​

ಬಾಲಿವುಡ್​ನಲ್ಲಿ ಲಿಂಗ ತಾರತಮ್ಯ; ಸ್ಟಾರ್​ ನಟರಿಂದ ವಿದ್ಯಾ ಬಾಲನ್​ಗೆ ಈ ಒಂದು ಕಷ್ಟ ತಪ್ಪಿರಲಿಲ್ಲ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್