AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್​ ಠಾಣೆಯಲ್ಲಿ ಕಂಗನಾ ಬಿಂಕ ನೋಡಿ ಅಚ್ಚರಿ ಪಟ್ಟ ಪೊಲೀಸರು; ಹೈಲೈಟ್​ ಆಯ್ತು ಮುತ್ತಿನ ನೆಕ್ಲೆಸ್​

ಎಫ್​ಐಆರ್​ಗೆ ಸಂಬಂಧಿಸಿ ಕಂಗನಾ ಇಂದು ಮುಂಬೈನ ಪೊಲೀಸ್​ ಠಾಣೆಗೆ ಭೇಟಿ ನೀಡಿದ್ದರು. ಈ ವೇಳೆ ಕಂಗನಾ ಪಾರ್ಟಿಗೆ ಹೊರಟವರಂತೆ ರೆಡಿ ಆಗಿದ್ದರು. ಬಿಳಿ ಬಣ್ಣದ ಸೀರೆ ಧರಿಸಿದ್ದರು.

ಪೊಲೀಸ್​ ಠಾಣೆಯಲ್ಲಿ ಕಂಗನಾ ಬಿಂಕ ನೋಡಿ ಅಚ್ಚರಿ ಪಟ್ಟ ಪೊಲೀಸರು; ಹೈಲೈಟ್​ ಆಯ್ತು ಮುತ್ತಿನ ನೆಕ್ಲೆಸ್​
ಕಂಗನಾ
TV9 Web
| Edited By: |

Updated on: Dec 23, 2021 | 2:44 PM

Share

ಕಂಗನಾ ರಣಾವತ್​ ಸದಾ ಸುದ್ದಿಯಲ್ಲಿರೋಕೆ ಇಷ್ಟಪಡುತ್ತಾರೆ. ನೆಗೆಟಿವ್​ ಆಗಿರಲಿ ಅಥವಾ ಪಾಸಿಟಿವ್​ ಆಗಿರಲಿ, ಒಟ್ಟಿನಲ್ಲಿ ಅವರಿಗೆ ಪ್ರಚಾರ ಬೇಕು. ವಿವಾದಗಳನ್ನು ಮೈಮೇಲೆ ಹಾಕಿಕೊಳ್ಳೋಕೆ ಅವರಿಗೆ ಎಲ್ಲಿಲ್ಲದ ಪ್ರೀತಿ. ಇತ್ತೀಚೆಗಂತೂ ಅವರು ಸಿನಿಮಾಗಿಂತ ವಿವಾದದ ಮೂಲಕವೇ ಹೆಚ್ಚು ಗುರುತಿಸಿಕೊಳ್ಳುತ್ತಿದ್ದಾರೆ. ಈ ನಡೆಯ ಬಗ್ಗೆ ಅನೇಕರು ಛೀಮಾರಿ ಹಾಕಿದರೂ ಅವರು ಚಿಂತೆ ಮಾಡಿಲ್ಲ. ಈಗ ಕಂಗನಾ ಮತ್ತೆ ಸುದ್ದಿಯಲ್ಲಿದ್ದಾರೆ. ಹಾಗಂತ ಅವರು ಈ ಬಾರಿ ವಿವಾದ ಸೃಷ್ಟಿ ಮಾಡಿಕೊಂಡಿಲ್ಲ. ಬದಲಿಗೆ, ಪೊಲೀಸ್ ಠಾಣೆಗೆ ಹಾಜರಾಗುವಾಗ ತುಂಬಾನೇ ಬಿಂಕದಿಂದ ತೆರಳಿದ್ದಾರೆ. ಇದನ್ನು ನೋಡಿ ಪೊಲೀಸರು ಹಾಗೂ ಅವರ ಅಭಿಮಾನಿಗಳು ಅಚ್ಚರಿಪಟ್ಟಿದ್ದಾರೆ.

ಕೃಷಿ ಕಾಯ್ದೆಯನ್ನು ಹಿಂಪಡೆದ ಬೆನ್ನಲ್ಲೇ ಕಂಗನಾ ಅಸಮಾಧಾನ ಹೊರ ಹಾಕಿದ್ದರು. ‘ಇಂದು ಬಹುಶಃ ಖಲಿಸ್ತಾನಿ ಭಯೋತ್ಪಾದಕರು ಸರ್ಕಾರದ ತೋಳನ್ನು ತಿರುಚುತ್ತಿರಬಹುದು. ಆದರೆ ಈ ಸಂದರ್ಭದಲ್ಲಿ ನಾವು ಓರ್ವ ಮಹಿಳೆಯನ್ನು ಮರೆಯುವಂತಿಲ್ಲ. ಮೊದಲ ಮಹಿಳಾ ಪ್ರಧಾನಮಂತ್ರಿಯಾಗಿದ್ದ ಅವರು ಖಲಿಸ್ತಾನಿ ಉಗ್ರರನ್ನು ಸೊಳ್ಳೆಗಳಂತೆ ತಮ್ಮ ಬೂಟಿನಡಿ ಹಾಕಿ ಹೊಸಕಿದ್ದರು. ಖಲಿಸ್ತಾನಿಗಳು ದೇಶವನ್ನು ಒಡೆಯಲು ಬಿಡಲಿಲ್ಲ’ ಎಂದು ಕಂಗನಾ ಹೇಳಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಸಿಖ್​ ಸಮುದಾಯ ದೂರು ನೀಡಿತ್ತು. ಹೀಗಾಗಿ, ಕಂಗನಾ ವಿರುದ್ಧ ಎಫ್​ಐಆರ್​ ದಾಖಲಾಗಿತ್ತು.

ಈ ಎಫ್​ಐಆರ್​ಗೆ ಸಂಬಂಧಿಸಿ ಕಂಗನಾ ಇಂದು ಮುಂಬೈನ ಪೊಲೀಸ್​ ಠಾಣೆಗೆ ಭೇಟಿ ನೀಡಿದ್ದರು. ಈ ವೇಳೆ ಕಂಗನಾ ಪಾರ್ಟಿಗೆ ಹೊರಟವರಂತೆ ರೆಡಿ ಆಗಿದ್ದರು. ಬಿಳಿ ಬಣ್ಣದ ಸೀರೆ ಧರಿಸಿದ್ದರು. ಕತ್ತಿನಲ್ಲಿ ಅವರು ಹಾಕಿದ್ದ ಮುತ್ತಿನ ನೆಕ್ಲೆಸ್​ ಎಲ್ಲರ ಕಣ್ಣು ಕುಕ್ಕಿತ್ತು. ಅವರ ಸುತ್ತಲೂ ಭದ್ರತಾ ಸಿಬ್ಬಂದಿ, ಪೊಲೀಸರು ಸುತ್ತುವರಿದಿದ್ದರು. ಪೊಲೀಸ್​ ಠಾಣೆಗೆ ತೆರಳಿದ ಕಂಗನಾ ಕೆಲ ಹೊತ್ತು ವಿಚಾರಣೆ ಎದುರಿಸಿ ಬಂದಿದ್ದಾರೆ.

ಕಂಗನಾ ಅವರು ಡಿಸೆಂಬರ್​ 3ರಂದು ಪಂಜಾಬ್​ಗೆ ತೆರಳಿದ್ದರು. ರೈತ ಪ್ರತಿಭಟನಾಕಾರರ ವಿರುದ್ಧ ಕಂಗನಾ ಸಾಕಷ್ಟು ವಿವಾದಾತ್ಮಕ ಹೇಳಿಕೆ ನೀಡುತ್ತಲೇ ಬಂದಿದ್ದಾರೆ. ಈ ಕಾರಣಕ್ಕೆ ಅವರು ಪಂಜಾಬ್​ಗೆ ಎಂಟ್ರಿ ಪಡೆಯುತ್ತಿದ್ದಂತೆ ಅವರ ಕಾರಿನ ಮೇಲೆ ದಾಳಿ ನಡೆತ್ತು. ಇದನ್ನು ಕಂಗನಾ ಖಂಡಿಸಿದ್ದರು.

ಇದನ್ನೂ ಓದಿ: ಕಂಗನಾ ರಣಾವತ್​ ಕಾರಿನ ಮೇಲೆ ದಾಳಿ ಮಾಡಿದ ಪ್ರತಿಭಟನಾಕಾರರು; ವಿಡಿಯೋ ಪೋಸ್ಟ್ ಮಾಡಿದ ನಟಿ

ಶ್ರೀಮಂತ ಮಹಿಳೆಯರು ತಮಗಿಂತ ಕಿರಿಯ ಪುರುಷರನ್ನು ಮದುವೆ ಆಗುತ್ತಿರೋದು ಖುಷಿ ವಿಚಾರ: ಕಂಗನಾ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ