AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pushpaka Vimana: ‘ಪುಷ್ಪಕ ವಿಮಾನ’ ಚಿತ್ರಕ್ಕೆ 35 ವರ್ಷ; ಭಾವನಾತ್ಮಕ ಪತ್ರ ಬರೆದ ಕಮಲ್ ಹಾಸನ್

ಹಲವು ಕಲಾವಿದರು ಚಾಲೆಂಜಿಂಗ್ ಪಾತ್ರಗಳನ್ನು ಮಾಡಲು ಇಷ್ಟಪಡುತ್ತಾರೆ. ಕಮಲ್ ಹಾಸನ್ ಕೂಡ ಇದಕ್ಕೆ ಹೊರತಾಗಿಲ್ಲ. ಅವರು ವೃತ್ತಿ ಜೀವನದಲ್ಲಿ ಹಲವು ಚಾಲೆಂಜಿಂಗ್ ಪಾತ್ರಗಳನ್ನು ಮಾಡಿ ತೋರಿಸಿದ್ದಾರೆ. ಆ ಪೈಕಿ ‘ಪುಷ್ಪಕ ವಿಮಾನ’ ಚಿತ್ರ ಕೂಡ ಒಂದು.

Pushpaka Vimana: ‘ಪುಷ್ಪಕ ವಿಮಾನ’ ಚಿತ್ರಕ್ಕೆ 35 ವರ್ಷ; ಭಾವನಾತ್ಮಕ ಪತ್ರ ಬರೆದ ಕಮಲ್ ಹಾಸನ್
ಪುಷ್ಪಕ ವಿಮಾನ
TV9 Web
| Edited By: |

Updated on: Nov 28, 2022 | 12:44 PM

Share

ನಟ ಕಮಲ್ ಹಾಸನ್ (Kamal Haasan) ನಟನೆಯ ‘ಪುಷ್ಪಕ ವಿಮಾನ’ ಹೊಸ ದಾಖಲೆ ಬರೆದಿತ್ತು. 1987ರಲ್ಲಿ ಮೂಡಿ ಬಂದ ಈ ಚಿತ್ರ ಹಲವು ಪ್ರಶಸ್ತಿಗಳನ್ನು ಗೆದ್ದಿತ್ತು. ಈ ಸಿನಿಮಾ ಮಾಡಿದ ದಾಖಲೆಗಳು ಹಲವು. ‘ಪುಷ್ಪಕ ವಿಮಾನ’ ಸಿನಿಮಾ (Pushpaka Vimana Movie) ಮೂಕಿ ಚಿತ್ರ. ಇಡೀ ಚಿತ್ರದಲ್ಲಿ ಒಂದೇ ಒಂದು ಮಾತು ಕೂಡ ಇರಲಿಲ್ಲ. ಈ ಸಿನಿಮಾ ತೆರೆಗೆ ಬಂದು ನವೆಂಬರ್ 27ಕ್ಕೆ 35 ವರ್ಷಗಳು ಕಳೆದಿವೆ. ಇದನ್ನು ಕಮಲ್ ಹಾಸನ್ ನೆನಪಿಸಿಕೊಂಡಿದ್ದಾರೆ. ಅವರ ವೃತ್ತಿ ಬದುಕನ್ನು ಮತ್ತೊಂದು ಎತ್ತರಕ್ಕೆ ಕರೆದುಕೊಂಡ ಹೋದ ಖ್ಯಾತಿ ಈ ಚಿತ್ರಕ್ಕೆ ಸಿಗುತ್ತದೆ.

ಹಲವು ಕಲಾವಿದರು ಚಾಲೆಂಜಿಂಗ್ ಪಾತ್ರಗಳನ್ನು ಮಾಡಲು ಇಷ್ಟಪಡುತ್ತಾರೆ. ಕಮಲ್ ಹಾಸನ್ ಕೂಡ ಇದಕ್ಕೆ ಹೊರತಾಗಿಲ್ಲ. ಅವರು ವೃತ್ತಿ ಜೀವನದಲ್ಲಿ ಹಲವು ಚಾಲೆಂಜಿಂಗ್ ಪಾತ್ರಗಳನ್ನು ಮಾಡಿ ತೋರಿಸಿದ್ದಾರೆ. ಆ ಪೈಕಿ ‘ಪುಷ್ಪಕ ವಿಮಾನ’ ಚಿತ್ರ ಕೂಡ ಒಂದು. ಈ ಸಿನಿಮಾ 1987ರ ನವೆಂಬರ್ 27ರಂದು ರಿಲೀಸ್ ಆಯಿತು. 35 ಲಕ್ಷ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾ 1 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿತ್ತು.

ಇದನ್ನೂ ಓದಿ
Image
Bigg Boss Elimination: ಬಿಗ್​ ಬಾಸ್​ನಲ್ಲಿ ದರ್ಶ್​ ಆಟ ಅಂತ್ಯ; 3ನೇ ವಾರದ ಎಲಿಮಿನೇಷನ್​ನಲ್ಲಿ ಮಯೂರಿ ಸೇಫ್​
Image
BBK9: ಬಿಗ್​ ಬಾಸ್​ ಮೇಲೆ ಮ್ಯಾಚ್​ ಫಿಕ್ಸಿಂಗ್​ ಆರೋಪ; ಗುರೂಜಿ ವಿರುದ್ಧ ಗುಡುಗಿದ ಸುದೀಪ್​
Image
BBK9: ಬಿಗ್​ ಬಾಸ್​ 2ನೇ ವಾರ ನವಾಜ್​ ಎಲಿಮಿನೇಟ್​; ದೊಡ್ಮನೆಯಲ್ಲಿ ನಡೆಯಲಿಲ್ಲ ಪ್ರಾಸದ ಆಟ
Image
BBK9: ಬಿಗ್​ ಬಾಸ್​ನಿಂದ ಐಶ್ವರ್ಯಾ ಪಿಸ್ಸೆ ಎಲಿಮಿನೇಟ್​; ಒಂದೇ ವಾರಕ್ಕೆ ಮುಗಿಯಿತು ದೊಡ್ಮನೆ ಆಟ

ಈ ಸಿನಿಮಾ ಕನ್ನಡದಲ್ಲಿ ‘ಪುಷ್ಪಕ ವಿಮಾನ’ ಹೆಸರಿನಲ್ಲಿ ರಿಲೀಸ್ ಆಯಿತು. ಉತ್ತರ ಭಾರತದಲ್ಲಿ ‘ಪುಷ್ಪಕ್’ ಹೆಸರಿನಲ್ಲಿ ಚಿತ್ರ ಬಿಡುಗಡೆ ಕಂಡಿತ್ತು. ಅಲ್ಲಿಯೂ ಸಿನಿಮಾ ಮೆಚ್ಚುಗೆ ಪಡೆದಿದೆ. ಅಮಲಾ ಅಕ್ಕಿನೇನಿ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದರು. ಕಮಲ್ ಹಾಸನ್ ಅವರು ಸಿನಿಮಾ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಈ ಚಿತ್ರವನ್ನು ನಿರ್ದೇಶನ ಮಾಡಿದ ಸಿಂಗೀತಂ ಶ್ರೀನಿವಾಸ ರಾವ್ ಅವರ ಕೆಲಸಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ಸದ್ಯಕ್ಕಂತೂ ಸೆಟ್ಟೇರಲ್ಲ ಯಶ್​-ಶಂಕರ್ ಸಿನಿಮಾ; ಕಮಲ್ ಹಾಸನ್ ಟ್ವೀಟ್​ನಲ್ಲೇ ಅಡಗಿದೆ ಉತ್ತರ

ಕಮಲ್ ಹಾಸನ್ ಅವರು ಇತ್ತೀಚೆಗೆ ಚೆನ್ನೈನ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಸಾಮಾನ್ಯ ಆರೋಗ್ಯ ತಪಾಸಣೆಗೆ ಆಸ್ಪತ್ರೆಗೆ ತೆರಳಿದ್ದರು ಎನ್ನಲಾಗಿದೆ. ನಂತರ ಒಂದೇ ದಿನದಲ್ಲಿ ಅವರು ಆಸ್ಪತ್ರೆಯಿಂದ ಮರಳಿದ್ದರು. ‘ಇಂಡಿಯನ್ 2’ ಸಿನಿಮಾ ಕೆಲಸಗಳಲ್ಲಿ ಕಮಲ್ ಹಾಸನ್ ಬ್ಯುಸಿ ಆಗಿದ್ದಾರೆ. ಶಂಕರ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಈ ಮೊದಲು ತೆರೆಗೆ ಬಂದಿದ್ದ ‘ಇಂಡಿಯನ್’ ಸಿನಿಮಾ ಸೂಪರ್ ಹಿಟ್ ಆಗಿತ್ತು. ಹಲವು ವರ್ಷಗಳ ಬಳಿಕ ‘ಇಂಡಿಯನ್ 2’ ಸಿನಿಮಾ ಸಿದ್ಧಗೊಳ್ಳುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ