AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಸಿನಿಮಾ ಕೆಲಸ ಆರಂಭಿಸಿದ ಕಾಜೋಲ್​; ನಿರ್ದೇಶಕಿ ರೇವತಿ ಜೊತೆ ಕೈ ಜೋಡಿಸಿದ ನಟಿ

ಇತ್ತೀಚಿನ ವರ್ಷಗಳಲ್ಲಿ ಆಫ್​ ಬೀಟ್​ ಕಥೆಗಳನ್ನು ಆಯ್ಕೆ ಮಾಡಿಕೊಳ್ಳುತ್ತಿರುವ ಕಾಜೋಲ್​ ಅವರು ಈಗ ‘ಸಲಾಮ್​ ವೆಂಕಿ’ ಚಿತ್ರವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದರ ಶೂಟಿಂಗ್​ ಆರಂಭ ಆಗಿದೆ.

ಹೊಸ ಸಿನಿಮಾ ಕೆಲಸ ಆರಂಭಿಸಿದ ಕಾಜೋಲ್​; ನಿರ್ದೇಶಕಿ ರೇವತಿ ಜೊತೆ ಕೈ ಜೋಡಿಸಿದ ನಟಿ
ರೇವತಿ-ಕಾಜೋಲ್​
TV9 Web
| Updated By: ಮದನ್​ ಕುಮಾರ್​|

Updated on: Feb 11, 2022 | 4:30 PM

Share

ಮದುವೆ ಆದ ಬಳಿಕ ನಟಿಯರು ಚಿತ್ರರಂಗದಲ್ಲಿ ಹಿನ್ನೆಲೆಗೆ ಸರಿಯುತ್ತಾರೆ ಎಂಬ ಮಾತಿತ್ತು. ಆದರೆ ನಂತರದ ದಿನಗಳಲ್ಲಿ ಕಾಲ ಬದಲಾಯಿತು. ಅನೇಕ ಸ್ಟಾರ್​ ನಟಿಯರು ಮದುವೆ, ಮಕ್ಕಳು ಆದ ಬಳಿಕವೂ ಹೀರೋಯಿನ್​ ಆಗಿಯೇ ಡಿಮ್ಯಾಂಡ್​ ಉಳಿಸಿಕೊಂಡಿದ್ದಾರೆ. ಬಾಲಿವುಡ್​ನಲ್ಲಿ ಹಲವು ನಟಿಯರು ಈ ವಿಚಾರದಲ್ಲಿ ಮಾದರಿ ಆಗಿದ್ದಾರೆ. ವಿದ್ಯಾ ಬಾಲನ್​, ರಾಣಿ ಮುಖರ್ಜಿ, ಕಾಜೋಲ್​ ಮುಂತಾದ ನಟಿಯರು ಈಗಲೂ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಅವರು ಆಯ್ಕೆ ಮಾಡಿಕೊಳ್ಳುವ ಸ್ಕ್ರಿಪ್ಟ್​ಗಳು ಕೂಡ ಭಿನ್ನವಾಗಿವೆ. ಈಗ ಕಾಜೋಲ್​ (Kajol) ಅವರು ಹೊಸ ಸಿನಿಮಾದ ಕೆಲಸದಲ್ಲಿ ಭಾಗಿ ಆಗಿದ್ದಾರೆ. ಈ ಚಿತ್ರಕ್ಕೆ ಖ್ಯಾತ ನಿರ್ದೇಶಕಿ ರೇವತಿ ಅವರು ಆ್ಯಕ್ಷನ್​-ಕಟ್​ ಹೇಳಲಿದ್ದಾರೆ. ಈ ಸಿನಿಮಾಗೆ ‘ಸಲಾಂ ವೆಂಕಿ’ (Salaam Venky Movie) ಎಂದು ಶೀರ್ಷಿಕೆ ಇಡಲಾಗಿದೆ. ಇದರ ಶೂಟಿಂಗ್​ ಆರಂಭವಾಗಿದ್ದು, ಮುಹೂರ್ತದ ಕೆಲವು ಫೋಟೋಗಳನ್ನು ಕಾಜೋಲ್​ ಶೇರ್​ ಮಾಡಿಕೊಂಡಿದ್ದಾರೆ. ಈ ಸಿನಿಮಾ ಬಗ್ಗೆ ಅವರಿಗೆ ಹೆಚ್ಚು ಉತ್ಸಾಹ ಇದೆ. ಆ ಬಗ್ಗೆ ಅವರು ಬರೆದುಕೊಂಡಿದ್ದಾರೆ. ರೇವತಿ (Director Revathy) ಮತ್ತು ಕಾಜೋಲ್​ ಕಾಂಬಿನೇಷನ್​ ಬಗ್ಗೆ ಸಿನಿಪ್ರಿಯರ ವಲಯದಲ್ಲಿ ನಿರೀಕ್ಷೆ ಸೃಷ್ಟಿ ಆಗಿದೆ.

ನೈಜ ಘಟನೆ ಆಧಾರಿತವಾಗಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಆಫ್​ ಬೀಟ್​ ಕಥೆಗಳನ್ನು ಆಯ್ಕೆ ಮಾಡಿಕೊಳ್ಳುತ್ತಿರುವ ಕಾಜೋಲ್​ ಅವರು ಈಗ ‘ಸಲಾಮ್​ ವೆಂಕಿ’ ಚಿತ್ರವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ‘ಹೇಳಲೇಬೇಕಾದ ಒಂದು ಕಥೆಯ ಪಯಣವನ್ನು ನಾವಿಂದು ಆರಂಭಿಸಿದ್ದೇವೆ. ನಂಬಲು ಅಸಾಧ್ಯವಾದ ನೈಜ ಕಥೆಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ನಾವು ಕಾದಿದ್ದೇವೆ’ ಎಂದು ಕಾಜೋಲ್​ ಟ್ವೀಟ್​ ಮಾಡಿದ್ದಾರೆ.

ಸೂರಜ್​ ಸಿಂಗ್​, ಶ್ರದ್ಧಾ ಅಗರ್​ವಾಲ್​, ವರ್ಷಾ ಕುಕ್ರೇಜಾ ಅವರು ‘ಸಲಾಮ್​ ವೆಂಕಿ’ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಮೊದಲ ಹಂತದ ಶೂಟಿಂಗ್​ಗೆ ಚಾಲನೆ ನೀಡಲಾಗಿದೆ. ಜೀವನದಲ್ಲಿ ಅಸಾಧಾರಣ ಸವಾಲುಗಳನ್ನು ಎದುರಿಸಿದ ತಾಯಿಯೊಬ್ಬಳ ಕಥೆಯನ್ನು ಈ ಸಿನಿಮಾದಲ್ಲಿ ಹೇಳಲಾಗುತ್ತದೆ. ಸದ್ಯಕ್ಕೆ ‘ಸಲಾಮ್​ ವೆಂಕಿ’ ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ಬಹಿರಂಗ ಆಗಿಲ್ಲ. ಅಭಿಮಾನಿಗಳು, ಸ್ನೇಹಿತರು ಮತ್ತು ಸೆಲೆಬ್ರಿಟಿಗಳು ಕಾಜೋಲ್​ ಅವರ ಈ ಹೊಸ ಚಿತ್ರಕ್ಕೆ ಶುಭ ಹಾರೈಸಿದ್ದಾರೆ.

ಭಿನ್ನವಾದ ಸಿನಿಮಾಗಳನ್ನು ನಿರ್ದೇಶಿಸುವ ಮೂಲಕ ರೇವತಿ ಗುರುತಿಸಿಕೊಂಡಿದ್ದಾರೆ. ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಹಲವಾರು ಸಿನಿಮಾಗಳಲ್ಲಿ ಅಭಿನಯಿಸಿರುವ ಅವರು ರಾಷ್ಟ್ರ ಪ್ರಶಸ್ತಿ ಮತ್ತು ಫಿಲ್ಮ್​ಫೇರ್​ ಪ್ರಶಸ್ತಿಗಳನ್ನು ಕೂಡ ಪಡೆದುಕೊಂಡಿದ್ದಾರೆ. ಇಂಥ ಪ್ರತಿಭಾವಂತ ನಿರ್ದೇಶಕಿಯ ಜೊತೆ ಕಾಜೋಲ್​ ಕೈ ಜೋಡಿಸಿರುವುದು ಅವರ ಅಭಿಮಾನಿಗಳಿಗೆ ಸಂತಸ ತಂದಿದೆ.

ಕಾಜೋಲ್ ನಟಿಸಿದ್ದ ‘ತ್ರಿಭಂಗ’ ಸಿನಿಮಾ ಕಳೆದ ವರ್ಷ ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗಿತ್ತು. ಆ ಚಿತ್ರಕ್ಕೆ ವಿಮರ್ಶಕರಿಂದ ಮೆಚ್ಚುಗೆ ವ್ಯಕ್ತವಾಗಿತ್ತು. ಸಿನಿಮಾಗಳ ಆಯ್ಕೆಯಲ್ಲಿ ಹೆಚ್ಚು ಚ್ಯೂಸಿ ಆಗಿರುವ ಕಾಜೋಲ್​ ಅವರು ಈಗ ‘ಸಲಾಮ್​ ವೆಂಕಿ’ ಚಿತ್ರ ಆಯ್ಕೆ ಮಾಡಿಕೊಂಡಿರುವುದರಿಂದ ನಿರೀಕ್ಷೆ ಸೃಷ್ಟಿ ಆಗಿದೆ.

ಇದನ್ನೂ ಓದಿ:

ಈ ಕೆಟ್ಟ ಚಟ ಬಿಡೋಕೆ ತುಂಬಾನೇ ಪ್ರಯತ್ನಿಸುತ್ತಿದ್ದಾರೆ ನಟಿ ಕಾಜೋಲ್​

ಬಾಲಿವುಡ್​ನಲ್ಲಿ ಲಿಂಗ ತಾರತಮ್ಯ; ಸ್ಟಾರ್​ ನಟರಿಂದ ವಿದ್ಯಾ ಬಾಲನ್​ಗೆ ಈ ಒಂದು ಕಷ್ಟ ತಪ್ಪಿರಲಿಲ್ಲ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!