AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ‘ಪಠಾಣ್​’ ಸೂಪರ್​ ಹಿಟ್​; ‘ಚಿತ್ರರಂಗ ಇರೋದು ಹಣ ಮಾಡೋಕಲ್ಲ’ ಅಂತ ಕೊಂಕು ನುಡಿದ ಕಂಗನಾ

Shah Rukh Khan | Pathaan Movie: ಸಿನಿಮಾ ಗೆಲುವಿನಲ್ಲಿ ಬಾಕ್ಸ್ ಆಫೀಸ್​ ಮಾನದಂಡವನ್ನು ಬಹುತೇಕರು ಒಪ್ಪಿಕೊಳ್ಳುತ್ತಾರೆ. ಆದರೆ ಕಂಗನಾ ರಣಾವತ್​ ಅವರು ಈಗ ಬೇರೆಯದೇ ವಾದ ಮಂಡಿಸುತ್ತಿದ್ದಾರೆ.

Kangana Ranaut: ‘ಪಠಾಣ್​’ ಸೂಪರ್​ ಹಿಟ್​; ‘ಚಿತ್ರರಂಗ ಇರೋದು ಹಣ ಮಾಡೋಕಲ್ಲ’ ಅಂತ ಕೊಂಕು ನುಡಿದ ಕಂಗನಾ
ಕಂಗನಾ ರಣಾವತ್, ಶಾರುಖ್ ಖಾನ್
ಮದನ್​ ಕುಮಾರ್​
|

Updated on:Jan 25, 2023 | 2:29 PM

Share

ಬಾಲಿವುಡ್​ ಬಾದ್​ಷಾ ಶಾರುಖ್​ ಖಾನ್​ (Shah Rukh Khan) ಅವರಿಗೆ ಬಹುವರ್ಷಗಳ ಬಳಿಕ ದೊಡ್ಡ ಗೆಲುವು ಸಿಕ್ಕಿದೆ. ಅವರು ನಟಿಸಿರುವ ‘ಪಠಾಣ್​’ ಸಿನಿಮಾ (Pathaan Movie) ಇಂದು (ಜ.25) ಗ್ರ್ಯಾಂಡ್​ ಆಗಿ ರಿಲೀಸ್​ ಆಗಿದ್ದು, ಎಲ್ಲ ಕಡೆಗಳಲ್ಲಿ ಹೌಸ್​ ಫುಲ್​ ಪ್ರದರ್ಶನ ಕಾಣುತ್ತಿದೆ. ಮೊದಲ ದಿನ ಈ ಸಿನಿಮಾಗೆ 50 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಆಗುವ ನಿರೀಕ್ಷೆ ಇದೆ. ಒಟ್ಟಿನಲ್ಲಿ ಈ ಗೆಲುವಿನಿಂದಾಗಿ ಶಾರುಖ್​ ಖಾನ್​ ಅವರು ಖುಷಿ ಆಗಿದ್ದಾರೆ. ಆದರೆ ಈ ಸಂದರ್ಭಕ್ಕೆ ಸರಿಯಾಗಿ ನಟಿ ಕಂಗನಾ ರಣಾವತ್​ (Kangana Ranaut) ಅವರು ಕೊಂಕು ನುಡಿದಿದ್ದಾರೆ. ‘ಚಿತ್ರರಂಗ ಇರುವುದು ಹಣ ಮಾಡೋಕಲ್ಲ’ ಎಂದು ಅವರು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ನಿನ್ನೆಯಷ್ಟೇ (ಜ.24) ಟ್ವಿಟರ್​ಗೆ ಮರಳಿರುವ ಕಂಗನಾ ರಣಾವತ್​ ಅವರು ತಮ್ಮ ಟ್ವೀಟ್​ಗಳ ಮೂಲಕ ಮತ್ತೆ ಕಿರಿಕ್​ ಶುರು ಮಾಡಿಕೊಂಡಿದ್ದಾರೆ.

ಒಂದು ಸಿನಿಮಾ ಎಷ್ಟು ಕಲೆಕ್ಷನ್​ ಮಾಡಿತು? ಆ ಚಿತ್ರಕ್ಕೆ ಯಾವೆಲ್ಲ ಪ್ರಶಸ್ತಿಗಳು ಬಂದವು ಅಥವಾ ವಿಮರ್ಶಕರಿಂದ ಎಂತಹ ಪ್ರತಿಕ್ರಿಯೆ ಬಂತು ಎಂಬುದರ ಆಧಾರದ ಮೇಲೆ ಚಿತ್ರದ ಯಶಸ್ಸನ್ನು ಅಳೆಯಲಾಗುತ್ತದೆ. ಬಾಕ್ಸ್ ಆಫೀಸ್​ ಮಾನದಂಡವನ್ನು ಬಹುತೇಕರು ಒಪ್ಪಿಕೊಳ್ಳುತ್ತಾರೆ. ಆದರೆ ನಟಿ ಕಂಗನಾ ರಣಾವತ್​ ಅವರು ಈಗ ಬೇರೆಯದೇ ವಾದ ಮಂಡಿಸುತ್ತಿದ್ದಾರೆ. ಅದು ಕೂಡ ‘ಪಠಾಣ್​’ ಚಿತ್ರ ರಿಲೀಸ್​ ಆದ ದಿನವೇ ಅವರು ಈ ರೀತಿ ಟ್ವೀಟ್​ ಮಾಡಿರುವುದು ಚರ್ಚೆಗೆ ಕಾರಣ ಆಗಿದೆ.

ಇದನ್ನೂ ಓದಿ
Image
Kangana Ranaut: ಉಗ್ರರಿಂದ ಹತ್ಯೆಯಾದ ಕಾಶ್ಮೀರಿ ಹುಡುಗಿ ಪಾತ್ರದಲ್ಲಿ ಕಂಗನಾ? ಸೆನ್ಸೇಷನ್​ ಸೃಷ್ಟಿಸಿದೆ ಹೊಸ ಸಿನಿಮಾ ಸುದ್ದಿ
Image
Emergency: ‘ಇಂದಿರಾ ಗಾಂಧಿ ಈ ವಿಡಿಯೋದಲ್ಲಿ ಕಂಗನಾ ರೀತಿ ಮಾಡ್ತಿದ್ದಾರೆ’: ರಾಮ್​ ಗೋಪಾಲ್​ ವರ್ಮಾ
Image
Emergency: ಇದು ಇಂದಿರಾ ಗಾಂಧಿ ಅಲ್ಲ, ಕಂಗನಾ ರಣಾವತ್! ಗಮನ ಸೆಳೆದ ‘ಎಮರ್ಜೆನ್ಸಿ’ ಫಸ್ಟ್​ ಲುಕ್​
Image
Kangana Ranaut: ‘ಶಿವಸೇನೆ ಹನುಮಾನ್​ ಚಾಲೀಸ ಬ್ಯಾನ್​ ಮಾಡಿದ್ರೆ ಅವರನ್ನು ಶಿವ ಕೂಡ ಕಾಪಾಡಲ್ಲ’: ಕಂಗನಾ ರಣಾವತ್​

ಇದನ್ನೂ ಓದಿ: Kangana Ranaut Twitter: ಟ್ವಿಟರ್​ಗೆ ಮರಳಿದ ಕಂಗನಾ ರಣಾವತ್​; ಖಾತೆ ಪುನಃ ಸಿಕ್ಕ ಬಳಿಕ ಖುಷಿ ಹಂಚಿಕೊಂಡ ನಟಿ

ಕಳೆದ ವರ್ಷ ಕಂಗನಾ ರಣಾವತ್​ ನಟನೆಯ ‘ಧಾಕಡ್​’ ಸಿನಿಮಾ ಹೀನಾಯವಾಗಿ ಸೋತಿತ್ತು. ಆ ಸೋಲಿನ ಸುಳಿಯಿಂದ ಅವರು ಇನ್ನೂ ಹೊರಬಂದಿಲ್ಲ. ಈಗ ಶಾರುಖ್​ ಖಾನ್​ ಚಿತ್ರದ ಗೆಲುವಿನ ಬಗ್ಗೆ ಅವರು ಪರೋಕ್ಷವಾಗಿ ಕೊಂಕು ನುಡಿದಿದ್ದಾರೆ. ತಮ್ಮ ಪೋಸ್ಟ್​ನಲ್ಲಿ ಅವರು ಎಲ್ಲಿಯೂ ‘ಪಠಾಣ್​’ ಹೆಸರನ್ನು ಪ್ರಸ್ತಾಪಿಸಿಲ್ಲ. ಆದರೆ ಅವರು ಈ ಚಿತ್ರವನ್ನೇ ಟಾರ್ಗೆಟ್​ ಮಾಡಿಕೊಂಡು ಟ್ವೀಟ್​ ಮಾಡಿದ್ದಾರೆ ಎಂಬುದು ನೆಟ್ಟಿಗರಿಗೆ ಸ್ಪಷ್ಟವಾಗಿದೆ.

ಇದನ್ನೂ ಓದಿ: Pathaan Review: ದೇಶಭಕ್ತಿಯಲ್ಲಿ ಮಿಂದೆದ್ದ ‘ಪಠಾಣ್​’; ಶಾರುಖ್​ ಫ್ಯಾನ್ಸ್​ಗೆ ಹಬ್ಬ, ಆ್ಯಕ್ಷನ್ ಪ್ರಿಯರಿಗೆ ಮಸ್ತ್ ಮನರಂಜನೆ

‘ಯಶಸ್ಸನ್ನು ತೋರಿಸಬೇಕು ಎಂದಾಗಲೆಲ್ಲ ದುಡ್ಡಿನ ಅಂಕಿ-ಅಂಶವನ್ನು ಮುಖಕ್ಕೆ ಹೊಡೆದಂತೆ ತೋರಿಸುವ ಮಟ್ಟಕ್ಕೆ ಚಿತ್ರರಂಗದವರು ಇಳಿದಿದ್ದಾರೆ. ಕಲೆಗೆ ಬೇರೆ ಯಾವುದೇ ಉದ್ದೇಶವೇನೂ ಇಲ್ಲ ಎಂಬಂತೆ ವರ್ತಿಸುತ್ತಾರೆ. ಇದು ಅವರ ಕೀಳು ಜೀವನವನ್ನು ತೋರಿಸುತ್ತದೆ. ಚಿತ್ರರಂಗ ಒಂದು ಉದ್ಯಮ ಹೌದು. ಆದರೆ ಇದು ಬೇರೆ ಬಿಸ್ನೆಸ್​ ರೀತಿ ಕೋಟಿಗಟ್ಟಲೆ ದುಡ್ಡು ಮಾಡೋಕೆ ಇರುವುದಲ್ಲ’ ಎಂದು ಕಂಗನಾ ಪೋಸ್ಟ್​ ಮಾಡಿದ್ದಾರೆ.

20 ತಿಂಗಳ ಹಿಂದೆ ಆಕ್ಷೇಪಾರ್ಹ ಟ್ವೀಟ್​ ಮಾಡಿದ್ದಕ್ಕಾಗಿ ಕಂಗನಾ ರಣಾವತ್​ ಅವರ ಟ್ವಿಟರ್​ ಖಾತೆಯನ್ನು ಸಸ್ಪೆಂಡ್​ ಮಾಡಲಾಗಿತ್ತು. ಅದೀಗ ಮತ್ತೆ ಆ್ಯಕ್ಟೀವ್ ಆಗಿದೆ. ಟ್ವಿಟರ್​ ಅಂಗಳಕ್ಕೆ ಮರಳುತ್ತಿದ್ದಂತೆಯೇ ಕಂಗನಾ ಅವರು ಆಕ್ರಮಣಕಾರಿಯಾಗಿ ಟ್ವೀಟ್​ ಮಾಡಲಾರಂಭಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:29 pm, Wed, 25 January 23

Follow Us
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?