AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KRK: ‘ಆಮಿರ್​ ಖಾನ್​ಗೆ ನಿರ್ಮಾಪಕರೇ ಸಿಕ್ತಿಲ್ಲ, ಕರೆ​ ಮಾಡಿದ್ರೆ ಯಾರೂ ರಿಸೀವ್​ ಮಾಡ್ತಿಲ್ಲ’: ಕೆಆರ್​ಕೆ ವ್ಯಂಗ್ಯ

Aamir Khan: ಟ್ವಿಟರ್​ನಲ್ಲಿ ಕಮಾಲ್​ ಆರ್​. ಖಾನ್​ ಆ್ಯಕ್ಟೀವ್​ ಆಗಿದ್ದಾರೆ. ಆಗಾಗ ಅವರು ಸೆಲೆಬ್ರಿಟಿಗಳ ಬಗ್ಗೆ ವಿವಾದಾತ್ಮಕ ರೀತಿಯಲ್ಲಿ ಪೋಸ್ಟ್​ ಮಾಡಿ ಸುದ್ದಿ ಆಗುತ್ತಾರೆ.

KRK: ‘ಆಮಿರ್​ ಖಾನ್​ಗೆ ನಿರ್ಮಾಪಕರೇ ಸಿಕ್ತಿಲ್ಲ, ಕರೆ​ ಮಾಡಿದ್ರೆ ಯಾರೂ ರಿಸೀವ್​ ಮಾಡ್ತಿಲ್ಲ’: ಕೆಆರ್​ಕೆ ವ್ಯಂಗ್ಯ
ಆಮಿರ್ ಖಾನ್, ಕಮಾಲ್ ಆರ್. ಖಾನ್
ಮದನ್​ ಕುಮಾರ್​
|

Updated on:Apr 13, 2023 | 4:52 PM

Share

ನಟ ಆಮಿರ್​ ಖಾನ್​ (Aamir Khan) ಅವರು ಒಂದು ಕಾಲದಲ್ಲಿ ಬ್ಯಾಕ್​ ಟು ಬ್ಯಾಕ್​ ಸೂಪರ್​ ಹಿಟ್​ ಸಿನಿಮಾಗಳನ್ನು ನೀಡುತ್ತಿದ್ದರು. ಆದರೆ ಇತ್ತೀಚಿನ ವರ್ಷಗಳಲ್ಲಿ ಅವರ ಅದೃಷ್ಟ ಕೈ ಕೊಟ್ಟಿದೆ. ಆಮಿರ್​ ಖಾನ್​ ಮಾಡಿದ ಸಿನಿಮಾಗಳೆಲ್ಲ ಸೋಲುತ್ತಿವೆ. ಕಳೆದ ವರ್ಷ ‘ಲಾಲ್​ ಸಿಂಗ್​ ಚಡ್ಡಾ’ ಚಿತ್ರ ತೆರೆಕಂಡು ಬಾಕ್ಸ್​ ಆಫೀಸ್​ನಲ್ಲಿ ನಿರೀಕ್ಷಿತ ಮಟ್ಟದ ಕಲೆಕ್ಷನ್​ ಮಾಡಲು ವಿಫಲವಾಯಿತು. ಅದನ್ನೇ ಗುರಿಯಾಗಿಟ್ಟುಕೊಂಡು ಅನೇಕರು ಟ್ರೋಲ್​ ಮಾಡುತ್ತಿದ್ದಾರೆ. ಬಾಲಿವುಡ್​ನ ಕಿರಿಕ್​ ವಿಮರ್ಶಕ ಎನಿಸಿಕೊಂಡಿರುವ ಕಮಾಲ್​ ಆರ್​. ಖಾನ್ (Kamaal R Khan) ಕೂಡ ಈಗ ಆಮಿರ್​ ಖಾನ್​ ಬಗ್ಗೆ ವ್ಯಂಗ್ಯವಾಗಿ ಟ್ವೀಟ್​ ಮಾಡಿದ್ದಾರೆ. ಆಮಿರ್​ ಖಾನ್​ ಜೊತೆ ಸಿನಿಮಾ ಮಾಡಲು ಯಾವ ನಿರ್ಮಾಪಕರೂ ಮುಂದೆ ಬರುತ್ತಿಲ್ಲ ಎಂದು ಕೆಆರ್​ಕೆ (KRK) ಹೇಳಿದ್ದಾರೆ. ಪದೇಪದೇ ಅವರ ಇಂಥ ಟ್ವೀಟ್​ ಮಾಡುವುದರಿಂದ ಕೆಲವರು ಅವರನ್ನು ಗಂಭೀರವಾಗಿ ಪರಿಗಣಿಸುತ್ತಲೇ ಇಲ್ಲ.

ಟ್ವಿಟರ್​ನಲ್ಲಿ ಕಮಾಲ್​ ಆರ್​. ಖಾನ್​ ಆ್ಯಕ್ಟೀವ್​ ಆಗಿದ್ದಾರೆ. ಆಗಾಗ ಅವರು ವಿವಾದಾತ್ಮಕ ರೀತಿಯಲ್ಲಿ ಪೋಸ್ಟ್​ ಮಾಡಿ ಸುದ್ದಿ ಆಗುತ್ತಾರೆ. ಹಿಂದಿ ಚಿತ್ರರಂಗದ ಬಹುತೇಕ ಎಲ್ಲ ಸೆಲೆಬ್ರಿಟಿಗಳನ್ನೂ ಅವರು ಎದುರು ಹಾಕಿಕೊಂಡಿದ್ದಾರೆ. ಅದೇ ವಿಚಾರವಾಗಿ ಅವರು ಜೈಲು ಊಟವನ್ನೂ ತಿಂದು ಬಂದಿದ್ದಾರೆ. ಆದರೂ ಕೂಡ ಕಮಾಲ್​ ಆರ್​. ಖಾನ್​ ಬುದ್ಧಿ ಬದಲಾಗಿಲ್ಲ. ಈಗ ಅವರು ಆಮಿರ್​ ಖಾನ್​ ಬಗ್ಗೆ ಕುಹಕವಾಡಿದ್ದಾರೆ.

ಇದನ್ನೂ ಓದಿ
Image
RRR ಕಲೆಕ್ಷನ್​ ರಿಪೋರ್ಟ್​ ಸುಳ್ಳು ಎಂದ ಕಮಾಲ್​ ಆರ್​ ಖಾನ್​; ಸಾಬೀತು ಮಾಡುವುದಾಗಿ ಘೋಷಣೆ
Image
‘ಭಕ್ತರ ಭಕ್ತ ಮಹಾಭಕ್ತ’, ‘ಕಾಶ್ಮೀರದ ಶರ್ಮಾ’: ಖಾನ್​ ಚಿತ್ರಕ್ಕೆ ಹೊಸ ಹೆಸರು ಸೂಚಿಸಿದ ಇನ್ನೊಬ್ಬ ಖಾನ್​
Image
‘ಈ ನಟರಿಗೆ ಅಹಂಕಾರ ಜಾಸ್ತಿ’; ವಿಡಿಯೋ ಮೂಲಕ ಎಳೆ ಎಳೆಯಾಗಿ ವಿವರಿಸಿದ ಕಮಾಲ್​ ಆರ್.​ ಖಾನ್​
Image
ಸಲ್ಮಾನ್​ ಖಾನ್​ ವಿರುದ್ಧ ಯಾವುದೇ ಹೇಳಿಕೆ ನೀಡಬೇಡಿ; ಕಮಾಲ್​ ಆರ್​ ಖಾನ್​ಗೆ ಕೋರ್ಟ್​ ಆದೇಶ

‘ಲಾಲ್​ ಸಿಂಗ್ ಚಡ್ಡಾ’ ಸೋತಿದ್ದಕ್ಕೆ ಆಮಿರ್​ ಖಾನ್​ನ ಟೀಕೆ ಮಾಡಿದ ಜಸ್​​ಪ್ರೀತ್​ ಬುಮ್ರಾ; ನಟನ ಉತ್ತರ ಏನು?

‘ಘಜಿನಿ 2’ ಮತ್ತು ‘ಸರ್ಫರೋಷ್​ 2’ ಚಿತ್ರಗಳನ್ನು ಮಾಡಲು ಆಮಿರ್​ ಖಾನ್​ ನಿರ್ಮಾಪಕರನ್ನು ಹುಡುಕುತ್ತಿದ್ದಾರೆ. ಆದರೆ ಅವರ ಜೊತೆ ಸಿನಿಮಾ ಮಾಡಲು ಯಾವುದೇ ನಿರ್ಮಾಪಕರು ಮುಂದೆಬರುತ್ತಿಲ್ಲ. ಅವರು ಕಾಲ್​ ಮಾಡಿದರೆ ಆದಿತ್ಯ ಚೋಪ್ರಾ ರಿವೀವ್​ ಮಾಡುತ್ತಿಲ್ಲ’ ಎಂದು ಕಮಾಲ್​ ಆರ್​. ಖಾನ್​ ಟ್ವೀಟ್​ ಮಾಡಿದ್ದಾರೆ. ಇದಕ್ಕೆ ಆಮಿರ್​ ಖಾನ್​ ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕು.

ಕಮಾಲ್​ ಆರ್​. ಖಾನ್​ ಅವರು ತಮ್ಮದೇ ರೀತಿಯಲ್ಲಿ ಸಿನಿಮಾಗಳ ವಿಮರ್ಶೆ ಮಾಡುತ್ತಾರೆ. ಅದರಿಂದ ಅವರು ಟೀಕೆಗೂ ಒಳಗಾಗುತ್ತಾರೆ. ಆ ಬಗ್ಗೆಯೂ ಅವರು ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ. ‘ನಾನು ವಿಮರ್ಶೆ ಮಾಡಿದರೆ ನಿರ್ಮಾಪಕರಿಗೆ ದೊಡ್ಡ ಸಮಸ್ಯೆ ಆಗುತ್ತದೆ ಎಂಬುದನ್ನು ನನಗೆ ನಂಬಲು ಸಾಧ್ಯವಾಗುತ್ತಿಲ್ಲ. ನನ್ನ ಟ್ವೀಟ್​ ಮತ್ತು ವಿಮರ್ಶೆಯಿಂದಾಗಿ ತಮಗೆ 100 ಕೋಟಿ ರೂಪಾಯಿ ನಷ್ಟ ಆಯ್ತು ಎಂದು ಒಬ್ಬ ನಿರ್ಮಾಪಕರು ನ್ಯಾಯಾಲಯದಲ್ಲಿ ಹೇಳಿದ್ದರು. ಹಾಗಾಗಿ ನಾನು ಅವರ ಸಿನಿಮಾದ ವಿಮರ್ಶೆ ಮಾಡುವಂತಿಲ್ಲ’ ಎಂದು ಕಮಾಲ್​ ಆರ್​. ಖಾನ್​ ಟ್ವೀಟ್​ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:52 pm, Thu, 13 April 23

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ