AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬೇರೆಯವರ ಮಕ್ಕಳನ್ನು ಹಾದಿ ತಪ್ಪಿಸಿದರೆ, ನಿಮ್ಮ ಮಕ್ಕಳಿಗೂ ಅದೇ ಪರಿಸ್ಥಿತಿ ಬರುತ್ತದೆ’; ಕಂಗನಾ ರಣಾವತ್

ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ತಮ್ಮ ಸಿನಿಮಾ ಪಾತ್ರಗಳನ್ನು ಬಳಸಿ ಟ್ರೋಲ್ ಮಾಡಿದವರಿಗೆ ಸೋಶಿಯಲ್ ಮೀಡಿಯಾದಲ್ಲಿ ಕಠಿಣ ಪ್ರತಿಕ್ರಿಯೆ ನೀಡಿದ್ದಾರೆ. ಸಿನಿಮಾದ ಕಾಲ್ಪನಿಕ ಪಾತ್ರಗಳನ್ನು ನೈಜ ಜೀವನಕ್ಕೆ ಹೋಲಿಸಿ ಇಂದಿನ ಮುಗ್ಧ ಯುವ ಪೀಳಿಗೆಯನ್ನು ಹಾದಿ ತಪ್ಪಿಸುವ ಕೆಲಸ ಮಾಡಬೇಡಿ ಎಂದು ಟ್ರೋಲಿಗರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

‘ಬೇರೆಯವರ ಮಕ್ಕಳನ್ನು ಹಾದಿ ತಪ್ಪಿಸಿದರೆ, ನಿಮ್ಮ ಮಕ್ಕಳಿಗೂ ಅದೇ ಪರಿಸ್ಥಿತಿ ಬರುತ್ತದೆ’; ಕಂಗನಾ ರಣಾವತ್
ಕಂಗನಾ
ರಾಜೇಶ್ ದುಗ್ಗುಮನೆ
|

Updated on:Aug 01, 2026 | 10:31 AM

Share

ಮುಖ್ಯಾಂಶಗಳು

  • ಮುಗ್ಧ ಯುವತಿಯರನ್ನು ಹಾದಿ ತಪ್ಪಿಸಬೇಡಿ ಎಂದ ಕಂಗನಾ ರಣಾವತ್
  • ಜೆನ್ಜಿ ಭಾಷೆ ನೋಡಿ ಅಸಹ್ಯವಾಯಿತು ಎಂದು ಕಿಡಿಕಾರಿದ ಬಿಜೆಪಿ ಸಂಸದೆ
  • ಚಿತ್ರರಂಗದಲ್ಲಿ 20 ವರ್ಷ ಪೂರೈಸಿದ ನಡುವೆಯೇ ವಿವಾದ

ಬಾಲಿವುಡ್ ನಟಿ ಮತ್ತು ಬಿಜೆಪಿ ಸಂಸದೆ ಕಂಗನಾ ರಣಾವತ್ ಮತ್ತೊಮ್ಮೆ ಭಾರಿ ಚರ್ಚೆಯಲ್ಲಿದ್ದಾರೆ. ಇತ್ತೀಚೆಗೆ ಯುವ ಜನತೆಯ ಪ್ರತಿಭಟನೆ ಹಾಗೂ ಸಂಸ್ಕೃತಿಯ ಬಗ್ಗೆ ಕಂಗನಾ ನೀಡಿದ್ದ ಹೇಳಿಕೆ ದೊಡ್ಡ ವಿವಾದ ಸೃಷ್ಟಿಸಿತ್ತು. ಇದನ್ನೇ ಇಟ್ಟುಕೊಂಡು ಸೋಷಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಅವರ ಹಳೆಯ ಸಿನಿಮಾಗಳ ಪಾತ್ರಗಳ ಫೋಟೋಗಳನ್ನು ಹಂಚಿಕೊಂಡು ತೀವ್ರವಾಗಿ ಟ್ರೋಲ್ ಮಾಡಿದ್ದರು. ಈಗ ಕಂಗನಾ ರಣಾವತ್ ತಮಗೆ ಟ್ರೋಲ್ ಮಾಡಿದವರಿಗೆ ಇನ್‌ಸ್ಟಾಗ್ರಾಮ್ ಮೂಲಕ ತಕ್ಕ ಉತ್ತರ ನೀಡಿದ್ದಾರೆ.

ಸಿನಿಮಾ ಪಾತ್ರಗಳು ಮತ್ತು ನೈಜ ಜೀವನ ಒಂದಲ್ಲ

‘ಸಿನಿಮಾದಲ್ಲಿ ನಟಿಸಲು ತಮಗೆ ಕೋಟಿಗಟ್ಟಲೆ ಸಂಭಾವನೆ ಸಿಗುತ್ತದೆ. ಗ್ಲಾಮರ್ ಪ್ರಪಂಚದಲ್ಲಿ ಭದ್ರತಾ ಸಿಬ್ಬಂದಿ ಮತ್ತು ಈವೆಂಟ್ ಪ್ಲಾನರ್‌ಗಳ ನಡುವೆ ನಾನು ಇರುತ್ತೇನೆ. ಈ ಸಿನಿಮಾ ಪಾತ್ರಗಳನ್ನು ನೋಡಿ ಶಾಲಾ-ಕಾಲೇಜು ಅಥವಾ ಕ್ಲಬ್‌ಗಳಲ್ಲಿ ಅದೇ ರೀತಿ ಮಾಡಲು ಯುವತಿಯರಿಗೆ ಪ್ರೇರೇಪಿಸುವುದು ತಪ್ಪು. ನೈಜ ಜೀವನಕ್ಕೂ ಮತ್ತು ಸಿನಿಮಾಗೂ ತುಂಬಾ ವ್ಯತ್ಯಾಸವಿದೆ. ಇವತ್ತು ಬೇರೆಯವರ ಮಕ್ಕಳನ್ನು ಹಾದಿ ತಪ್ಪಿಸಿದರೆ ನಾಳೆ ನಿಮ್ಮ ಮಕ್ಕಳಿಗೂ ಇದೇ ಪರಿಸ್ಥಿತಿ ಬರುತ್ತದೆ’ ಎಂದು ಎಚ್ಚರಿಸಿದ್ದಾರೆ.

ಯುವ ಪೀಳಿಗೆಯ ಪ್ರತಿಭಟನೆಗೆ ಕಂಗನಾ ಆಕ್ರೋಶ

ಇತ್ತೀಚಿನ ಜೆನ್​ಜಿ ಪ್ರತಿಭಟನೆಗಳ ವಿಡಿಯೋಗಳು ತಮಗೆ ಅಸಹ್ಯ ಹುಟ್ಟಿಸಿವೆ ಎಂದು ಕಂಗನಾ ಹೇಳಿದ್ದಾರೆ. ಪ್ರತಿಭಟನೆಯಲ್ಲಿ ಯುವಕರು ಬಳಸುತ್ತಿರುವ ಭಾಷೆ ಮತ್ತು ವರ್ತನೆ ಭಾರತೀಯ ಸಂಸ್ಕೃತಿಗೆ ತಕ್ಕದಲ್ಲ ಎಂದು ಕಿಡಿಕಾರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ದಿವಂಗತ ತಾಯಿಯ ಬಗ್ಗೆ ಕೆಟ್ಟ ಪದಗಳನ್ನು ಬಳಸಿರುವುದನ್ನು ಅವರು ಖಂಡಿಸಿದ್ದಾರೆ. ತಾವು ಕೂಡ ವಿದ್ಯಾರ್ಥಿ ದಿನಗಳಲ್ಲಿ ಪ್ರತಿಭಟನೆ ಮಾಡಿದ್ದಾಗಿ ಕಂಗನಾ ನೆನಪಿಸಿಕೊಂಡಿದ್ದಾರೆ. ಆದರೆ ಇಂದಿನ ಯುವಕರಲ್ಲಿ ಯಾವುದೇ ಸಂಸ್ಕಾರ ಕಾಣಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸೀತೆಯ ವೇಷದಲ್ಲಿ ಜೆನ್ ಜಿ ಮಂದಿಗೆ ಆಶೀರ್ವಾದ ಮಾಡಿದ ನಟಿ, ಸಂಸದೆ ಕಂಗನಾ ರಣಾವತ್

ಚಿತ್ರರಂಗದಲ್ಲಿ 20 ವರ್ಷ ಹಾಗೂ ರಾಜಕೀಯ ಜರ್ನಿ

ಕಂಗನಾ ರಣಾವತ್ ಅವರು ಚಿತ್ರರಂಗಕ್ಕೆ ಕಾಲಿಟ್ಟು ಈ ವರ್ಷಕ್ಕೆ ಬರೋಬ್ಬರಿ 20 ವರ್ಷಗಳು ಕಳೆದಿವೆ. 2006 ರಲ್ಲಿ ಬಿಡುಗಡೆಯಾದ ‘ಗ್ಯಾಂಗ್‌ಸ್ಟರ್’ ಚಿತ್ರದ ಮೂಲಕ ಅವರು ತಮ್ಮ 18 ನೇ ವಯಸ್ಸಿನಲ್ಲಿ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದ್ದರು. ತಮ್ಮ ಅತ್ಯುತ್ತಮ ನಟನೆಗಾಗಿ ಅವರು ಇದುವರೆಗೆ ಒಟ್ಟು ನಾಲ್ಕು ರಾಷ್ಟ್ರ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಫ್ಯಾಷನ್, ಕ್ವೀನ್ ಚಿತ್ರಗಳು ಅವರಿಗೆ ದೊಡ್ಡ ಯಶಸ್ಸು ತಂದುಕೊಟ್ಟಿದ್ದವು. ಸದ್ಯ ಅವರು ತಮ್ಮ ತವರು ಕ್ಷೇತ್ರವಾದ ಮಂಡಿಯಿಂದ ಬಿಜೆಪಿ ಟಿಕೆಟ್ ಪಡೆದು ಲೋಕಸಭಾ ಸಂಸದೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:31 am, Sat, 1 August 26

Follow Us
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ