Kamaal R Khan: ‘ವಿವೇಕ್​ ಅಗ್ನಿಹೋತ್ರಿ ಹತಾಶೆಗೆ ಒಳಗಾದ ವ್ಯಕ್ತಿ’: ಮತ್ತೆ ಎಲ್ಲರನ್ನೂ ಕೆಣಕಲು ಆರಂಭಿಸಿದ ಕೆಆರ್​ಕೆ

|

Updated on: May 10, 2023 | 7:40 AM

Vivek Agnihotri: ವಿವೇಕ್​ ಅಗ್ನಿಹೋತ್ರಿ ಅವರು ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಮಾಡಿದ ಬಳಿಕ ಹೆಚ್ಚು ಜನಪ್ರಿಯತೆ ಪಡೆದುಕೊಂಡರು. ಅವರ ಬಗ್ಗೆ ಕಮಾಲ್​ ಆರ್​. ಖಾನ್​ ವ್ಯಂಗ್ಯವಾಡಿದ್ದಾರೆ.

Kamaal R Khan: ‘ವಿವೇಕ್​ ಅಗ್ನಿಹೋತ್ರಿ ಹತಾಶೆಗೆ ಒಳಗಾದ ವ್ಯಕ್ತಿ’: ಮತ್ತೆ ಎಲ್ಲರನ್ನೂ ಕೆಣಕಲು ಆರಂಭಿಸಿದ ಕೆಆರ್​ಕೆ
ವಿವೇಕ್ ಅಗ್ನಿಹೋತ್ರಿ, ಕಮಾಲ್ ಆರ್. ಖಾನ್
Follow us on

ನಟ, ಸ್ವಯಂ ಘೋಷಿತ ವಿಮರ್ಶಕ ಕಮಾಲ್​ ಆರ್​. ಖಾನ್​ (Kamaal R Khan) ಅವರು ಆಗಾಗ ವಿವಾದ ಮಾಡಿಕೊಳ್ಳುತ್ತಲೇ ಇರುತ್ತಾರೆ. ಅವರಿವರ ಬಗ್ಗೆ ಇಲ್ಲಸಲ್ಲದ ಮಾತುಗಳನ್ನು ಆಡಿದ್ದಕ್ಕಾಗಿ ಅವರು ಈಗಾಗಲೇ ಜೈಲುವಾಸ ಅನುಭವಿಸಿ ಬಂದಿದ್ದಾರೆ. ಹಾಗಿದ್ದರೂ ಕೂಡ ಅವರು ಸುಮ್ಮನಾಗಿಲ್ಲ. ಒಂದಷ್ಟು ದಿನ ಸೈಲೆಂಟ್​ ಆಗಿದ್ದ ಅವರು ಈಗ ಮತ್ತೆ ಎಲ್ಲರ ಬಗ್ಗೆಯೂ ನಾಲಿಗೆ ಹರಿಬಿಡಲು ಆರಂಭಿಸಿದ್ದಾರೆ. ಸದ್ಯ ಅವರು ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರದ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ (Vivek Agnihotri) ಬಗ್ಗೆ ಟ್ವೀಟ್​ ಮಾಡಿದ್ದಾರೆ. ‘ಈತ ಹೆಚ್ಚು ಹತಾಶೆಗೆ ಒಳಗಾದ ವ್ಯಕ್ತಿ’ ಎಂದು ವಿವೇಕ್​ ಅಗ್ನಿಹೋತ್ರಿ ಬಗ್ಗೆ ಕೆಆರ್​ಕೆ ಪೋಸ್ಟ್​ ಮಾಡಿದ್ದಾರೆ. ಅಲ್ಲದೇ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ಬಗ್ಗೆಯೂ ಅವರು ತಮ್ಮ ಅನಿಸಿಕೆ ತಿಳಿಸಿದ್ದಾರೆ. ಕಮಾಲ್​ ಆರ್​. ಖಾನ್​ ಅವರು ಮಾಡಿದ ಸರಣಿ ಟ್ವೀಟ್​ಗಳು ವೈರಲ್​ ಆಗಿದೆ. ಆ ಮೂಲಕ ಅವರು ಮತ್ತೆ ಸುದ್ದಿ ಆಗುತ್ತಿದ್ದಾರೆ.

ವಿವೇಕ್​ ಅಗ್ನಿಹೋತ್ರಿ ಅವರು ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಮಾಡಿದ ಬಳಿಕ ಹೆಚ್ಚು ಜನಪ್ರಿಯತೆ ಪಡೆದುಕೊಂಡರು. ಅವರ ಈ ಸಿನಿಮಾದ ಬಗ್ಗೆ ಸಾಕಷ್ಟು ಚರ್ಚೆ ಆಗಿತ್ತು. ಇಂದಿಗೂ ಆ ಚಿತ್ರದ ಬಗ್ಗೆ ಜನರು ತಮ್ಮ ಅಭಿಪ್ರಾಯ ತಿಳಿಸುತ್ತಲೇ ಇದ್ದಾರೆ. ಈಗ ಕಮಾಲ್​ ಆರ್​. ಖಾನ್​ ಅವರು ವಿವೇಕ್​ ಅಗ್ನಿಹೋತ್ರಿ ಬಗ್ಗೆ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ
RRR ಕಲೆಕ್ಷನ್​ ರಿಪೋರ್ಟ್​ ಸುಳ್ಳು ಎಂದ ಕಮಾಲ್​ ಆರ್​ ಖಾನ್​; ಸಾಬೀತು ಮಾಡುವುದಾಗಿ ಘೋಷಣೆ
‘ಭಕ್ತರ ಭಕ್ತ ಮಹಾಭಕ್ತ’, ‘ಕಾಶ್ಮೀರದ ಶರ್ಮಾ’: ಖಾನ್​ ಚಿತ್ರಕ್ಕೆ ಹೊಸ ಹೆಸರು ಸೂಚಿಸಿದ ಇನ್ನೊಬ್ಬ ಖಾನ್​
‘ಈ ನಟರಿಗೆ ಅಹಂಕಾರ ಜಾಸ್ತಿ’; ವಿಡಿಯೋ ಮೂಲಕ ಎಳೆ ಎಳೆಯಾಗಿ ವಿವರಿಸಿದ ಕಮಾಲ್​ ಆರ್.​ ಖಾನ್​
ಸಲ್ಮಾನ್​ ಖಾನ್​ ವಿರುದ್ಧ ಯಾವುದೇ ಹೇಳಿಕೆ ನೀಡಬೇಡಿ; ಕಮಾಲ್​ ಆರ್​ ಖಾನ್​ಗೆ ಕೋರ್ಟ್​ ಆದೇಶ

ಇದನ್ನೂ ಓದಿ: ‘ಈ ನಟರಿಗೆ ಅಹಂಕಾರ ಜಾಸ್ತಿ’; ವಿಡಿಯೋ ಮೂಲಕ ಎಳೆ ಎಳೆಯಾಗಿ ವಿವರಿಸಿದ ಕಮಾಲ್​ ಆರ್.​ ಖಾನ್​

‘ಈತ ಬಾಲಿವುಡ್​ನಲ್ಲಿ ಅತಿ ಹೆಚ್ಚು ಹತಾಶೆಗೆ ಒಳಗಾದ ವ್ಯಕ್ತಿ. ಜೀವನದಲ್ಲಿ ಬರೀ ಕೆಟ್ಟ ಸಿನಿಮಾಗಳನ್ನು ಮಾಡಿದ. ಹಾಗಾಗಿ ಈತನನ್ನು ಬಾಲಿವುಡ್​ನವರು ದೊಡ್ಡ ನಿರ್ದೇಶಕ ಅಂತ ಗುರುತಿಸಲಿಲ್ಲ. ದಿ ಕಾಶ್ಮೀರ್​ ಫೈಲ್ಸ್​ ಸಿನಿಮಾ ನಿರ್ದೇಶಿಸಿದ ನಂತರವೂ ಇವನಿಗೆ ಬಾಲಿವುಡ್​ನವರು ಮನ್ನಣೆ ನೀಡಿಲ್ಲ. ಹಾಗಾಗಿ ಇನ್ನೂ ಹೆಚ್ಚು ಹತಾಶೆಗೆ ಒಳಗಾಗಿದ್ದಾನೆ’ ಎಂದು ಕಮಾಲ್​ ಆರ್​. ಖಾನ್​ ಅವರು ಟ್ವೀಟ್​ ಮಾಡಿದ್ದಾರೆ.

ಇನ್ನು, ದೇಶಾದ್ಯಂತ ‘ದಿ ಕೇರಳ ಸ್ಟೋರಿ’ ಸಿನಿಮಾದ ಬಗ್ಗೆ ಚರ್ಚೆ ಆಗುತ್ತಿದೆ. ಕೆಲವು ಕಡೆಗಳಲ್ಲಿ ಈ ಸಿನಿಮಾದ ಪ್ರದರ್ಶನಕ್ಕೆ ನಿಷೇಧ ಹೇರಲಾಗಿದೆ. ಒಟ್ಟಾರೆ ಬೆಳವಣಿಗೆಗಳ ಬಗ್ಗೆ ಕಮಾಲ್​ ಆರ್​. ಖಾನ್​ ಅವರು ತಮ್ಮ ಅನಿಸಿಕೆ ತಿಳಿಸಿದ್ದಾರೆ. ‘ದಿ ಕೇರಳ ಸ್ಟೋರಿ ಸಿನಿಮಾದ ಬಿಡುಗಡೆಗಿಂತ ಕೇವಲ 9 ದಿನ ಮುಂಚೆ ನಿರ್ಮಾಪಕರು ಟ್ರೇಲರ್​ ರಿಲೀಸ್​ ಮಾಡಿದ್ದರು. ಈ ಸಿನಿಮಾ ಬ್ಲಾಕ್​ ಬಸ್ಟರ್​ ಆಗಿದೆ. ನಗರಗಳಿಗೆ ತೆರಳಿ ಭಿಕ್ಷೆ ಬೇಡುವುದರಿಂದ ಸಿನಿಮಾ ಹಿಟ್​ ಆಗಲ್ಲ ಎಂಬುದಕ್ಕೆ ಇದು ಸಾಕ್ಷಿ. ಕಪಿಲ್​ ಶರ್ಮಾ ಅವರ ಶೋಗೆ ಹೋಗೋದರಿಂದಲೂ ಸಿನಿಮಾ ಹಿಟ್​ ಆಗಲ್ಲ’ ಎಂದು ಕಮಾಲ್​ ಆರ್​. ಖಾನ್​ ಟ್ವೀಟ್​ ಮಾಡಿದ್ದಾರೆ.

ಕಮಾಲ್​ ಆರ್​. ಖಾನ್​ ಅವರ ಮಾತುಗಳನ್ನು ಕೆಲವರು ನಿರ್ಲಕ್ಷಿಸುತ್ತಾರೆ. ಸದ್ಯ ವಿವೇಕ್ ಅಗ್ನಿಹೋತ್ರಿ ಅವರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದುನೋಡಬೇಕು. ಪ್ರಸ್ತುತ ತಾವು ‘ದೇಶದ್ರೋಹಿ 2’ ಸಿನಿಮಾಗೆ ತಯಾರಿ ಮಾಡಿಕೊಳ್ಳುತ್ತಿರುವುದಾಗಿ ಕಮಾಲ್​ ಆರ್​. ಖಾನ್​ ಹೇಳಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.