ಕಂಗನಾ ರಣಾವತ್​ ಕಾರಿನ ಮೇಲೆ ದಾಳಿ ಮಾಡಿದ ಪ್ರತಿಭಟನಾಕಾರರು; ವಿಡಿಯೋ ಪೋಸ್ಟ್ ಮಾಡಿದ ನಟಿ

ಕಂಗನಾ ಅವರು ಇಂದು (ಡಿಸೆಂಬರ್​ 3) ಪಂಜಾಬ್​ಗೆ ತೆರಳಿದ್ದರು. ರೈತ ಪ್ರತಿಭಟನಾಕಾರರ ವಿರುದ್ಧ ಕಂಗನಾ ಸಾಕಷ್ಟು ವಿವಾದಾತ್ಮಕ ಹೇಳಿಕೆ ನೀಡುತ್ತಲೇ ಬಂದಿದ್ದಾರೆ. ಈ ಕಾರಣಕ್ಕೆ ಅವರು ಪಂಜಾಬ್​ಗೆ ಎಂಟ್ರಿ ಪಡೆಯುತ್ತಿದ್ದಂತೆ ಅವರ ಕಾರಿನ ಮೇಲೆ ದಾಳಿ ನಡೆದಿದೆ.

ಕಂಗನಾ ರಣಾವತ್​ ಕಾರಿನ ಮೇಲೆ ದಾಳಿ ಮಾಡಿದ ಪ್ರತಿಭಟನಾಕಾರರು; ವಿಡಿಯೋ ಪೋಸ್ಟ್ ಮಾಡಿದ ನಟಿ
ಕಂಗನಾ
Follow us
|

Updated on: Dec 03, 2021 | 7:03 PM

ಕಂಗನ ರಣಾವತ್​ ಇದ್ದಲ್ಲಿ ವಿವಾದಕ್ಕೇನು ಬರ ಇರುವುದಿಲ್ಲ. ಅವರು ಅದ್ಭುತ ನಟಿ ಎಂಬುದು ಸಾಕಷ್ಟು ಬಾರಿ ಸಾಬೀತಾಗಿದೆ. ಇದರ ಜತೆಗೆ ಕಿರಿಕ್ ಮಾಡಿಕೊಳ್ಳುವ ಮೂಲಕವೂ ಸಾಕಷ್ಟು ಸುದ್ದಿಯಾಗುತ್ತಾರೆ. ವಿವಾದಾತ್ಮಕ ಹೇಳಿಕೆ ಕೊಡುತ್ತಾ ಸದಾ ಸುದ್ದಿಯಲ್ಲಿರುತ್ತಾರೆ. ಟ್ವಿಟರ್​ನಲ್ಲಿ ಅವರ ಖಾತೆ ರದ್ದಾದರೂ, ಇನ್​ಸ್ಟಾಗ್ರಾಮ್​ನಲ್ಲಿ ಅವರು ತಮ್ಮ ಅಭಿಪ್ರಾಯ ಹಂಚಿಕೊಳ್ಳುವುದನ್ನು ಮುಂದುವರಿಸಿದ್ದಾರೆ. ಈಗ ಕಂಗನಾ ಕಾರಿನ ಮೇಲೆ ದಾಳಿ ನಡೆದಿದೆ. ಈ ಬಗ್ಗೆ ಅವರು ಇನ್​ಸ್ಟಾಗ್ರಾಮ್​ನಲ್ಲಿ ವಿಡಿಯೋ ಹಂಚಿಕೊಂಡಿದ್ದರೆ.

ಕಂಗನಾ ಅವರು ಇಂದು (ಡಿಸೆಂಬರ್​ 3) ಪಂಜಾಬ್​ಗೆ ತೆರಳಿದ್ದರು. ರೈತ ಪ್ರತಿಭಟನಾಕಾರರ ವಿರುದ್ಧ ಕಂಗನಾ ಸಾಕಷ್ಟು ವಿವಾದಾತ್ಮಕ ಹೇಳಿಕೆ ನೀಡುತ್ತಲೇ ಬಂದಿದ್ದಾರೆ. ಈ ಕಾರಣಕ್ಕೆ ಅವರು ಪಂಜಾಬ್​ಗೆ ಎಂಟ್ರಿ ಪಡೆಯುತ್ತಿದ್ದಂತೆ ಅವರ ಕಾರಿನ ಮೇಲೆ ದಾಳಿ ನಡೆದಿದೆ. ಇದನ್ನು ಕಂಗನಾ ಖಂಡಿಸಿದ್ದಾರೆ.

‘ಇವರು ತಮ್ಮನ್ನು ತಾವು ರೈತರು ಎಂದು ಕರೆದುಕೊಳ್ಳುತ್ತಿದ್ದಾರೆ. ಆದರೆ, ನಮ್ಮಮೇಲೆ ದಾಳಿ ಮಾಡುತ್ತಾರೆ. ಬೆದರಿಕೆ ಹಾಕುತ್ತಾರೆ. ದೇಶದಲ್ಲಿ ಇಷ್ಟೊಂದು ಗುಂಪು ಹಲ್ಲೆ ನಡೆಯುತ್ತಿದೆ. ಇಷ್ಟೊಂದು ಪೊಲೀಸರಿದ್ದಾರೆ. ಆದಾಗ್ಯೂ, ನನ್ನ ಗಾಡಿಯನ್ನು ತೆಗೆದುಕೊಂಡು ಹೋಗೋಕೆ ಆಗುತ್ತಿಲ್ಲ. ನಾನು ರಾಜಕಾರಣಿಯೇ? ಇಂತಹ ವರ್ತನೆಯನ್ನು​ ಸಹಿಸಿಕೊಳ್ಳೋಕೆ ಆಗುವುದಿಲ್ಲ. ನನಗೆ ಅಲ್ಲಿಗೆ ತೆರಳದಂತೆ ಅನೇಕರು ಎಚ್ಚರಿಕೆ ನೀಡಿದ್ದರು. ಆದರೆ, ನಾನು ಇಲ್ಲಿಗೆ ಬಂದೆ’ ಎಂದಿದ್ದಾರೆ ಅವರು.

ಕೃಷಿ ಕಾಯ್ದೆಯನ್ನು ಹಿಂಪಡೆದ ಬೆನ್ನಲ್ಲೇ ಕಂಗನಾ ಅಸಮಾಧಾನ ಹೊರ ಹಾಕಿದ್ದರು. ‘ಇಂದು ಬಹುಶಃ ಖಲಿಸ್ತಾನಿ ಭಯೋತ್ಪಾದಕರು ಸರ್ಕಾರ ತೋಳನ್ನು ತಿರುಚುತ್ತಿರಬಹುದು. ಆದರೆ ಈ ಸಂದರ್ಭದಲ್ಲಿ ನಾವು ಓರ್ವ ಮಹಿಳೆಯನ್ನು ಮರೆಯುವಂತಿಲ್ಲ. ಮೊದಲ ಮಹಿಳಾ ಪ್ರಧಾನಮಂತ್ರಿಯಾಗಿದ್ದ ಅವರು ಖಲಿಸ್ತಾನಿ ಉಗ್ರರನ್ನು ಸೊಳ್ಳೆಗಳಂತೆ ತಮ್ಮ ಬೂಟಿನಡಿ ಹಾಕಿ ಹೊಸಕಿದ್ದರು. ಖಲಿಸ್ತಾನಿಗಳು ದೇಶವನ್ನು ಒಡೆಯಲು ಬಿಡಲಿಲ್ಲ’ ಎಂದು ಕಂಗನಾ ಹೇಳಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಅವರ ವಿರುದ್ಧ ಎಫ್​ಐಆರ್​ ಕೂಡ ದಾಖಲಾಗಿತ್ತು.

ಇದನ್ನೂ ಓದಿ: ಕೊಲೆ ಬೆದರಿಕೆಗಳ ಹಿನ್ನೆಲೆಯಲ್ಲಿ ದೂರು ದಾಖಲಿಸಿದ ಕಂಗನಾ; ಚುನಾವಣೆ ಗೆಲ್ಲಲು ದ್ವೇಷ ಹರಡಬೇಡಿ ಎಂದ ನಟಿ

ಸಮಂತಾಗೆ ಕಂಗನಾ ಮೆಚ್ಚುಗೆ ಮಾತು; ಎರಡೇ ಪದಗಳಲ್ಲಿ ಪ್ರಶಂಸೆ ವ್ಯಕ್ತಪಡಿಸಿದ ಕಾಂಟ್ರವರ್ಸಿ ನಟಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ