AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಕಮಾಲ್​ ಖಾನ್​ಗೆ ಜಾಮೀನು; ಆದರೂ ಇಲ್ಲ ಬಿಡುಗಡೆಗೆ ಅವಕಾಶ

ಕಮಾಲ್​ ಖಾನ್ ವಿರುದ್ಧ ಎರಡೆರಡು ಕೇಸ್ ದಾಖಲಾಗಿದೆ. ಅಕ್ಷಯ್ ಕುಮಾರ್ ಹಾಗೂ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಬಗ್ಗೆ ವಿವಾದಾತ್ಮಕ ಟ್ವೀಟ್​ಅನ್ನು ಕಮಾಲ್ ಆರ್. ಖಾನ್ ಮಾಡಿದ್ದರು. ಈ ಕೇಸ್​ನಲ್ಲಿ ಅವರು ನ್ಯಾಯಾಂಗ ಬಂಧನಕ್ಕೆ ಒಳಗಾದರು.

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಕಮಾಲ್​ ಖಾನ್​ಗೆ ಜಾಮೀನು; ಆದರೂ ಇಲ್ಲ ಬಿಡುಗಡೆಗೆ ಅವಕಾಶ
ಕಮಾಲ್ ಖಾನ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Sep 07, 2022 | 4:35 PM

ಸೆಲೆಬ್ರಿಟಿಗಳು ಹಾಗೂ ಸಿನಿಮಾಗಳ ಬಗ್ಗೆ ಬಾಯಿಗೆ ಬಂದಂತೆ ಹೇಳಿಕೆ ನೀಡುತ್ತಿದ್ದ ಕಮಾಲ್​ ಆರ್​. ಖಾನ್ (Kamaal R. Khan) ನಾನಾ ಕೇಸ್​​ಗಳಲ್ಲಿ ಜೈಲು ಪಾಲಾಗಿದ್ದಾರೆ. ವಿವಾದಾತ್ಮಕ ಹೇಳಿಕೆ, ಲೈಂಗಿಕ ಕಿರುಕುಳ ಪ್ರಕರಣಗಳು ಕಮಾಲ್ ವಿರುದ್ಧ ದಾಖಲಾಗಿದೆ. ಈಗ ಅವರಿಗೆ ಒಂದು ಪ್ರಕರಣದಲ್ಲಿ ಮಾತ್ರ ಜಾಮೀನು ದೊರೆತಿದ್ದು, ಮತ್ತೊಂದು ಪ್ರಕರಣದಲ್ಲಿ ಅವರು ಜೈಲಿನಲ್ಲೇ ಉಳಿದುಕೊಂಡಿದ್ದಾರೆ. ವಿವಾದಾತ್ಮಕ ಟ್ವೀಟ್​ ಪ್ರಕರಣಕ್ಕೆ ಸಂಬಂಧಿಸಿ ಅವರು ಸಲ್ಲಿಕೆ ಮಾಡಿರುವ ಜಾಮೀನು ಅರ್ಜಿ ಇನ್ನೂ ವಿಚಾರಣೆಗೆ ಬಂದಿಲ್ಲ. ಹೀಗಾಗಿ ಅವರು ಜೈಲಿನಲ್ಲೇ ಮುಂದುವರಿಯುತ್ತಿದ್ದಾರೆ.

ಕಮಾಲ್​ ಖಾನ್ ವಿರುದ್ಧ ಎರಡೆರಡು ಕೇಸ್ ದಾಖಲಾಗಿದೆ. ಅಕ್ಷಯ್ ಕುಮಾರ್ ಹಾಗೂ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಬಗ್ಗೆ ವಿವಾದಾತ್ಮಕ ಟ್ವೀಟ್​ಅನ್ನು ಕಮಾಲ್ ಆರ್. ಖಾನ್ ಮಾಡಿದ್ದರು. ಈ ಕೇಸ್​ನಲ್ಲಿ ಅವರು ನ್ಯಾಯಾಂಗ ಬಂಧನಕ್ಕೆ ಒಳಗಾದರು. ಇದಾದ ಬೆನ್ನಲ್ಲೇ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಕೂಡ ಬೆಳಕಿಗೆ ಬಂದಿದ್ದು ಈ ಸಂಬಂಧ ಕೇಸ್ ದಾಖಲಾಗಿದೆ.

ಎರಡೂ ಪ್ರಕರಣದಲ್ಲಿ ಜಾಮೀನು ನೀಡುವಂತೆ ಕಮಾಲ್ ಆರ್. ಖಾನ್ ಬೋರಿವಲ್ಲಿ ಮ್ಯಾಜಿಸ್ಟ್ರೇಟ್ ಕೋರ್ಟ್​ನಲ್ಲಿ ಕೋರಿದ್ದರು. ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಮಾತ್ರ ಕಮಾಲ್​ಗೆ ಜಾಮೀನು ಸಿಕ್ಕಿದೆ. ವಿವಾದಾತ್ಮಕ ಟ್ವೀಟ್ ಪ್ರಕರಣ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಹೀಗಾಗಿ, ಅವರು ಜೈಲಿನಲ್ಲಿ ಇರುವುದು ಅನಿವಾರ್ಯ ಆಗಿದೆ. ಕಮಾಲ್ ಖಾನ್ ಆಗಸ್ಟ್ 30ರಂದು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧನಕ್ಕೆ ಒಳಗಾದರು. ದುಬೈನಿಂದ ಅವರು ಹಿಂದಿರುವಾಗ ಅರೆಸ್ಟ್ ಆದರು.

ಇದನ್ನೂ ಓದಿ
Image
RRR ಕಲೆಕ್ಷನ್​ ರಿಪೋರ್ಟ್​ ಸುಳ್ಳು ಎಂದ ಕಮಾಲ್​ ಆರ್​ ಖಾನ್​; ಸಾಬೀತು ಮಾಡುವುದಾಗಿ ಘೋಷಣೆ
Image
‘ಭಕ್ತರ ಭಕ್ತ ಮಹಾಭಕ್ತ’, ‘ಕಾಶ್ಮೀರದ ಶರ್ಮಾ’: ಖಾನ್​ ಚಿತ್ರಕ್ಕೆ ಹೊಸ ಹೆಸರು ಸೂಚಿಸಿದ ಇನ್ನೊಬ್ಬ ಖಾನ್​
Image
‘ಈ ನಟರಿಗೆ ಅಹಂಕಾರ ಜಾಸ್ತಿ’; ವಿಡಿಯೋ ಮೂಲಕ ಎಳೆ ಎಳೆಯಾಗಿ ವಿವರಿಸಿದ ಕಮಾಲ್​ ಆರ್.​ ಖಾನ್​
Image
ಸಲ್ಮಾನ್​ ಖಾನ್​ ವಿರುದ್ಧ ಯಾವುದೇ ಹೇಳಿಕೆ ನೀಡಬೇಡಿ; ಕಮಾಲ್​ ಆರ್​ ಖಾನ್​ಗೆ ಕೋರ್ಟ್​ ಆದೇಶ

ಇದನ್ನೂ ಓದಿ: KRK: ಲೈಂಗಿಕ ಕಿರುಕುಳ ಆರೋಪದಲ್ಲಿ ಕಮಾಲ್​ ಆರ್​. ಖಾನ್​ ಅರೆಸ್ಟ್​; ಒಂದೇ ವಾರದಲ್ಲಿ ಡಬಲ್​ ಸಂಕಟ

ಹೀರೋ ಆಗಬೇಕು ಎಂದು ಕನಸು ಕಂಡು ಚಿತ್ರರಂಗಕ್ಕೆ ಕಮಾಲ್ ಎಂಟ್ರಿ ಕೊಟ್ಟರು. ಆದರೆ, ಯಶಸ್ಸು ಅವರನ್ನು ಕೈ ಹಿಡಿಯಲಿಲ್ಲ. ಮಾಡಿದ ಸಿನಿಮಾಗಳು ಸೋಲು ಕಂಡವು. ಆ ಬಳಿಕ ಅವರು ತಮ್ಮನ್ನು ತಾವು ವಿಮರ್ಶಕ ಎಂದು ಘೋಷಿಸಿಕೊಂಡರು. ಹೈಪ್ ಪಡೆದ ಸಿನಿಮಾಗಳನ್ನು ನೋಡಿ ಕೆಟ್ಟ ಕಮೆಂಟ್ ಮಾಡುವ ಚಾಳಿಯನ್ನು ಅವರು ಬೆಳೆಸಿಕೊಂಡರು. ಸಲ್ಮಾನ್ ಖಾನ್ ಮೊದಲಾದ ಸ್ಟಾರ್ ಹೀರೋಗಳ ಬಗ್ಗೆ ಅವರು ಕೀಳಾಗಿ ಮಾತನಾಡಿದ್ದಿದೆ. ಈ ಮೊದಲು ಸಲ್ಮಾನ್ ಖಾನ್ ಅವರು ಕಮಾಲ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್