‘ದಿ ಕಾಶ್ಮೀರ್ ಫೈಲ್ಸ್​’ ಬಗ್ಗೆ ಬಾಲಿವುಡ್​​ನವರು ಯಾಕೆ ಸೈಲೆಂಟ್​ ಆಗಿದ್ದಾರೆ? ಕಂಗನಾ ರಣಾವತ್​ ಕಿಡಿ

ಪ್ರೇಕ್ಷಕರು ‘ದಿ ಕಾಶ್ಮೀರ್ ಫೈಲ್ಸ್​’ ಚಿತ್ರವನ್ನು ಮುಗಿಬಿದ್ದು ನೋಡುತ್ತಿದ್ದಾರೆ. ಆದರೆ ಈ ಸಿನಿಮಾ ಬಗ್ಗೆ ಬಾಲಿವುಡ್​ ಸೆಲೆಬ್ರಿಟಿಗಳು ಮೌನ ವಹಿಸಿರುವುದು ಕಂಗನಾ ರಣಾವತ್​ ಅವರ ಅಸಮಾಧಾನಕ್ಕೆ ಕಾರಣ ಆಗಿದೆ.

‘ದಿ ಕಾಶ್ಮೀರ್ ಫೈಲ್ಸ್​’ ಬಗ್ಗೆ ಬಾಲಿವುಡ್​​ನವರು ಯಾಕೆ ಸೈಲೆಂಟ್​ ಆಗಿದ್ದಾರೆ? ಕಂಗನಾ ರಣಾವತ್​ ಕಿಡಿ
ಕಂಗನಾ ರಣಾವತ್, ಅನುಪಮ್ ಖೇರ್,
Follow us
| Updated By: ಮದನ್​ ಕುಮಾರ್​

Updated on: Mar 14, 2022 | 8:03 AM

ಗಲ್ಲಾಪೆಟ್ಟಿಗೆಯಲ್ಲಿ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ (The Kashmir Files Movie) ಮೋಡಿ ಮಾಡಿದೆ. ಮೊದಲ ದಿನ ಕೇವಲ 3.5 ಕೋಟಿ ರೂಪಾಯಿ ಗಳಿಸಿದ್ದ ಈ ಚಿತ್ರ ಎರಡನೇ ದಿನದ ಗಳಿಕೆಯಲ್ಲಿ ಭಾರಿ ಏರಿಕೆ ಕಂಡಿದೆ. ಶನಿವಾರ (ಮಾ.12) ಬರೋಬ್ಬರಿ 8.5 ಕೋಟಿ ರೂಪಾಯಿ ಕಲೆಕ್ಷನ್​ ಆಗಿದೆ. ಹಲವು ಕಾರಣಗಳಿಂದಾಗಿ ಈ ಸಿನಿಮಾ ಬಗ್ಗೆ ಪ್ರೇಕ್ಷಕರು ಆಸಕ್ತಿ ತೋರಿಸುತ್ತಿದ್ದಾರೆ. ಮೂರನೇ ದಿನ ಕೂಡ ದೇಶದೆಲ್ಲೆಡೆ ಹೌಸ್​ಫುಲ್​ ಪ್ರದರ್ಶನ ಕಂಡಿದೆ. ಜನರು ಮುಗಿಬಿದ್ದು ಈ ಚಿತ್ರವನ್ನು ನೋಡುತ್ತಿದ್ದಾರೆ. ಇಷ್ಟೆಲ್ಲ ಆಗಿದ್ದರೂ ಕೂಡ ಬಾಲಿವುಡ್​ನ (Bollywood) ಬಹುತೇಕರು ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಬಗ್ಗೆ ಏನನ್ನೂ ಮಾತನಾಡುತ್ತಿಲ್ಲ. ಈ ಬೆಳವಣಿಗೆ ಬಗ್ಗೆ ನಟಿ ಕಂಗನಾ ರಣಾವತ್​ (Kangana Ranaut) ಗುಡುಗಿದ್ದಾರೆ. ಈ ಕುರಿತು ಅವರು ಸೋಶಿಯಲ್​ ಮೀಡಿಯಾದಲ್ಲಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ವಿವೇಕ್​ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾಗೆ ನಿರ್ಮಾಪಕ ಅಭಿಷೇಕ್​ ಅಗರ್​ವಾಲ್ ಅವರು ಬಂಡವಾಳ ಹೂಡಿದ್ದಾರೆ. ಕರ್ನಾಟಕ ಸೇರಿ ಅನೇಕ ರಾಜ್ಯಗಳಲ್ಲಿ ಈ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಲಾಗಿದೆ.

ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ಕುರಿತು ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ತಯಾರಾಗಿದೆ. ಆ ಕಾರಣದಿಂದ ಕೆಲವು ವಿವಾದಗಳು ಕೂಡ ಹುಟ್ಟಿಕೊಂಡಿವೆ. ಒಂದು ವರ್ಗದ ಜನರು ಈ ಸಿನಿಮಾ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಪ್ರೇಕ್ಷಕರು ಈ ಚಿತ್ರವನ್ನು ಮುಗಿಬಿದ್ದು ನೋಡುತ್ತಿದ್ದಾರೆ. ಬಾಕ್ಸ್​ ಆಫೀಸ್​ನಲ್ಲಿ ಸಾಧನೆ ಮಾಡುತ್ತಿರುವ ಈ ಚಿತ್ರದ ಬಗ್ಗೆ ಬಾಲಿವುಡ್​ ಸೆಲೆಬ್ರಿಟಿಗಳು ಮೌನ ವಹಿಸಿರುವುದು ಕಂಗನಾ ರಣಾವತ್​ ಅವರ ಅಸಾಮಾಧಾನಕ್ಕೆ ಕಾರಣ ಆಗಿದೆ.

‘ಈ ಸಿನಿಮಾದ ಕಂಟೆಂಟ್​ ಮಾತ್ರವಲ್ಲದೇ ಬಾಕ್ಸ್​ ಆಫೀಸ್​ ಗಳಿಕೆ ಕೂಡ ಗಮನಾರ್ಹ ಆಗಿವೆ. ಈ ಬಗ್ಗೆ ಬಾಲಿವುಡ್​ನಲ್ಲಿ ಸೃಷ್ಟಿ ಆಗಿರುವ ಮೌನವನ್ನು ಗಮನಿಸಿ. ಬಂಡವಾಳ ಮತ್ತು ಲಾಭದ ದೃಷ್ಟಿಯಿಂದ ನೋಡಿದರೆ ಈ ವರ್ಷ ಅತಿ ಹೆಚ್ಚು ಲಾಭ ಮಾಡಿದ ಸಿನಿಮಾ ಇದಾಗಲಿದೆ. ಕೊರೊನಾ ಬಳಿಕ ದೊಡ್ಡ ಸಿನಿಮಾಗಳಿಗೆ ಮಾತ್ರ ಥಿಯೇಟರ್​ಗಳು ಸೂಕ್ತ ಎಂಬ ಕಲ್ಪನೆಯನ್ನು ಈ ಚಿತ್ರ ಹೊಡೆದುಹಾಕಿದೆ. ಮುಂಜಾನೆ 6 ಗಂಟೆಯ ಶೋಗಳು ಹೌಸ್​ಫುಲ್​ ಆಗುತ್ತಿವೆ. ಇದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಇಡೀ ಜಗತ್ತು ಈ ಚಿತ್ರವನ್ನು ನೋಡುತ್ತಿದೆ. ಆದರೆ ಬಾಲಿವುಡ್​ನವರು ಸೈಲೆಂಟ್​ ಆಗಿದ್ದಾರೆ’ ಎಂದು ಕಂಗನಾ ಇನ್​ಸ್ಟಾಗ್ರಾಮ್​ನಲ್ಲಿ ಬರೆದುಕೊಂಡಿದ್ದಾರೆ.

ಶನಿವಾರ (ಮಾ.12) ಸಂಜೆ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ತಂಡವು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿತ್ತು. ಭೇಟಿ ಸಮಯದಲ್ಲಿ ಈ ಸಿನಿಮಾ ಬಗ್ಗೆ ಮೋದಿ ಅವರು ಮೆಚ್ಚುಗೆಯ ಮಾತುಗಳನ್ನು ತಿಳಿಸಿರುವುದು ಚಿತ್ರತಂಡದ ಖುಷಿಗೆ ಕಾರಣ ಆಗಿದೆ. ಈ ಕುರಿತು ಸೋಶಿಯಲ್​ ಮೀಡಿಯಾದಲ್ಲಿ ಚಿತ್ರತಂಡದವರು ಪೋಸ್ಟ್​ ಮಾಡಿಕೊಂಡಿದ್ದಾರೆ. ಆ ಬಳಿಕ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಬಗ್ಗೆ ಜನರಿಗೆ ಆಸಕ್ತಿ ಹೆಚ್ಚಿದೆ. ಅನುಪಮ್​ ಖೇರ್​, ದರ್ಶನ್​ ಕುಮಾರ್​, ಪಲ್ಲವಿ ಜೋಶಿ, ಪ್ರಕಾಶ್​ ಬೆಳವಾಡಿ, ಮಿಥುನ್​ ಚಕ್ರವರ್ತಿ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ:

ಜಮ್ಮು ಮಲ್ಟಿಪ್ಲೆಕ್ಸ್​ನಲ್ಲಿ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಪ್ರದರ್ಶನಕ್ಕೆ ತಡೆ; ವೈರಲ್​ ಆಗಿದೆ ವಿಡಿಯೋ

ಬೆಂಗಳೂರಿನ ಒರಾಯನ್ ಮಾಲ್​ನಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ವೀಕ್ಷಿಸಿದ ಸಿಎಂ ಬೊಮ್ಮಾಯಿ, ಚಿತ್ರ ತಂಡಕ್ಕೆ ಕೊಟ್ಟರು ದೊಡ್ಡ ಗಿಫ್ಟ್!

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ