AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದುಡ್ಡಿನಿಂದ ಸೌಂದರ್ಯ ಪಡೆಯಬಹುದು’: ಮೌನಿ ರಾಯ್​ ಫೋಟೋ ತೋರಿಸಿ ಸಾಕ್ಷಿ ಸಮೇತ ವಿವರಿಸಿದ ಕಮಾಲ್ ಖಾನ್

ಮೌನಿ ರಾಯ್​ ಅವರಿಗೆ ಈಗ 36ರ ಪ್ರಾಯ. ಅವರು ಬಣ್ಣದ ಲೋಕಕ್ಕೆ ಕಾಲಿಟ್ಟು ಒಂದೂವರೆ ದಶಕ ಕಳೆದಿದೆ. ದಿನದಿಂದ ದಿನಕ್ಕೆ ಅವರ ಅಂದ ಹೆಚ್ಚುತ್ತಲೇ ಇದೆ.

‘ದುಡ್ಡಿನಿಂದ ಸೌಂದರ್ಯ ಪಡೆಯಬಹುದು’: ಮೌನಿ ರಾಯ್​ ಫೋಟೋ ತೋರಿಸಿ ಸಾಕ್ಷಿ ಸಮೇತ ವಿವರಿಸಿದ ಕಮಾಲ್ ಖಾನ್
ಮೌನಿ ರಾಯ್​
TV9 Web
| Edited By: |

Updated on: Oct 01, 2021 | 4:32 PM

Share

ಸಿನಿಮಾ ಮತ್ತು ಧಾರಾವಾಹಿಗಳ ಮೂಲಕ ನಟಿ ಮೌನಿ ರಾಯ್​ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿದೆ. ‘ಕೆಜಿಎಫ್​: ಚಾಪ್ಟರ್​ 1’ ಸಿನಿಮಾದ ಹಿಂದಿ ವರ್ಷನ್​ನಲ್ಲಿ ಅವರು ‘ಗಲಿ ಗಲಿ ಮೇ..’ ಹಾಡಿಗೆ ಹೆಜ್ಜೆ ಹಾಕಿದ್ದರು. ಈಗ ಅವರ ಕೈಯಲ್ಲಿ ಹಲವು ಸಿನಿಮಾ ಆಫರ್​ಗಳಿವೆ. ಈ ನಡುವೆ ಅವರ ಸೌಂದರ್ಯದ ಬಗ್ಗೆ ಸ್ವಯಂ ಘೋಷಿತ ವಿಮರ್ಶಕ ಕಮಾಲ್​ ಆರ್​. ಖಾನ್​ ಕಮೆಂಟ್​ ಮಾಡಿದ್ದಾರೆ. ಹಣದಿಂದ ಮೌನಿ ರಾಯ್​ ಅವರು ತಮ್ಮ ಲುಕ್​ ಬದಲಿಸಿಕೊಂಡಿದ್ದಾರೆ ಎಂಬುದು ಕಮಾಲ್​ ಖಾನ್​ ವಾದ. ಅದಕ್ಕೆ ಅವರು ಸಾಕ್ಷಿಯನ್ನೂ ನೀಡಿದ್ದಾರೆ.

ಮೌನಿ ರಾಯ್​ ಅವರಿಗೆ ಈಗ 36ರ ಪ್ರಾಯ. ಅವರು ಬಣ್ಣದ ಲೋಕಕ್ಕೆ ಕಾಲಿಟ್ಟು ಒಂದೂವರೆ ದಶಕ ಕಳೆದಿದೆ. ದಿನದಿಂದ ದಿನಕ್ಕೆ ಅವರ ಅಂದ ಹೆಚ್ಚುತ್ತಲೇ ಇದೆ. ಅನೇಕ ಬಾರಿ ಅವರ ಬಾಡಿ ಟ್ರಾನ್ಸ್​ಫಾರ್ಮೇಷನ್​ ಆಗಿರುವುದು ಅಭಿಮಾನಿಗಳ ಗಮನಕ್ಕೆ ಬಂದಿದೆ. ಅಲ್ಲದೇ ಅವರ ಮುಖದಲ್ಲೂ ಅನೇಕ ಬದಲಾವಣೆ ಆಗಿದೆ. ಹಾಗಾಗಿ ಮೌನಿ ಆಗಾಗ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿರಬಹುದು ಎಂಬ ಅನುಮಾನ ಹಲವರಿಗೆ ಇದೆ.

ಈ ಬಗ್ಗೆ ಮೌನಿ ಏನನ್ನೂ ಒಪ್ಪಿಕೊಂಡಿಲ್ಲ. ಅದೇ ವಿಚಾರ ಇಟ್ಟುಕೊಂಡು ಕಮಾಲ್ ಆರ್​. ಖಾನ್​ ಕಾಲೆಳೆದಿದ್ದಾರೆ. ಮೌನಿ ರಾಯ್​ ಅವರ ಹಲವು ಫೋಟೋಗಳನ್ನು ಒಟ್ಟಿಗೆ ಶೇರ್​ ಮಾಡಿಕೊಂಡಿರುವ ಅವರು ಆ ಫೋಟೋಗಳಲ್ಲಿನ ವ್ಯತ್ಯಾಸವನ್ನು ಗಮನಿಸುವಂತೆ ನೆಟ್ಟಿಗರಿಗೆ ಸೂಚಿಸಿದ್ದಾರೆ. ‘ಹಣದಿಂದ ಸೌಂದರ್ಯವನ್ನು ಬದಲಾಯಿಸಬಹುದು. ಮೌನಿ ರಾಯ್ ಆಗಾಗ ಬದಲಾಗುತ್ತಲೇ ಇದ್ದಾರೆ’ ಎಂದು ಆ ಫೋಟೋಗೆ ಕಮಾಲ್​ ಖಾನ್​ ಕ್ಯಾಪ್ಷನ್​ ನೀಡಿದ್ದಾರೆ. ಸದ್ಯ ಈ ಪೋಸ್ಟ್​ ವೈರಲ್​ ಆಗುತ್ತಿದೆ.

ಬಾಲಿವುಡ್​ನಲ್ಲಿ ಅನೇಕರನ್ನು ಕಮಾಲ್​ ಖಾನ್​ ಕೆಣಕುತ್ತಲೇ ಇರುತ್ತಾರೆ. ಆ ಮೂಲಕ ಸದಾ ಅವರು ವಿವಾದ ಮೈಮೇಲೆ ಎಳೆದುಕೊಳ್ಳುತ್ತಾರೆ. ಈ ಹಿಂದೆ ಸಲ್ಮಾನ್ ಖಾನ್​ ಮತ್ತು ಕಂಗನಾ ರಣಾವತ್​ ಬಗ್ಗೆಯೂ ಅವರು ಖಾರವಾಗಿ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ:

ಸಲ್ಮಾನ್ ಖಾನ್ ಜತೆ ನೃತ್ಯ ಮಾಡುತ್ತೀರಾ ಎಂದು ಕೇಳಿದ್ದಕ್ಕೆ ಇಲ್ಲವೆಂದ ನಟಿ ಮೌನಿ ರಾಯ್​; ವಿಡಿಯೋ ಭರ್ಜರಿ ವೈರಲ್​

ಕೆಜಿಎಫ್​ ಬೆಡಗಿಗೆ ಶೀಘ್ರವೇ ಮದುವೆ; ಬಾಯ್​ಫ್ರೆಂಡ್​ ಜತೆ ಇಟಲಿಯಲ್ಲಿ ವಿವಾಹ?

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?