AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: 1947ರಲ್ಲಿ ಭಾರತಕ್ಕೆ ಸಿಕ್ಕಿದ್ದು ಭಿಕ್ಷೆ, ಸ್ವಾತಂತ್ರ್ಯ ಲಭಿಸಿದ್ದು 2014ರಲ್ಲಿ; ವಿವಾದ ಸೃಷ್ಟಿಸಿದ ಕಂಗನಾ ಹೇಳಿಕೆ

Varun Gandhi: ಬಾಲಿವುಡ್ ನಟಿ ಕಂಗನಾ ರಣಾವತ್ ಸಂದರ್ಶನವೊಂದರಲ್ಲಿ ಹೇಳಿರುವ ಮಾತು, ವಿವಾದದ ಕಿಡಿ ಹೊತ್ತಿಸಿದೆ. ಭಾರತಕ್ಕೆ ಸ್ವಾತಂತ್ರ್ಯ ಬಂದಿದ್ದು, 2014ರಲ್ಲಿ ಎಂಬ ಕಂಗನಾ ಹೇಳಿಕೆಗೆ ಬಿಜೆಪಿ ಸಂಸದ ವರುಣ್ ಗಾಂಧಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Kangana Ranaut: 1947ರಲ್ಲಿ ಭಾರತಕ್ಕೆ ಸಿಕ್ಕಿದ್ದು ಭಿಕ್ಷೆ, ಸ್ವಾತಂತ್ರ್ಯ ಲಭಿಸಿದ್ದು 2014ರಲ್ಲಿ; ವಿವಾದ ಸೃಷ್ಟಿಸಿದ ಕಂಗನಾ ಹೇಳಿಕೆ
ಕಂಗನಾ ರಣಾವತ್
TV9 Web
| Edited By: |

Updated on:Nov 11, 2021 | 6:15 PM

Share

ಬಾಲಿವುಡ್ ನಟಿ ಕಂಗನಾ ರಣಾವತ್ ಈಗಾಗಲೇ ಹಲವು ಭಾರಿ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಅವರು ನೀಡಿರುವ ಹೇಳಿಕೆ ಮತ್ತೆ ತೀವ್ರ ವಿವಾದ ಸೃಷ್ಟಿಸಿದೆ. ‘‘1947ರಲ್ಲಿ ದೇಶಕ್ಕೆ ಸಿಕ್ಕಿದ್ದು ಸ್ವಾತಂತ್ರ್ಯ ಅಲ್ಲ, ಅದು ಭಿಕ್ಷೆ. 2014ರಲ್ಲಿ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿತು‌’’ ಎಂದು ಕಂಗನಾ ಹೇಳಿದ್ದಾರೆ. ಅವರ ಈ ಮಾತಿಗೆ ಸಾಮಾಜಿಕ ಜಾಲತಾಣಗಳೂ ಸೇರಿದಂತೆ ಹಲವೆಡೆ ಆಕ್ಷೇಪ ವ್ಯಕ್ತವಾಗಿದೆ. ಬಿಜೆಪಿ ಸಂಸದ ವರುಣ್ ಗಾಂಧಿ ಈ ಕುರಿತು ಟ್ವೀಟ್ ಮಾಡಿದ್ದು, ‘ಲಕ್ಷಾಂತರ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನವನ್ನು ತಿರಸ್ಕರಿಸಲಾಗಿದೆ. ಈ ಆಲೋಚನೆಗೆ ಹುಚ್ಚುತನ‌ ಎಂದು ಕರೆಯಬೇಕೋ, ದೇಶದ್ರೋಹ ಎನ್ನಬೇಕೋ’ ಎಂದು ಪ್ರಶ್ನಿಸಿದ್ದಾರೆ. ಮುಂಬೈನಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತೆಯಾದ ಪ್ರೀತಿ ಮೆನನ್ ಎನ್ನುವವರು ಮುಂಬೈ ಪೊಲೀಸರಿಗೆ ಕಂಗನಾ ಹೇಳಿಕೆ ವಿರುದ್ಧ ದೂರು ನೀಡಿದ್ದಾರೆ.

ಸಂಸದ ವರುಣ್ ಗಾಂಧಿ ಹಂಚಿಕೊಂಡಿರುವ ಟ್ವೀಟ್:

ಕಂಗನಾ ಸಂದರ್ಶನದಲ್ಲಿ, ದೇಶದಲ್ಲಿ ಕಾಂಗ್ರೆಸ್ ಆಡಳಿತವು ಬ್ರಿಟಿಷ್ ಆಡಳಿತದ ಮುಂದುವರಿಕೆಯಾಗಿತ್ತು. ನಿಜವಾದ ಸ್ವಾತಂತ್ರ್ಯ 2014ರಲ್ಲಿ ಲಭಿಸಿತು ಎಂದು, ನರೇಂದ್ರ ಮೋದಿ ಸರ್ಕಾರದ ಅಧಿಕಾರ ಸ್ವೀಕಾರವನ್ನು ಪರೋಕ್ಷವಾಗಿ ಉಲ್ಲೇಖಿಸಿ ಹೇಳಿಕೆ ನೀಡಿದ್ಧಾರೆ.

ಸಂಸದ ವರುಣ್ ಗಾಂಧಿ ಆಕ್ಷೇಪಕ್ಕೆ ಇನ್ಸ್ಟಾಗ್ರಾಂನಲ್ಲಿ ಪ್ರತಿಕ್ರಿಯೆ ನೀಡಿರುವ ಕಂಗನಾ, ಮತ್ತಷ್ಟು ವಿವಾದ ಸೃಷ್ಟಿಸಿದ್ದಾರೆ. ‘ಸಂದರ್ಶನದಲ್ಲಿ ನಾನು 1857ರ ಸ್ವಾತಂತ್ರ್ಯ ಸಂಗ್ರಾಮ ಮೊದಲನೆಯ ಹೋರಾಟವಾಗಿದೆ ಎಂದು ತಿಳಿಸಿದ್ದೇನೆ. ಅದರಿಂದಾಗಿ ಬ್ರಿಟೀಷರ ದ್ವೇಷ ಹಾಗೂ ಕ್ರೂರತನ ಮತ್ತಷ್ಟು ಹೆಚ್ಚಾಯಿತು. ಸುಮಾರು ಒಂದು ಶತಮಾನದ ನಂತರ ಗಾಂಧೀಜಿಯವರ ಭಿಕ್ಷಾ ಪಾತ್ರೆಗೆ ಸ್ವಾತಂತ್ರ್ಯ ನೀಡಲಾಯಿತು’ ಎಂದು ಕಂಗನಾ ಬರೆದಿದ್ದಾರೆ. ಅಲ್ಲದೇ ವರುಣ್ ಗಾಂಧಿಯವರನ್ನು ಉದ್ದೇಶಿಸಿ, ‘ಈಗ ಹೋಗಿ ಮತ್ತಷ್ಟು ದುಃಖಿಸಿ(ಅಳಿ)’ ಎಂದು ಬರೆದಿದ್ದಾರೆ. ಇದು ಮತ್ತಷ್ಟು ವಿವಾದ ಸೃಷ್ಟಿಸಿದೆ.

ಕಂಗನಾ ಹಂಚಿಕೊಂಡ ಪೋಸ್ಟ್:

Kangana Post on Independence

ಕಂಗನಾ ಹಂಚಿಕೊಂಡಿರುವ ಪೋಸ್ಟ್

ಇದನ್ನೂ ಓದಿ:

Kangana Ranaut: ಕಂಗನಾ ಅಭಿಮಾನಿಗಳಿಗೆ ಎದುರಾಯ್ತು ಅನಿರೀಕ್ಷಿತ ಸಮಾಚಾರ; ಸಂಗಾತಿಯ ಗುಟ್ಟು ಬಿಟ್ಟುಕೊಟ್ಟ ನಟಿ

ರಾಜ್​ಕುಮಾರ್ ಅವರನ್ನು ಪುನೀತ್​ರಲ್ಲಿಯೇ ಕಂಡಿದ್ದೆವು; ಅಪ್ಪು ನೋಡಲು ಬಂದ ಮಂಗಳಮುಖಿಯರ ಕಂಬನಿ

Published On - 5:59 pm, Thu, 11 November 21

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ