AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಕಾಶ್ಮೀರ್ ಫೈಲ್ಸ್​’ ಬಗ್ಗೆ ಬಾಲಿವುಡ್​​ನವರು ಯಾಕೆ ಸೈಲೆಂಟ್​ ಆಗಿದ್ದಾರೆ? ಕಂಗನಾ ರಣಾವತ್​ ಕಿಡಿ

ಪ್ರೇಕ್ಷಕರು ‘ದಿ ಕಾಶ್ಮೀರ್ ಫೈಲ್ಸ್​’ ಚಿತ್ರವನ್ನು ಮುಗಿಬಿದ್ದು ನೋಡುತ್ತಿದ್ದಾರೆ. ಆದರೆ ಈ ಸಿನಿಮಾ ಬಗ್ಗೆ ಬಾಲಿವುಡ್​ ಸೆಲೆಬ್ರಿಟಿಗಳು ಮೌನ ವಹಿಸಿರುವುದು ಕಂಗನಾ ರಣಾವತ್​ ಅವರ ಅಸಮಾಧಾನಕ್ಕೆ ಕಾರಣ ಆಗಿದೆ.

‘ದಿ ಕಾಶ್ಮೀರ್ ಫೈಲ್ಸ್​’ ಬಗ್ಗೆ ಬಾಲಿವುಡ್​​ನವರು ಯಾಕೆ ಸೈಲೆಂಟ್​ ಆಗಿದ್ದಾರೆ? ಕಂಗನಾ ರಣಾವತ್​ ಕಿಡಿ
ಕಂಗನಾ ರಣಾವತ್, ಅನುಪಮ್ ಖೇರ್,
TV9 Web
| Edited By: |

Updated on: Mar 14, 2022 | 8:03 AM

Share

ಗಲ್ಲಾಪೆಟ್ಟಿಗೆಯಲ್ಲಿ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ (The Kashmir Files Movie) ಮೋಡಿ ಮಾಡಿದೆ. ಮೊದಲ ದಿನ ಕೇವಲ 3.5 ಕೋಟಿ ರೂಪಾಯಿ ಗಳಿಸಿದ್ದ ಈ ಚಿತ್ರ ಎರಡನೇ ದಿನದ ಗಳಿಕೆಯಲ್ಲಿ ಭಾರಿ ಏರಿಕೆ ಕಂಡಿದೆ. ಶನಿವಾರ (ಮಾ.12) ಬರೋಬ್ಬರಿ 8.5 ಕೋಟಿ ರೂಪಾಯಿ ಕಲೆಕ್ಷನ್​ ಆಗಿದೆ. ಹಲವು ಕಾರಣಗಳಿಂದಾಗಿ ಈ ಸಿನಿಮಾ ಬಗ್ಗೆ ಪ್ರೇಕ್ಷಕರು ಆಸಕ್ತಿ ತೋರಿಸುತ್ತಿದ್ದಾರೆ. ಮೂರನೇ ದಿನ ಕೂಡ ದೇಶದೆಲ್ಲೆಡೆ ಹೌಸ್​ಫುಲ್​ ಪ್ರದರ್ಶನ ಕಂಡಿದೆ. ಜನರು ಮುಗಿಬಿದ್ದು ಈ ಚಿತ್ರವನ್ನು ನೋಡುತ್ತಿದ್ದಾರೆ. ಇಷ್ಟೆಲ್ಲ ಆಗಿದ್ದರೂ ಕೂಡ ಬಾಲಿವುಡ್​ನ (Bollywood) ಬಹುತೇಕರು ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಬಗ್ಗೆ ಏನನ್ನೂ ಮಾತನಾಡುತ್ತಿಲ್ಲ. ಈ ಬೆಳವಣಿಗೆ ಬಗ್ಗೆ ನಟಿ ಕಂಗನಾ ರಣಾವತ್​ (Kangana Ranaut) ಗುಡುಗಿದ್ದಾರೆ. ಈ ಕುರಿತು ಅವರು ಸೋಶಿಯಲ್​ ಮೀಡಿಯಾದಲ್ಲಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ವಿವೇಕ್​ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾಗೆ ನಿರ್ಮಾಪಕ ಅಭಿಷೇಕ್​ ಅಗರ್​ವಾಲ್ ಅವರು ಬಂಡವಾಳ ಹೂಡಿದ್ದಾರೆ. ಕರ್ನಾಟಕ ಸೇರಿ ಅನೇಕ ರಾಜ್ಯಗಳಲ್ಲಿ ಈ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಲಾಗಿದೆ.

ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ಕುರಿತು ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ತಯಾರಾಗಿದೆ. ಆ ಕಾರಣದಿಂದ ಕೆಲವು ವಿವಾದಗಳು ಕೂಡ ಹುಟ್ಟಿಕೊಂಡಿವೆ. ಒಂದು ವರ್ಗದ ಜನರು ಈ ಸಿನಿಮಾ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಪ್ರೇಕ್ಷಕರು ಈ ಚಿತ್ರವನ್ನು ಮುಗಿಬಿದ್ದು ನೋಡುತ್ತಿದ್ದಾರೆ. ಬಾಕ್ಸ್​ ಆಫೀಸ್​ನಲ್ಲಿ ಸಾಧನೆ ಮಾಡುತ್ತಿರುವ ಈ ಚಿತ್ರದ ಬಗ್ಗೆ ಬಾಲಿವುಡ್​ ಸೆಲೆಬ್ರಿಟಿಗಳು ಮೌನ ವಹಿಸಿರುವುದು ಕಂಗನಾ ರಣಾವತ್​ ಅವರ ಅಸಾಮಾಧಾನಕ್ಕೆ ಕಾರಣ ಆಗಿದೆ.

‘ಈ ಸಿನಿಮಾದ ಕಂಟೆಂಟ್​ ಮಾತ್ರವಲ್ಲದೇ ಬಾಕ್ಸ್​ ಆಫೀಸ್​ ಗಳಿಕೆ ಕೂಡ ಗಮನಾರ್ಹ ಆಗಿವೆ. ಈ ಬಗ್ಗೆ ಬಾಲಿವುಡ್​ನಲ್ಲಿ ಸೃಷ್ಟಿ ಆಗಿರುವ ಮೌನವನ್ನು ಗಮನಿಸಿ. ಬಂಡವಾಳ ಮತ್ತು ಲಾಭದ ದೃಷ್ಟಿಯಿಂದ ನೋಡಿದರೆ ಈ ವರ್ಷ ಅತಿ ಹೆಚ್ಚು ಲಾಭ ಮಾಡಿದ ಸಿನಿಮಾ ಇದಾಗಲಿದೆ. ಕೊರೊನಾ ಬಳಿಕ ದೊಡ್ಡ ಸಿನಿಮಾಗಳಿಗೆ ಮಾತ್ರ ಥಿಯೇಟರ್​ಗಳು ಸೂಕ್ತ ಎಂಬ ಕಲ್ಪನೆಯನ್ನು ಈ ಚಿತ್ರ ಹೊಡೆದುಹಾಕಿದೆ. ಮುಂಜಾನೆ 6 ಗಂಟೆಯ ಶೋಗಳು ಹೌಸ್​ಫುಲ್​ ಆಗುತ್ತಿವೆ. ಇದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಇಡೀ ಜಗತ್ತು ಈ ಚಿತ್ರವನ್ನು ನೋಡುತ್ತಿದೆ. ಆದರೆ ಬಾಲಿವುಡ್​ನವರು ಸೈಲೆಂಟ್​ ಆಗಿದ್ದಾರೆ’ ಎಂದು ಕಂಗನಾ ಇನ್​ಸ್ಟಾಗ್ರಾಮ್​ನಲ್ಲಿ ಬರೆದುಕೊಂಡಿದ್ದಾರೆ.

ಶನಿವಾರ (ಮಾ.12) ಸಂಜೆ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ತಂಡವು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿತ್ತು. ಭೇಟಿ ಸಮಯದಲ್ಲಿ ಈ ಸಿನಿಮಾ ಬಗ್ಗೆ ಮೋದಿ ಅವರು ಮೆಚ್ಚುಗೆಯ ಮಾತುಗಳನ್ನು ತಿಳಿಸಿರುವುದು ಚಿತ್ರತಂಡದ ಖುಷಿಗೆ ಕಾರಣ ಆಗಿದೆ. ಈ ಕುರಿತು ಸೋಶಿಯಲ್​ ಮೀಡಿಯಾದಲ್ಲಿ ಚಿತ್ರತಂಡದವರು ಪೋಸ್ಟ್​ ಮಾಡಿಕೊಂಡಿದ್ದಾರೆ. ಆ ಬಳಿಕ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಬಗ್ಗೆ ಜನರಿಗೆ ಆಸಕ್ತಿ ಹೆಚ್ಚಿದೆ. ಅನುಪಮ್​ ಖೇರ್​, ದರ್ಶನ್​ ಕುಮಾರ್​, ಪಲ್ಲವಿ ಜೋಶಿ, ಪ್ರಕಾಶ್​ ಬೆಳವಾಡಿ, ಮಿಥುನ್​ ಚಕ್ರವರ್ತಿ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ:

ಜಮ್ಮು ಮಲ್ಟಿಪ್ಲೆಕ್ಸ್​ನಲ್ಲಿ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಪ್ರದರ್ಶನಕ್ಕೆ ತಡೆ; ವೈರಲ್​ ಆಗಿದೆ ವಿಡಿಯೋ

ಬೆಂಗಳೂರಿನ ಒರಾಯನ್ ಮಾಲ್​ನಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ವೀಕ್ಷಿಸಿದ ಸಿಎಂ ಬೊಮ್ಮಾಯಿ, ಚಿತ್ರ ತಂಡಕ್ಕೆ ಕೊಟ್ಟರು ದೊಡ್ಡ ಗಿಫ್ಟ್!

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!