AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಗನಾಗೆ ತೀವ್ರ ನಿರಾಶೆ; ಮೊದಲ ವಾರದಲ್ಲಿ ‘ಭಾರತ್ ಭಾಗ್ಯ ವಿಧಾತ’ ಗಳಿಕೆ ಕೇವಲ 6 ಕೋಟಿ ರೂ.

‘ಭಾರತ್ ಭಾಗ್ಯ ವಿಧಾತ’ ಸಿನಿಮಾದಲ್ಲಿ ಉತ್ತಮವಾದ ಕಥಾವಸ್ತು ಇದೆ ಎಂಬ ಕಾರಣಕ್ಕೆ ಈ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಲಾಯಿತು. ಹಾಗಿದ್ದರೂ ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಸೆಳೆಯುವಲ್ಲಿ ಈ ಚಿತ್ರ ವಿಫಲವಾಗಿದೆ. ಈ ಮೂಲಕ ನಟಿ ಕಂಗನಾ ರಣಾವತ್ ಅವರ ಫ್ಲಾಪ್ ಸಿನಿಮಾಗಳ ಪಟ್ಟಿಗೆ ಈ ಚಿತ್ರ ಕೂಡ ಸೇರ್ಪಡೆ ಆಗಿದೆ.

ಕಂಗನಾಗೆ ತೀವ್ರ ನಿರಾಶೆ; ಮೊದಲ ವಾರದಲ್ಲಿ ‘ಭಾರತ್ ಭಾಗ್ಯ ವಿಧಾತ’ ಗಳಿಕೆ ಕೇವಲ 6 ಕೋಟಿ ರೂ.
Bharat Bhhagya Viddhaata Poster
ಮದನ್​ ಕುಮಾರ್​
|

Updated on: Jun 19, 2026 | 4:10 PM

Share

ಬಾಲಿವುಡ್‌ನ ವಿವಾದಿತ ಹಾಗೂ ಖ್ಯಾತ ನಟಿ ಕಂಗನಾ ರಣಾವತ್ (Kangana Ranaut) ಪ್ರಮುಖ ಪಾತ್ರದಲ್ಲಿ ನಟಿಸಿರುವ ಬಹುನಿರೀಕ್ಷಿತ ‘ಭಾರತ್ ಭಾಗ್ಯ ವಿಧಾತ’ (Bharat Bhhagya Viddhaata) ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ತೀವ್ರ ಹಿನ್ನಡೆ ಅನುಭವಿಸಿದೆ. ಜೂನ್ 12ರಂದು ಬಿಡುಗಡೆಯಾಗಿದ್ದ ಈ ಸಿನಿಮಾ ಮೊದಲ ವಾರದಲ್ಲಿ ಕೇವಲ 6.55 ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಮೂಲಕ ಅತ್ಯಂತ ನೀರಸ ಪ್ರತಿಕ್ರಿಯೆ ಪಡೆದಿದೆ.

ಮೂಲಗಳ ಪ್ರಕಾರ, ಈ ಸಿನಿಮಾ ಸುಮಾರು 35 ಕೋಟಿಯಿಂದ 40 ಕೋಟಿ ರೂಪಾಯಿ ಬಜೆಟ್‌ನಲ್ಲಿ ನಿರ್ಮಾಣಗೊಂಡಿದೆ. ಆದರೆ ಚಿತ್ರದ ಮೊದಲ ವಾರದ ಕಲೆಕ್ಷನ್ ನೋಡಿದರೆ ಚಿತ್ರಕ್ಕೆ ಹೂಡಿಕೆ ಮಾಡಿದ ಬಜೆಟ್ ಕೈಸೇರುವುದು ಕೂಡ ಅನುಮಾನ ಎನ್ನುವಂತಾಗಿದೆ. ಮೊದಲ ವಾರದಲ್ಲೇ ಚಿತ್ರದ ಗಳಿಕೆ ಕೇವಲ ಲಕ್ಷಗಳಿಗೆ ಕುಸಿದಿರುವುದು ಚಿತ್ರತಂಡಕ್ಕೆ ದೊಡ್ಡ ಆಘಾತ ತಂದಿದೆ.

ಬಾಕ್ಸ್ ಆಫೀಸ್ ಟ್ರ್ಯಾಕರ್ ‘ಸ್ಯಾಕ್ನಿಲ್ಕ್’ ವರದಿಯ ಪ್ರಕಾರ, ಸಿನಿಮಾ ಮೊದಲ ವಾರಾಂತ್ಯದಲ್ಲಿ ಸ್ವಲ್ಪ ಚೇತರಿಕೆ ಕಂಡಿತ್ತು. ಆದರೆ ಸೋಮವಾರದಿಂದ ಕಲೆಕ್ಷನ್ ಸಂಪೂರ್ಣವಾಗಿ ಕುಸಿದಿದೆ. ಸೋಮವಾರ ಮತ್ತು ಮಂಗಳವಾರ ತಲಾ 65 ಲಕ್ಷ ರೂಪಾಯಿ ಗಳಿಸಿದರೆ, ಬುಧವಾರ 55 ಲಕ್ಷ ಹಾಗೂ ಶುಕ್ರವಾರ ಕೇವಲ 45 ಲಕ್ಷ ರೂಪಾಯಿಗೆ ಕಲೆಕ್ಷನ್ ಕುಸಿದಿದೆ.

ಇದರೊಂದಿಗೆ ದೇಶೀಯ ಮಾರುಕಟ್ಟೆಯಲ್ಲಿ ಚಿತ್ರದ ಒಟ್ಟು ಗಳಿಕೆ 6.55 ಕೋಟಿ ರೂಪಾಯಿಗೆ ಬಂದು ನಿಂತಿದೆ. ಈ ವಾರ ಶಾಹಿದ್ ಕಪೂರ್, ರಶ್ಮಿಕಾ ಮಂದಣ್ಣ, ಕೃತಿ ಸನನ್ ನಟನೆಯ ‘ಕಾಕ್‌ಟೇಲ್ 2’ ಸಿನಿಮಾ ಬಿಡುಗಡೆ ಆಗಿರುವುದರಿಂದ ಕಂಗನಾ ಚಿತ್ರದ ಮುಂದಿನ ಹಾದಿ ಇನ್ನಷ್ಟು ಕಠಿಣವಾಗಲಿದೆ. ಸದ್ಯಕ್ಕಂತೂ ಈ ಸಿನಿಮಾ ಚೇತರಿಸಿಕೊಳ್ಳುವ ಯಾವುದೇ ಲಕ್ಷಣ ಕಾಣುತ್ತಿಲ್ಲ.

ಇದನ್ನೂ ಓದಿ: ‘ಬಾಲಿವುಡ್‌ನಲ್ಲಿ ಪಾಕಿಸ್ತಾನ ಪ್ರೇಮ ಹೆಚ್ಚಿದೆ’: ರಣವೀರ್ ಸಿಂಗ್ ಪರ ಬ್ಯಾಟ್ ಬೀಸಿದ ಕಂಗನಾ ರಣಾವತ್

2008ರಲ್ಲಿ ಮುಂಬೈನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ಸಂದರ್ಭದಲ್ಲಿ 20 ಗರ್ಭಿಣಿಯರ ಪ್ರಾಣ ಉಳಿಸಿದ ನರ್ಸ್ ಅಂಜಲಿ ಕುಲ್ತೆ ಅವರ ನೈಜ ಘಟನೆಯನ್ನು ಆಧರಿಸಿ ಈ ಚಿತ್ರವನ್ನು ಮಾಡಲಾಗಿದೆ. ಚಿತ್ರ ಬಿಡುಗಡೆಯಾದ ಬೆನ್ನಲ್ಲೇ ಹರಿಯಾಣ ಮುಖ್ಯಮಂತ್ರಿ ನಾಯಬ್ ಸಿಂಗ್ ಸೈನಿ ಚಿತ್ರವನ್ನು ವೀಕ್ಷಿಸಿ, ಇದು ಪ್ರತಿಯೊಬ್ಬ ಭಾರತೀಯನಲ್ಲೂ ಧೈರ್ಯ ಮತ್ತು ಮಾನವೀಯತೆಯನ್ನು ಜಾಗೃತಗೊಳಿಸುವ ಸಿನಿಮಾ ಎಂದು ಶ್ಲಾಘಿಸಿ ಹರಿಯಾಣದಲ್ಲಿ ತೆರಿಗೆ ಮುಕ್ತ ಎಂದು ಘೋಷಿಸಿದ್ದರು. ಆದರೂ ಸಿನಿಮಾ ಗೆದ್ದಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ