AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಲಾ ಹಿರನ್’: ಸಲ್ಮಾನ್ ಖಾನ್ ಕೃಷ್ಣಮೃಗ ಭೇಟೆ ಕೇಸು ಕುರಿತು ಸಿನಿಮಾ

Movie on Salman Khan: ಹಲವಾರು ವಿವಾದಗಳಿಗೆ ಸಲ್ಮಾನ್ ಖಾನ್ ಸಿಲುಕಿಕೊಂಡಿದ್ದರು. ಅವುಗಳಲ್ಲಿ ಹೆಚ್ಚು ಸಾರ್ವಜನಿಕರ ಗಮನ ಸೆಳೆದಿದ್ದೆಂದರೆ ಕಾರು ಅಪಘಾತ ಪ್ರಕರಣ ಮತ್ತು ಕೃಷ್ಣಮೃಗ ಭೇಟೆ ಪ್ರಕರಣ. ಇದೀಗ ಸಲ್ಮಾನ್ ಖಾನ್ ಅವರ ಕೃಷ್ಣಮೃಗ ಭೇಟೆ ಪ್ರಕರಣದ ಬಗ್ಗೆ ಸಿನಿಮಾ ಒಂದು ಬಾಲಿವುಡ್​​ನಲ್ಲಿ ನಿರ್ಮಾಣ ಆಗುತ್ತಿದೆ.

‘ಕಾಲಾ ಹಿರನ್’: ಸಲ್ಮಾನ್ ಖಾನ್ ಕೃಷ್ಣಮೃಗ ಭೇಟೆ ಕೇಸು ಕುರಿತು ಸಿನಿಮಾ
Kala Hiran Sallu Bhai
ಮಂಜುನಾಥ ಸಿ.
|

Updated on: May 31, 2026 | 7:04 PM

Share

ಸಲ್ಮಾನ್ ಖಾನ್ (Salman Khan) ಬಾಲಿವುಡ್​​ನ ಸೂಪರ್ ಸ್ಟಾರ್ ನಟ. ಅದ್ಭುತವಾದ ವೃತ್ತಿ ಜೀವನ ನೋಡಿರುವ, ನೋಡುತ್ತಿರುವ ಸಲ್ಮಾನ್ ಖಾನ್ ಅವರ ವೈಯಕ್ತಿಕ ಜೀವನ ಮಾತ್ರ ಸಾಕಷ್ಟು ಏರು-ಪೇರುಗಳಿಂದ ಕೂಡಿತ್ತು. ಅಪಘಾತ ಪ್ರಕರಣ, ಸಹ ನಟನಿಗೆ ಬೆದರಿಕೆ, ಹಲ್ಲೆ ಪ್ರಕರಣ, ಕೃಷ್ಣಮೃಗ ಭೇಟೆ ಪ್ರಕರಣ, ಇನ್ನೂ ಹಲವಾರು ವಿವಾದಗಳಿಗೆ ಸಲ್ಮಾನ್ ಖಾನ್ ಸಿಲುಕಿಕೊಂಡಿದ್ದರು. ಅವುಗಳಲ್ಲಿ ಹೆಚ್ಚು ಸಾರ್ವಜನಿಕರ ಗಮನ ಸೆಳೆದಿದ್ದೆಂದರೆ ಕಾರು ಅಪಘಾತ ಪ್ರಕರಣ ಮತ್ತು ಕೃಷ್ಣಮೃಗ ಭೇಟೆ ಪ್ರಕರಣ. ಇದೀಗ ಸಲ್ಮಾನ್ ಖಾನ್ ಅವರ ಕೃಷ್ಣಮೃಗ ಭೇಟೆ ಪ್ರಕರಣದ ಬಗ್ಗೆ ಸಿನಿಮಾ ಒಂದು ಬಾಲಿವುಡ್​​ನಲ್ಲಿ ನಿರ್ಮಾಣ ಆಗುತ್ತಿದೆ.

ವಿವಾದಾತ್ಮಕ ಸಿನಿಮಾಗಳ ನಿರ್ಮಾಣದಿಂದಲೇ ಹೆಸರಾಗುತ್ತಿರುವ ಅಮಿತ್ ಜಾನಿ ನಿರ್ಮಾಣದಲ್ಲಿ ‘ಕಾಲಾ ಹಿರನ್: ದಿ ಬ್ಯಾಟಲ್ ಆಫ್ ಲೆಗಸಿ’ ಹೆಸರಿನ ಸಿನಿಮಾ ತಯಾರಾಗುತ್ತಿದ್ದು, ಈ ಸಿನಿಮಾ ಸಲ್ಮಾನ್ ಖಾನ್ ಅವರ ಕೃಷ್ಣಮೃಗ ಭೇಟೆ ಪ್ರಕರಣಕ್ಕೆ ಸಂಬಂಧಿಸಿದ ಕತೆಯನ್ನು ಒಳಗೊಂಡಿದೆ. ಸಿನಿಮಾದ ಪೋಸ್ಟರ್ ಬಿಡುಗಡೆ ಆಗಿದ್ದು, ಸಲ್ಮಾನ್ ಖಾನ್ ಅವರನ್ನು ಹೋಲುವ ವ್ಯಕ್ತಿಯೊಬ್ಬ ಕೈಯಲ್ಲಿ ರೈಫಲ್ ಹಿಡಿದು ಗುರಿ ನೋಡುತ್ತಿದ್ದಾರೆ. ಸಲ್ಮಾನ್ ಖಾನ್ ಕೈಗೆ ಧರಿಸುವ ಚೈನ್ ಮಾದರಿಯ ಚೈನ್ ಪೋಸ್ಟರ್​​ನಲ್ಲಿರುವ ವ್ಯಕ್ತಿಯ ಕೈಯಲ್ಲೂ ಇದೆ.

ಚಿತ್ರದ ಕುರಿತು ಮಾಹಿತಿ ಹಂಚಿಕೊಂಡಿರುವ ನಿರ್ಮಾಪಕ ಅಮಿತ್ ಜಾನಿ, ‘ಇದು ನಿಜ ಘಟನೆ ಮತ್ತು ನ್ಯಾಯಾಲಯದಲ್ಲಿ ನಡೆದ ವಿಚಾರಣೆಯ ಕತೆಯನ್ನು ಒಳಗೊಂಡಿದೆ’ ಎಂದಿದ್ದಾರೆ. ಅಲ್ಲದೆ ಈ ಸಿನಿಮಾ ಭಾರತದ ಅತಿ ದೊಡ್ಡ ವಿವಾದಾತ್ಮಕ ಸಿನಿಮಾ ಆಗಲಿದೆ ಎಂದು ಸಹ ಅವರು ಹೇಳಿದ್ದಾರೆ. ಕೃಷ್ಣಮೃಗ ಭೇಟೆ ಕುರಿತ ಈ ಸಿನಿಮಾ ಸಲ್ಮಾನ್ ಖಾನ್ ಜೊತೆಗೆ ಭೂಗತ ಪಾತಕಿ ಲಾರೆನ್ಸ್ ಬಿಷ್ಣೋಯಿ ಕತೆಯನ್ನೂ ಒಳಗೊಂಡಿರಲಿದೆ.

View this post on Instagram

A post shared by Raj changra (@changraraj.16)

‘ಉದಯಪುರ ಫೈಲ್ಸ್’ ಸಿನಿಮಾ ನಿರ್ಮಾಣ ಮಾಡಿದ್ದ ಅಮಿತ್ ಜಾನಿ ಇದೀಗ ‘ಕಾಲಾ ಹಿರನ್’ ಸಿನಿಮಾಕ್ಕೆ ಕೈ ಹಾಕಿದ್ದು, ಈ ಸಿನಿಮಾವನ್ನು ಭರತ್ ಎಸ್ ಶ್ರೀನಾಥ್ ಎಂಬುವರು ಈ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಜಾನಿ ಫೈರ್ ಫಾಕ್ಸ್ ಸಂಸ್ಥೆಯ ಮೂಲಕ ಈ ಸಿನಿಮಾ ನಿರ್ಮಾಣಗೊಳ್ಳುತ್ತಿದೆ. ಸಿನಿಮಾದ ಟೀಸರ್ ಜೂನ್ 20 ರಂದು ಬಿಡುಗಡೆ ಆಗಲಿದೆಯಂತೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More