AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲಿಯಾ ಭಟ್​ ಅನುಕರಣೆ ಮಾಡಿದ ಬಾಲಕಿ; ಕಂಗನಾ ಅಸಮಾಧಾನಕ್ಕೆ ಕಾರಣವಾಯ್ತು ಆ ವಿಡಿಯೋ

ಕಿಯಾರಾ ಖನ್ನಾ ಅವರು ನೋಡೋಕೆ ಆಲಿಯಾ ಭಟ್​ ರೀತಿಯಲ್ಲಿದ್ದಾಳೆ. ಅವಳದ್ದು ಇನ್ನೂ ಚಿಕ್ಕ ವಯಸ್ಸು. ಆಲಿಯಾ ಭಟ್​ ಹಂಚಿಕೊಂಡ ವಿಡಿಯೋ ಒಂದಕ್ಕೆ ರೀಲ್ಸ್ ಮಾಡಿದ್ದಾಳೆ. ಅಷ್ಟೇ ಅಲ್ಲ, ಈ ದೃಶ್ಯದಲ್ಲಿ ಆಲಿಯಾ ಬಾಯಿಗೆ ಬೀಡಿ ಇಟ್ಟಂತೆ ಇವಳು ಕೂಡ ಬಾಯಿಗೆ ಬೀಡಿ ಇಟ್ಟುಕೊಂಡಿದ್ದಾಳೆ.

ಆಲಿಯಾ ಭಟ್​ ಅನುಕರಣೆ ಮಾಡಿದ ಬಾಲಕಿ; ಕಂಗನಾ ಅಸಮಾಧಾನಕ್ಕೆ ಕಾರಣವಾಯ್ತು ಆ ವಿಡಿಯೋ
ಕಿಯಾರಾ-ಆಲಿಯಾ-ಕಂಗನಾ
TV9 Web
| Edited By: |

Updated on:Feb 14, 2022 | 7:33 PM

Share

ಆಲಿಯಾ ಭಟ್ (Alia Bhatt)​ ನಟನೆಯ ‘ಗಂಗೂಬಾಯಿ ಕಾಠಿಯಾವಾಡಿ’ (Gangubai Kathiawadi) ಸಿನಿಮಾ ದೊಡ್ಡ ಮಟ್ಟದಲ್ಲಿ ಹೈಪ್​ ಪಡೆದುಕೊಂಡಿದೆ. ಈ ಚಿತ್ರ ಫೆಬ್ರವರಿ 25ರಂದು ತೆರೆಗೆ ಬರುತ್ತಿದೆ. ಸದ್ಯ ಆಲಿಯಾ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಹಲವು ವಾಹಿನಿಗಳಿಗೆ ಅವರು ಸಂದರ್ಶನ ನೀಡುತ್ತಿದ್ದಾರೆ. ಈ ವೇಳೆ ಸಿನಿಮಾ ಬಗ್ಗೆ ಹಲವು ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಸಿನಿಮಾದಲ್ಲಿ ಬರುವ ಡೈಲಾಗ್​ ಕ್ಲಿಪ್​ ಒಂದನ್ನು ಆಲಿಯಾ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೋ ಭರ್ಜರಿ ವೈರಲ್​ ಆಗುತ್ತಿದೆ. ಈಗ ಚಿಕ್ಕ ಬಾಲಕಿ ಒಬ್ಬಳು ಆಲಿಯಾ ಅವರನ್ನು ಅನುಕರಣೆ ಮಾಡಿದ್ದಾಳೆ. ಇದಕ್ಕೆ ಬಾಲಿವುಡ್​ ನಟಿ ಕಂಗನಾ ರಣಾವತ್ (Kangana Ranaut)​ ಟೀಕೆ ಮಾಡಿದ್ದಾರೆ.

ಕಿಯಾರಾ ಖನ್ನಾ ಎಂಬ ಬಾಲಕಿ ನೋಡೋಕೆ ಆಲಿಯಾ ಭಟ್​ ರೀತಿಯಲ್ಲಿದ್ದಾಳೆ. ಅವಳದ್ದು ಇನ್ನೂ ಚಿಕ್ಕ ವಯಸ್ಸು. ಆಲಿಯಾ ಭಟ್​ ಹಂಚಿಕೊಂಡ ವಿಡಿಯೋ ಒಂದಕ್ಕೆ ರೀಲ್ಸ್ ಮಾಡಿದ್ದಾಳೆ. ಅಷ್ಟೇ ಅಲ್ಲ, ಈ ದೃಶ್ಯದಲ್ಲಿ ಆಲಿಯಾ ಬಾಯಿಗೆ ಬೀಡಿ ಇಟ್ಟಂತೆ ಇವಳು ಕೂಡ ಬಾಯಿಗೆ ಬೀಡಿ ಇಟ್ಟುಕೊಂಡಿದ್ದಾಳೆ. ಈ ವಿಡಿಯೋ ಸಖತ್​ ವೈರಲ್​ ಆಗುತ್ತಿದೆ. ಅನೇಕರು ವಿಡಿಯೋಗೆ ಮೆಚ್ಚುಗೆ ಸೂಚಿಸಿದ್ದರು. ಆದರೆ, ಈ ಬಗ್ಗೆ ಕಂಗನಾ ಅಸಮಾಧಾನ ಹೊರಹಾಕಿದ್ದಾರೆ.

ಗಂಗೂಬಾಯಿ ವೇಶ್ಯೆ ಆಗಿರುತ್ತಾಳೆ. ನಂತರ ಅವರು ಕಾಮಾಟಿಪುರದ ಡಾನ್​ ಆಗಿ ಬೆಳೆಯುತ್ತಾಳೆ. ಇದೇ ಕಥೆ ಆಧರಿಸಿ ಸಿನಿಮಾ ಮಾಡಲಾಗಿದೆ. ಈ ರೀತಿಯ ಕಥೆಯುಳ್ಳ ಸಿನಿಮಾಗಳ ಡೈಲಾಗ್​ಗಳನ್ನು ಬಾಲಕಿ ಕಿಯಾರಾ ಕಾಪಿ ಮಾಡಿರುವುದಕ್ಕೆ ಕಂಗನಾ ಅಸಮಾಧಾನ ಹೊರಹಾಕಿದ್ದಾರೆ.  ‘ಚಿಕ್ಕ ಮಕ್ಕಳು ಬಾಯಲ್ಲಿ ಬೀಡಿ ಇಟ್ಟುಕೊಂಡು, ವೇಶ್ಯೆ ಪಾತ್ರವನ್ನು ಅನುಕರಣೆ ಮಾಡುವುದು ಎಷ್ಟು ಸರಿ? ಇಷ್ಟು ಸಣ್ಣ ವಯಸ್ಸಿಗೆ ಅವಳ ಮನಸ್ಸಿನಲ್ಲಿ ಈ ರೀತಿ ವಿಚಾರ ತುಂಬುವುದು ಸರಿಯೇ? ಹಲವು ಚಿಕ್ಕಮಕ್ಕಳು ಇವರನ್ನೇ ಹಿಂಬಾಲಿಸುತ್ತಿರುತ್ತಾರೆ’ ಎಂದು ಕಂಗನಾ ಆತಂಕ ಹೊರ ಹಾಕಿದ್ದಾರೆ. ಈ ಪೋಸ್ಟ್​​ಅನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿಗೆ ಟ್ಯಾಗ್ ಮಾಡಿದ್ದಾರೆ.

ದೀಪಿಕಾ ಸಿನಿಮಾ ಟೀಕಿಸಿದ್ದ ಕಂಗನಾ:

ದೀಪಿಕಾ ನಟನೆಯ ‘ಗೆಹರಾಯಿಯಾ’ ಸಿನಿಮಾ ಒಟಿಟಿಯಲ್ಲಿ ಬಿಡುಗಡೆಯಾಗಿದೆ. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವರು ಈ ಸಿನಿಮಾವನ್ನು ಮೆಚ್ಚಿಕೊಂಡಿದ್ದಾರೆ. ಆದರೆ ಬೋಲ್ಡ್​ ದೃಶ್ಯಗಳು ಇವೆ ಎಂಬ ಕಾರಣಕ್ಕೆ ಕೆಲವರು ‘ಗೆಹರಾಯಿಯಾ’ ಸಿನಿಮಾ ಬಗ್ಗೆ ನೆಗೆಟಿವ್​ ಕಮೆಂಟ್​ ಮಾಡುತ್ತಿದ್ದಾರೆ. ಕಂಗನಾ ರಣಾವತ್​ ಕೂಡ ‘ಗೆಹರಾಯಿಯಾ’ ಸಿನಿಮಾವನ್ನು ಟೀಕಿಸಿದ್ದರು. ಅದು ಕೂಡ ಖಾರದ ಮಾತುಗಳಲ್ಲಿ. ‘ಇದೊಂದು ಕೆಟ್ಟ ಸಿನಿಮಾ’ ಎಂದು ಅವರು ಹೇಳಿದ್ದರು.

‘ನಾನೂ ಕೂಡ ಈ ಕಾಲದವಳು. ಈ ಬಗೆಯ ರೊಮ್ಯಾನ್ಸ್​ ಅನ್ನು ಗುರುತಿಸಿ, ಅರ್ಥ ಮಾಡಿಕೊಳ್ಳಬಲ್ಲೆ. ಹೊಸ ಯುಗದ ಸಿನಿಮಾ, ನಗರ ಪ್ರದೇಶದ ಸಿನಿಮಾ ಎಂಬ ಹೆಸರಿನಲ್ಲಿ ತ್ಯಾಜ್ಯವನ್ನೆಲ್ಲ ಮಾರಾಟ ಮಾಡಬೇಡಿ. ಕೆಟ್ಟ ಸಿನಿಮಾ ಯಾವಾಗಲೂ ಕೆಟ್ಟ ಸಿನಿಮಾವೇ ಆಗಿರುತ್ತದೆ. ಎಷ್ಟೇ ಪ್ರಮಾಣದಲ್ಲಿ ಅಶ್ಲೀಲತೆ ಮತ್ತು ಮೈ ತೋರಿಸಿದರೂ ಈ ಸಿನಿಮಾವನ್ನು ಗೆಲ್ಲಿಸಲು ಸಾಧ್ಯವಿಲ್ಲ. ಇದು ಬೇಸಿಕ್​ ಸತ್ಯ. ಯಾವುದೇ ಆಳವಾದ (ಗೆಹರಾಯಿಯಾ) ವಿಷಯ ಅಲ್ಲ’ ಎಂದು ಕಂಗನಾ ರಣಾವತ್​ ಬರೆದುಕೊಂಡಿದ್ದರು.

ಇದನ್ನೂ ಓದಿ: Kangana Ranaut: ‘ನಿಮ್ಮನ್ನು ಬಂಧಿಸಿಕೊಳ್ಳಬೇಡಿ, ಸ್ವತಂತ್ರರಾಗುವತ್ತ ಯೋಚಿಸಿ’; ಹಿಜಾಬ್ ಪ್ರಕರಣದ ಕುರಿತು ಕಂಗನಾ ಪ್ರತಿಕ್ರಿಯೆ

47ರ ಪ್ರಾಯದ ನಟನಿಗೆ 20ರ ಹರೆಯದ ನಟಿ ಜೋಡಿ; ಇದು ಸರಿ ಎಂದು ಸಮರ್ಥಿಸಿಕೊಂಡ ಕಂಗನಾ ರಣಾವತ್​

 

Published On - 7:10 pm, Mon, 14 February 22

ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು