AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋನಾಕ್ಷಿ ಸಿನ್ಹಾ ವಿರುದ್ಧ ಕಿಡಿಕಾರಿದ ಕಂಗನಾ ರಣಾವತ್; ಖಾರದ ಮಾತುಗಳಲ್ಲಿ ಟೀಕೆ

ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲ ನೀಡಿದ ನಟಿಯೊಬ್ಬರ ವಿರುದ್ಧ ಕಂಗನಾ ರಣಾವತ್ ಗರಂ ಆಗಿದ್ದಾರೆ. ಹೆಸರು ಹೇಳದೆಯೇ ಕಟುವಾಗಿ ಟೀಕೆ ಮಾಡಿದ್ದಾರೆ. ಆದರೆ ಅವರು ಟೀಕಿಸಿರುವುದು ಸೋನಾಕ್ಷಿ ಸಿನ್ಹಾ ಅವರನ್ನು ಎಂದು ನೆಟ್ಟಿಗರು ಊಹಿಸಿದ್ದಾರೆ. ಈ ಟೀಕೆಗೆ ಸೋನಾಕ್ಷಿ ಹೇಗೆ ಪ್ರತಿಕ್ರಿಯೆ ನೀಡಲಿದ್ದಾರೆ ಎಂಬ ಕುತೂಹಲ ಸೃಷ್ಟಿ ಆಗಿದೆ.

ಸೋನಾಕ್ಷಿ ಸಿನ್ಹಾ ವಿರುದ್ಧ ಕಿಡಿಕಾರಿದ ಕಂಗನಾ ರಣಾವತ್; ಖಾರದ ಮಾತುಗಳಲ್ಲಿ ಟೀಕೆ
Kangana Ranaut, Sonakshi Sinha
ಮದನ್​ ಕುಮಾರ್​
|

Updated on: Aug 03, 2026 | 3:27 PM

Share

ಬಾಲಿವುಡ್ ಕಂಟ್ರೋವರ್ಸಿ ಕ್ವೀನ್ ಕಂಗನಾ ರಣಾವತ್ (Kangana Ranaut) ಅವರ ಇತ್ತೀಚಿನ ಇನ್‌ಸ್ಟಾಗ್ರಾಮ್ ಪೋಸ್ಟ್‌ ಒಂದು ಬಾಲಿವುಡ್‌ನಲ್ಲಿ ಹೊಸ ವಾಗ್ವಾದಕ್ಕೆ ನಾಂದಿ ಹಾಡಿದೆ. ಕಂಗನಾ ಪೋಸ್ಟ್ ಯಾರ ವಿರುದ್ಧ ಇದೆ ಎಂಬ ಚರ್ಚೆ ಜೋರಾಗಿದೆ. ಸೋನಾಕ್ಷಿ ಸಿನ್ಹಾ ಅವರನ್ನು ಗುರಿಯಾಗಿಸಿಕೊಂಡೇ ಕಂಗನಾ ರಣಾವತ್ ಈ ರೀತಿ ಹೇಳಿದ್ದಾರೆ ಎಂದು ನೆಟ್ಟಿಗರು ಅಂದಾಜಿಸುತ್ತಿದ್ದಾರೆ. ಅಷ್ಟಕ್ಕೂ ಆ ಪೋಸ್ಟ್​​ನಲ್ಲಿ ಏನಿದೆ? ಅದನ್ನು ಕಂಡು ಜನರಿಗೆ ಸೋನಾಕ್ಷಿ ಸಿನ್ಹಾ (Sonakshi Sinha) ನೆನಪಾಗಲು ಕಾರಣ ಏನು? ಮುಂದೆ ಓದಿ..

ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರತಿಭಟನೆ ಮತ್ತು ಜಾರ್ಖಂಡ್ ಪತ್ರಿಕೆ ಸೋರಿಕೆ ಕುರಿತಾಗಿ ಹರಿದಾಡುತ್ತಿದ್ದ ಪೋಸ್ಟ್ ಒಂದಕ್ಕೆ ಕಂಗನಾ ಲೈಕ್ ಮಾಡಿದ್ದಾರೆ ಎನ್ನಲಾದ ಸ್ಕ್ರೀನ್‌ಶಾಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಆದರೆ, ಈ ಸ್ಕ್ರೀನ್‌ಶಾಟ್ ಸಂಪೂರ್ಣ ನಕಲಿ ಎಂದು ಕಂಗನಾ ರಣಾವತ್ ಸ್ಪಷ್ಟನೆ ನೀಡಿದ್ದಾರೆ. ಈ ಸ್ಪಷ್ಟನೆ ನೀಡುತ್ತಲೇ ಕಂಗನಾ ಅವರು ಮತ್ತೊಬ್ಬ ನಟಿಯ ನಡೆ-ನುಡಿ ಮತ್ತು ಶೈಲಿಯನ್ನು ತೀವ್ರವಾಗಿ ಟೀಕಿಸಿದ್ದಾರೆ.

ಜೇಬುಗಳ್ಳರ ರೀತಿ ವರ್ತನೆ:

‘ನಾನು ಯಾರನ್ನೂ ಬಾಡಿ ಶೇಮ್ ಮಾಡುವುದಿಲ್ಲ. ಆದರೆ, ಇತ್ತೀಚೆಗೆ ನಟಿಯೊಬ್ಬಳು ಹಾಫ್‌ ಪ್ಯಾಂಟ್ ಮತ್ತು ಉಲ್ಟಾ ಕ್ಯಾಪ್ ಧರಿಸಿ, ಜೇಬುಗಳ್ಳರ ರೀತಿ ಮಾತನಾಡುತ್ತಾ, ಪ್ರತಿಭಟನಾಕಾರರ ನಡವಳಿಕೆಯನ್ನು ಬೆಂಬಲಿಸುತ್ತಿರುವುದನ್ನು ಗಮನಿಸಿದ್ದೇನೆ. ನೀವು ಹೇಗೆ ಡ್ರೆಸ್ ಮಾಡಿಕೊಳ್ಳುತ್ತೀರಿ ಎಂಬುದು ನಿಮ್ಮ ಭಾವನೆಗಳನ್ನು ತೋರಿಸುತ್ತದೆ’ ಎಂದು ಕಂಗನಾ ಹೇಳಿದ್ದಾರೆ.

‘ಆತ್ಮೀಯ ನಟಿಯೇ, ನಿನ್ನ ಸಂಗಾತಿ ನಿನಗೆ ಒಬ್ಬ ಜೇಬುಗಳ್ಳನಂತೆ ಭಾಸವಾಗುವಂತೆ ಮಾಡುತ್ತಿದ್ದಾರೆ. ನೀನು ಮೊದಲು ಎಷ್ಟು ಅಚ್ಚುಕಟ್ಟಾಗಿ ಮಾತನಾಡುತ್ತಿದ್ದೆ, ಡ್ರೆಸ್ ಮಾಡುತ್ತಿದ್ದೆ. ನಿನಗೆ ಈಗೇನಾಯಿತು? ನಿನ್ನ ಅಭಿಪ್ರಾಯಗಳು ನಿನ್ನವೇ ಆಗಿರಲಿ. ಆದರೆ ಸ್ಟೈಲಿಂಗ್ ವಿಷಯದಲ್ಲಿ ಸುಧಾರಣೆ ಅಗತ್ಯವಿದೆ. ಸಹಾಯ ಬೇಕಾದರೆ ನಾನು ಸದಾ ಸಿದ್ಧ’ ಎಂದು ಕಂಗನಾ ಅವರು ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ.

ಸೋನಾಕ್ಷಿ ಅವರತ್ತ ಬೆರಳು ತೋರಿಸಿದ ನೆಟ್ಟಿಗರು:

ಕಂಗನಾ ಅವರು ಈ ಪೋಸ್ಟ್ ಮಾಡಿರುವುದು ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ಅವರನ್ನು ಉದ್ದೇಶಿಸಿ ಎಂದು ಸೋಶಿಯಲ್ ಮೀಡಿಯಾದಲ್ಲಿ ಬಳಕೆದಾರರು ಚರ್ಚಿಸುತ್ತಿದ್ದಾರೆ. ಇತ್ತೀಚೆಗೆ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಗಳ ಬಗ್ಗೆ ಬಾಲಿವುಡ್‌ನಿಂದ ಮೊದಲು ಧ್ವನಿ ಎತ್ತಿದವರಲ್ಲಿ ಸೋನಾಕ್ಷಿ ಸಿನ್ಹಾ ಕೂಡ ಪ್ರಮುಖರಾಗಿದ್ದರು.

ಇದನ್ನೂ ಓದಿ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಸೋನಾಕ್ಷಿ ಸಿನ್ಹಾ ಸಂಭ್ರಮ: ವಿದ್ಯಾರ್ಥಿಗಳ ಬಳಿ ಕ್ಷಮೆ ಕೇಳಿದ ನಟಿ

ಇನ್ನು, ಕಂಗನಾ ಹೇಳಿರುವಂತೆ ಡ್ರೆಸ್ ಮಾಡಿಕೊಳ್ಳುವುದು ಕೂಡ ಸೋನಾಕ್ಷಿ ಸಿನ್ಹಾ ಅವರೇ. ಟಿ-ಶರ್ಟ್, ಶಾರ್ಟ್ಸ್ ಹಾಗೂ ಕ್ಯಾಪ್ ಧರಿಸಿ ಸೋನಾಕ್ಷಿ ಅವರು ಹಂಚಿಕೊಂಡಿದ್ದ ವಿಡಿಯೋ ಒಂದರಲ್ಲಿ, ಲಡಾಖ್‌ನ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬೆಂಬಲಕ್ಕೆ ನಿಂತು ಸರ್ಕಾರದ ವಿರುದ್ಧ ಮಾತನಾಡಿದ್ದರು. ಪ್ರಸ್ತುತ ಕಂಗನಾ ಅವರ ಈ ಹೇಳಿಕೆಯು ಬಾಲಿವುಡ್‌ನಲ್ಲಿ ಹೊಸ ಜಗಳಕ್ಕೆ ಹಾದಿಮಾಡಿಕೊಟ್ಟಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ