AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎಮರ್ಜೆನ್ಸಿ’ ಚಿತ್ರ ರಿಲೀಸ್ ಮಾಡುವ ಹಠಕ್ಕೆ ಬಿದ್ದ ಕಂಗನಾ; ಸೆನ್ಸಾರ್ ಮಂಡಳಿ ವಿರುದ್ಧ ಕಾನೂನು ಸಮರ

ಕಂಗನಾ ರಣಾವತ್​ ಅವರು ‘ಎಮರ್ಜೆನ್ಸಿ’ ಚಿತ್ರದ ಮೇಲೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಬಿಡುಗಡೆಗೂ ಮುನ್ನವೇ ಈ ಸಿನಿಮಾ ವಿವಾದಕ್ಕೆ ಕಾರಣ ಆಗಿದೆ. ಸೆ.6ಕ್ಕೆ ಈ ಚಿತ್ರ ರಿಲೀಸ್​ ಆಗುವುದು ಅನುಮಾನ ಎನ್ನಲಾಗಿದೆ. ಸೆನ್ಸಾರ್​ ಪ್ರಮಾಣ ಪತ್ರ ಸಿಗುವುದು ತಡವಾಗಿದೆ. ಇದರ ವಿರುದ್ಧ ಕಂಗನಾ ತಂಡ ಕೋರ್ಟ್​ ಮೊರೆ ಹೋಗಿದೆ.

‘ಎಮರ್ಜೆನ್ಸಿ’ ಚಿತ್ರ ರಿಲೀಸ್ ಮಾಡುವ ಹಠಕ್ಕೆ ಬಿದ್ದ ಕಂಗನಾ; ಸೆನ್ಸಾರ್ ಮಂಡಳಿ ವಿರುದ್ಧ ಕಾನೂನು ಸಮರ
ಕಂಗನಾ
ರಾಜೇಶ್ ದುಗ್ಗುಮನೆ
|

Updated on: Sep 04, 2024 | 6:58 AM

Share

ಕಂಗನಾ ರಣಾವತ್ ನಟಿಸಿ, ನಿರ್ದೇಶಿಸಿರುವ ‘ಎಮರ್ಜೆನ್ಸಿ’ ಚಿತ್ರಕ್ಕೆ ಒಂದಾದಮೇಲೆ ಒಂದರಂತೆ ಅಡೆತಡೆಗಳು ಎದುರಾಗುತ್ತಲೇ ಇವೆ. ಇತ್ತೀಚೆಗೆ ಸಿನಿಮಾಗೆ ಸೆನ್ಸಾರ್ ಮಂಡಳಿ ಅವರು ಪ್ರಮಾಣಪತ್ರ ನೀಡಲು ನಿರಾಕರಿಸಿದ್ದರು. ಈ ಕಾರಣದಿಂದ ‘ಎಮರ್ಜೆನ್ಸಿ’ ಸಿನಿಮಾ ರಿಲೀಸ್ ದಿನಾಂಕ ಮುಂದಕ್ಕೆ ಹೋಗಿದೆ. ಈಗ ಈ ವಿಚಾರವಾಗಿ ಸಿನಿಮಾ ತಂಡ ಕೋರ್ಟ್ ಮೊರೆ ಹೋಗಿದೆ. ಇಂದು (ಸೆಪ್ಟೆಂಬರ್ 4) ಅರ್ಜಿ ವಿಚಾರಣೆ ನಡೆಯಲಿದೆ.

ರಾಜಕೀಯ ವಿಚಾರಗಳನ್ನು ಹೇಳುವಾಗ ಎಚ್ಚರಿಕೆ ಬೇಕು. ಇಲ್ಲವಾದಲ್ಲಿ ಜನರು ಅದನ್ನು ಒಪ್ಪಿಕೊಳ್ಳುವುದಿಲ್ಲ. ಆದಾಗ್ಯೂ ಕಂಗನಾ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಹೇರಿದ್ದ ತುರ್ತುಪರಿಸ್ಥಿತಿ ಆಧರಿಸಿ ಸಿನಿಮಾ ಮಾಡಲು ಮುಂದಾದರು. ಈ ಸಿನಿಮಾ ವಿರುದ್ಧ ಈಗಾಗಲೇ ಬ್ಯಾನ್ ಕೂಗು ಎದ್ದಿದೆ. ಹೀಗಿರುವಾಗಲೇ ಕಂಗನಾ ಸಿನಿಮಾಗೆ ಸೆನ್ಸಾರ್ ಮಂಡಳಿಯವರು ಪ್ರಮಾಣಪತ್ರ ನೀಡಲು ನಿರಾಕರಿಸಿದ್ದರು. ಹೀಗಾಗಿ ಈ ಸಿನಿಮಾ ನಿರ್ಮಾಣ ಸಂಸ್ಥೆಯಲ್ಲಿ ಒಂದಾದ ಜೀ ಎಂಟರ್​ಟೇನ್​ಮೆಂಟ್ ಅವರು ಬಾಂಬೇ ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಕಳೆದವಾರ ಕಂಗನಾ ಅವರು ಈ ಚಿತ್ರಕ್ಕೆ ಸೆನ್ಸಾರ್ ಆಗುತ್ತಿಲ್ಲ ಎಂಬ ಬಗ್ಗೆ ಮಾತನಾಡಿದ್ದರು. ‘ಸಿಬಿಎಫ್​ಸಿ ಪ್ರಮಾಣಪತ್ರ ನೀಡಲು ವಿಳಂಬ ಮಾಡುತ್ತಿದೆ. ಸರಿಯಾದ ಸಮಯಕ್ಕೆ ಸಿನಿಮಾ ಬರುತ್ತದೆ ಎಂದು ಭಾವಿಸಿದ್ದೇನೆ. ಅದಕ್ಕಾಗಿ ನಾನು ಫೈಟ್ ಮಾಡುತ್ತೇನೆ. ನಾನು ಕೋರ್ಟ್​ಗೆ ಹೋಗಲೂ ಸಿದ್ಧ. ನೀವು ಇತಿಹಾಸ ಬದಲಿಸಲು ಸಾಧ್ಯವಿಲ್ಲ. ಬೆದರಿಕೆ ಹಾಕಿ ನಮ್ಮನ್ನು ಹೆದರಿಸಲು ಸಾಧ್ಯವಿಲ್ಲ’ ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ‘ಎಮರ್ಜೆನ್ಸಿ’ ಬಿಡುಗಡೆ ಮತ್ತೆ ಮುಂದಕ್ಕೆ; ಕಂಗನಾ ಸಿನಿಮಾಗೆ ಹಲವು ಅಡೆತಡೆ

‘ನಾವು ಇತಿಹಾಸ ತೋರಿಸಬೇಕಿದೆ. 70 ವರ್ಷದ ಮಹಿಳೆಯನ್ನು 30-35 ಬಾರಿ ಗುಂಡು ಹಾರಿಸಿ ಕೊಲ್ಲಲಾಗಿದೆ. ಯಾರೋ ಒಬ್ಬರು ಕೊಂದಿರಬೇಕಲ್ಲ. ಇದರಿಂದ ಕೆಲವರಿಗೆ ಬೇಸರ ಆಗುತ್ತದೆ ಅನ್ನೋದು ನಿಮ್ಮ ವಾದ. ಆದರೆ ಇತಿಹಾಸ ತೋರಿಸಲೇಬೇಕಲ್ಲ’ ಎಂದಿದ್ದರು ಕಂಗನಾ. ಕಂಗನಾ ಅವರು ಏನೇ ಮಾಡಿದರೂ ವಿವಾದ ಆಗುತ್ತದೆ. ಈಗ ಅವರು ಕೇವಲ ನಟಿ ಮಾತ್ರ ಅಲ್ಲ, ಸಂಸದೆ ಕೂಡ ಹೌದು. ‘ಎಮರ್ಜೆನ್ಸಿ’ ಚಿತ್ರಕ್ಕಾಗಿ ಅವರು ಸಾಕಷ್ಟು ಶ್ರಮ ಹಾಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?