AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಕಾಶ್ಮೀರ್ ಫೈಲ್ಸ್​’ ಬಗ್ಗೆ ಬಾಲಿವುಡ್​​ನವರು ಯಾಕೆ ಸೈಲೆಂಟ್​ ಆಗಿದ್ದಾರೆ? ಕಂಗನಾ ರಣಾವತ್​ ಕಿಡಿ

ಪ್ರೇಕ್ಷಕರು ‘ದಿ ಕಾಶ್ಮೀರ್ ಫೈಲ್ಸ್​’ ಚಿತ್ರವನ್ನು ಮುಗಿಬಿದ್ದು ನೋಡುತ್ತಿದ್ದಾರೆ. ಆದರೆ ಈ ಸಿನಿಮಾ ಬಗ್ಗೆ ಬಾಲಿವುಡ್​ ಸೆಲೆಬ್ರಿಟಿಗಳು ಮೌನ ವಹಿಸಿರುವುದು ಕಂಗನಾ ರಣಾವತ್​ ಅವರ ಅಸಮಾಧಾನಕ್ಕೆ ಕಾರಣ ಆಗಿದೆ.

‘ದಿ ಕಾಶ್ಮೀರ್ ಫೈಲ್ಸ್​’ ಬಗ್ಗೆ ಬಾಲಿವುಡ್​​ನವರು ಯಾಕೆ ಸೈಲೆಂಟ್​ ಆಗಿದ್ದಾರೆ? ಕಂಗನಾ ರಣಾವತ್​ ಕಿಡಿ
ಕಂಗನಾ ರಣಾವತ್, ಅನುಪಮ್ ಖೇರ್,
TV9 Web
| Edited By: |

Updated on: Mar 14, 2022 | 8:03 AM

Share

ಗಲ್ಲಾಪೆಟ್ಟಿಗೆಯಲ್ಲಿ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ (The Kashmir Files Movie) ಮೋಡಿ ಮಾಡಿದೆ. ಮೊದಲ ದಿನ ಕೇವಲ 3.5 ಕೋಟಿ ರೂಪಾಯಿ ಗಳಿಸಿದ್ದ ಈ ಚಿತ್ರ ಎರಡನೇ ದಿನದ ಗಳಿಕೆಯಲ್ಲಿ ಭಾರಿ ಏರಿಕೆ ಕಂಡಿದೆ. ಶನಿವಾರ (ಮಾ.12) ಬರೋಬ್ಬರಿ 8.5 ಕೋಟಿ ರೂಪಾಯಿ ಕಲೆಕ್ಷನ್​ ಆಗಿದೆ. ಹಲವು ಕಾರಣಗಳಿಂದಾಗಿ ಈ ಸಿನಿಮಾ ಬಗ್ಗೆ ಪ್ರೇಕ್ಷಕರು ಆಸಕ್ತಿ ತೋರಿಸುತ್ತಿದ್ದಾರೆ. ಮೂರನೇ ದಿನ ಕೂಡ ದೇಶದೆಲ್ಲೆಡೆ ಹೌಸ್​ಫುಲ್​ ಪ್ರದರ್ಶನ ಕಂಡಿದೆ. ಜನರು ಮುಗಿಬಿದ್ದು ಈ ಚಿತ್ರವನ್ನು ನೋಡುತ್ತಿದ್ದಾರೆ. ಇಷ್ಟೆಲ್ಲ ಆಗಿದ್ದರೂ ಕೂಡ ಬಾಲಿವುಡ್​ನ (Bollywood) ಬಹುತೇಕರು ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಬಗ್ಗೆ ಏನನ್ನೂ ಮಾತನಾಡುತ್ತಿಲ್ಲ. ಈ ಬೆಳವಣಿಗೆ ಬಗ್ಗೆ ನಟಿ ಕಂಗನಾ ರಣಾವತ್​ (Kangana Ranaut) ಗುಡುಗಿದ್ದಾರೆ. ಈ ಕುರಿತು ಅವರು ಸೋಶಿಯಲ್​ ಮೀಡಿಯಾದಲ್ಲಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ವಿವೇಕ್​ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾಗೆ ನಿರ್ಮಾಪಕ ಅಭಿಷೇಕ್​ ಅಗರ್​ವಾಲ್ ಅವರು ಬಂಡವಾಳ ಹೂಡಿದ್ದಾರೆ. ಕರ್ನಾಟಕ ಸೇರಿ ಅನೇಕ ರಾಜ್ಯಗಳಲ್ಲಿ ಈ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಲಾಗಿದೆ.

ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ಕುರಿತು ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ತಯಾರಾಗಿದೆ. ಆ ಕಾರಣದಿಂದ ಕೆಲವು ವಿವಾದಗಳು ಕೂಡ ಹುಟ್ಟಿಕೊಂಡಿವೆ. ಒಂದು ವರ್ಗದ ಜನರು ಈ ಸಿನಿಮಾ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಪ್ರೇಕ್ಷಕರು ಈ ಚಿತ್ರವನ್ನು ಮುಗಿಬಿದ್ದು ನೋಡುತ್ತಿದ್ದಾರೆ. ಬಾಕ್ಸ್​ ಆಫೀಸ್​ನಲ್ಲಿ ಸಾಧನೆ ಮಾಡುತ್ತಿರುವ ಈ ಚಿತ್ರದ ಬಗ್ಗೆ ಬಾಲಿವುಡ್​ ಸೆಲೆಬ್ರಿಟಿಗಳು ಮೌನ ವಹಿಸಿರುವುದು ಕಂಗನಾ ರಣಾವತ್​ ಅವರ ಅಸಾಮಾಧಾನಕ್ಕೆ ಕಾರಣ ಆಗಿದೆ.

‘ಈ ಸಿನಿಮಾದ ಕಂಟೆಂಟ್​ ಮಾತ್ರವಲ್ಲದೇ ಬಾಕ್ಸ್​ ಆಫೀಸ್​ ಗಳಿಕೆ ಕೂಡ ಗಮನಾರ್ಹ ಆಗಿವೆ. ಈ ಬಗ್ಗೆ ಬಾಲಿವುಡ್​ನಲ್ಲಿ ಸೃಷ್ಟಿ ಆಗಿರುವ ಮೌನವನ್ನು ಗಮನಿಸಿ. ಬಂಡವಾಳ ಮತ್ತು ಲಾಭದ ದೃಷ್ಟಿಯಿಂದ ನೋಡಿದರೆ ಈ ವರ್ಷ ಅತಿ ಹೆಚ್ಚು ಲಾಭ ಮಾಡಿದ ಸಿನಿಮಾ ಇದಾಗಲಿದೆ. ಕೊರೊನಾ ಬಳಿಕ ದೊಡ್ಡ ಸಿನಿಮಾಗಳಿಗೆ ಮಾತ್ರ ಥಿಯೇಟರ್​ಗಳು ಸೂಕ್ತ ಎಂಬ ಕಲ್ಪನೆಯನ್ನು ಈ ಚಿತ್ರ ಹೊಡೆದುಹಾಕಿದೆ. ಮುಂಜಾನೆ 6 ಗಂಟೆಯ ಶೋಗಳು ಹೌಸ್​ಫುಲ್​ ಆಗುತ್ತಿವೆ. ಇದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಇಡೀ ಜಗತ್ತು ಈ ಚಿತ್ರವನ್ನು ನೋಡುತ್ತಿದೆ. ಆದರೆ ಬಾಲಿವುಡ್​ನವರು ಸೈಲೆಂಟ್​ ಆಗಿದ್ದಾರೆ’ ಎಂದು ಕಂಗನಾ ಇನ್​ಸ್ಟಾಗ್ರಾಮ್​ನಲ್ಲಿ ಬರೆದುಕೊಂಡಿದ್ದಾರೆ.

ಶನಿವಾರ (ಮಾ.12) ಸಂಜೆ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ತಂಡವು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿತ್ತು. ಭೇಟಿ ಸಮಯದಲ್ಲಿ ಈ ಸಿನಿಮಾ ಬಗ್ಗೆ ಮೋದಿ ಅವರು ಮೆಚ್ಚುಗೆಯ ಮಾತುಗಳನ್ನು ತಿಳಿಸಿರುವುದು ಚಿತ್ರತಂಡದ ಖುಷಿಗೆ ಕಾರಣ ಆಗಿದೆ. ಈ ಕುರಿತು ಸೋಶಿಯಲ್​ ಮೀಡಿಯಾದಲ್ಲಿ ಚಿತ್ರತಂಡದವರು ಪೋಸ್ಟ್​ ಮಾಡಿಕೊಂಡಿದ್ದಾರೆ. ಆ ಬಳಿಕ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಬಗ್ಗೆ ಜನರಿಗೆ ಆಸಕ್ತಿ ಹೆಚ್ಚಿದೆ. ಅನುಪಮ್​ ಖೇರ್​, ದರ್ಶನ್​ ಕುಮಾರ್​, ಪಲ್ಲವಿ ಜೋಶಿ, ಪ್ರಕಾಶ್​ ಬೆಳವಾಡಿ, ಮಿಥುನ್​ ಚಕ್ರವರ್ತಿ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ:

ಜಮ್ಮು ಮಲ್ಟಿಪ್ಲೆಕ್ಸ್​ನಲ್ಲಿ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಪ್ರದರ್ಶನಕ್ಕೆ ತಡೆ; ವೈರಲ್​ ಆಗಿದೆ ವಿಡಿಯೋ

ಬೆಂಗಳೂರಿನ ಒರಾಯನ್ ಮಾಲ್​ನಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ವೀಕ್ಷಿಸಿದ ಸಿಎಂ ಬೊಮ್ಮಾಯಿ, ಚಿತ್ರ ತಂಡಕ್ಕೆ ಕೊಟ್ಟರು ದೊಡ್ಡ ಗಿಫ್ಟ್!

Follow Us
ಮೈಸೂರಲ್ಲಿ ಸಿಎಂ ಡಿ.ಕೆ ಶಿವಕುಮಾರ್ ಭರ್ಜರಿ ರೋಡ್ ಶೋ
ಮೈಸೂರಲ್ಲಿ ಸಿಎಂ ಡಿ.ಕೆ ಶಿವಕುಮಾರ್ ಭರ್ಜರಿ ರೋಡ್ ಶೋ
ಶಿರಸಿ ನಗರದ ಹಲವು ಬಡಾವಣೆಗಳು ಮುಳುಗಡೆ, ನಿವಾಸಿಗಳ ಪರದಾಟ
ಶಿರಸಿ ನಗರದ ಹಲವು ಬಡಾವಣೆಗಳು ಮುಳುಗಡೆ, ನಿವಾಸಿಗಳ ಪರದಾಟ
ರಾಜ್ಯದಲ್ಲಿ ನಾಳೆ ನಡೆಯುವ ನೇಮಕಾತಿ ಪರೀಕ್ಷೆಗಳಿಗೆ ಬಿಗಿ ಭದ್ರತೆ
ರಾಜ್ಯದಲ್ಲಿ ನಾಳೆ ನಡೆಯುವ ನೇಮಕಾತಿ ಪರೀಕ್ಷೆಗಳಿಗೆ ಬಿಗಿ ಭದ್ರತೆ
ಸರ್ಕಾರಿ ಹುದ್ದೆಗಳ ನೇಮಕಾತಿಗೆ ಕಟ್ಟುನಿಟ್ಟಿನ ಕ್ರಮ; ಖರ್ಗೆ ಘೋಷಣೆ
ಸರ್ಕಾರಿ ಹುದ್ದೆಗಳ ನೇಮಕಾತಿಗೆ ಕಟ್ಟುನಿಟ್ಟಿನ ಕ್ರಮ; ಖರ್ಗೆ ಘೋಷಣೆ
ಖಾಲಿ ಸೈಟ್​ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು: ಸಿಎಂ ಖಡಕ್ ಸೂಚನೆ
ಖಾಲಿ ಸೈಟ್​ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು: ಸಿಎಂ ಖಡಕ್ ಸೂಚನೆ
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ