AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈ ನಟರಿಗೆ ಅಹಂಕಾರ ಜಾಸ್ತಿ’; ವಿಡಿಯೋ ಮೂಲಕ ಎಳೆ ಎಳೆಯಾಗಿ ವಿವರಿಸಿದ ಕಮಾಲ್​ ಆರ್.​ ಖಾನ್​

ಈ ಹಿಂದೆ ಅನೇಕ ಬಾರಿ ಸಲ್ಮಾನ್​ ಖಾನ್​ ವಿರುದ್ಧ ಕಮಾಲ್​ ಆರ್​. ಖಾನ್​ ಗುಡುಗಿದ್ದುಂಟು. ಆದರೆ ಈ ಬಾರಿ ಅವರು ಶಾರುಖ್​ ಖಾನ್​, ರಣವೀರ್​ ಸಿಂಗ್​, ಅಜಯ್​ ದೇವಗನ್​ ಮತ್ತು ಆಯುಷ್ಮಾನ್​ ಖುರಾನಾ ಅವರನ್ನು ಕುಟುಕಿದ್ದಾರೆ.

‘ಈ ನಟರಿಗೆ ಅಹಂಕಾರ ಜಾಸ್ತಿ’; ವಿಡಿಯೋ ಮೂಲಕ ಎಳೆ ಎಳೆಯಾಗಿ ವಿವರಿಸಿದ ಕಮಾಲ್​ ಆರ್.​ ಖಾನ್​
ಅಜಯ್​ ದೇವಗನ್​, ರಣವೀರ್​ ಸಿಂಗ್​, ಶಾರುಖ್​ ಖಾನ್​, ಆಯುಷ್ಮಾನ್​ ಖುರಾನಾ
TV9 Web
| Updated By: ಮದನ್​ ಕುಮಾರ್​

Updated on: Jan 10, 2022 | 8:02 AM

Share

ಸ್ಟಾರ್​ ಕಲಾವಿದರನ್ನು ಎಲ್ಲರೂ ಹೊಗಳುತ್ತಾರೆ. ಅವರನ್ನು ಟೀಕಿಸಿ, ದ್ವೇಷ ಕಟ್ಟಿಕೊಳ್ಳಲು ಯಾರೂ ಇಷ್ಟಪಡುವುದಿಲ್ಲ. ಆದರೆ ನಟ, ಸ್ವಯಂ ಘೋಷಿತ ವಿಮರ್ಶಕ ಕಮಾಲ್ ಆರ್​. ಖಾನ್​ ಅವರು ಎಲ್ಲರಿಗಿಂತ ಭಿನ್ನ. ಬಾಲಿವುಡ್​ನ ಅನೇಕ ಸ್ಟಾರ್​ ಕಲಾವಿದರನ್ನು ಅವರು ಎದುರು ಹಾಕಿಕೊಂಡಿದ್ದಾರೆ. ದೊಡ್ಡ ದೊಡ್ಡ ಸ್ಟಾರ್​ ಕಲಾವಿದರನ್ನು ಹಿಗ್ಗಾಮುಗ್ಗಾ ಟ್ರೋಲ್​ ಮಾಡುತ್ತಾರೆ. ಈಗ ಅವರೊಂದು ಹೊಸ ವಿಡಿಯೋ ಹರಿಬಿಟ್ಟಿದ್ದಾರೆ. ಅದರಲ್ಲಿ ಶಾರುಖ್​ ಖಾನ್​, ಅಜಯ್​ ದೇವಗನ್​, ರಣವೀರ್​ ಸಿಂಗ್​, ಜಾನ್​ ಅಬ್ರಾಹಂ ಮತ್ತು ಆಯುಷ್ಮಾನ್​ ಖುರಾನಾ ಅವರನ್ನು ಅಹಂಕಾರಿಗಳು ಎಂದು ಕರೆದಿದ್ದಾರೆ. ಸದ್ಯ ಈ ವಿಡಿಯೋ ವೈರಲ್​ ಆಗುತ್ತಿದೆ. ಈ ಎಲ್ಲ ನಟರ ಸೋತ ಸಿನಿಮಾಗಳನ್ನು ಕಮಾಲ್​ ಆರ್​. ಖಾನ್​ ಪಟ್ಟಿ ಮಾಡಿದ್ದಾರೆ.

ಈ ಹಿಂದೆ ಅನೇಕ ಬಾರಿ ಸಲ್ಮಾನ್​ ಖಾನ್​ ವಿರುದ್ಧ ಕಮಾಲ್​ ಆರ್​. ಖಾನ್​ ಗುಡುಗಿದ್ದುಂಟು. ಆದರೆ ಈ ಬಾರಿ ಅವರು ಸಲ್ಲು ಬಗ್ಗೆ ಮಾತನಾಡಿಲ್ಲ. ಇತರೆ ಸ್ಟಾರ್​ ನಟರನ್ನು ಅವರು ಕುಟುಕಿದ್ದಾರೆ. ಶಾರುಖ್​ ಖಾನ್​, ರಣವೀರ್​ ಸಿಂಗ್​, ಅಜಯ್​ ದೇವಗನ್​ ಮತ್ತು ಆಯುಷ್ಮಾನ್​ ಖುರಾನಾ ಅವರು ತಮ್ಮ ಸಿನಿಮಾ ಸೋತರೆ ಅದನ್ನು ಒಪ್ಪಿಕೊಳ್ಳುವ ಬದಲು ದುರಹಂಕಾರದ ಮಾತನಾಡುತ್ತಾರೆ ಎಂಬುದು ಕಮಾಲ್​ ಆರ್​. ಖಾನ್​ ಅಭಿಪ್ರಾಯ.

‘ಸತ್ಯಮೇವ ಜಯತೆ 2, ಚಂಡೀಗಡ್​ ಕರೇ ಆಶಿಖಿ, ಫ್ಯಾನ್​, 83, ಶಿವಾಯ್​ ಸಿನಿಮಾಗಳೆಲ್ಲ ಹೀನಾಯವಾಗಿ ಸೋತಿವೆ. ಆದರೆ ಈ ಸಿನಿಮಾಗಳಲ್ಲಿ ನಟಿಸಿರುವ ಸ್ಟಾರ್​ ಕಲಾವಿದರು ಅದನ್ನು ಒಪ್ಪಿಕೊಳ್ಳಲು ತಯಾರಿಲ್ಲ. ಬದಲಾಗಿ, ಈ ಚಿತ್ರಗಳನ್ನು ಮಾಸ್ಟರ್​ಪೀಸ್​ ಎಂದು ಅವರೇ ಕರೆದುಕೊಳ್ಳುತ್ತಾರೆ. ಜನರಿಗೆ ಈ ಸಿನಿಮಾಗಳು ಅರ್ಥವಾಗಿಲ್ಲ ಅಂತ ಹೇಳ್ತಾರೆ’ ಎಂದು ಕಮಾಲ್​ ಆರ್​. ಖಾನ್​ ಗುಡುಗಿದ್ದಾರೆ.

‘ಈ ಬಾಲಿವುಡ್​ನವರು ತಮ್ಮನ್ನು ತಾವು ಮಹಾನ್​ ಬುದ್ಧಿವಂತರು ಎಂದುಕೊಂಡಿದ್ದಾರೆ. ಜನರಿಗೆ ಅರ್ಥವಾಗುವಂತಹ ಸಿನಿಮಾ ಮಾಡಲಿಲ್ಲ ಅಂದಾದರೆ ಆ ಚಿತ್ರವನ್ನು ನೀವು ನಿಮ್ಮ ಮನೆಯವರಿಗಾಗಿ ಮಾಡಿದ್ದೀರಾ? ನೀವು ಜನರಿಗಾಗಿ ಸಿನಿಮಾ ಮಾಡುತ್ತೀರಿ. ಜನರಿಗೆ ಇಷ್ಟ ಆಗಿಲ್ಲ ಎಂದರೆ ಆ ಚಿತ್ರಗಳು ಸರಿಯಿಲ್ಲ ಎಂದೇ ಅರ್ಥ. ಜನರಿಗೆ ಅರ್ಥ ಆಗಿಲ್ಲ ಅಂತ ಹೇಳೋದು ನಿಮ್ಮ ದುರಹಂಕಾರ’ ಎಂದು ಕಮಾಲ್​ ಆರ್​. ಖಾನ್​ ಹೇಳಿದ್ದಾರೆ.

ಇದನ್ನೂ ಓದಿ:

ವಿದೇಶದಲ್ಲಿ ಶಾರುಖ್​ ಫ್ಯಾನ್​ ಅಂತ ಹೇಳಿಕೊಂಡ್ರೆ ಸಿಗುತ್ತೆ ವಿಶೇಷ ಗೌರವ; ಸಾಕ್ಷಿ ಸಮೇತ ವಿವರಿಸಿದ ಪ್ರೊಫೆಸರ್​

16 ದಿನಕ್ಕೆ 175 ಕೋಟಿ ರೂ. ಗಳಿಸಿದ ‘83’ ಚಿತ್ರ; ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್​ ಮಾಡಲು ವಿಫಲ

2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು