AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀತೆ ಪಾತ್ರ ಮಾಡಲು ಕಂಗನಾಗೆ 32 ಕೋಟಿ ರೂ. ಸಂಬಳ? ಇದು ದೊಡ್ಡ ಪ್ರಮಾದ ಎಂದ ಕಮಾಲ್​ ಖಾನ್​

ಕಂಗನಾ ರಣಾವತ್​ ಅವರ ತಂಟೆಗೆ ಹೋಗಲು ಅನೇಕರು ಹಿಂದೇಟು ಹಾಕುತ್ತಾರೆ. ಹಾಗಿದ್ದರೂ ಕೂಡ ಕಮಾಲ್​ ಆರ್​. ಖಾನ್​ ಅವರು ಯಾವುದೇ ಮುಲಾಜಿಲ್ಲದೇ ಹೀಯಾಳಿಸುತ್ತಿದ್ದಾರೆ.

ಸೀತೆ ಪಾತ್ರ ಮಾಡಲು ಕಂಗನಾಗೆ 32 ಕೋಟಿ ರೂ. ಸಂಬಳ? ಇದು ದೊಡ್ಡ ಪ್ರಮಾದ ಎಂದ ಕಮಾಲ್​ ಖಾನ್​
ಕಂಗನಾ ರಣಾವತ್​, ಕಮಾಲ್​ ಆರ್​. ಖಾನ್​
TV9 Web
| Edited By: |

Updated on: Sep 19, 2021 | 4:09 PM

Share

ನಟಿ ಕಂಗನಾ ರಣಾವತ್​ ಅಭಿನಯದ ಸಿನಿಮಾಗಳು ಬ್ಯಾಕ್​ ಟು ಬ್ಯಾಕ್​ ಸೋತರೂ ಕೂಡ ಅವರಿಗೆ ಸಿಗುವ ಅವಕಾಶಗಳೇನೂ ಕಮ್ಮಿ ಆಗಿಲ್ಲ. ಹತ್ತು ಹಲವು ಕಾರಣಗಳಿಗಾಗಿ ಎಲ್ಲರ ಜೊತೆ ಕಿರಿಕ್​ ಮಾಡಿಕೊಳ್ಳುವ ಅವರು ಒಂದರ ನಂತರ ಒಂದು ಸಿನಿಮಾ ಒಪ್ಪಿಕೊಳ್ಳುತ್ತಿದ್ದಾರೆ. ಈಗ ಅವರ ಕೈಯಲ್ಲಿ ಹಲವು ಸಿನಿಮಾಗಳಿವೆ. ತೇಜಸ್​, ಧಾಕಡ್​, ಎಮರ್ಜೆನ್ಸಿ, ಮಣಿಕರ್ಣಿಕಾ ರಿಟರ್ನ್ಸ್​​ ಸೇರಿದಂತೆ ಅನೇಕ ಪ್ರಾಜೆಕ್ಟ್​ಗಳಲ್ಲಿ ಕಂಗನಾ ತೊಡಗಿಕೊಂಡಿದ್ದಾರೆ. ಅವುಗಳ ಜೊತೆ ‘ಸೀತಾ’ ಸಿನಿಮಾ ಕೂಡ ಸೇರಿಕೊಂಡಿದೆ. ಈ ಚಿತ್ರಕ್ಕೆ ಅವರು ಪಡೆಯುತ್ತಿರುವ ಸಂಭಾವನೆ ಬರೋಬ್ಬರಿ 32 ಕೋಟಿ ರೂ. ಎನ್ನಲಾಗಿದೆ.

ಬಾಲಿವುಡ್​ನಲ್ಲಿ ಎಲ್ಲರ ಕಾಲೆಳೆಯುವ ನಟ, ವಿಮರ್ಶಕ ಕಮಾಲ್​ ಆರ್​. ಖಾನ್​ ಅವರು ಇತ್ತೀಚೆಗೆ ಕಂಗನಾ ರಣಾವತ್​ ವಿರುದ್ಧ ಹರಿಹಾಯುತ್ತಿದ್ದಾರೆ. ಕಂಗನಾ ನೀಡುವ ಎಡವಟ್ಟು ಹೇಳಿಕೆಗಳಿಗೆ ಕಮಾಲ್​ ಖಾನ್​ ಆಗಾಗ ತಿರುಗೇಟು ನೀಡುತ್ತಾ ಇರುತ್ತಾರೆ. ಈಗ ಅವರು ‘ಸೀತಾ’ ಸಿನಿಮಾಗೆ ಸಂಬಂಧಿಸಿದಂತೆ ಕಂಗನಾರನ್ನು ಹೀಯಾಳಿಸಿದ್ದಾರೆ. ಟ್ವಿಟರ್​ನಲ್ಲಿ ಹೆಚ್ಚು ಆ್ಯಕ್ಟೀವ್​ ಆಗಿರುವ ಕಮಾಲ್ ಆರ್​. ಖಾನ್​ ಅವರು ಕಂಗನಾರ ಸಂಭಾವನೆ ಬಗ್ಗೆ ವ್ಯಂಗ್ಯವಾಡಿದ್ದಾರೆ.

‘ನನ್ನ ಮೂಲಗಳ ಪ್ರಕಾರ, ಕಂಗನಾ ರಣಾವತ್​ ಅವರು ಸೀತಾ ಸಿನಿಮಾಗೆ 32 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ. ಆ ಮೂಲಕ ಬಾಲಿವುಡ್​ನಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿ ಎಂಬ ಖ್ಯಾತಿಗೆ ಅವರು ಪಾತ್ರರಾಗಿದ್ದಾರೆ. ಆದರೆ ನಿರ್ಮಾಪಕರು ಯಾಕೆ ಇಂಥ ಪ್ರಮಾದ ಮಾಡಿದರು? ನಾನು ಶೀಘ್ರವೇ ಬಿಡುಗಡೆ ಮಾಡಲಿರುವ ವಿಮರ್ಶೆಯಲ್ಲಿ ಈ ಬಗ್ಗೆ ನಿಮಗೆ ಇನ್ನಷ್ಟು ವಿವರ ತಿಳಿಯಲಿದೆ’ ಎಂದು ಕಮಾಲ್​ ಆರ್​. ಖಾನ್​ ಟ್ವೀಟ್​ ಮಾಡಿದ್ದಾರೆ.

ಕಂಗನಾ ಅವರು ಕಾಲು ಕೆರೆದುಕೊಂಡು ಜಗಳಕ್ಕೆ ಬರುತ್ತಾರೆ ಎಂಬುದು ಗೊತ್ತಿರುವ ವಿಚಾರ. ಹಾಗಾಗಿ ಅವರ ತಂಟೆಗೆ ಹೋಗಲು ಅನೇಕರು ಹಿಂದೇಟು ಹಾಕುತ್ತಾರೆ. ಹಾಗಿದ್ದರೂ ಕೂಡ ಕಮಾಲ್​ ಆರ್​. ಖಾನ್​ ಅವರು ಯಾವುದೇ ಮುಲಾಜಿಲ್ಲದೇ ಈ ರೀತಿ ಹೀಯಾಳಿಸುತ್ತಿದ್ದಾರೆ. ಅದಕ್ಕೆ ಕಂಗನಾ ಕಡೆಯಿಂದ ಯಾವಾಗ ಖಾರದ ಪ್ರತಿಕ್ರಿಯೆ ಬರಲಿದೆಯೋ ಗೊತ್ತಿಲ್ಲ. ಈ ಹಿಂದೆ ಸಲ್ಮಾನ್​ ಖಾನ್​ ಬಗ್ಗೆಯೂ ಕಮಾಲ್​ ಖಾನ್​ ಇಲ್ಲಸಲ್ಲದ ಮಾತುಗಳನ್ನಾಡಿ ಸುದ್ದಿ ಆಗಿದ್ದರು.

ಇದನ್ನೂ ಓದಿ:

ಕಂಗನಾ ರಣಾವತ್​ ಕೂ ಖಾತೆಗೆ 10 ಲಕ್ಷ ಫಾಲೋವರ್ಸ್​; ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚಿತು ಹವಾ

ಹೀನಾಯವಾಗಿ ಮುಗ್ಗರಿಸಿದ ‘ತಲೈವಿ’; ಮೊದಲ ದಿನ ಕಂಗನಾ ರಣಾವತ್​ ಚಿತ್ರ ಗಳಿಸಿದ್ದೆಷ್ಟು?

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ