AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಕಾಶ್ಮೀರ್ ಫೈಲ್ಸ್​’ ಬಗ್ಗೆ ಬಾಲಿವುಡ್​​ನವರು ಯಾಕೆ ಸೈಲೆಂಟ್​ ಆಗಿದ್ದಾರೆ? ಕಂಗನಾ ರಣಾವತ್​ ಕಿಡಿ

ಪ್ರೇಕ್ಷಕರು ‘ದಿ ಕಾಶ್ಮೀರ್ ಫೈಲ್ಸ್​’ ಚಿತ್ರವನ್ನು ಮುಗಿಬಿದ್ದು ನೋಡುತ್ತಿದ್ದಾರೆ. ಆದರೆ ಈ ಸಿನಿಮಾ ಬಗ್ಗೆ ಬಾಲಿವುಡ್​ ಸೆಲೆಬ್ರಿಟಿಗಳು ಮೌನ ವಹಿಸಿರುವುದು ಕಂಗನಾ ರಣಾವತ್​ ಅವರ ಅಸಮಾಧಾನಕ್ಕೆ ಕಾರಣ ಆಗಿದೆ.

‘ದಿ ಕಾಶ್ಮೀರ್ ಫೈಲ್ಸ್​’ ಬಗ್ಗೆ ಬಾಲಿವುಡ್​​ನವರು ಯಾಕೆ ಸೈಲೆಂಟ್​ ಆಗಿದ್ದಾರೆ? ಕಂಗನಾ ರಣಾವತ್​ ಕಿಡಿ
ಕಂಗನಾ ರಣಾವತ್, ಅನುಪಮ್ ಖೇರ್,
TV9 Web
| Edited By: |

Updated on: Mar 14, 2022 | 8:03 AM

Share

ಗಲ್ಲಾಪೆಟ್ಟಿಗೆಯಲ್ಲಿ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ (The Kashmir Files Movie) ಮೋಡಿ ಮಾಡಿದೆ. ಮೊದಲ ದಿನ ಕೇವಲ 3.5 ಕೋಟಿ ರೂಪಾಯಿ ಗಳಿಸಿದ್ದ ಈ ಚಿತ್ರ ಎರಡನೇ ದಿನದ ಗಳಿಕೆಯಲ್ಲಿ ಭಾರಿ ಏರಿಕೆ ಕಂಡಿದೆ. ಶನಿವಾರ (ಮಾ.12) ಬರೋಬ್ಬರಿ 8.5 ಕೋಟಿ ರೂಪಾಯಿ ಕಲೆಕ್ಷನ್​ ಆಗಿದೆ. ಹಲವು ಕಾರಣಗಳಿಂದಾಗಿ ಈ ಸಿನಿಮಾ ಬಗ್ಗೆ ಪ್ರೇಕ್ಷಕರು ಆಸಕ್ತಿ ತೋರಿಸುತ್ತಿದ್ದಾರೆ. ಮೂರನೇ ದಿನ ಕೂಡ ದೇಶದೆಲ್ಲೆಡೆ ಹೌಸ್​ಫುಲ್​ ಪ್ರದರ್ಶನ ಕಂಡಿದೆ. ಜನರು ಮುಗಿಬಿದ್ದು ಈ ಚಿತ್ರವನ್ನು ನೋಡುತ್ತಿದ್ದಾರೆ. ಇಷ್ಟೆಲ್ಲ ಆಗಿದ್ದರೂ ಕೂಡ ಬಾಲಿವುಡ್​ನ (Bollywood) ಬಹುತೇಕರು ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಬಗ್ಗೆ ಏನನ್ನೂ ಮಾತನಾಡುತ್ತಿಲ್ಲ. ಈ ಬೆಳವಣಿಗೆ ಬಗ್ಗೆ ನಟಿ ಕಂಗನಾ ರಣಾವತ್​ (Kangana Ranaut) ಗುಡುಗಿದ್ದಾರೆ. ಈ ಕುರಿತು ಅವರು ಸೋಶಿಯಲ್​ ಮೀಡಿಯಾದಲ್ಲಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ವಿವೇಕ್​ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾಗೆ ನಿರ್ಮಾಪಕ ಅಭಿಷೇಕ್​ ಅಗರ್​ವಾಲ್ ಅವರು ಬಂಡವಾಳ ಹೂಡಿದ್ದಾರೆ. ಕರ್ನಾಟಕ ಸೇರಿ ಅನೇಕ ರಾಜ್ಯಗಳಲ್ಲಿ ಈ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಲಾಗಿದೆ.

ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ಕುರಿತು ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ತಯಾರಾಗಿದೆ. ಆ ಕಾರಣದಿಂದ ಕೆಲವು ವಿವಾದಗಳು ಕೂಡ ಹುಟ್ಟಿಕೊಂಡಿವೆ. ಒಂದು ವರ್ಗದ ಜನರು ಈ ಸಿನಿಮಾ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಪ್ರೇಕ್ಷಕರು ಈ ಚಿತ್ರವನ್ನು ಮುಗಿಬಿದ್ದು ನೋಡುತ್ತಿದ್ದಾರೆ. ಬಾಕ್ಸ್​ ಆಫೀಸ್​ನಲ್ಲಿ ಸಾಧನೆ ಮಾಡುತ್ತಿರುವ ಈ ಚಿತ್ರದ ಬಗ್ಗೆ ಬಾಲಿವುಡ್​ ಸೆಲೆಬ್ರಿಟಿಗಳು ಮೌನ ವಹಿಸಿರುವುದು ಕಂಗನಾ ರಣಾವತ್​ ಅವರ ಅಸಾಮಾಧಾನಕ್ಕೆ ಕಾರಣ ಆಗಿದೆ.

‘ಈ ಸಿನಿಮಾದ ಕಂಟೆಂಟ್​ ಮಾತ್ರವಲ್ಲದೇ ಬಾಕ್ಸ್​ ಆಫೀಸ್​ ಗಳಿಕೆ ಕೂಡ ಗಮನಾರ್ಹ ಆಗಿವೆ. ಈ ಬಗ್ಗೆ ಬಾಲಿವುಡ್​ನಲ್ಲಿ ಸೃಷ್ಟಿ ಆಗಿರುವ ಮೌನವನ್ನು ಗಮನಿಸಿ. ಬಂಡವಾಳ ಮತ್ತು ಲಾಭದ ದೃಷ್ಟಿಯಿಂದ ನೋಡಿದರೆ ಈ ವರ್ಷ ಅತಿ ಹೆಚ್ಚು ಲಾಭ ಮಾಡಿದ ಸಿನಿಮಾ ಇದಾಗಲಿದೆ. ಕೊರೊನಾ ಬಳಿಕ ದೊಡ್ಡ ಸಿನಿಮಾಗಳಿಗೆ ಮಾತ್ರ ಥಿಯೇಟರ್​ಗಳು ಸೂಕ್ತ ಎಂಬ ಕಲ್ಪನೆಯನ್ನು ಈ ಚಿತ್ರ ಹೊಡೆದುಹಾಕಿದೆ. ಮುಂಜಾನೆ 6 ಗಂಟೆಯ ಶೋಗಳು ಹೌಸ್​ಫುಲ್​ ಆಗುತ್ತಿವೆ. ಇದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಇಡೀ ಜಗತ್ತು ಈ ಚಿತ್ರವನ್ನು ನೋಡುತ್ತಿದೆ. ಆದರೆ ಬಾಲಿವುಡ್​ನವರು ಸೈಲೆಂಟ್​ ಆಗಿದ್ದಾರೆ’ ಎಂದು ಕಂಗನಾ ಇನ್​ಸ್ಟಾಗ್ರಾಮ್​ನಲ್ಲಿ ಬರೆದುಕೊಂಡಿದ್ದಾರೆ.

ಶನಿವಾರ (ಮಾ.12) ಸಂಜೆ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ತಂಡವು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿತ್ತು. ಭೇಟಿ ಸಮಯದಲ್ಲಿ ಈ ಸಿನಿಮಾ ಬಗ್ಗೆ ಮೋದಿ ಅವರು ಮೆಚ್ಚುಗೆಯ ಮಾತುಗಳನ್ನು ತಿಳಿಸಿರುವುದು ಚಿತ್ರತಂಡದ ಖುಷಿಗೆ ಕಾರಣ ಆಗಿದೆ. ಈ ಕುರಿತು ಸೋಶಿಯಲ್​ ಮೀಡಿಯಾದಲ್ಲಿ ಚಿತ್ರತಂಡದವರು ಪೋಸ್ಟ್​ ಮಾಡಿಕೊಂಡಿದ್ದಾರೆ. ಆ ಬಳಿಕ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಬಗ್ಗೆ ಜನರಿಗೆ ಆಸಕ್ತಿ ಹೆಚ್ಚಿದೆ. ಅನುಪಮ್​ ಖೇರ್​, ದರ್ಶನ್​ ಕುಮಾರ್​, ಪಲ್ಲವಿ ಜೋಶಿ, ಪ್ರಕಾಶ್​ ಬೆಳವಾಡಿ, ಮಿಥುನ್​ ಚಕ್ರವರ್ತಿ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ:

ಜಮ್ಮು ಮಲ್ಟಿಪ್ಲೆಕ್ಸ್​ನಲ್ಲಿ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಪ್ರದರ್ಶನಕ್ಕೆ ತಡೆ; ವೈರಲ್​ ಆಗಿದೆ ವಿಡಿಯೋ

ಬೆಂಗಳೂರಿನ ಒರಾಯನ್ ಮಾಲ್​ನಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ವೀಕ್ಷಿಸಿದ ಸಿಎಂ ಬೊಮ್ಮಾಯಿ, ಚಿತ್ರ ತಂಡಕ್ಕೆ ಕೊಟ್ಟರು ದೊಡ್ಡ ಗಿಫ್ಟ್!

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್