AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KRK: ಬಂಧನದ ಬಳಿಕ ಕಿರಿಕ್​ ನಟನಿಗೆ ಎದೆನೋವು ಶುರು; ಕಮಾಲ್​ ಆರ್​. ಖಾನ್​ಗೆ ಹೆಚ್ಚಿತು ಸಂಕಷ್ಟ

Kamaal R Khan Arrest: ಕಮಾಲ್​ ಆರ್​. ಖಾನ್​ ಅವರು ನ್ಯಾಯಾಂಗ ಬಂಧನದಲ್ಲಿದಾರೆ. ಅರೆಸ್ಟ್​ ಆದ ಕೆಲವೇ ಗಂಟೆಗಳಲ್ಲಿ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ.

KRK: ಬಂಧನದ ಬಳಿಕ ಕಿರಿಕ್​ ನಟನಿಗೆ ಎದೆನೋವು ಶುರು; ಕಮಾಲ್​ ಆರ್​. ಖಾನ್​ಗೆ ಹೆಚ್ಚಿತು ಸಂಕಷ್ಟ
ಕಮಾಲ್ ಆರ್. ಖಾನ್
TV9 Web
| Updated By: ಮದನ್​ ಕುಮಾರ್​|

Updated on:Aug 31, 2022 | 8:25 AM

Share

ವಿವಾದಗಳಿಂದ ಕುಖ್ಯಾತಿ ಪಡೆದ ವಿಮರ್ಶಕ, ನಟ ಕಮಾಲ್​ ಆರ್​. ಖಾನ್ (Kamaal R Khan)​ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಇತ್ತೀಚೆಗೆಷ್ಟೇ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದರು. ಸೆಲೆಬ್ರಿಟಿಗಳು ಮತ್ತು ಮಹಿಳೆಯರ ಬಗ್ಗೆ ಕೆಟ್ಟದಾಗಿ ಪೋಸ್ಟ್​ ಮಾಡಿದ ಆರೋಪ ಅವರ ಮೇಲಿದೆ. ದುಬೈಗೆ ತೆರಳಿದ್ದ ಕಮಾಲ್​ ಆರ್​. ಖಾನ್​ ಅವರು ಭಾರತಕ್ಕೆ ವಾಪಸ್​ ಬರುವಾಗ ಮುಂಬೈ ವಿಮಾನ ನಿಲ್ದಾಣದಲ್ಲಿ ಅರೆಸ್ಟ್​ (KRK Arrest) ಮಾಡಲಾಯಿತು. ನಂತರ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸುವಂತೆ ಕೋರ್ಟ್​ ಆದೇಶ ನೀಡಿದೆ. ಆ ಬಳಿಕ ಕಮಾಲ್​ ಆರ್​. ಖಾನ್​ (ಕೆಆರ್​ಕೆ) ಅವರಿಗೆ ಎದೆನೋವು (Chest Pain) ಕಾಣಿಸಿಕೊಂಡಿದೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಮುಂಬೈನ ಶತಾಬ್ದಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ ಎಂದು ವರದಿ ಆಗಿದೆ. ‘ಹಿಂದಿಯ ‘ಲಕ್ಷ್ಮೀ’ ಸಿನಿಮಾಗೆ ಸಂಬಂಧಿಸಿದಂತೆ ನಟ ಅಕ್ಷಯ್​ ಕುಮಾ​ರ್​ ಮತ್ತು ಚಿತ್ರದ ನಿರ್ಮಾಪಕರ ವಿರುದ್ಧ ಟ್ವೀಟ್​ ಮಾಡಿದ್ದಕ್ಕಾಗಿ ಕಮಾಲ್​ ಆರ್​. ಖಾನ್​ ಅವರನ್ನು ಅರೆಸ್ಟ್​ ಮಾಡಲಾಗಿದೆ’ ಎಂದು ಕೆಆರ್​ಕೆ ಪರ ವಕೀಲರು ಹೇಳಿಕೆ ನೀಡಿದ್ದಾರೆ.

ಅನೇಕ ವಿವಾದಾತ್ಮಕ ಟ್ವೀಟ್​ ಮತ್ತು ವಿಡಿಯೋಗಳ ಮೂಲಕ ಕಮಾಲ್​ ಆರ್​. ಖಾನ್​ ಕಿರಿಕ್​ ಮಾಡಿಕೊಳ್ಳುತ್ತಲೇ ಬಂದಿದ್ದಾರೆ. ಅದರಿಂದ ಈಗ ಅವರಿಗೆ ಬ್ಯಾಕ್​ ಟು ಬ್ಯಾಕ್​ ಸಂಕಷ್ಟ ಎದುರಾಗುತ್ತಿದೆ. ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಕಮೆಂಟ್​ಗಳನ್ನು ಮಾಡಿದ್ದಕ್ಕಾಗಿ ಕೆಆರ್​ಕೆ ವಿರುದ್ಧ ದೂರು ದಾಖಲಿಸುವಂತೆ ರಾಷ್ಟ್ರೀಯ ಮಹಿಳಾ ಆಯೋಗ ಕೂಡ ಮುಂಬೈ ಪೊಲೀಸರಿಗೆ ತಿಳಿಸಿದೆ.

ಇದನ್ನೂ ಓದಿ
Image
RRR ಕಲೆಕ್ಷನ್​ ರಿಪೋರ್ಟ್​ ಸುಳ್ಳು ಎಂದ ಕಮಾಲ್​ ಆರ್​ ಖಾನ್​; ಸಾಬೀತು ಮಾಡುವುದಾಗಿ ಘೋಷಣೆ
Image
‘ಭಕ್ತರ ಭಕ್ತ ಮಹಾಭಕ್ತ’, ‘ಕಾಶ್ಮೀರದ ಶರ್ಮಾ’: ಖಾನ್​ ಚಿತ್ರಕ್ಕೆ ಹೊಸ ಹೆಸರು ಸೂಚಿಸಿದ ಇನ್ನೊಬ್ಬ ಖಾನ್​
Image
‘ಈ ನಟರಿಗೆ ಅಹಂಕಾರ ಜಾಸ್ತಿ’; ವಿಡಿಯೋ ಮೂಲಕ ಎಳೆ ಎಳೆಯಾಗಿ ವಿವರಿಸಿದ ಕಮಾಲ್​ ಆರ್.​ ಖಾನ್​
Image
ಸಲ್ಮಾನ್​ ಖಾನ್​ ವಿರುದ್ಧ ಯಾವುದೇ ಹೇಳಿಕೆ ನೀಡಬೇಡಿ; ಕಮಾಲ್​ ಆರ್​ ಖಾನ್​ಗೆ ಕೋರ್ಟ್​ ಆದೇಶ

ನಟನಾಗಬೇಕು ಎಂಬುದು ಕಮಾಲ್​ ಆರ್​. ಖಾನ್ ಅವರ ಉದ್ದೇಶ ಆಗಿತ್ತು. ಆದರೆ ಚಿತ್ರರಂಗದಲ್ಲಿ ಅವರಿಗೆ ಸಕ್ಸಸ್​ ಸಿಗಲಿಲ್ಲ. ಅವರೇ ನಿರ್ಮಿಸಿ, ನಟಿಸಿದ್ದ ‘ದೇಶದ್ರೋಹಿ’ ಸಿನಿಮಾ ಹೀನಾಯವಾಗಿ ಸೋತಿತು. ಬಳಿಕ ಬೇರೆಯವರ ಸಿನಿಮಾಗಳನ್ನು ತಮ್ಮದೇ ಶೈಲಿಯಲ್ಲಿ ವಿಮರ್ಶೆ ಮಾಡುವುದನ್ನೇ ಅವರು ಕಾಯಕ ಮಾಡಿಕೊಂಡಿದ್ದಾರೆ. ಅವರ ಯೂಟ್ಯೂಬ್​ ಚಾನೆಲ್​ಗೆ​ 10 ಲಕ್ಷಕ್ಕೂ ಅಧಿಕ subscribes ಇದ್ದಾರೆ. ಪದೇಪದೇ ಸೆಲೆಬ್ರಿಟಿಗಳ ಬಗ್ಗೆ ಕೆಟ್ಟದಾಗಿ ಟ್ವೀಟ್​ ಮಾಡುವ ಚಾಳಿ ಕಮಾಲ್​ ಆರ್​. ಖಾನ್​ ಅವರಿಗೆ ಇದೆ. ಅದೇ ಕಾರಣಕ್ಕಾಗಿ ಅವರು ವಿವಾದದ ಕೇಂದ್ರ ಬಿಂದು ಆಗಿದ್ದಾರೆ. ಕಂಗನಾ ರಣಾವತ್​, ಅಭಿಷೇಕ್​ ಬಚ್ಚನ್​, ಆಮಿರ್​ ಖಾನ್​, ಸಲ್ಮಾನ್​ ಖಾನ್, ಅಕ್ಷಯ್​ ಕುಮಾರ್​​ ಮುಂತಾದ ಸೆಲೆಬ್ರಿಟಿಗಳ ಬಗ್ಗೆ ಅವರು ಕೆಟ್ಟದಾಗಿ ಟ್ವೀಟ್​ ಮಾಡಿದ ಉದಾಹರಣೆಗಳಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:25 am, Wed, 31 August 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!