AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೇವರೇ ಕುಸಿದುಬಿದ್ದಂತೆ ಭಾಸವಾಯ್ತು’; ಸದ್ಗುರು ಅನಾರೋಗ್ಯದ ಬಗ್ಗೆ ಕಂಗನಾ ಭಾವುಕ ಮಾತು

‘ಸದ್ಗುರು ಅವರು ಆರೋಗ್ಯವಾಗಿ ಇರಲಿದ್ದಾರೆ. ಹಾಗಾಗದೇ ಇದ್ದಲ್ಲಿ ಸೂರ್ಯ ಉದಯಿಸುವುದಿಲ್ಲ, ಭೂಮಿ ಚಲಿಸುವುದಿಲ್ಲ. ಈ ಕ್ಷಣವು ನಿರ್ಜೀವ ಮತ್ತು ನಿಶ್ಚಲ ಎನಿಸುತ್ತದೆ’ ಎಂದಿದ್ದಾರೆ ಕಂಗನಾ.  ಸದ್ಯ ಅವರು ಮಾಡಿರೋ ಪೋಸ್ಟ್ ವೈರಲ್ ಆಗುತ್ತಿದೆ.

‘ದೇವರೇ ಕುಸಿದುಬಿದ್ದಂತೆ ಭಾಸವಾಯ್ತು’; ಸದ್ಗುರು ಅನಾರೋಗ್ಯದ ಬಗ್ಗೆ ಕಂಗನಾ ಭಾವುಕ ಮಾತು
ಕಂಗನಾ-ಸದ್ಗುರು
ರಾಜೇಶ್ ದುಗ್ಗುಮನೆ
|

Updated on: Mar 21, 2024 | 10:44 AM

Share

ನಟಿ ಕಂಗನಾ ರಣಾವತ್ (Kangana Ranaut) ಅವರು ಆಧ್ಯತ್ಮದ ಬಗ್ಗೆ, ಆಧ್ಯಾತ್ಮಿಕ ಆಲೋಚನೆಗಳ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದ್ದಾರೆ. ಅವರಿಗೆ ಆಧ್ಯಾತ್ಮ ಗುರು ಜಗ್ಗಿ ವಾಸುದೇವ ಅವರ ಬಗ್ಗೆ ವಿಶೇಷ ಗೌರವ ಇದೆ. ಇತ್ತೀಚೆಗೆ ಸದ್ಗುರು ಅವರು ಮಿದುಳಿನ ಸರ್ಜರಿಗೆ ಒಳಗಾದರು. ಮಿದುಳಿನಲ್ಲಿ ರಕ್ತಸಾವ್ರ ಉಂಟಾಗಿದ್ದರಿಂದ ಈ ಆಪರೇಷನ್​ಗೆ ಒಳಗಾಗ ಬೇಕಾಯಿತು. ಈ ಸುದ್ದಿ ಹೊರ ಬೀಳುತ್ತಿದ್ದಂತೆ ಕಂಗನಾ ರಣಾವತ್ ಅವರು ಕುಗ್ಗಿ ಹೋದರಂತೆ. ತಾವು ಒಂದು ಕ್ಷಣ ಮಂಕಾಗಿದ್ದಾಗಿ ಹೇಳಿಕೊಂಡಿದ್ದಾರೆ.

‘ಇಂದು ನಾನು ಸದ್ಗುರು ಅವರನ್ನು ಐಸಿಯು ಬೆಡ್ ಮೇಲೆ ಮಲಗಿರುವುದನ್ನು ನೋಡಿದೆ. ಈ ಮೊದಲು ಅವರು ನಮ್ಮಂತೆ ಮೂಳೆಗಳು, ರಕ್ತ, ಮಾಂಸ ಹೊಂದಿದ್ದಾರೆ ಎಂದು ನನಗೆ ಎಂದಿಗೂ ಅನಿಸಿರಲಿಲ್ಲ. ದೇವರೆ ಕುಸಿದಂತೆ ಭಾಸವಾಯಿತು. ಭೂಮಿ ಪಲ್ಲಟಗೊಂಡಿತೇನೋ ಅನಿಸಿತು. ಆಕಾಶವು ನನ್ನನ್ನು ಕೈಬಿಟ್ಟಿದೆ ಎಂದು ಭಾಸವಾಯಿತು. ನನ್ನ ತಲೆ ತಿರುಗುತ್ತಿದೆ ಎಂದು ನನಗೆ ಅನಿಸಿತು. ನಾನು ಈ ವಾಸ್ತವವನ್ನು ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ ಎನಿಸಿತು. ಇದನ್ನು ನಂಬಬಾರದು ಎಂದುಕೊಂಡೆ. ನಂತರ ಕಣ್ಣೀರು ಬಂತು’ ಎಂದಿದ್ದಾರೆ ಕಂಗನಾ.

ಕಂಗನಾ ಟ್ವೀಟ್

‘ನನ್ನ ನೋವನ್ನು ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳಲು ನಾನು ಬಯಸುತ್ತೇನೆ. ಇಂದು ಲಕ್ಷಾಂತರ ಭಕ್ತರು ನನ್ನ ಈ ದುಃಖವನ್ನು ಹಂಚಿಕೊಳ್ಳುತ್ತಾರೆ. ಅದನ್ನು ತಡೆದುಕೊಳ್ಳಲು ನನಗೆ ಸಾಧ್ಯವಾಗುತ್ತಿಲ್ಲ. ಅವರು ಆರೋಗ್ಯವಾಗಿ ಇರಲಿದ್ದಾರೆ. ಹಾಗಾಗದೇ ಇದ್ದಲ್ಲಿ ಸೂರ್ಯ ಉದಯಿಸುವುದಿಲ್ಲ, ಭೂಮಿ ಚಲಿಸುವುದಿಲ್ಲ. ಈ ಕ್ಷಣವು ನಿರ್ಜೀವ ಮತ್ತು ನಿಶ್ಚಲ ಎನಿಸುತ್ತದೆ’ ಎಂದಿದ್ದಾರೆ ಕಂಗನಾ.

ಇದನ್ನೂ ಓದಿ:ಮೆದುಳಿನಲ್ಲಿ ರಕ್ತಸ್ರಾವ; ಸದ್ಗುರು ಜಗ್ಗಿ ವಾಸುದೇವ್​​ಗೆ ತುರ್ತು ಮೆದುಳಿನ ಶಸ್ತ್ರಚಿಕಿತ್ಸೆ

ಸದ್ಗುರು ತಂಡದವರು ಬುಧವಾರ (ಮಾರ್ಚ್ 20) ಅವರ ಶಸ್ತ್ರಚಿಕಿತ್ಸೆ ವಿಚಾರವನ್ನು ಶೇರ್​ ಮಾಡಿಕೊಂಡರು. ಅವರಿಗೆ ನಿರಂತರವಾಗಿ ತಲೆನೋವು ಬರುತ್ತಿತ್ತು ಎನ್ನಲಾಗಿದೆ. ಅವರು ಬೇಗ ಚೇತರಿಕೆ ಕಾಣಲಿ ಎಂದು ಪ್ರಧಾನಿ ನರೇಂದ್ರ ಮೋದಿ ಸೇರಿ ಅನೇಕರು ಹಾರೈಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!