AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KRK: ‘ಆಮಿರ್​ ಖಾನ್​ಗೆ ನಿರ್ಮಾಪಕರೇ ಸಿಕ್ತಿಲ್ಲ, ಕರೆ​ ಮಾಡಿದ್ರೆ ಯಾರೂ ರಿಸೀವ್​ ಮಾಡ್ತಿಲ್ಲ’: ಕೆಆರ್​ಕೆ ವ್ಯಂಗ್ಯ

Aamir Khan: ಟ್ವಿಟರ್​ನಲ್ಲಿ ಕಮಾಲ್​ ಆರ್​. ಖಾನ್​ ಆ್ಯಕ್ಟೀವ್​ ಆಗಿದ್ದಾರೆ. ಆಗಾಗ ಅವರು ಸೆಲೆಬ್ರಿಟಿಗಳ ಬಗ್ಗೆ ವಿವಾದಾತ್ಮಕ ರೀತಿಯಲ್ಲಿ ಪೋಸ್ಟ್​ ಮಾಡಿ ಸುದ್ದಿ ಆಗುತ್ತಾರೆ.

KRK: ‘ಆಮಿರ್​ ಖಾನ್​ಗೆ ನಿರ್ಮಾಪಕರೇ ಸಿಕ್ತಿಲ್ಲ, ಕರೆ​ ಮಾಡಿದ್ರೆ ಯಾರೂ ರಿಸೀವ್​ ಮಾಡ್ತಿಲ್ಲ’: ಕೆಆರ್​ಕೆ ವ್ಯಂಗ್ಯ
ಆಮಿರ್ ಖಾನ್, ಕಮಾಲ್ ಆರ್. ಖಾನ್
ಮದನ್​ ಕುಮಾರ್​
|

Updated on:Apr 13, 2023 | 4:52 PM

Share

ಮುಖ್ಯಾಂಶಗಳು

  • ಆಮಿರ್​ ಖಾನ್​ ಸೋಲಿನ ಬಗ್ಗೆ ವ್ಯಂಗ್ಯವಾಗಿ ಟ್ವೀಟ್​ ಮಾಡಿದ ಕಮಾಲ್​ ಆರ್​. ಖಾನ್​
  • ಆಮಿರ್​ ಖಾನ್​ ಜೊತೆ ಸಿನಿಮಾ ಮಾಡಲು ನಿರ್ಮಾಪಕರು ಸಿದ್ಧರಿಲ್ಲ ಎಂದ ಕೆ.ಆರ್​.ಕೆ.
  • ‘ಲಾಲ್​ ಸಿಂಗ್​ ಚಡ್ಡಾ’ ಸೋಲಿನ ಬಳಿಕ ಆಮಿರ್​ ಹೊಸ ಸಿನಿಮಾ ಘೋಷಿಸಿಲ್ಲ

ನಟ ಆಮಿರ್​ ಖಾನ್​ (Aamir Khan) ಅವರು ಒಂದು ಕಾಲದಲ್ಲಿ ಬ್ಯಾಕ್​ ಟು ಬ್ಯಾಕ್​ ಸೂಪರ್​ ಹಿಟ್​ ಸಿನಿಮಾಗಳನ್ನು ನೀಡುತ್ತಿದ್ದರು. ಆದರೆ ಇತ್ತೀಚಿನ ವರ್ಷಗಳಲ್ಲಿ ಅವರ ಅದೃಷ್ಟ ಕೈ ಕೊಟ್ಟಿದೆ. ಆಮಿರ್​ ಖಾನ್​ ಮಾಡಿದ ಸಿನಿಮಾಗಳೆಲ್ಲ ಸೋಲುತ್ತಿವೆ. ಕಳೆದ ವರ್ಷ ‘ಲಾಲ್​ ಸಿಂಗ್​ ಚಡ್ಡಾ’ ಚಿತ್ರ ತೆರೆಕಂಡು ಬಾಕ್ಸ್​ ಆಫೀಸ್​ನಲ್ಲಿ ನಿರೀಕ್ಷಿತ ಮಟ್ಟದ ಕಲೆಕ್ಷನ್​ ಮಾಡಲು ವಿಫಲವಾಯಿತು. ಅದನ್ನೇ ಗುರಿಯಾಗಿಟ್ಟುಕೊಂಡು ಅನೇಕರು ಟ್ರೋಲ್​ ಮಾಡುತ್ತಿದ್ದಾರೆ. ಬಾಲಿವುಡ್​ನ ಕಿರಿಕ್​ ವಿಮರ್ಶಕ ಎನಿಸಿಕೊಂಡಿರುವ ಕಮಾಲ್​ ಆರ್​. ಖಾನ್ (Kamaal R Khan) ಕೂಡ ಈಗ ಆಮಿರ್​ ಖಾನ್​ ಬಗ್ಗೆ ವ್ಯಂಗ್ಯವಾಗಿ ಟ್ವೀಟ್​ ಮಾಡಿದ್ದಾರೆ. ಆಮಿರ್​ ಖಾನ್​ ಜೊತೆ ಸಿನಿಮಾ ಮಾಡಲು ಯಾವ ನಿರ್ಮಾಪಕರೂ ಮುಂದೆ ಬರುತ್ತಿಲ್ಲ ಎಂದು ಕೆಆರ್​ಕೆ (KRK) ಹೇಳಿದ್ದಾರೆ. ಪದೇಪದೇ ಅವರ ಇಂಥ ಟ್ವೀಟ್​ ಮಾಡುವುದರಿಂದ ಕೆಲವರು ಅವರನ್ನು ಗಂಭೀರವಾಗಿ ಪರಿಗಣಿಸುತ್ತಲೇ ಇಲ್ಲ.

ಟ್ವಿಟರ್​ನಲ್ಲಿ ಕಮಾಲ್​ ಆರ್​. ಖಾನ್​ ಆ್ಯಕ್ಟೀವ್​ ಆಗಿದ್ದಾರೆ. ಆಗಾಗ ಅವರು ವಿವಾದಾತ್ಮಕ ರೀತಿಯಲ್ಲಿ ಪೋಸ್ಟ್​ ಮಾಡಿ ಸುದ್ದಿ ಆಗುತ್ತಾರೆ. ಹಿಂದಿ ಚಿತ್ರರಂಗದ ಬಹುತೇಕ ಎಲ್ಲ ಸೆಲೆಬ್ರಿಟಿಗಳನ್ನೂ ಅವರು ಎದುರು ಹಾಕಿಕೊಂಡಿದ್ದಾರೆ. ಅದೇ ವಿಚಾರವಾಗಿ ಅವರು ಜೈಲು ಊಟವನ್ನೂ ತಿಂದು ಬಂದಿದ್ದಾರೆ. ಆದರೂ ಕೂಡ ಕಮಾಲ್​ ಆರ್​. ಖಾನ್​ ಬುದ್ಧಿ ಬದಲಾಗಿಲ್ಲ. ಈಗ ಅವರು ಆಮಿರ್​ ಖಾನ್​ ಬಗ್ಗೆ ಕುಹಕವಾಡಿದ್ದಾರೆ.

ಇದನ್ನೂ ಓದಿ
Image
RRR ಕಲೆಕ್ಷನ್​ ರಿಪೋರ್ಟ್​ ಸುಳ್ಳು ಎಂದ ಕಮಾಲ್​ ಆರ್​ ಖಾನ್​; ಸಾಬೀತು ಮಾಡುವುದಾಗಿ ಘೋಷಣೆ
Image
‘ಭಕ್ತರ ಭಕ್ತ ಮಹಾಭಕ್ತ’, ‘ಕಾಶ್ಮೀರದ ಶರ್ಮಾ’: ಖಾನ್​ ಚಿತ್ರಕ್ಕೆ ಹೊಸ ಹೆಸರು ಸೂಚಿಸಿದ ಇನ್ನೊಬ್ಬ ಖಾನ್​
Image
‘ಈ ನಟರಿಗೆ ಅಹಂಕಾರ ಜಾಸ್ತಿ’; ವಿಡಿಯೋ ಮೂಲಕ ಎಳೆ ಎಳೆಯಾಗಿ ವಿವರಿಸಿದ ಕಮಾಲ್​ ಆರ್.​ ಖಾನ್​
Image
ಸಲ್ಮಾನ್​ ಖಾನ್​ ವಿರುದ್ಧ ಯಾವುದೇ ಹೇಳಿಕೆ ನೀಡಬೇಡಿ; ಕಮಾಲ್​ ಆರ್​ ಖಾನ್​ಗೆ ಕೋರ್ಟ್​ ಆದೇಶ

‘ಲಾಲ್​ ಸಿಂಗ್ ಚಡ್ಡಾ’ ಸೋತಿದ್ದಕ್ಕೆ ಆಮಿರ್​ ಖಾನ್​ನ ಟೀಕೆ ಮಾಡಿದ ಜಸ್​​ಪ್ರೀತ್​ ಬುಮ್ರಾ; ನಟನ ಉತ್ತರ ಏನು?

‘ಘಜಿನಿ 2’ ಮತ್ತು ‘ಸರ್ಫರೋಷ್​ 2’ ಚಿತ್ರಗಳನ್ನು ಮಾಡಲು ಆಮಿರ್​ ಖಾನ್​ ನಿರ್ಮಾಪಕರನ್ನು ಹುಡುಕುತ್ತಿದ್ದಾರೆ. ಆದರೆ ಅವರ ಜೊತೆ ಸಿನಿಮಾ ಮಾಡಲು ಯಾವುದೇ ನಿರ್ಮಾಪಕರು ಮುಂದೆಬರುತ್ತಿಲ್ಲ. ಅವರು ಕಾಲ್​ ಮಾಡಿದರೆ ಆದಿತ್ಯ ಚೋಪ್ರಾ ರಿವೀವ್​ ಮಾಡುತ್ತಿಲ್ಲ’ ಎಂದು ಕಮಾಲ್​ ಆರ್​. ಖಾನ್​ ಟ್ವೀಟ್​ ಮಾಡಿದ್ದಾರೆ. ಇದಕ್ಕೆ ಆಮಿರ್​ ಖಾನ್​ ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕು.

ಕಮಾಲ್​ ಆರ್​. ಖಾನ್​ ಅವರು ತಮ್ಮದೇ ರೀತಿಯಲ್ಲಿ ಸಿನಿಮಾಗಳ ವಿಮರ್ಶೆ ಮಾಡುತ್ತಾರೆ. ಅದರಿಂದ ಅವರು ಟೀಕೆಗೂ ಒಳಗಾಗುತ್ತಾರೆ. ಆ ಬಗ್ಗೆಯೂ ಅವರು ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ. ‘ನಾನು ವಿಮರ್ಶೆ ಮಾಡಿದರೆ ನಿರ್ಮಾಪಕರಿಗೆ ದೊಡ್ಡ ಸಮಸ್ಯೆ ಆಗುತ್ತದೆ ಎಂಬುದನ್ನು ನನಗೆ ನಂಬಲು ಸಾಧ್ಯವಾಗುತ್ತಿಲ್ಲ. ನನ್ನ ಟ್ವೀಟ್​ ಮತ್ತು ವಿಮರ್ಶೆಯಿಂದಾಗಿ ತಮಗೆ 100 ಕೋಟಿ ರೂಪಾಯಿ ನಷ್ಟ ಆಯ್ತು ಎಂದು ಒಬ್ಬ ನಿರ್ಮಾಪಕರು ನ್ಯಾಯಾಲಯದಲ್ಲಿ ಹೇಳಿದ್ದರು. ಹಾಗಾಗಿ ನಾನು ಅವರ ಸಿನಿಮಾದ ವಿಮರ್ಶೆ ಮಾಡುವಂತಿಲ್ಲ’ ಎಂದು ಕಮಾಲ್​ ಆರ್​. ಖಾನ್​ ಟ್ವೀಟ್​ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:52 pm, Thu, 13 April 23

Follow Us
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
'ವಿದೇಶಿ ಕಂಪನಿಗೆ ಹೆದರಿ ಯುಪಿಐ ತೆರಿಗೆ ಜಾರಿ ಮಾಡಿದ್ದಲ್ಲ'; ಜೋಶಿ
'ವಿದೇಶಿ ಕಂಪನಿಗೆ ಹೆದರಿ ಯುಪಿಐ ತೆರಿಗೆ ಜಾರಿ ಮಾಡಿದ್ದಲ್ಲ'; ಜೋಶಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ
ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ