AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ‘ಒಂದಿನ ರಾಹುಲ್​ ಗಾಂಧಿ ಪ್ರಧಾನ ಮಂತ್ರಿ ಆಗಿ ಬೆಸ್ಟ್​ ಪಿಎಂ ಎನಿಸಿಕೊಳ್ತಾರೆ’: ಭವಿಷ್ಯ ನುಡಿದ ಕೆಆರ್​ಕೆ

Kamaal R Khan: ಬಾಲಿವುಡ್​ನ ಬಹುತೇಕ ಎಲ್ಲ ಸಿನಿಮಾಗಳನ್ನೂ ಕಮಾಲ್​ ಆರ್​. ಖಾನ್​ ವಿಮರ್ಶೆ ಮಾಡುತ್ತಾರೆ. ಸೆಲೆಬ್ರಿಟಿಗಳ ವೈಯಕ್ತಿಕ ಜೀವನದ ಬಗ್ಗೆಯೂ ಅವರು ಕಮೆಂಟ್​ ಮಾಡುತ್ತಾರೆ.

Rahul Gandhi: ‘ಒಂದಿನ ರಾಹುಲ್​ ಗಾಂಧಿ ಪ್ರಧಾನ ಮಂತ್ರಿ ಆಗಿ ಬೆಸ್ಟ್​ ಪಿಎಂ ಎನಿಸಿಕೊಳ್ತಾರೆ’: ಭವಿಷ್ಯ ನುಡಿದ ಕೆಆರ್​ಕೆ
ರಾಹುಲ್​ ಗಾಂಧಿ, ಕೆಆರ್​ಕೆ
ಮದನ್​ ಕುಮಾರ್​
|

Updated on: Jun 06, 2023 | 2:21 PM

Share

ವಿವಾದಾತ್ಮಕ ಹೇಳಿಕೆಗಳಿಂದಲೇ ಫೇಮಸ್​ ಆಗಿರುವ ಕಮಾಲ್​ ಆರ್​. ಖಾನ್​ (Kamaal R Khan) ಅವರು ಈಗ ಕೇವಲ ಸಿನಿಮಾ ಮಾತ್ರವಲ್ಲದೇ ಇನ್ನುಳಿದ ವಿಚಾರಗಳ ಬಗ್ಗೆಯೂ ಮಾತನಾಡಲಾರಂಭಿಸಿದ್ದಾರೆ. ರಾಜಕೀಯದ ವಿಷಯಗಳ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ. ಈಗ ಅವರು ರಾಹುಲ್​ ಗಾಂಧಿ (Rahul Gandhi) ಕುರಿತು ಟ್ವೀಟ್​ ಮಾಡಿದ್ದಾರೆ. ಇದು ಅವರ ಭವಿಷ್ಯವಾಣಿಯಂತೆ! ‘ಮುಂದೊಂದು ದಿನ ರಾಹುಲ್​ ಗಾಂಧಿ ಅವರು ಪ್ರಧಾನ ಮಂತ್ರಿ ಆಗುತ್ತಾರೆ. ಅವರನ್ನು ಭಾರತದ ಇತಿಹಾಸದಲ್ಲೇ ಅತ್ಯುತ್ತಮ ಪ್ರಧಾನಿ ಎಂದು ಕರೆಯಲಾಗುತ್ತದೆ’ ಎಂದು ಕಮಾಲ್​ ಆರ್​. ಖಾನ್​ ಅಲಿಯಾಸ್​ ಕೆಆರ್​ಕೆ ಅವರು ತಮ್ಮ ಟ್ವಿಟರ್ (KRK Twitter) ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಅವರ ಈ ಪೋಸ್ಟ್​ ಕಂಡು ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಬಾಲಿವುಡ್​ನ ಬಹುತೇಕ ಎಲ್ಲ ಸಿನಿಮಾಗಳನ್ನೂ ಕಮಾಲ್​ ಆರ್​. ಖಾನ್​ ವಿಮರ್ಶೆ ಮಾಡುತ್ತಾರೆ. ತೀರಾ ಕಟು ಮಾತುಗಳಿಂದ ಅವರು ವ್ಯಂಗ್ಯ ಮಾಡುತ್ತಾರೆ. ಸೆಲೆಬ್ರಿಟಿಗಳ ವೈಯಕ್ತಿಕ ಜೀವನದ ಬಗ್ಗೆಯೂ ಅವರು ಕಮೆಂಟ್​ ಮಾಡುತ್ತಾರೆ. ಇದರಿಂದ ಕೆಲವರಿಗೆ ಮಾನಹಾನಿ ಆಗಿದ್ದುಂಟು. ಅಂಥವರಿಂದ ಕಮಾಲ್​ ಆರ್​. ಖಾನ್​ ಮೇಲೆ ಕೇಸ್​ ಕೂಡ ಹಾಕಲಾದ ಉದಾಹರಣೆ ಇದೆ. ಈಗ ಅವರು ಪೊಲಿಟಿಕಲ್​ ವಿಚಾರಗಳ ಬಗ್ಗೆ ಟ್ವೀಟ್​ ಮಾಡುತ್ತಿರುವುದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ‘ಸಿನಿಮಾ ವಿಮರ್ಶೆಗೆ ಮಾತ್ರ ನೀವು ಸೀಮಿತವಾಗಿರಿ’ ಎಂದು ನೆಟ್ಟಿಗರು ಬುದ್ಧಿ ಹೇಳಿದ್ದಾರೆ.

2008ರಲ್ಲಿ ‘ದೇಶದ್ರೋಹಿ’ ಸಿನಿಮಾ ತೆರೆಕಂಡಿತ್ತು. ಆ ಚಿತ್ರದಲ್ಲಿ ಕಮಾಲ್​ ಆರ್​. ಖಾನ್​ ಮುಖ್ಯಭೂಮಿಕೆ ನಿಭಾಯಿಸಿದ್ದರು. ನಿರ್ಮಾಣ ಕೂಡ ಅವರದ್ದೇ. ಆ ಸಿನಿಮಾ ಅತಿ ಕೆಟ್ಟ ವಿಮರ್ಶೆ ಪಡೆದುಕೊಂಡಿತ್ತು. ಪ್ರೇಕ್ಷಕರಿಗೂ ಕಿಂಚಿತ್ತೂ ಹಿಡಿಸಲಿಲ್ಲ. ಹೀನಾಯವಾಗಿ ಸೋತರೂ ಕಮಾಲ್​ ಆರ್​. ಖಾನ್​ಗೆ ಬುದ್ಧಿ ಬಂದಿಲ್ಲ. ಈಗ ಅವರು ‘ದೇಶದ್ರೋಹಿ 2’ ಸಿನಿಮಾ ಮಾಡುವ ಉತ್ಸಾಹದಲ್ಲಿದ್ದಾರೆ. 2022ರ ಏಪ್ರಿಲ್​ 18ರಂದು ಕಮಾಲ್​ ಆರ್​. ಖಾನ್​ ಅವರು ‘ದೇಶದ್ರೋಹಿ 2’ ಚಿತ್ರದ ಹೊಸ ಪೋಸ್ಟರ್​ ಶೇರ್​ ಮಾಡಿಕೊಂಡಿದ್ದರು. ಸಿನಿಮಾದ ಶೂಟಿಂಗ್ ಸದ್ಯದಲ್ಲೇ ಆರಂಭ ಆಗಲಿದೆ ಎಂದು ಅವರು ಮಾಹಿತಿ ನೀಡಿದ್ದರು.

ಇದನ್ನೂ ಓದಿ: KRK: ಕಮಾಲ್​ ಆರ್​. ಖಾನ್​ ಮೇಲೆ ಸಲ್ಮಾ​ನ್​ ಖಾನ್ ಕೇಸ್​ ಹಾಕಿದ್ದು ದುಡ್ಡಿಗೋಸ್ಕರನಾ? ಶುರುವಾಯ್ತು ಚರ್ಚೆ

‘ವಿರಾಟ್​ ಕೊಹ್ಲಿಯ ಡ್ಯಾನ್ಸ್​ ಕೌಶಲ ನೋಡಿ ನಾನು ಇಂಪ್ರೆಸ್​ ಆಗಿದ್ದೇನೆ. ಹಾಗಾಗಿ ನನ್ನ ‘ದೇಶದ್ರೋಹಿ 2’ ಸಿನಿಮಾದಲ್ಲಿ ಅವರಿಗೆ ಐಟಂ ಡ್ಯಾನ್ಸ್​ ಮಾಡಲು ಚಾನ್ಸ್​ ನೀಡುತ್ತೇನೆ’ ಎಂದು ಕಮಾಲ್​ ಆರ್​. ಖಾನ್​ ಟ್ವೀಟ್​ ಮಾಡಿದ್ದರು. ಅದು ವಿರಾಟ್​ ಕೊಹ್ಲಿ ಅಭಿಮಾನಿಗಳ ಕೋಪಕ್ಕೆ ಕಾರಣ ಆಗಿತ್ತು. ಆ ಟ್ವೀಟ್​ಗೆ ಕಮೆಂಟ್​ ಮಾಡಿದ ಅನೇಕರು ಕಮಾಲ್​ ಆರ್​. ಖಾನ್​ಗೆ ಎಚ್ಚರಿಕೆ ನೀಡಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು