ಇಂದಿರಾ ಗಾಂಧಿ ವಿರುದ್ಧವಾಗಿದೆಯಾ ‘ಎಮರ್ಜೆನ್ಸಿ’ ಸಿನಿಮಾ? ಉತ್ತರಿಸಿದ ನಿರ್ದೇಶಕಿ, ನಟಿ ಕಂಗನಾ

|

Updated on: Sep 20, 2023 | 8:01 AM

ಕಂಗನಾ ರಣಾವತ್​ ಅವರು ‘ಎಮರ್ಜೆನ್ಸಿ’ ಸಿನಿಮಾದಲ್ಲಿ ಇಂದಿರಾ ಗಾಂಧಿ ಮತ್ತು ಕಾಂಗ್ರೆಸ್​ ಪಕ್ಷವನ್ನು ಯಾವ ರೀತಿ ತೋರಿಸುತ್ತಾರೆ ಎಂಬ ಕುತೂಹಲ ಎಲ್ಲರಿಗೂ ಇದೆ. ಸಿನಿಮಾದ ಬಿಡುಗಡೆಗೂ ಮುನ್ನವೇ ಕಂಗನಾ ಅವರು ಆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಆ ಮೂಲಕ ಸಿನಿಮಾ ಬಗ್ಗೆ ಅವರು ಇನ್ನಷ್ಟು ಕುತೂಹಲ ಹೆಚ್ಚುವಂತೆ ಮಾಡಿದ್ದಾರೆ.

ಇಂದಿರಾ ಗಾಂಧಿ ವಿರುದ್ಧವಾಗಿದೆಯಾ ‘ಎಮರ್ಜೆನ್ಸಿ’ ಸಿನಿಮಾ? ಉತ್ತರಿಸಿದ ನಿರ್ದೇಶಕಿ, ನಟಿ ಕಂಗನಾ
ಕಂಗನಾ ರಣಾವತ್​
Follow us on

ನಟಿ ಕಂಗನಾ ರಣಾವತ್​ (Kangana Ranaut) ಅವರು ನಿರ್ದೇಶನದಲ್ಲೂ ಸಕ್ರಿಯರಾಗಿದ್ದಾರೆ. ಅವರ ನಿರ್ದೇಶನದಲ್ಲಿ ‘ಎಮರ್ಜೆನ್ಸಿ’ ಸಿನಿಮಾ (Emergency Movie) ಮೂಡಿಬರುತ್ತಿದೆ. ಈ ಸಿನಿಮಾದಲ್ಲಿ ಅವರು ಇಂದಿರಾ ಗಾಂಧಿ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಈ ಚಿತ್ರಕ್ಕೆ ಕೊನೇ ಹಂತದ ಕೆಲಸಗಳು ನಡೆಯುತ್ತಿವೆ. ಚಿತ್ರದ ಬಿಡುಗಡೆ ದಿನಾಂಕ ಹತ್ತಿರ ಆಗುತ್ತಿರುವ ಈ ಸಮಯದಲ್ಲಿ ಕೆಲವು ಪ್ರಶ್ನೆಗಳು ಉದ್ಭವ ಆಗಿವೆ. ‘ಎಮರ್ಜೆನ್ಸಿ’ ಸಿನಿಮಾದಲ್ಲಿ ಇಂದಿರಾ ಗಾಂಧಿ (Indira Gandhi) ಹಾಗೂ ಕಾಂಗ್ರೆಸ್​ ಪಕ್ಷವನ್ನು ಕೆಟ್ಟದಾಗಿ ಬಿಂಬಿಸಲಾಗಿದೆಯೇ ಎಂಬ ಅನುಮಾನ ಕೆಲವರಲ್ಲಿ ಮೂಡಿದೆ. ಅದಕ್ಕೆ ಕಂಗನಾ ರಣಾವತ್​ ಅವರು ನೇರವಾಗಿ ಉತ್ತರಿಸಿದ್ದಾರೆ. ಯಾವುದೇ ರಾಜಕೀಯ ಪಕ್ಷದ ಪರವಾಗಿ ಈ ಸಿನಿಮಾವನ್ನು ಮಾಡಲಾಗಿಲ್ಲ ಎಂದು ಕಂಗನಾ ಹೇಳಿದ್ದಾರೆ.

ಕಂಗನಾ ರಣಾವತ್​ ಅವರು ಮೊದಲಿನಿಂದಲೂ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಬೆಂಬಲಿಸುತ್ತಾ ಬಂದಿದ್ದಾರೆ. ಹಲವು ಸಂದರ್ಭದಲ್ಲಿ ಅವರು ಮೋದಿಯನ್ನು ಹೊಗಳಿದ್ದುಂಟು. ಹಾಗಾಗಿ ಅವರು ‘ಎಮರ್ಜೆನ್ಸಿ’ ಸಿನಿಮಾದಲ್ಲಿ ಇಂದಿರಾ ಗಾಂಧಿ ಮತ್ತು ಕಾಂಗ್ರೆಸ್​ ಪಕ್ಷವನ್ನು ಯಾವ ರೀತಿ ತೋರಿಸುತ್ತಾರೆ ಎಂಬ ಕುತೂಹಲ ಎಲ್ಲರಿಗೂ ಇದೆ. ಸಿನಿಮಾದ ಬಿಡುಗಡೆಗೂ ಮುನ್ನವೇ ಕಂಗನಾ ಅವರು ಆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಆ ಮೂಲಕ ಸಿನಿಮಾ ಬಗ್ಗೆ ಅವರು ಇನ್ನಷ್ಟು ಕುತೂಹಲ ಹೆಚ್ಚುವಂತೆ ಮಾಡಿದ್ದಾರೆ.

ಇದನ್ನೂ ಓದಿ: ಪದೇಪದೇ ಕಿಡಿಕಾರುವ ಕಂಗನಾಗೂ ಪ್ರೀತಿ ತೋರಿದ ಕರಣ್​ ಜೋಹರ್​; ‘ಎಮರ್ಜೆನ್ಸಿ’ ನೋಡಲು ಕಾತರ

ಮಾಧ್ಯಮಗಳಿಗೆ ನೀಡಿದ ಸಂದರ್ಶನದಲ್ಲಿ ಕಂಗನಾ ರಣಾವತ್​ ಅವರು ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ‘ಸಿನಿಮಾ ಹೇಗಿದೆ ಅಂತ ನೀವೇ ನೋಡಿ ಹೇಳಿ. ಈ ಚಿತ್ರ ಎಲೆಕ್ಷನ್​ ಸಂದರ್ಭದಲ್ಲಿ ಬಿಡುಗಡೆ ಆಗುತ್ತೋ ಇಲ್ಲವೋ ಎಂಬ ಬಗ್ಗೆ ಖಚಿತತೆ ಇಲ್ಲ. ಯಾವುದೇ ಚುನಾವಣೆ ಮತ್ತು ರಾಜಕೀಯ ಪಕ್ಷಕ್ಕೆ ಈ ಸಿನಿಮಾ ಸಂಬಂಧಿಸಿಲ್ಲ. ಇಂದಿರಾ ಗಾಂಧಿ ಅವರಿಗೆ ಈ ಸಿನಿಮಾ ಗೌರವ ಸಲ್ಲಿಸುತ್ತದೆ. ಇದು ಅವರ ಜೀವನದ ಕಥೆ. ಅವರು ಮಾಡಿದ ಒಳ್ಳೆಯದು, ಕೆಟ್ಟದ್ದು ಎಲ್ಲವೂ ಇದರಲ್ಲಿ ಇದೆ. ಈ ಚಿತ್ರದಲ್ಲಿ ನಾನು ಯಾವುದೋ ಪಕ್ಷದ ಪರವಾಗಿ ತೋರಿಸುತ್ತೇನೆ ಎಂದು ಈಗಲೇ ಊಹಿಸಿಕೊಳ್ಳುವುದು ಸರಿಯಲ್ಲ’ ಎಂದು ಕಂಗನಾ ರಣಾವತ್​ ಹೇಳಿದ್ದಾರೆ.

ಇದನ್ನೂ ಓದಿ: ಕಂಗನಾ ‘ಎಮರ್ಜೆನ್ಸಿ’ ಚಿತ್ರ ಬಿಡುಗಡೆ ಮಾಡುವುದಕ್ಕೂ ಮುನ್ನ ಬರ್ತಿದೆ ತುರ್ತು ಪರಿಸ್ಥಿತಿ ಕುರಿತ ಮತ್ತೊಂದು ಸಿನಿಮಾ

ಎಲ್ಲವೂ ಅಂದುಕೊಂಡಂತೆ ನಡೆದರೆ, ನವೆಂಬರ್​ 24ರಂದು ‘ಎಮರ್ಜೆನ್ಸಿ’ ಸಿನಿಮಾ ಬಿಡುಗಡೆ ಆಗಲಿದೆ. ನಟನೆ ಮತ್ತು ನಿರ್ದೇಶನದ ಜೊತೆಯಲ್ಲಿ ಈ ಸಿನಿಮಾದ ನಿರ್ಮಾಣದಲ್ಲೂ ಕಂಗನಾ ರಣಾವತ್​ ಅವರು ಪಾಲುದಾರಿಕೆ ಹೊಂದಿದ್ದಾರೆ. ಅನುಪಮ್​ ಖೇರ್​, ಮಿಲಿಂದ್​ ಸೋಮನ್​, ಮಹಿಮಾ ಚೌಧರಿ, ಶ್ರೇಯಸ್​ ತಲ್ಪಡೆ, ಸತೀಶ್​ ಕೌಶಿಕ್​ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಮೊದಲು ಬಿಡುಗಡೆ ಆದ ಟೀಸರ್​ಗೆ ಭರ್ಜರಿ ಮೆಚ್ಚುಗೆ ವ್ಯಕ್ತವಾಗಿತ್ತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.