AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ‘ಒಂದಿನ ರಾಹುಲ್​ ಗಾಂಧಿ ಪ್ರಧಾನ ಮಂತ್ರಿ ಆಗಿ ಬೆಸ್ಟ್​ ಪಿಎಂ ಎನಿಸಿಕೊಳ್ತಾರೆ’: ಭವಿಷ್ಯ ನುಡಿದ ಕೆಆರ್​ಕೆ

Kamaal R Khan: ಬಾಲಿವುಡ್​ನ ಬಹುತೇಕ ಎಲ್ಲ ಸಿನಿಮಾಗಳನ್ನೂ ಕಮಾಲ್​ ಆರ್​. ಖಾನ್​ ವಿಮರ್ಶೆ ಮಾಡುತ್ತಾರೆ. ಸೆಲೆಬ್ರಿಟಿಗಳ ವೈಯಕ್ತಿಕ ಜೀವನದ ಬಗ್ಗೆಯೂ ಅವರು ಕಮೆಂಟ್​ ಮಾಡುತ್ತಾರೆ.

Rahul Gandhi: ‘ಒಂದಿನ ರಾಹುಲ್​ ಗಾಂಧಿ ಪ್ರಧಾನ ಮಂತ್ರಿ ಆಗಿ ಬೆಸ್ಟ್​ ಪಿಎಂ ಎನಿಸಿಕೊಳ್ತಾರೆ’: ಭವಿಷ್ಯ ನುಡಿದ ಕೆಆರ್​ಕೆ
ರಾಹುಲ್​ ಗಾಂಧಿ, ಕೆಆರ್​ಕೆ
ಮದನ್​ ಕುಮಾರ್​
|

Updated on: Jun 06, 2023 | 2:21 PM

Share

ವಿವಾದಾತ್ಮಕ ಹೇಳಿಕೆಗಳಿಂದಲೇ ಫೇಮಸ್​ ಆಗಿರುವ ಕಮಾಲ್​ ಆರ್​. ಖಾನ್​ (Kamaal R Khan) ಅವರು ಈಗ ಕೇವಲ ಸಿನಿಮಾ ಮಾತ್ರವಲ್ಲದೇ ಇನ್ನುಳಿದ ವಿಚಾರಗಳ ಬಗ್ಗೆಯೂ ಮಾತನಾಡಲಾರಂಭಿಸಿದ್ದಾರೆ. ರಾಜಕೀಯದ ವಿಷಯಗಳ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ. ಈಗ ಅವರು ರಾಹುಲ್​ ಗಾಂಧಿ (Rahul Gandhi) ಕುರಿತು ಟ್ವೀಟ್​ ಮಾಡಿದ್ದಾರೆ. ಇದು ಅವರ ಭವಿಷ್ಯವಾಣಿಯಂತೆ! ‘ಮುಂದೊಂದು ದಿನ ರಾಹುಲ್​ ಗಾಂಧಿ ಅವರು ಪ್ರಧಾನ ಮಂತ್ರಿ ಆಗುತ್ತಾರೆ. ಅವರನ್ನು ಭಾರತದ ಇತಿಹಾಸದಲ್ಲೇ ಅತ್ಯುತ್ತಮ ಪ್ರಧಾನಿ ಎಂದು ಕರೆಯಲಾಗುತ್ತದೆ’ ಎಂದು ಕಮಾಲ್​ ಆರ್​. ಖಾನ್​ ಅಲಿಯಾಸ್​ ಕೆಆರ್​ಕೆ ಅವರು ತಮ್ಮ ಟ್ವಿಟರ್ (KRK Twitter) ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಅವರ ಈ ಪೋಸ್ಟ್​ ಕಂಡು ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಬಾಲಿವುಡ್​ನ ಬಹುತೇಕ ಎಲ್ಲ ಸಿನಿಮಾಗಳನ್ನೂ ಕಮಾಲ್​ ಆರ್​. ಖಾನ್​ ವಿಮರ್ಶೆ ಮಾಡುತ್ತಾರೆ. ತೀರಾ ಕಟು ಮಾತುಗಳಿಂದ ಅವರು ವ್ಯಂಗ್ಯ ಮಾಡುತ್ತಾರೆ. ಸೆಲೆಬ್ರಿಟಿಗಳ ವೈಯಕ್ತಿಕ ಜೀವನದ ಬಗ್ಗೆಯೂ ಅವರು ಕಮೆಂಟ್​ ಮಾಡುತ್ತಾರೆ. ಇದರಿಂದ ಕೆಲವರಿಗೆ ಮಾನಹಾನಿ ಆಗಿದ್ದುಂಟು. ಅಂಥವರಿಂದ ಕಮಾಲ್​ ಆರ್​. ಖಾನ್​ ಮೇಲೆ ಕೇಸ್​ ಕೂಡ ಹಾಕಲಾದ ಉದಾಹರಣೆ ಇದೆ. ಈಗ ಅವರು ಪೊಲಿಟಿಕಲ್​ ವಿಚಾರಗಳ ಬಗ್ಗೆ ಟ್ವೀಟ್​ ಮಾಡುತ್ತಿರುವುದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ‘ಸಿನಿಮಾ ವಿಮರ್ಶೆಗೆ ಮಾತ್ರ ನೀವು ಸೀಮಿತವಾಗಿರಿ’ ಎಂದು ನೆಟ್ಟಿಗರು ಬುದ್ಧಿ ಹೇಳಿದ್ದಾರೆ.

2008ರಲ್ಲಿ ‘ದೇಶದ್ರೋಹಿ’ ಸಿನಿಮಾ ತೆರೆಕಂಡಿತ್ತು. ಆ ಚಿತ್ರದಲ್ಲಿ ಕಮಾಲ್​ ಆರ್​. ಖಾನ್​ ಮುಖ್ಯಭೂಮಿಕೆ ನಿಭಾಯಿಸಿದ್ದರು. ನಿರ್ಮಾಣ ಕೂಡ ಅವರದ್ದೇ. ಆ ಸಿನಿಮಾ ಅತಿ ಕೆಟ್ಟ ವಿಮರ್ಶೆ ಪಡೆದುಕೊಂಡಿತ್ತು. ಪ್ರೇಕ್ಷಕರಿಗೂ ಕಿಂಚಿತ್ತೂ ಹಿಡಿಸಲಿಲ್ಲ. ಹೀನಾಯವಾಗಿ ಸೋತರೂ ಕಮಾಲ್​ ಆರ್​. ಖಾನ್​ಗೆ ಬುದ್ಧಿ ಬಂದಿಲ್ಲ. ಈಗ ಅವರು ‘ದೇಶದ್ರೋಹಿ 2’ ಸಿನಿಮಾ ಮಾಡುವ ಉತ್ಸಾಹದಲ್ಲಿದ್ದಾರೆ. 2022ರ ಏಪ್ರಿಲ್​ 18ರಂದು ಕಮಾಲ್​ ಆರ್​. ಖಾನ್​ ಅವರು ‘ದೇಶದ್ರೋಹಿ 2’ ಚಿತ್ರದ ಹೊಸ ಪೋಸ್ಟರ್​ ಶೇರ್​ ಮಾಡಿಕೊಂಡಿದ್ದರು. ಸಿನಿಮಾದ ಶೂಟಿಂಗ್ ಸದ್ಯದಲ್ಲೇ ಆರಂಭ ಆಗಲಿದೆ ಎಂದು ಅವರು ಮಾಹಿತಿ ನೀಡಿದ್ದರು.

ಇದನ್ನೂ ಓದಿ: KRK: ಕಮಾಲ್​ ಆರ್​. ಖಾನ್​ ಮೇಲೆ ಸಲ್ಮಾ​ನ್​ ಖಾನ್ ಕೇಸ್​ ಹಾಕಿದ್ದು ದುಡ್ಡಿಗೋಸ್ಕರನಾ? ಶುರುವಾಯ್ತು ಚರ್ಚೆ

‘ವಿರಾಟ್​ ಕೊಹ್ಲಿಯ ಡ್ಯಾನ್ಸ್​ ಕೌಶಲ ನೋಡಿ ನಾನು ಇಂಪ್ರೆಸ್​ ಆಗಿದ್ದೇನೆ. ಹಾಗಾಗಿ ನನ್ನ ‘ದೇಶದ್ರೋಹಿ 2’ ಸಿನಿಮಾದಲ್ಲಿ ಅವರಿಗೆ ಐಟಂ ಡ್ಯಾನ್ಸ್​ ಮಾಡಲು ಚಾನ್ಸ್​ ನೀಡುತ್ತೇನೆ’ ಎಂದು ಕಮಾಲ್​ ಆರ್​. ಖಾನ್​ ಟ್ವೀಟ್​ ಮಾಡಿದ್ದರು. ಅದು ವಿರಾಟ್​ ಕೊಹ್ಲಿ ಅಭಿಮಾನಿಗಳ ಕೋಪಕ್ಕೆ ಕಾರಣ ಆಗಿತ್ತು. ಆ ಟ್ವೀಟ್​ಗೆ ಕಮೆಂಟ್​ ಮಾಡಿದ ಅನೇಕರು ಕಮಾಲ್​ ಆರ್​. ಖಾನ್​ಗೆ ಎಚ್ಚರಿಕೆ ನೀಡಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?