AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಗನಾ ರಣಾವತ್​ ಕಾರಿನ ಮೇಲೆ ದಾಳಿ ಮಾಡಿದ ಪ್ರತಿಭಟನಾಕಾರರು; ವಿಡಿಯೋ ಪೋಸ್ಟ್ ಮಾಡಿದ ನಟಿ

ಕಂಗನಾ ಅವರು ಇಂದು (ಡಿಸೆಂಬರ್​ 3) ಪಂಜಾಬ್​ಗೆ ತೆರಳಿದ್ದರು. ರೈತ ಪ್ರತಿಭಟನಾಕಾರರ ವಿರುದ್ಧ ಕಂಗನಾ ಸಾಕಷ್ಟು ವಿವಾದಾತ್ಮಕ ಹೇಳಿಕೆ ನೀಡುತ್ತಲೇ ಬಂದಿದ್ದಾರೆ. ಈ ಕಾರಣಕ್ಕೆ ಅವರು ಪಂಜಾಬ್​ಗೆ ಎಂಟ್ರಿ ಪಡೆಯುತ್ತಿದ್ದಂತೆ ಅವರ ಕಾರಿನ ಮೇಲೆ ದಾಳಿ ನಡೆದಿದೆ.

ಕಂಗನಾ ರಣಾವತ್​ ಕಾರಿನ ಮೇಲೆ ದಾಳಿ ಮಾಡಿದ ಪ್ರತಿಭಟನಾಕಾರರು; ವಿಡಿಯೋ ಪೋಸ್ಟ್ ಮಾಡಿದ ನಟಿ
ಕಂಗನಾ
ರಾಜೇಶ್ ದುಗ್ಗುಮನೆ
|

Updated on: Dec 03, 2021 | 7:03 PM

Share

ಕಂಗನ ರಣಾವತ್​ ಇದ್ದಲ್ಲಿ ವಿವಾದಕ್ಕೇನು ಬರ ಇರುವುದಿಲ್ಲ. ಅವರು ಅದ್ಭುತ ನಟಿ ಎಂಬುದು ಸಾಕಷ್ಟು ಬಾರಿ ಸಾಬೀತಾಗಿದೆ. ಇದರ ಜತೆಗೆ ಕಿರಿಕ್ ಮಾಡಿಕೊಳ್ಳುವ ಮೂಲಕವೂ ಸಾಕಷ್ಟು ಸುದ್ದಿಯಾಗುತ್ತಾರೆ. ವಿವಾದಾತ್ಮಕ ಹೇಳಿಕೆ ಕೊಡುತ್ತಾ ಸದಾ ಸುದ್ದಿಯಲ್ಲಿರುತ್ತಾರೆ. ಟ್ವಿಟರ್​ನಲ್ಲಿ ಅವರ ಖಾತೆ ರದ್ದಾದರೂ, ಇನ್​ಸ್ಟಾಗ್ರಾಮ್​ನಲ್ಲಿ ಅವರು ತಮ್ಮ ಅಭಿಪ್ರಾಯ ಹಂಚಿಕೊಳ್ಳುವುದನ್ನು ಮುಂದುವರಿಸಿದ್ದಾರೆ. ಈಗ ಕಂಗನಾ ಕಾರಿನ ಮೇಲೆ ದಾಳಿ ನಡೆದಿದೆ. ಈ ಬಗ್ಗೆ ಅವರು ಇನ್​ಸ್ಟಾಗ್ರಾಮ್​ನಲ್ಲಿ ವಿಡಿಯೋ ಹಂಚಿಕೊಂಡಿದ್ದರೆ.

ಕಂಗನಾ ಅವರು ಇಂದು (ಡಿಸೆಂಬರ್​ 3) ಪಂಜಾಬ್​ಗೆ ತೆರಳಿದ್ದರು. ರೈತ ಪ್ರತಿಭಟನಾಕಾರರ ವಿರುದ್ಧ ಕಂಗನಾ ಸಾಕಷ್ಟು ವಿವಾದಾತ್ಮಕ ಹೇಳಿಕೆ ನೀಡುತ್ತಲೇ ಬಂದಿದ್ದಾರೆ. ಈ ಕಾರಣಕ್ಕೆ ಅವರು ಪಂಜಾಬ್​ಗೆ ಎಂಟ್ರಿ ಪಡೆಯುತ್ತಿದ್ದಂತೆ ಅವರ ಕಾರಿನ ಮೇಲೆ ದಾಳಿ ನಡೆದಿದೆ. ಇದನ್ನು ಕಂಗನಾ ಖಂಡಿಸಿದ್ದಾರೆ.

‘ಇವರು ತಮ್ಮನ್ನು ತಾವು ರೈತರು ಎಂದು ಕರೆದುಕೊಳ್ಳುತ್ತಿದ್ದಾರೆ. ಆದರೆ, ನಮ್ಮಮೇಲೆ ದಾಳಿ ಮಾಡುತ್ತಾರೆ. ಬೆದರಿಕೆ ಹಾಕುತ್ತಾರೆ. ದೇಶದಲ್ಲಿ ಇಷ್ಟೊಂದು ಗುಂಪು ಹಲ್ಲೆ ನಡೆಯುತ್ತಿದೆ. ಇಷ್ಟೊಂದು ಪೊಲೀಸರಿದ್ದಾರೆ. ಆದಾಗ್ಯೂ, ನನ್ನ ಗಾಡಿಯನ್ನು ತೆಗೆದುಕೊಂಡು ಹೋಗೋಕೆ ಆಗುತ್ತಿಲ್ಲ. ನಾನು ರಾಜಕಾರಣಿಯೇ? ಇಂತಹ ವರ್ತನೆಯನ್ನು​ ಸಹಿಸಿಕೊಳ್ಳೋಕೆ ಆಗುವುದಿಲ್ಲ. ನನಗೆ ಅಲ್ಲಿಗೆ ತೆರಳದಂತೆ ಅನೇಕರು ಎಚ್ಚರಿಕೆ ನೀಡಿದ್ದರು. ಆದರೆ, ನಾನು ಇಲ್ಲಿಗೆ ಬಂದೆ’ ಎಂದಿದ್ದಾರೆ ಅವರು.

ಕೃಷಿ ಕಾಯ್ದೆಯನ್ನು ಹಿಂಪಡೆದ ಬೆನ್ನಲ್ಲೇ ಕಂಗನಾ ಅಸಮಾಧಾನ ಹೊರ ಹಾಕಿದ್ದರು. ‘ಇಂದು ಬಹುಶಃ ಖಲಿಸ್ತಾನಿ ಭಯೋತ್ಪಾದಕರು ಸರ್ಕಾರ ತೋಳನ್ನು ತಿರುಚುತ್ತಿರಬಹುದು. ಆದರೆ ಈ ಸಂದರ್ಭದಲ್ಲಿ ನಾವು ಓರ್ವ ಮಹಿಳೆಯನ್ನು ಮರೆಯುವಂತಿಲ್ಲ. ಮೊದಲ ಮಹಿಳಾ ಪ್ರಧಾನಮಂತ್ರಿಯಾಗಿದ್ದ ಅವರು ಖಲಿಸ್ತಾನಿ ಉಗ್ರರನ್ನು ಸೊಳ್ಳೆಗಳಂತೆ ತಮ್ಮ ಬೂಟಿನಡಿ ಹಾಕಿ ಹೊಸಕಿದ್ದರು. ಖಲಿಸ್ತಾನಿಗಳು ದೇಶವನ್ನು ಒಡೆಯಲು ಬಿಡಲಿಲ್ಲ’ ಎಂದು ಕಂಗನಾ ಹೇಳಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಅವರ ವಿರುದ್ಧ ಎಫ್​ಐಆರ್​ ಕೂಡ ದಾಖಲಾಗಿತ್ತು.

ಇದನ್ನೂ ಓದಿ: ಕೊಲೆ ಬೆದರಿಕೆಗಳ ಹಿನ್ನೆಲೆಯಲ್ಲಿ ದೂರು ದಾಖಲಿಸಿದ ಕಂಗನಾ; ಚುನಾವಣೆ ಗೆಲ್ಲಲು ದ್ವೇಷ ಹರಡಬೇಡಿ ಎಂದ ನಟಿ

ಸಮಂತಾಗೆ ಕಂಗನಾ ಮೆಚ್ಚುಗೆ ಮಾತು; ಎರಡೇ ಪದಗಳಲ್ಲಿ ಪ್ರಶಂಸೆ ವ್ಯಕ್ತಪಡಿಸಿದ ಕಾಂಟ್ರವರ್ಸಿ ನಟಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು