AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಾಕ್ಸ್​ ಆಫೀಸ್​ನಲ್ಲಿ 200 ಕೋಟಿ ಸುಟ್ಟು ಬೂದಿಯಾಗಲಿದೆ’; ಆಲಿಯಾ ಭಟ್​ ಸಿನಿಮಾ ಬಗ್ಗೆ ಕಂಗನಾ ಟೀಕೆ

ಆಲಿಯಾ ಭಟ್​ ಹೆಸರು ಕೇಳಿದರೆ ಕಂಗನಾ ರಣಾವತ್​ ಉರಿದುಕೊಳ್ಳುತ್ತಾರೆ. ಆಲಿಯಾ ಖ್ಯಾತ ನಿರ್ದೇಶಕ ಮಹೇಶ್​ ಭಟ್​ ಅವರ ಮಗಳು. ಮಹೇಶ್​ ಅವರು ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ ಎನ್ನುವ ಕಾರಣಕ್ಕೆ ಆಲಿಯಾ ಬಾಲಿವುಡ್​ ಹಾದಿ ಸುಗಮವಾಗಿತ್ತು.

‘ಬಾಕ್ಸ್​ ಆಫೀಸ್​ನಲ್ಲಿ 200 ಕೋಟಿ ಸುಟ್ಟು ಬೂದಿಯಾಗಲಿದೆ’; ಆಲಿಯಾ ಭಟ್​ ಸಿನಿಮಾ ಬಗ್ಗೆ ಕಂಗನಾ ಟೀಕೆ
ಕಂಗನಾ-ಆಲಿಯಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Feb 20, 2022 | 4:15 PM

ಆಲಿಯಾ ಭಟ್​​ ನಟನೆಯ ‘ಗಂಗೂಬಾಯಿ ಕಾಠಿಯಾವಾಡಿ’ (Gangubai Kathiawadi) ಸಿನಿಮಾ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟಿದೆ. ಆಲಿಯಾ ಭಟ್​ ಈ ಚಿತ್ರದಲ್ಲಿ ಗಂಗೂಬಾಯಿ ಆಗಿ ಕಾಣಿಸಿಕೊಂಡಿದ್ದಾರೆ. ಸಂಜಯ್​ ಲೀಲಾ ಬನ್ಸಾಲಿ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ರಿಲೀಸ್​ಗೂ ಮೊದಲೇ ಕೆಲ ವಿವಾದಗಳನ್ನು ಹುಟ್ಟುಹಾಕಿದೆ. ಈ ಮಧ್ಯೆ ಆಲಿಯಾ ಭಟ್ (Alia Bhatt)​ ಹಾಗೂ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ ಬಗ್ಗೆ ನಟಿ ಕಂಗನಾ ರಣಾವತ್​ ಅವರು ಕಟು ಟೀಕೆ ಮುಂದುವರಿಸಿದ್ದಾರೆ. ಈ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಸೋಲಲಿದೆ ಎಂದು ಕಂಗನಾ ಭವಿಷ್ಯ ನುಡಿದಿದ್ದಾರೆ.

ಆಲಿಯಾ ಭಟ್​ ಹೆಸರು ಕೇಳಿದರೆ ಕಂಗನಾ ರಣಾವತ್​ ಉರಿದುಕೊಳ್ಳುತ್ತಾರೆ. ಆಲಿಯಾ ಖ್ಯಾತ ನಿರ್ದೇಶಕ ಮಹೇಶ್​ ಭಟ್​ ಅವರ ಮಗಳು. ಮಹೇಶ್​ ಅವರು ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ ಎನ್ನುವ ಕಾರಣಕ್ಕೆ ಆಲಿಯಾ ಬಾಲಿವುಡ್​ ಹಾದಿ ಸುಗಮವಾಗಿತ್ತು. ‘ಧರ್ಮ ಪ್ರೊಡಕ್ಷನ್​’ ನಿರ್ಮಾಣದ ಸಿನಿಮಾ ಮೂಲಕ ಆಲಿಯಾ ಬಾಲಿವುಡ್​ಗೆ ಕಾಲಿಟ್ಟರು. ಅವರು ನಟಿಸಿದ ಹಲವು ಸಿನಿಮಾಗಳಿಗೆ ಕರಣ್​ ಜೋಹರ್​ ಬಂಡವಾಳ ಹೂಡಿದ್ದಾರೆ. ಈ ವಿಚಾರದಲ್ಲಿ ಆಲಿಯಾ ವಿರುದ್ಧ ಕಂಗನಾ ಈ ಮೊದಲಿನಿಂದಲೂ ದ್ವೇಷ ಸಾಧಿಸುತ್ತಾ ಬರುತ್ತಿದ್ದಾರೆ. ಈಗ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ ವಿರುದ್ಧ ಕಿಡಿಕಾರಿದ್ದಾರೆ. ಈ ಸಿನಿಮಾ ದೊಡ್ಡ ಫ್ಲಾಪ್​ ಆಗಲಿದೆ ಅನ್ನೋದು ಕಂಗನಾ ಅಭಿಪ್ರಾಯ.

‘ಈ ಶುಕ್ರವಾರ ಬಾಕ್ಸ್ ಆಫೀಸ್‌ನಲ್ಲಿ 200 ಕೋಟಿ ರೂಪಾಯಿ ಸುಟ್ಟು ಬೂದಿಯಾಗಲಿದೆ. ಸಿನಿಮಾ ಇಂಡಸ್ಟ್ರಿಯ ಸಂಸ್ಕೃತಿಯನ್ನು ತಂದೆ (ಮಹೇಶ್​ ಭಟ್​) ಹಾಳು ಮಾಡಿದ್ದಾರೆ. ಅವರ ಸಿನಿಮಾಗಳನ್ನು ಜನರು ನೋಡುವುದನ್ನು ನಿಲ್ಲಿಸಬೇಕು. ಈ ಶುಕ್ರವಾರ ರಿಲೀಸ್​ ಆಗುತ್ತಿರುವ ಸಿನಿಮಾ ಕೂಡ ಸೋಲು ಕಾಣಲಿದೆ’ ಎಂದಿದ್ದಾರೆ ಕಂಗನಾ.

ವೈರಲ್​ ಆಗಿದ್ದ ವಿಡಿಯೋಗೆ ಕಂಗನಾ ಟೀಕೆ: 

ಕಿಯಾರಾ ಖನ್ನಾ ಎಂಬ ಬಾಲಕಿ ನೋಡೋಕೆ ಆಲಿಯಾ ಭಟ್​ ರೀತಿಯಲ್ಲಿದ್ದಾಳೆ. ಅವಳದ್ದು ಇನ್ನೂ ಚಿಕ್ಕ ವಯಸ್ಸು. ಆಲಿಯಾ ಭಟ್​ ಹಂಚಿಕೊಂಡ ವಿಡಿಯೋ ಒಂದಕ್ಕೆ ರೀಲ್ಸ್ ಮಾಡಿದ್ದಾಳೆ. ಅಷ್ಟೇ ಅಲ್ಲ, ಈ ದೃಶ್ಯದಲ್ಲಿ ಆಲಿಯಾ ಬಾಯಿಗೆ ಬೀಡಿ ಇಟ್ಟಂತೆ ಇವಳು ಕೂಡ ಬಾಯಿಗೆ ಬೀಡಿ ಇಟ್ಟುಕೊಂಡಿದ್ದಾಳೆ. ಈ ವಿಡಿಯೋ ಸಖತ್​ ವೈರಲ್​ ಆಗುತ್ತಿದೆ. ಅನೇಕರು ವಿಡಿಯೋಗೆ ಮೆಚ್ಚುಗೆ ಸೂಚಿಸಿದ್ದರು. ಆದರೆ, ಈ ಬಗ್ಗೆ ಕಂಗನಾ ಅಸಮಾಧಾನ ಹೊರಹಾಕಿದ್ದರು.

ಗಂಗೂಬಾಯಿ ವೇಶ್ಯೆ ಆಗಿರುತ್ತಾಳೆ. ನಂತರ ಅವರು ಕಾಮಾಟಿಪುರದ ಡಾನ್​ ಆಗಿ ಬೆಳೆಯುತ್ತಾಳೆ. ಇದೇ ಕಥೆ ಆಧರಿಸಿ ಸಿನಿಮಾ ಮಾಡಲಾಗಿದೆ. ಈ ರೀತಿಯ ಕಥೆಯುಳ್ಳ ಸಿನಿಮಾಗಳ ಡೈಲಾಗ್​ಗಳನ್ನು ಬಾಲಕಿ ಕಿಯಾರಾ ಕಾಪಿ ಮಾಡಿರುವುದಕ್ಕೆ ಕಂಗನಾ ಅಸಮಾಧಾನ ಹೊರಹಾಕಿದ್ದಾರೆ.  ‘ಚಿಕ್ಕ ಮಕ್ಕಳು ಬಾಯಲ್ಲಿ ಬೀಡಿ ಇಟ್ಟುಕೊಂಡು, ವೇಶ್ಯೆ ಪಾತ್ರವನ್ನು ಅನುಕರಣೆ ಮಾಡುವುದು ಎಷ್ಟು ಸರಿ? ಇಷ್ಟು ಸಣ್ಣ ವಯಸ್ಸಿಗೆ ಅವಳ ಮನಸ್ಸಿನಲ್ಲಿ ಈ ರೀತಿ ವಿಚಾರ ತುಂಬುವುದು ಸರಿಯೇ? ಹಲವು ಚಿಕ್ಕಮಕ್ಕಳು ಇವರನ್ನೇ ಹಿಂಬಾಲಿಸುತ್ತಿರುತ್ತಾರೆ’ ಎಂದು ಕಂಗನಾ ಆತಂಕ ಹೊರ ಹಾಕಿದ್ದರು. ಈ ಪೋಸ್ಟ್​​ಅನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿಗೆ ಟ್ಯಾಗ್ ಮಾಡಿದ್ದರು.

ಇದನ್ನೂ ಓದಿ: 47ರ ಪ್ರಾಯದ ನಟನಿಗೆ 20ರ ಹರೆಯದ ನಟಿ ಜೋಡಿ; ಇದು ಸರಿ ಎಂದು ಸಮರ್ಥಿಸಿಕೊಂಡ ಕಂಗನಾ ರಣಾವತ್​

‘ಎಷ್ಟೇ ಮೈ ತೋರಿಸಿದರೂ ಈ ಕೆಟ್ಟ ಸಿನಿಮಾ ಗೆಲ್ಲಲ್ಲ’; ದೀಪಿಕಾ ಚಿತ್ರದ ಬಗ್ಗೆ ಕಂಗನಾ ಖಡಕ್​ ವಿಮರ್ಶೆ

Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?
Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ