AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Emergency: ಇದು ಇಂದಿರಾ ಗಾಂಧಿ ಅಲ್ಲ, ಕಂಗನಾ ರಣಾವತ್! ಗಮನ ಸೆಳೆದ ‘ಎಮರ್ಜೆನ್ಸಿ’ ಫಸ್ಟ್​ ಲುಕ್​

Kangana Ranaut | Emergency First Look: ‘ಎಮರ್ಜೆನ್ಸಿ’ ಚಿತ್ರದಲ್ಲಿ ಕಂಗನಾ ರಣಾವತ್​ ಅವರು ಇಂದಿರಾ ಗಾಂಧಿ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಈ ಸಿನಿಮಾದ ಫಸ್ಟ್​ ಲುಕ್​ ಟೀಸರ್​ ಬಿಡುಗಡೆಯಾಗಿ ಸಖತ್​ ಸದ್ದು ಮಾಡುತ್ತಿದೆ.

Emergency: ಇದು ಇಂದಿರಾ ಗಾಂಧಿ ಅಲ್ಲ, ಕಂಗನಾ ರಣಾವತ್! ಗಮನ ಸೆಳೆದ ‘ಎಮರ್ಜೆನ್ಸಿ’ ಫಸ್ಟ್​ ಲುಕ್​
ಕಂಗನಾ ರಣಾವತ್
TV9 Web
| Edited By: |

Updated on:Jul 14, 2022 | 1:38 PM

Share

ನಟಿ ಕಂಗನಾ ರಣಾವತ್​ (Kangana Ranaut) ಅಭಿನಯಿಸುತ್ತಿರುವ ಬಹುನಿರೀಕ್ಷಿತ ‘ಎಮರ್ಜೆನ್ಸಿ’ ಚಿತ್ರದಿಂದ ಬಿಗ್​ ಅಪ್​ಡೇಟ್​ ಸಿಕ್ಕಿದೆ. ಈ ಸಿನಿಮಾಗೆ ಶೂಟಿಂಗ್​ ಆರಂಭ ಆಗಿದೆ. ಅಷ್ಟೇ ಅಲ್ಲ, ಚಿಕ್ಕದೊಂದು ಟೀಸರ್​ ಬಿಡುಗಡೆ ಮಾಡಲಾಗಿದೆ. ಈ ಟೀಸರ್​ ಚಿಕ್ಕದಿರಬಹದು. ಆದರೆ ಅದು ಸೃಷ್ಟಿ ಮಾಡುತ್ತಿರುವ ಹವಾ ದೊಡ್ಡದಾಗಿದೆ. ಈ ಸಿನಿಮಾದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪಾತ್ರವನ್ನು ಕಂಗನಾ ರಣಾವತ್​ ನಿಭಾಯಿಸುತ್ತಿದ್ದಾರೆ. ಫಸ್ಟ್​ಲುಕ್​ ಟೀಸರ್​ ನೋಡಿ ಎಲ್ಲರೂ ಅಚ್ಚರಿ ಹೊರಹಾಕುತ್ತಿದ್ದಾರೆ. ಯಾಕೆಂದರೆ, ಇದರಲ್ಲಿ ಕಂಗನಾ ರಣಾವತ್​ ಅವರು ಥೇಟ್​ ಇಂದಿರಾ ಗಾಂಧಿ (Indira Gandhi) ರೀತಿಯೇ ಕಾಣಿಸುತ್ತಿದ್ದಾರೆ. ಅಷ್ಟೇ ಅಲ್ಲದೇ, ಬಾಡಿ ಲಾಂಗ್ವೇಜ್​, ಧ್ವನಿ ಏರಿಳಿತ ಕೂಡ ಇಂದಿರಾ ಗಾಂಧಿ ರೀತಿಯೇ ಇದೆ. ಅದನ್ನು ಕಂಡು ಎಲ್ಲರೂ ಕಂಗನಾಗೆ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಸದ್ಯ ‘ಎಮರ್ಜೆನ್ಸಿ’ ಫಸ್ಟ್​ಲುಕ್​ (Emergency First Look) ಟೀಸರ್​ ಸಖತ್​ ವೈರಲ್​ ಆಗುತ್ತಿದೆ.

ಕಂಗನಾ ರಣಾವತ್​ ಅವರ ವೃತ್ತಿಜೀವನದಲ್ಲಿ ‘ಎಮರ್ಜೆನ್ಸಿ’ ಸಿನಿಮಾ ಬಹುಮುಖ್ಯ ಆಗಲಿದೆ. ಅದಕ್ಕಾಗಿ ಅವರು ಸಖತ್​ ತಯಾರಿ ಮಾಡಿಕೊಂಡು ಶೂಟಿಂಗ್​ ಆರಂಭಿಸಿದ್ದಾರೆ. ಈಗಾಗಲೇ ಕೆಲವು ಸಿನಿಮಾಗಳಲ್ಲಿ ಇಂದಿರಾ ಗಾಂಧಿ ಅವರ ಪಾತ್ರವನ್ನು ಬೇರೆ ನಟಿಯರು ಮಾಡಿದ್ದಾರೆ. ಆದರೆ ಅವರೆಲ್ಲರಿಗಿಂತಲೂ ಕಂಗನಾ ರಣಾವತ್​ ಅವರ ಲುಕ್​ ಹೆಚ್ಚು ಗಮನ ಸೆಳೆಯುತ್ತಿದೆ. ಈ ಸಿನಿಮಾದಲ್ಲಿ ಕಂಗನಾ ನಟಿಸುವುದು ಮಾತ್ರವಲ್ಲದೇ ನಿರ್ದೇಶನವನ್ನೂ ಮಾಡುತ್ತಿದ್ದಾರೆ ಎಂಬುದು ಗಮನಿಸಬೇಕಾದ ಅಂಶ.

ನಟಿ ಕಂಗನಾ ರಣಾವತ್​ ಅವರಿಗೆ ಇತ್ತೀಚಿನ ದಿನಗಳಲ್ಲಿ ಹೇಳಿಕೊಳ್ಳುವಂತಹ ಗೆಲುವು ಸಿಕ್ಕಿಲ್ಲ. ಸಿನಿಮಾ ಮೂಲಕ ಸದ್ದು ಮಾಡಿದ್ದಕ್ಕಿಂತಲೂ ಅವರು ವಿವಾದದಿಂದ ಸುದ್ದಿ ಆಗಿದ್ದೇ ಹೆಚ್ಚು. ‘ಮೆಂಟಲ್​ ಹೈ ಕ್ಯಾ’, ‘ಪಂಗಾ’, ‘ತಲೈವಿ’, ‘ಧಾಕಡ್​’ ಸಿನಿಮಾಗಳ ಮೂಲಕ ಕಂಗನಾ ಸೋತಿದ್ದಾರೆ. ಅವರಿಗೆ ತುರ್ತಾಗಿ ಒಂದು ಗೆಲುವು ಬೇಕಿದೆ. ‘ಎಮರ್ಜೆನ್ಸಿ’ ಚಿತ್ರದ ಮೂಲಕ ಅವರು ಮತ್ತೆ ಯಶಸ್ಸಿನ ಹಳಿಗೆ ಮರಳಬಹುದು ಎಂಬ ನಿರೀಕ್ಷೆ ಇದೆ.

Published On - 1:23 pm, Thu, 14 July 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ