AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಗನಾ ರಣಾವತ್: ‘ಮಾಜಿ ಟ್ವಿಟ್ಟರ್​ ಮುಖ್ಯಸ್ಥನ ವಿನಾಶವನ್ನು ನಾನು ಬಹಳ ಹಿಂದೆಯೇ ಊಹಿಸಿದ್ದೆ’

ಕಂಗನಾ ರಣಾವತ್ ಸದಾ ವಿವಾದಾತ್ಮಕ ಹೇಳಿಕೆಗಳಿಂದ ಸುದ್ದಿಯಲ್ಲಿರುವ ನಟಿ. ಮಾಜಿ ಟ್ವಿಟ್ಟರ್​ ಮುಖ್ಯಸ್ಥನ ವಿನಾಶವನ್ನು ನಾನು ಬಹಳ ಹಿಂದೆಯೇ ಊಹಿಸಿದ್ದೆ. ಇನ್ನೊಂದು ಭವಿಷ್ಯ ನಿಜವಾಯಿತು ಎಂದು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಕಂಗನಾ ರಣಾವತ್: ‘ಮಾಜಿ ಟ್ವಿಟ್ಟರ್​ ಮುಖ್ಯಸ್ಥನ ವಿನಾಶವನ್ನು ನಾನು ಬಹಳ ಹಿಂದೆಯೇ ಊಹಿಸಿದ್ದೆ'
kanganaImage Credit source: google
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Nov 06, 2022 | 6:58 PM

Share

ಟೆಸ್ಲಾ ಸಂಸ್ಥೆಯ ಮುಖ್ಯಸ್ಥ ಎಲಾನ್​ ಮಸ್ಕ್​ ಟ್ವಿಟ್ಟರ್(twitter)​ನ್ನು ತಮ್ಮ ತೆಕ್ಕೆಗೆ ತೆಗೆದುಕೊಂಡ ಬಳಿಕ ಅನೇಕ ಬದಲಾವಣೆಗಳನ್ನು ಮಾಡಿದ್ದಾರೆ. ಸಂಸ್ಥೆಯ ಅಧಿಕಾರಿಗಳನ್ನು ತೆಗೆದು ಹಾಕಿದ್ದಾರೆ.ಜೊತೆಗೆ ‘ಬ್ಲೂ ಟಿಕ್‘​ ಪಡೆಯಲು ಪ್ರತಿ ತಿಂಗಳು ನಿಗದಿತ ಮೂತ್ತವನ್ನು ನೀಡಬೇಕು ಎನ್ನುವ ವಿಚಾರವು ಕೇಳಿಬರುತ್ತಿದೆ. ಹೀಗಿರುವಾಗ ಕಂಗನಾ ರಣಾವತ್ ಸೈದ್ಧಾಂತಿಕವಾಗಿ ಟ್ವಿಟ್ಟರ್​ನ​ ನೂತನ ಬದಲಾವಣೆಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ಟ್ವಿಟ್ಟರ್​ ಇದೊಂದು ‘ಅತ್ಯುತ್ತಮ ಸಾಮಾಜಿಕ ಮಾಧ್ಯಮ’ ಎಂದು ಹೇಳಿದ್ದಾರೆ. ಟ್ವಿಟ್ಟರ್​ ಖಾತೆಯನ್ನು ನಿರ್ವಹಿಸಲು ನಿರ್ದಿಷ್ಟ ಮೊತ್ತವನ್ನು ಪಾವತಿಸುವುದು ಅದರ ಸಮಗ್ರತೆಯನ್ನು ನಿರ್ವಹಿಸಲು ಸಹಾಯ ಮಾಡುತ್ತದೆ ಎಂದಿದ್ದಾರೆ.

ಕಂಗನಾ ರಣಾವತ್​ ಅವರ ಟ್ವಿಟರ್​ ಖಾತೆಯನ್ನು ಮೇ 2021 ರಂದು ಶಾಶ್ವತವಾಗಿ ಅಮಾನತುಗೊಳಿಸಲಾಗಿತ್ತು. ಟ್ವಿಟರ್​ ಈಗ ಇರುವ ಉತ್ತಮವಾದ ಮಾಧ್ಯಮ ಬ್ಲೂ ಟಿಕ್​ ಪಡೆಯಲು ಹಣ ನೀಡುವುದು ಒಳ್ಳೆಯದು. ಜಗತ್ತಿನಲ್ಲಿ ಎಲ್ಲಿ ಕೂಡ ಉಚಿತ ಊಟಗಳಿಲ್ಲ, ನೀವು ಉಚಿತವಾಗಿ ಪ್ರವೇಶಿಸುವ ಸಾಮಾಜಿಕ ಜಾಲತಾಣವು ನಮ್ಮ ಡಾಟಾವನ್ನು ತೆಗೆದುಕೊಂಡು ಮಾರಾಟ ಮಾಡುತ್ತಾದೆ. ಇದರ ಬಗ್ಗೆ ಯೋಚಿಸಿದ್ದೀರಾ? ಎಂದು ಬರೆದುಕೊಂಡಿದ್ದಾರೆ.

ಕಂಗನಾ ಪ್ರಸ್ತುತ ಅಸ್ಸಾಂನಲ್ಲಿ ತಮ್ಮ ಮುಂಬರುವ ‘ಎಮರ್ಜೆನ್ಸಿ’ ಚಿತ್ರೀಕರಣದಲ್ಲಿದ್ದಾರೆ. ಈ ಚಿತ್ರದಲ್ಲಿ ಕಂಗನಾ ಮಾಜಿ ಪ್ರಧಾನ ಮಂತ್ರಿ ಇಂದಿರಾಗಾಂಧಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾದ ಫಸ್ಟ್​ ಲುಕ್​ ಟೀಸರ್​ ಬಿಡುಗಡೆಯಾಗಿದ್ದು. ಥೇಟ್​ ಇಂದಿರಾಗಾಂಧಿ ರೀತಿಯೇ ಕಾಣುತ್ತಿದ್ದಾರೆ. ಇದನ್ನು ನೋಡಿ ಕಂಗನಾ ಎಲ್ಲೆಡೆ ಜನರ ಮೆಚ್ಚುಗೆಗೆ ಪಾತ್ರವಾಗುತ್ತಿದ್ದಾರೆ.ರಿಲೀಸ್​ಗೂ ಮುನ್ನವೇ ದೊಡ್ಡ ಹೈಪ್​ ಕ್ರಿಯೇಟ್​ ಮಾಡಿದೆ. ಈ ಸಿನಿಮಾದಿಂದ ಅವರು ಗೆಲುವಿನ ಲಯಕ್ಕೆ ಮರಳಬಹುದು. ಇನ್ನು ಈ ಸಿನಿಮಾದಲ್ಲಿ ಅನುಪಮ್​ ಖೇರ್​, ಮಹಿಮಾ ಚೌಧರಿ, ವಿಶಾಕ್​ ನಾಯರ್​ ಮತ್ತು ಶ್ರೇಯಸ್​ ತಲ್ಪಾಡೆ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಮತ್ತಷ್ಟು ಮನರಂಜನಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ;

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ