AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀತೆ ಪಾತ್ರ ಮಾಡಲು ಕಂಗನಾಗೆ 32 ಕೋಟಿ ರೂ. ಸಂಬಳ? ಇದು ದೊಡ್ಡ ಪ್ರಮಾದ ಎಂದ ಕಮಾಲ್​ ಖಾನ್​

ಕಂಗನಾ ರಣಾವತ್​ ಅವರ ತಂಟೆಗೆ ಹೋಗಲು ಅನೇಕರು ಹಿಂದೇಟು ಹಾಕುತ್ತಾರೆ. ಹಾಗಿದ್ದರೂ ಕೂಡ ಕಮಾಲ್​ ಆರ್​. ಖಾನ್​ ಅವರು ಯಾವುದೇ ಮುಲಾಜಿಲ್ಲದೇ ಹೀಯಾಳಿಸುತ್ತಿದ್ದಾರೆ.

ಸೀತೆ ಪಾತ್ರ ಮಾಡಲು ಕಂಗನಾಗೆ 32 ಕೋಟಿ ರೂ. ಸಂಬಳ? ಇದು ದೊಡ್ಡ ಪ್ರಮಾದ ಎಂದ ಕಮಾಲ್​ ಖಾನ್​
ಕಂಗನಾ ರಣಾವತ್​, ಕಮಾಲ್​ ಆರ್​. ಖಾನ್​
TV9 Web
| Edited By: |

Updated on: Sep 19, 2021 | 4:09 PM

Share

ನಟಿ ಕಂಗನಾ ರಣಾವತ್​ ಅಭಿನಯದ ಸಿನಿಮಾಗಳು ಬ್ಯಾಕ್​ ಟು ಬ್ಯಾಕ್​ ಸೋತರೂ ಕೂಡ ಅವರಿಗೆ ಸಿಗುವ ಅವಕಾಶಗಳೇನೂ ಕಮ್ಮಿ ಆಗಿಲ್ಲ. ಹತ್ತು ಹಲವು ಕಾರಣಗಳಿಗಾಗಿ ಎಲ್ಲರ ಜೊತೆ ಕಿರಿಕ್​ ಮಾಡಿಕೊಳ್ಳುವ ಅವರು ಒಂದರ ನಂತರ ಒಂದು ಸಿನಿಮಾ ಒಪ್ಪಿಕೊಳ್ಳುತ್ತಿದ್ದಾರೆ. ಈಗ ಅವರ ಕೈಯಲ್ಲಿ ಹಲವು ಸಿನಿಮಾಗಳಿವೆ. ತೇಜಸ್​, ಧಾಕಡ್​, ಎಮರ್ಜೆನ್ಸಿ, ಮಣಿಕರ್ಣಿಕಾ ರಿಟರ್ನ್ಸ್​​ ಸೇರಿದಂತೆ ಅನೇಕ ಪ್ರಾಜೆಕ್ಟ್​ಗಳಲ್ಲಿ ಕಂಗನಾ ತೊಡಗಿಕೊಂಡಿದ್ದಾರೆ. ಅವುಗಳ ಜೊತೆ ‘ಸೀತಾ’ ಸಿನಿಮಾ ಕೂಡ ಸೇರಿಕೊಂಡಿದೆ. ಈ ಚಿತ್ರಕ್ಕೆ ಅವರು ಪಡೆಯುತ್ತಿರುವ ಸಂಭಾವನೆ ಬರೋಬ್ಬರಿ 32 ಕೋಟಿ ರೂ. ಎನ್ನಲಾಗಿದೆ.

ಬಾಲಿವುಡ್​ನಲ್ಲಿ ಎಲ್ಲರ ಕಾಲೆಳೆಯುವ ನಟ, ವಿಮರ್ಶಕ ಕಮಾಲ್​ ಆರ್​. ಖಾನ್​ ಅವರು ಇತ್ತೀಚೆಗೆ ಕಂಗನಾ ರಣಾವತ್​ ವಿರುದ್ಧ ಹರಿಹಾಯುತ್ತಿದ್ದಾರೆ. ಕಂಗನಾ ನೀಡುವ ಎಡವಟ್ಟು ಹೇಳಿಕೆಗಳಿಗೆ ಕಮಾಲ್​ ಖಾನ್​ ಆಗಾಗ ತಿರುಗೇಟು ನೀಡುತ್ತಾ ಇರುತ್ತಾರೆ. ಈಗ ಅವರು ‘ಸೀತಾ’ ಸಿನಿಮಾಗೆ ಸಂಬಂಧಿಸಿದಂತೆ ಕಂಗನಾರನ್ನು ಹೀಯಾಳಿಸಿದ್ದಾರೆ. ಟ್ವಿಟರ್​ನಲ್ಲಿ ಹೆಚ್ಚು ಆ್ಯಕ್ಟೀವ್​ ಆಗಿರುವ ಕಮಾಲ್ ಆರ್​. ಖಾನ್​ ಅವರು ಕಂಗನಾರ ಸಂಭಾವನೆ ಬಗ್ಗೆ ವ್ಯಂಗ್ಯವಾಡಿದ್ದಾರೆ.

‘ನನ್ನ ಮೂಲಗಳ ಪ್ರಕಾರ, ಕಂಗನಾ ರಣಾವತ್​ ಅವರು ಸೀತಾ ಸಿನಿಮಾಗೆ 32 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ. ಆ ಮೂಲಕ ಬಾಲಿವುಡ್​ನಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿ ಎಂಬ ಖ್ಯಾತಿಗೆ ಅವರು ಪಾತ್ರರಾಗಿದ್ದಾರೆ. ಆದರೆ ನಿರ್ಮಾಪಕರು ಯಾಕೆ ಇಂಥ ಪ್ರಮಾದ ಮಾಡಿದರು? ನಾನು ಶೀಘ್ರವೇ ಬಿಡುಗಡೆ ಮಾಡಲಿರುವ ವಿಮರ್ಶೆಯಲ್ಲಿ ಈ ಬಗ್ಗೆ ನಿಮಗೆ ಇನ್ನಷ್ಟು ವಿವರ ತಿಳಿಯಲಿದೆ’ ಎಂದು ಕಮಾಲ್​ ಆರ್​. ಖಾನ್​ ಟ್ವೀಟ್​ ಮಾಡಿದ್ದಾರೆ.

ಕಂಗನಾ ಅವರು ಕಾಲು ಕೆರೆದುಕೊಂಡು ಜಗಳಕ್ಕೆ ಬರುತ್ತಾರೆ ಎಂಬುದು ಗೊತ್ತಿರುವ ವಿಚಾರ. ಹಾಗಾಗಿ ಅವರ ತಂಟೆಗೆ ಹೋಗಲು ಅನೇಕರು ಹಿಂದೇಟು ಹಾಕುತ್ತಾರೆ. ಹಾಗಿದ್ದರೂ ಕೂಡ ಕಮಾಲ್​ ಆರ್​. ಖಾನ್​ ಅವರು ಯಾವುದೇ ಮುಲಾಜಿಲ್ಲದೇ ಈ ರೀತಿ ಹೀಯಾಳಿಸುತ್ತಿದ್ದಾರೆ. ಅದಕ್ಕೆ ಕಂಗನಾ ಕಡೆಯಿಂದ ಯಾವಾಗ ಖಾರದ ಪ್ರತಿಕ್ರಿಯೆ ಬರಲಿದೆಯೋ ಗೊತ್ತಿಲ್ಲ. ಈ ಹಿಂದೆ ಸಲ್ಮಾನ್​ ಖಾನ್​ ಬಗ್ಗೆಯೂ ಕಮಾಲ್​ ಖಾನ್​ ಇಲ್ಲಸಲ್ಲದ ಮಾತುಗಳನ್ನಾಡಿ ಸುದ್ದಿ ಆಗಿದ್ದರು.

ಇದನ್ನೂ ಓದಿ:

ಕಂಗನಾ ರಣಾವತ್​ ಕೂ ಖಾತೆಗೆ 10 ಲಕ್ಷ ಫಾಲೋವರ್ಸ್​; ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚಿತು ಹವಾ

ಹೀನಾಯವಾಗಿ ಮುಗ್ಗರಿಸಿದ ‘ತಲೈವಿ’; ಮೊದಲ ದಿನ ಕಂಗನಾ ರಣಾವತ್​ ಚಿತ್ರ ಗಳಿಸಿದ್ದೆಷ್ಟು?

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್