‘ಈ ನಟರಿಗೆ ಅಹಂಕಾರ ಜಾಸ್ತಿ’; ವಿಡಿಯೋ ಮೂಲಕ ಎಳೆ ಎಳೆಯಾಗಿ ವಿವರಿಸಿದ ಕಮಾಲ್​ ಆರ್.​ ಖಾನ್​

ಈ ಹಿಂದೆ ಅನೇಕ ಬಾರಿ ಸಲ್ಮಾನ್​ ಖಾನ್​ ವಿರುದ್ಧ ಕಮಾಲ್​ ಆರ್​. ಖಾನ್​ ಗುಡುಗಿದ್ದುಂಟು. ಆದರೆ ಈ ಬಾರಿ ಅವರು ಶಾರುಖ್​ ಖಾನ್​, ರಣವೀರ್​ ಸಿಂಗ್​, ಅಜಯ್​ ದೇವಗನ್​ ಮತ್ತು ಆಯುಷ್ಮಾನ್​ ಖುರಾನಾ ಅವರನ್ನು ಕುಟುಕಿದ್ದಾರೆ.

‘ಈ ನಟರಿಗೆ ಅಹಂಕಾರ ಜಾಸ್ತಿ’; ವಿಡಿಯೋ ಮೂಲಕ ಎಳೆ ಎಳೆಯಾಗಿ ವಿವರಿಸಿದ ಕಮಾಲ್​ ಆರ್.​ ಖಾನ್​
ಅಜಯ್​ ದೇವಗನ್​, ರಣವೀರ್​ ಸಿಂಗ್​, ಶಾರುಖ್​ ಖಾನ್​, ಆಯುಷ್ಮಾನ್​ ಖುರಾನಾ
Follow us
| Updated By: ಮದನ್​ ಕುಮಾರ್​

Updated on: Jan 10, 2022 | 8:02 AM

ಸ್ಟಾರ್​ ಕಲಾವಿದರನ್ನು ಎಲ್ಲರೂ ಹೊಗಳುತ್ತಾರೆ. ಅವರನ್ನು ಟೀಕಿಸಿ, ದ್ವೇಷ ಕಟ್ಟಿಕೊಳ್ಳಲು ಯಾರೂ ಇಷ್ಟಪಡುವುದಿಲ್ಲ. ಆದರೆ ನಟ, ಸ್ವಯಂ ಘೋಷಿತ ವಿಮರ್ಶಕ ಕಮಾಲ್ ಆರ್​. ಖಾನ್​ ಅವರು ಎಲ್ಲರಿಗಿಂತ ಭಿನ್ನ. ಬಾಲಿವುಡ್​ನ ಅನೇಕ ಸ್ಟಾರ್​ ಕಲಾವಿದರನ್ನು ಅವರು ಎದುರು ಹಾಕಿಕೊಂಡಿದ್ದಾರೆ. ದೊಡ್ಡ ದೊಡ್ಡ ಸ್ಟಾರ್​ ಕಲಾವಿದರನ್ನು ಹಿಗ್ಗಾಮುಗ್ಗಾ ಟ್ರೋಲ್​ ಮಾಡುತ್ತಾರೆ. ಈಗ ಅವರೊಂದು ಹೊಸ ವಿಡಿಯೋ ಹರಿಬಿಟ್ಟಿದ್ದಾರೆ. ಅದರಲ್ಲಿ ಶಾರುಖ್​ ಖಾನ್​, ಅಜಯ್​ ದೇವಗನ್​, ರಣವೀರ್​ ಸಿಂಗ್​, ಜಾನ್​ ಅಬ್ರಾಹಂ ಮತ್ತು ಆಯುಷ್ಮಾನ್​ ಖುರಾನಾ ಅವರನ್ನು ಅಹಂಕಾರಿಗಳು ಎಂದು ಕರೆದಿದ್ದಾರೆ. ಸದ್ಯ ಈ ವಿಡಿಯೋ ವೈರಲ್​ ಆಗುತ್ತಿದೆ. ಈ ಎಲ್ಲ ನಟರ ಸೋತ ಸಿನಿಮಾಗಳನ್ನು ಕಮಾಲ್​ ಆರ್​. ಖಾನ್​ ಪಟ್ಟಿ ಮಾಡಿದ್ದಾರೆ.

ಈ ಹಿಂದೆ ಅನೇಕ ಬಾರಿ ಸಲ್ಮಾನ್​ ಖಾನ್​ ವಿರುದ್ಧ ಕಮಾಲ್​ ಆರ್​. ಖಾನ್​ ಗುಡುಗಿದ್ದುಂಟು. ಆದರೆ ಈ ಬಾರಿ ಅವರು ಸಲ್ಲು ಬಗ್ಗೆ ಮಾತನಾಡಿಲ್ಲ. ಇತರೆ ಸ್ಟಾರ್​ ನಟರನ್ನು ಅವರು ಕುಟುಕಿದ್ದಾರೆ. ಶಾರುಖ್​ ಖಾನ್​, ರಣವೀರ್​ ಸಿಂಗ್​, ಅಜಯ್​ ದೇವಗನ್​ ಮತ್ತು ಆಯುಷ್ಮಾನ್​ ಖುರಾನಾ ಅವರು ತಮ್ಮ ಸಿನಿಮಾ ಸೋತರೆ ಅದನ್ನು ಒಪ್ಪಿಕೊಳ್ಳುವ ಬದಲು ದುರಹಂಕಾರದ ಮಾತನಾಡುತ್ತಾರೆ ಎಂಬುದು ಕಮಾಲ್​ ಆರ್​. ಖಾನ್​ ಅಭಿಪ್ರಾಯ.

‘ಸತ್ಯಮೇವ ಜಯತೆ 2, ಚಂಡೀಗಡ್​ ಕರೇ ಆಶಿಖಿ, ಫ್ಯಾನ್​, 83, ಶಿವಾಯ್​ ಸಿನಿಮಾಗಳೆಲ್ಲ ಹೀನಾಯವಾಗಿ ಸೋತಿವೆ. ಆದರೆ ಈ ಸಿನಿಮಾಗಳಲ್ಲಿ ನಟಿಸಿರುವ ಸ್ಟಾರ್​ ಕಲಾವಿದರು ಅದನ್ನು ಒಪ್ಪಿಕೊಳ್ಳಲು ತಯಾರಿಲ್ಲ. ಬದಲಾಗಿ, ಈ ಚಿತ್ರಗಳನ್ನು ಮಾಸ್ಟರ್​ಪೀಸ್​ ಎಂದು ಅವರೇ ಕರೆದುಕೊಳ್ಳುತ್ತಾರೆ. ಜನರಿಗೆ ಈ ಸಿನಿಮಾಗಳು ಅರ್ಥವಾಗಿಲ್ಲ ಅಂತ ಹೇಳ್ತಾರೆ’ ಎಂದು ಕಮಾಲ್​ ಆರ್​. ಖಾನ್​ ಗುಡುಗಿದ್ದಾರೆ.

‘ಈ ಬಾಲಿವುಡ್​ನವರು ತಮ್ಮನ್ನು ತಾವು ಮಹಾನ್​ ಬುದ್ಧಿವಂತರು ಎಂದುಕೊಂಡಿದ್ದಾರೆ. ಜನರಿಗೆ ಅರ್ಥವಾಗುವಂತಹ ಸಿನಿಮಾ ಮಾಡಲಿಲ್ಲ ಅಂದಾದರೆ ಆ ಚಿತ್ರವನ್ನು ನೀವು ನಿಮ್ಮ ಮನೆಯವರಿಗಾಗಿ ಮಾಡಿದ್ದೀರಾ? ನೀವು ಜನರಿಗಾಗಿ ಸಿನಿಮಾ ಮಾಡುತ್ತೀರಿ. ಜನರಿಗೆ ಇಷ್ಟ ಆಗಿಲ್ಲ ಎಂದರೆ ಆ ಚಿತ್ರಗಳು ಸರಿಯಿಲ್ಲ ಎಂದೇ ಅರ್ಥ. ಜನರಿಗೆ ಅರ್ಥ ಆಗಿಲ್ಲ ಅಂತ ಹೇಳೋದು ನಿಮ್ಮ ದುರಹಂಕಾರ’ ಎಂದು ಕಮಾಲ್​ ಆರ್​. ಖಾನ್​ ಹೇಳಿದ್ದಾರೆ.

ಇದನ್ನೂ ಓದಿ:

ವಿದೇಶದಲ್ಲಿ ಶಾರುಖ್​ ಫ್ಯಾನ್​ ಅಂತ ಹೇಳಿಕೊಂಡ್ರೆ ಸಿಗುತ್ತೆ ವಿಶೇಷ ಗೌರವ; ಸಾಕ್ಷಿ ಸಮೇತ ವಿವರಿಸಿದ ಪ್ರೊಫೆಸರ್​

16 ದಿನಕ್ಕೆ 175 ಕೋಟಿ ರೂ. ಗಳಿಸಿದ ‘83’ ಚಿತ್ರ; ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್​ ಮಾಡಲು ವಿಫಲ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ