AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಗನಾಗೆ ಇನ್​ಸ್ಟಾಗ್ರಾಮ್​ಗೆ ಚೀನಾ ಹ್ಯಾಕರ್ಸ್​ ಕಾಟ; ತಾಲಿಬಾನ್​ ಪೋಸ್ಟ್​ಗಳು ಡಿಲೀಟ್ ​

ನಟಿ ಕಂಗನಾ ರಣಾವತ್​ ಬಾಲಿವುಡ್​ನಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ನಟನೆ ಜತೆಗೆ ನಿರ್ದೇಶನದಲ್ಲೂ ಅವರು ಬ್ಯುಸಿ. ಈ ಮಧ್ಯೆ ಸಾಕಷ್ಟು ಸಿನಿಮಾ ಆಫರ್​ಗಳು ಅವರ ಕೈಯಲ್ಲಿವೆ.

ಕಂಗನಾಗೆ ಇನ್​ಸ್ಟಾಗ್ರಾಮ್​ಗೆ ಚೀನಾ ಹ್ಯಾಕರ್ಸ್​ ಕಾಟ; ತಾಲಿಬಾನ್​ ಪೋಸ್ಟ್​ಗಳು ಡಿಲೀಟ್ ​
ಕಂಗನಾ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Aug 18, 2021 | 4:51 PM

Share

ಟ್ವಿಟರ್​ ನೀತಿಗಳನ್ನು ಪಾಲಿಸದ ಆರೋಪದ ಮೇಲೆ ಕಂಗನಾ ರಣಾವತ್​ ಟ್ವಿಟರ್​ ಖಾತೆಯನ್ನು ರದ್ದುಗೊಳಿಸಲಾಗಿದೆ. ಈ ಬೆನ್ನಲ್ಲೇ ಅವರು ಇನ್​ಸ್ಟಾಗ್ರಾಮ್​ನಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಹೆಚ್ಚಿನ ಮಾಹಿತಿಯನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿಯೇ ಹಂಚಿಕೊಳ್ಳುತ್ತಿದ್ದಾರೆ. ಆದರೆ, ಈಗ ಅವರ ಇನ್​ಸ್ಟಾಗ್ರಾಮ್​ಗೂ ಕುತ್ತು ಬಂದಿದೆ. ಈ ಬಗ್ಗೆ ಅವರು ಸೋಶೀಯಲ್​ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಮಾಡಿದ್ದಾರೆ.

‘ನಿನ್ನೆ ರಾತ್ರಿ ಚೀನಾದಿಂದ ನನ್ನ ಖಾತೆಗೆ ಲಾಗಿನ್​ ಆಗಲು ಯಾರೋ ಪ್ರಯತ್ನಿಸಿದ್ದಾರೆ ಎನ್ನುವ ಅಲರ್ಟ್​ ಬಂತು. ಇದಾದ ನಂತರ ಆ ಮೆಸೇಜ್​ ಮಾಯವಾಯಿತು. ನಾನು ಪೋಸ್ಟ್​ ಮಾಡಿದ್ದ ತಾಲಿಬಾನ್​ಗೆ ಸಂಬಂಧಿಸಿದ ಎಲ್ಲಾ ಸ್ಟೋರಿಗಳು ಮುಂಜಾನೆ ವೇಳೆಗೆ ಕಾಣೆಯಾಗಿದ್ದವು. ನಾನು ಇನ್​ಸ್ಟಾಗ್ರಾಮ್​​ ಅವರ ಜತೆ ಮಾತನಾಡಿದ ನಂತರವೇ ನನ್ನ ಖಾತೆಗೆ ಲಾಗಿನ್​ ಆಗೋಕೆ ಸಾಧ್ಯವಾಯಿತು. ನಾನು ಏನಾದರೂ ಬರೆಯೋಕೆ ಹೋದರೆ ಲಾಗ್​ಔಟ್​ ಆಗುತ್ತಿದೆ. ಇದು ದೊಡ್ಡ ಅಂತಾರಾಷ್ಟ್ರೀಯ ಪಿತೂರಿ’ ಎಂದು ಅವರು ದೂರಿದ್ದಾರೆ.

ನಟಿ ಕಂಗನಾ ರಣಾವತ್​ ಬಾಲಿವುಡ್​ನಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ನಟನೆ ಜತೆಗೆ ನಿರ್ದೇಶನದಲ್ಲೂ ಅವರು ಬ್ಯುಸಿ. ಈ ಮಧ್ಯೆ ಸಾಕಷ್ಟು ಸಿನಿಮಾ ಆಫರ್​ಗಳು ಅವರ ಕೈಯಲ್ಲಿವೆ. ಹಲವು ಸ್ಕ್ರಿಪ್ಟ್​ಗಳನ್ನು ಕಂಗನಾ ಕೇಳುತ್ತಿದ್ದಾರೆ. ಈ ಮಧ್ಯೆ ಕಂಗನಾಗೆ ಹಾಲಿವುಡ್​ನಿಂದ ಆಫರ್ ಬರುವ ಸೂಚನೆ ಸಿಕ್ಕಿತ್ತು. ಈ ಎಲ್ಲಾ ಬೆಳವಣಿಗೆ ಮಧ್ಯೆಯೇ ಕಂಗನಾ ಇನ್​ಸ್ಟಾಗ್ರಾಮ್​ ಖಾತೆ ಸಂಕಷ್ಟಕ್ಕೆ ಸಿಲುಕಿದೆ.

ಕಂಗನಾ, ‘ಥಲೈವಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ಕೆಲಸ ಸಂಪೂರ್ಣವಾಗಿ ಪೂರ್ಣಗೊಂಡಿದ್ದು, ರಿಲೀಸ್​ಗೆ ರೆಡಿ ಇದೆ. ಕೊವಿಡ್​ ಕಾರಣದಿಂದ ಸಿನಿಮಾ ಬಿಡುಗಡೆ ತಡವಾಗಿದೆ. ಇದಲ್ಲದೆ, ಧಾಕಡ್​ ಹಾಗೂ ತೇಜಸ್​ ಸಿನಿಮಾಗಳು ಅವರ ಕೈಯಲ್ಲಿವೆ. ಕಂಗನಾ ರಣಾವತ್​ ಅವರ ಟ್ವಿಟರ್​ ಖಾತೆಯನ್ನು ಟ್ಟಿಟರ್ ಬ್ಲಾಕ್​ ಮಾಡಿದೆ. ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ಟ್ವೀಟ್​ ಮಾಡಲಾಗುತ್ತಿದೆ ಎನ್ನುವ ಕಾರಣಕ್ಕೆ ಟ್ವಿಟರ್​ ಈ ನಿರ್ಧಾರಕ್ಕೆ ಬಂದಿತ್ತು.

ಇದನ್ನೂ ಓದಿ: Kangana Ranaut: ನಟಿ ಕಂಗನಾರ ಹಾಟ್ ಫೊಟೊಸ್ ವೈರಲ್ ಆದ ಬೆನ್ನಲ್ಲೇ ಡಿನ್ನರ್ ಡೇಟ್ ಚಿತ್ರಗಳೂ ವೈರಲ್!

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು