AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಆರಂಭ ಆಯ್ತು ‘ಕಲ್ಕಿ’ ಸೀಕ್ವೆಲ್; ಫೋಟೋ ಹಂಚಿಕೊಂಡ ಅಮಿತಾಭ್

ಪ್ರಭಾಸ್ ನಟನೆಯ 'ಕಲ್ಕಿ 2898 ಎಡಿ' ಸಿನಿಮಾದ ಸೀಕ್ವೆಲ್ ಅಧಿಕೃತವಾಗಿ ಆರಂಭವಾಗಿದೆ. ದೀಪಿಕಾ ಪಡುಕೋಣೆ ನಿರ್ಗಮನದಂತಹ ಅಡೆತಡೆಗಳ ನಂತರ, ಅಮಿತಾಭ್ ಬಚ್ಚನ್ ಅವರು ಕಮಲ್ ಹಾಸನ್ ಜೊತೆಗಿನ ಫೋಟೋ ಹಂಚಿಕೊಳ್ಳುವ ಮೂಲಕ ಚಿತ್ರೀಕರಣ ಶುರುವಾಗಿದೆ ಎಂದು ಖಚಿತಪಡಿಸಿದ್ದಾರೆ. ದೀಪಿಕಾ ಜಾಗಕ್ಕೆ ಸಾಯಿ ಪಲ್ಲವಿ ಬರುವ ಸಾಧ್ಯತೆಯಿದೆ.

ಕೊನೆಗೂ ಆರಂಭ ಆಯ್ತು ‘ಕಲ್ಕಿ’ ಸೀಕ್ವೆಲ್;  ಫೋಟೋ ಹಂಚಿಕೊಂಡ ಅಮಿತಾಭ್
ಅಮಿತಾಭ್-ಕಮಲ್
ರಾಜೇಶ್ ದುಗ್ಗುಮನೆ
|

Updated on: Feb 24, 2026 | 3:05 PM

Share

ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾ ರಿಲೀಸ್ ಆದ ಬಳಿಕ ಸೀಕ್ವೆಲ್ ಬರಬೇಕಿದೆ. ಆದರೆ, ಚಿತ್ರಕ್ಕೆ ಸಾಕಷ್ಟು ಅಡೆತಡೆಗಳು ಎದುರಾದವು. ಈ ಸಿನಿಮಾದಿಂದ ದೀಪಿಕಾ ಪಡುಕೋಣೆ ಹೊರ ಹೋಗಿದ್ದು, ಚಿತ್ರಕ್ಕೆ ದೊಡ್ಡ ಹಿನ್ನಡೆ ಆಯಿತು. ಸಿನಿಮಾ ನಿಲ್ಲುತ್ತೆ ಎಂದು ಕೂಡ ಹೇಳಲಾಗಿತ್ತು. ಹೀಗಿರುವಾಗಲೇ ಚಿತ್ರದ ಸೀಕ್ವೆಲ್ ಬಗ್ಗೆ ಅಪ್​​ಡೇಟ್ ಸಿಕ್ಕಿದೆ. ಈ ಸಿನಿಮಾ ಅಧಿಕೃತವಾಗಿ ಆರಂಭ ಆಗಿದೆ. ಇದು ಅಭಿಮಾನಿಗಳ ಖುಷಿ ಕೊಟ್ಟಿದೆ.

‘ಕಲ್ಕಿ 2898 ಎಡಿ’ ಸಿನಿಮಾಗೆ ನಾಗ್ ಅಶ್ವಿನ್ ನಿರ್ದೇಶನ ಇದೆ. ಈ ಸಿನಿಮಾ ದೊಡ್ಡ ಬಜೆಟ್​​ನಲ್ಲಿ ರೆಡಿ ಆಯಿತು. ಈ ಸಿನಿಮಾ ಸಾವಿರ ಕೋಟಿ ರೂಪಾಯಿ ಬಿಸ್ನೆಸ್ ಮಾಡಿತು. ಈ ಚಿತ್ರದ ಕಥೆ ಅರ್ಧಕ್ಕೆ ನಿಂತಿದ್ದು, ಸೀಕ್ವೆಲ್ ಬರಬೇಕಿದೆ. ಮೊದಲ ಭಾಗದಲ್ಲಿ ಪ್ರಭಾಸ್, ಅಮಿತಾಭ್ ಬಚ್ಚನ್, ಕಮಲ್ ಹಾಸನ್ ದೀಪಿಕಾ ಸೇರಿದಂತೆ ಅನೇಕರು ನಟಿಸಿದ್ದರು. ಸೀಕ್ವೆಲ್​​ನಲ್ಲಿ ದೀಪಿಕಾ ಜಾಗವನ್ನು ಸಾಯಿ ಪಲ್ಲವಿ ತುಂಬಿದ್ದಾರೆ ಎನ್ನಲಾಗಿದೆ.

ಈ ಚಿತ್ರದ ಶೂಟ್ ಯಾವಾಗ ಆರಂಭ ಆಗುತ್ತದೆ ಎಂಬ ಕುತೂಹಲ ಮೂಡಿತ್ತು. ಅದಕ್ಕೆ ಅಮಿತಾಭ್ ಬಚ್ಚನ್ ಕಡೆಯಿಂದ ಉತ್ತರ ಸಿಕ್ಕಿದೆ. ಕಮಲ್ ಹಾಸನ್ ಅವರನ್ನು ಭೇಟಿ ಮಾಡಿರುವ ಫೋಟೋನ ಅಮಿತಾಭ್ ಬಚ್ಚನ್ ತಮ್ಮ ಬ್ಲಾಗ್  ಅಲ್ಲಿ ಹಂಚಿಕೊಂಡಿದ್ದಾರೆ. ಈ ಮೂಲಕ ‘ಕಲ್ಕಿ 2898 ಎಡಿ’ ಚಿತ್ರದ ಸೀಕ್ವೆಲ್​​ಗೆ ಶೂಟಿಂಗ್ ಶುರುವಾಗಿದೆ ಎಂಬುದನ್ನು ಖಚಿತಪಡಿಸಿದ್ದಾರೆ.

ಇದನ್ನೂ ಓದಿ: ‘ಅತ್ತೆ-ಮಾವ ನನ್ನ ಹೆಂಡತಿಯನ್ನು ಕಳುಹಿಸುತ್ತಿಲ್ಲ’; ಪೋಸ್ಟರ್ ಹಿಡಿದು ನಿಂತ ಅಮಿತಾಭ್ ಬಚ್ಚನ್

ಪ್ರತಿ ಭಾನುವಾರ ಅಮಿತಾಭ್ ಬಚ್ಚನ್ ಅವರು ಮನೆಯ ಬಳಿ ಅಭಿಮಾನಿಗಳನ್ನು ಭೇಟಿ ಮಾಡುತ್ತಾರೆ. ಆದರೆ, ಈ ಬಾರಿ ಅದು ಸಾಧ್ಯವಾಗಿಲ್ಲ. ಇದಕ್ಕೆ ಕಾರಣವನ್ನು ವಿವರಿಸಿದ್ದಾರೆ. ಶೂಟ್ ಕಾರಣಕ್ಕೆ ಅವರು ಹೈದರಾಬಾದ್ ಅಲ್ಲಿ ಇದ್ದಾರೆ. ಹೀಗಾಗಿ, ಅಭಿಮಾನಿಗಳ ಭೇಟಿ ಸಾಧ್ಯವಾಗಿಲ್ಲ ಎಂದು ಅವರು ಹೇಳಿದ್ದಾರೆ. ಅಮಿತಾಭ್ ಬಚ್ಚನ್ ಅವರಿಗೆ ಈ ವಯಸ್ಸಾಗಿದೆ. ಆದಾಗ್ಯೂ ಅಪರೂಪಕ್ಕೊಂದು ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ. ‘ಕಲ್ಕಿ 2898 ಎಡಿ’ ಚಿತ್ರದಲ್ಲಿ ಅವರು ಅಶ್ವತ್ಥಾಮ ಆಗಿ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಹುಬ್ಬಳ್ಳಿ ಸ್ಟೇಡಿಯಂ ಪೆವಿಲಿಯನ್​ಗೆ ಸುನಿಲ್ ಜೋಶಿ ಹೆಸರು ನಾಮಕರಣ
ಹುಬ್ಬಳ್ಳಿ ಸ್ಟೇಡಿಯಂ ಪೆವಿಲಿಯನ್​ಗೆ ಸುನಿಲ್ ಜೋಶಿ ಹೆಸರು ನಾಮಕರಣ
ಎಕ್ಸಾಂನಲ್ಲಿ ಟೈಮ್ ಮ್ಯಾನೇಜ್​ಮೆಂಟ್ ಮಾಡೋಕೆ ಆಗ್ತಾ ಇಲ್ವಾ?
ಎಕ್ಸಾಂನಲ್ಲಿ ಟೈಮ್ ಮ್ಯಾನೇಜ್​ಮೆಂಟ್ ಮಾಡೋಕೆ ಆಗ್ತಾ ಇಲ್ವಾ?
ತಡರಾತ್ರಿ ಗ್ರಾಮದಲ್ಲಿ ಓಡಾಡಿದ ಕಾಡಾನೆಗಳ ಹಿಂಡು!
ತಡರಾತ್ರಿ ಗ್ರಾಮದಲ್ಲಿ ಓಡಾಡಿದ ಕಾಡಾನೆಗಳ ಹಿಂಡು!
ರಾಜ್ಯ ಸರ್ಕಾರ ದಿವಾಳಿ, ಸಂಬಳ ನೀಡಲೂ ಹಣವಿಲ್ಲ: ಅಶೋಕ್​​ ಸ್ಫೋಟಕ ಆರೋಪ
ರಾಜ್ಯ ಸರ್ಕಾರ ದಿವಾಳಿ, ಸಂಬಳ ನೀಡಲೂ ಹಣವಿಲ್ಲ: ಅಶೋಕ್​​ ಸ್ಫೋಟಕ ಆರೋಪ
ಉದ್ಯೋಗಾಕಾಂಕ್ಷಿಗಳ ಕಿಚ್ಚು: ಅನುಮತಿ ನಿರಾಕರಣೆ ನಡುವೆಯೂ ಬೃಹತ್​ ಪ್ರತಿಭಟನೆ
ಉದ್ಯೋಗಾಕಾಂಕ್ಷಿಗಳ ಕಿಚ್ಚು: ಅನುಮತಿ ನಿರಾಕರಣೆ ನಡುವೆಯೂ ಬೃಹತ್​ ಪ್ರತಿಭಟನೆ
ಪೊಲೀಸರ ವಿರೋಧದ ಮಧ್ಯೆಯೇ ಜಯನಗರ ವೃತ್ತದ ಕಡೆಗೆ ಯುವಕರ ಮೆರವಣಿಗೆ!
ಪೊಲೀಸರ ವಿರೋಧದ ಮಧ್ಯೆಯೇ ಜಯನಗರ ವೃತ್ತದ ಕಡೆಗೆ ಯುವಕರ ಮೆರವಣಿಗೆ!
Live: ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ
Live: ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ
ಬೆಂಗಳೂರು: ಸೈರನ್​ನಿಂದ ತಪ್ಪಿತು ಕೆನರಾ ಬ್ಯಾಂಕ್ ಕಳ್ಳತನ ಯತ್ನ!
ಬೆಂಗಳೂರು: ಸೈರನ್​ನಿಂದ ತಪ್ಪಿತು ಕೆನರಾ ಬ್ಯಾಂಕ್ ಕಳ್ಳತನ ಯತ್ನ!
ರೇಣುಕಾಸ್ವಾಮಿ ಕೊಲೆ ಕೇಸ್​​​ನಲ್ಲಿ ತನಿಖಾಧಿಕಾರಿಗಳಿಂದ ನಡೆದಿದೆ ಎಡವಟ್ಟು?
ರೇಣುಕಾಸ್ವಾಮಿ ಕೊಲೆ ಕೇಸ್​​​ನಲ್ಲಿ ತನಿಖಾಧಿಕಾರಿಗಳಿಂದ ನಡೆದಿದೆ ಎಡವಟ್ಟು?
ಮನೆಯಲ್ಲಿ ಅಗ್ನಿ ಅವಘಡ, ಅವಳಿ ಶಿಶುಗಳು ಸೇರಿ ಆರು ಮಂದಿ ಸಜೀವದಹನ
ಮನೆಯಲ್ಲಿ ಅಗ್ನಿ ಅವಘಡ, ಅವಳಿ ಶಿಶುಗಳು ಸೇರಿ ಆರು ಮಂದಿ ಸಜೀವದಹನ