KRK: ಶ್ರದ್ಧಾ ಕಪೂರ್​ಗೆ ಬಾಡಿ ಶೇಮಿಂಗ್​ ಮಾಡಿದ ಕಾಂಟ್ರವರ್ಸಿ ವಿಮರ್ಶಕ ಕಮಾಲ್​ ಆರ್​. ಖಾನ್​

Kamaal R. Khan | Shraddha Kapoor: ಒಮ್ಮೆ ಜೈಲು ಊಟ ತಿಂದು ಬಂದ ಬಳಿಕ ಕಮಾಲ್​ ಆರ್. ಖಾನ್​ ಅವರು ಸೈಲೆಂಟ್​ ಆಗಿದ್ದರು. ಆದರೆ ಈಗ ಮತ್ತೆ ಮನಬಂದಂತೆ ಮಾತನಾಡಲು ಶುರು ಮಾಡಿದ್ದಾರೆ.

KRK: ಶ್ರದ್ಧಾ ಕಪೂರ್​ಗೆ ಬಾಡಿ ಶೇಮಿಂಗ್​ ಮಾಡಿದ ಕಾಂಟ್ರವರ್ಸಿ ವಿಮರ್ಶಕ ಕಮಾಲ್​ ಆರ್​. ಖಾನ್​
ಕಮಾಲ್ ಆರ್. ಖಾನ್, ಶ್ರದ್ಧಾ ಕಪೂರ್
Follow us
|

Updated on: Mar 10, 2023 | 8:00 AM

ಸ್ವಯಂ ಘೋಷಿತ ವಿಮರ್ಶಕ ಕಮಾಲ್ ಆರ್​. ಖಾನ್​ (Kamaal R. Khan) ಅವರು ಮಾಡಿಕೊಂಡಿರುವ ಎಡವಟ್ಟುಗಳು ಒಂದೆರಡಲ್ಲ. ಸೆಲೆಬ್ರಿಟಿಗಳ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಕ್ಕೆ ಅವರು ಈಗಾಗಲೇ ಜೈಲಿಗೆ ಹೋಗಿ ಬಂದಿದ್ದಾರೆ. ಆದರೂ ಕೂಡ ತಮ್ಮ ಹಳೇ ಚಾಳಿಯನ್ನು ಕಮಾಲ್​ ಆರ್​. ಖಾನ್​ ಬಿಟ್ಟಿಲ್ಲ. ನಟಿ ಶ್ರದ್ಧಾ ಕಪೂರ್​ (Shraddha Kapoor) ಮತ್ತು ನಟ ರಣಬೀರ್​ ಕಪೂರ್​ ಬಗ್ಗೆ ಅವರು ನಾಲಿಗೆ ಹರಿಬಿಟ್ಟಿ​ದ್ದಾರೆ. ಇದಕ್ಕೆ ಅನೇಕರು ಖಂಡನೆ ವ್ಯಕ್ತಪಡಿಸುತ್ತಿದ್ದಾರೆ. ಲವ್​ ರಂಜನ್​ ನಿರ್ದೇಶನದ ‘ತು ಜೂಟಿ ಮೈ ಮಕ್ಕಾರ್​’ ಸಿನಿಮಾದ ವಿಮರ್ಶೆ ಮಾಡಿರುವ ಕಮಾಲ್​ ಆರ್​. ಖಾನ್​ ಅವರು ಈ ಚಿತ್ರದ ಹೀರೋ-ಹೀರೋಯಿನ್​ಗೆ ಬಾಡಿ ಶೇಮಿಂಗ್​ (Body Shaming) ಮಾಡಿದ್ದಾರೆ. ಇದಕ್ಕೆ ಚಿತ್ರತಂಡದವರು ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ.

ಒಮ್ಮೆ ಜೈಲು ಊಟ ತಿಂದು ಬಂದ ಬಳಿಕ ಕಮಾಲ್​ ಆರ್. ಖಾನ್​ ಅವರು ಸೈಲೆಂಟ್​ ಆಗಿದ್ದರು. ಇನ್ಮುಂದೆ ಯಾವುದೇ ಸಿನಿಮಾದ ವಿಮರ್ಶೆ ಮಾಡುವುದಿಲ್ಲ ಎಂದು ಅವರು ಹೇಳಿದ್ದರು. ಆದರೆ ಈಗ ಉಲ್ಟಾ ಹೊಡೆದಿದ್ದಾರೆ. ಮಾರ್ಚ್​ 8ರಂದು ಬಿಡುಗಡೆ ಆಗಿರುವ ‘ತು ಜೂಟಿ ಮೈ ಮಕ್ಕಾರ್​’ ಸಿನಿಮಾವನ್ನು ಅವರು ವಿಮರ್ಶೆ ಮಾಡಿದ್ದಾರೆ. ವಿಮರ್ಶೆ ಮಾಡಿದ್ದು ತಪ್ಪಲ್ಲ. ಆದರೆ ಬಾಡಿ ಶೇಮಿಂಗ್​ ಮಾಡಿದ್ದರಿಂದ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಇದನ್ನೂ ಓದಿ: Ranbir Kapoor: ‘ತು ಜೂಟಿ ಮೈ ಮಕ್ಕಾರ್​’ ಚಿತ್ರಕ್ಕೆ ಮೊದಲ ದಿನ ಆದ ಕಲೆಕ್ಷನ್​ ಎಷ್ಟು? ಇಲ್ಲಿದೆ ರಿಪೋರ್ಟ್​

ಇದನ್ನೂ ಓದಿ
Image
RRR ಕಲೆಕ್ಷನ್​ ರಿಪೋರ್ಟ್​ ಸುಳ್ಳು ಎಂದ ಕಮಾಲ್​ ಆರ್​ ಖಾನ್​; ಸಾಬೀತು ಮಾಡುವುದಾಗಿ ಘೋಷಣೆ
Image
‘ಭಕ್ತರ ಭಕ್ತ ಮಹಾಭಕ್ತ’, ‘ಕಾಶ್ಮೀರದ ಶರ್ಮಾ’: ಖಾನ್​ ಚಿತ್ರಕ್ಕೆ ಹೊಸ ಹೆಸರು ಸೂಚಿಸಿದ ಇನ್ನೊಬ್ಬ ಖಾನ್​
Image
‘ಈ ನಟರಿಗೆ ಅಹಂಕಾರ ಜಾಸ್ತಿ’; ವಿಡಿಯೋ ಮೂಲಕ ಎಳೆ ಎಳೆಯಾಗಿ ವಿವರಿಸಿದ ಕಮಾಲ್​ ಆರ್.​ ಖಾನ್​
Image
ಸಲ್ಮಾನ್​ ಖಾನ್​ ವಿರುದ್ಧ ಯಾವುದೇ ಹೇಳಿಕೆ ನೀಡಬೇಡಿ; ಕಮಾಲ್​ ಆರ್​ ಖಾನ್​ಗೆ ಕೋರ್ಟ್​ ಆದೇಶ

‘ನಿರ್ದೇಶಕ ಲವ್​ ರಂಜನ್ ಅವರೇ.. ನೀವು ಪದೇ ಪದೇ ಶ್ರದ್ಧಾ ಕಪೂರ್​ ಅವರನ್ನು ನೀರಿಗೆ ಬೀಳಿಸುತ್ತೀರಿ. ಆದರೆ ರಣಬೀರ್​ ಕಪೂರ್​ ಅವರನ್ನು ದಡದ ಮೇಲೆ ನಿಲ್ಲಿಸುತ್ತೀರಿ. ಯಾಕೆಂದರೆ, ಅವರು ನೀರಿಗೆ ಬಿದ್ದರೆ ವಿಗ್​ ಕಿತ್ತು ಬರುತ್ತದೆ’ ಎಂದು ಕಮಾಲ್​ ಆರ್​. ಖಾನ್​ ಹೇಳಿದ್ದಾರೆ. ಇಷ್ಟೇ ಆಗಿದ್ದರೆ ಹೆಚ್ಚು ವಿರೋಧ ವ್ಯಕ್ತವಾಗುತ್ತಿರಲಿಲ್ಲ. ಶ್ರದ್ಧಾ ಕಪೂರ್​ ದೇಹದ ಬಗ್ಗೆ ಅವರು ಚೀಪ್​ ಆಗಿ ಮಾತನಾಡಿದ್ದಾರೆ.

ಇದನ್ನೂ ಓದಿ:  KRK: ಲೈಂಗಿಕ ಕಿರುಕುಳ ಆರೋಪದಲ್ಲಿ ಕಮಾಲ್​ ಆರ್​. ಖಾನ್​ ಅರೆಸ್ಟ್​; ಒಂದೇ ವಾರದಲ್ಲಿ ಡಬಲ್​ ಸಂಕಟ

‘ಶ್ರದ್ಧಾ ಕಪೂರ್​ ಅವರನ್ನು ನೀವು ಪದೇ ಪದೇ ಬಿಕಿನಿಯಲ್ಲಿ ತೋರಿಸಿದ್ದೀರಿ. ಏನನ್ನು ತೋರಿಸಲು ನೀವು ಬಯಸಿದ್ದೀರಿ? ಆಕೆ ದೀಪಿಕಾ ಅಲ್ಲ, ಕತ್ರಿಕಾ ಕೈಫ್​ ಕೂಡ ಅಲ್ಲ, ಕರೀನಾನೂ ಅಲ್ಲ. ಆ ಹುಡುಗಿ ಬಳಿ ಏನೂ ಇಲ್ಲದಿರುವಾಗ ನೀವು ಆಕೆಯನ್ನು ಮತ್ತೆ ಮತ್ತೆ ಹೀಗೆ ತೋರಿಸಿ ಏನು ಸಾಬೀತು ಮಾಡುತ್ತೀರಿ’ ಎಂದು ಕಮಾಲ್​ ಆರ್​. ಖಾನ್​ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: RRR ಕಲೆಕ್ಷನ್​ ರಿಪೋರ್ಟ್​ ಸುಳ್ಳು ಎಂದ ಕಮಾಲ್​ ಆರ್​ ಖಾನ್​; ಸಾಬೀತು ಮಾಡುವುದಾಗಿ ಘೋಷಣೆ

ಈ ರೀತಿ ಬಾಡಿ ಶೇಮಿಂಗ್​ ಮಾಡಿದ್ದಕ್ಕಾಗಿ ಕಮಾಲ್​ ಆರ್​. ಖಾನ್​ ಅವರಿಗೆ ಚಿತ್ರತಂಡದವರು ಲೀಗಲ್​ ನೋಟಿಸ್​ ಕಳಿಸಿದರೂ ಅಚ್ಚರಿ ಏನಿಲ್ಲ. ಈ ಹಿಂದೆ ಸಲ್ಮಾನ್​ ಖಾನ್​ ಅವರು ಕಮಾಲ್​ ಆರ್​. ಖಾನ್​ ವಿರುದ್ಧ ಕಾನೂನು ಸಮರ ಸಾರಿದ್ದರು. ಕರಣ್​ ಜೋಹರ್​ ಕೂಡ ಬುದ್ಧಿ ಕಲಿಸಲು ಮುಂದಾಗಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ