AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಗನಾಗೆ ಇನ್​ಸ್ಟಾಗ್ರಾಮ್​ಗೆ ಚೀನಾ ಹ್ಯಾಕರ್ಸ್​ ಕಾಟ; ತಾಲಿಬಾನ್​ ಪೋಸ್ಟ್​ಗಳು ಡಿಲೀಟ್ ​

ನಟಿ ಕಂಗನಾ ರಣಾವತ್​ ಬಾಲಿವುಡ್​ನಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ನಟನೆ ಜತೆಗೆ ನಿರ್ದೇಶನದಲ್ಲೂ ಅವರು ಬ್ಯುಸಿ. ಈ ಮಧ್ಯೆ ಸಾಕಷ್ಟು ಸಿನಿಮಾ ಆಫರ್​ಗಳು ಅವರ ಕೈಯಲ್ಲಿವೆ.

ಕಂಗನಾಗೆ ಇನ್​ಸ್ಟಾಗ್ರಾಮ್​ಗೆ ಚೀನಾ ಹ್ಯಾಕರ್ಸ್​ ಕಾಟ; ತಾಲಿಬಾನ್​ ಪೋಸ್ಟ್​ಗಳು ಡಿಲೀಟ್ ​
ಕಂಗನಾ
TV9 Web
| Edited By: |

Updated on: Aug 18, 2021 | 4:51 PM

Share

ಟ್ವಿಟರ್​ ನೀತಿಗಳನ್ನು ಪಾಲಿಸದ ಆರೋಪದ ಮೇಲೆ ಕಂಗನಾ ರಣಾವತ್​ ಟ್ವಿಟರ್​ ಖಾತೆಯನ್ನು ರದ್ದುಗೊಳಿಸಲಾಗಿದೆ. ಈ ಬೆನ್ನಲ್ಲೇ ಅವರು ಇನ್​ಸ್ಟಾಗ್ರಾಮ್​ನಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಹೆಚ್ಚಿನ ಮಾಹಿತಿಯನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿಯೇ ಹಂಚಿಕೊಳ್ಳುತ್ತಿದ್ದಾರೆ. ಆದರೆ, ಈಗ ಅವರ ಇನ್​ಸ್ಟಾಗ್ರಾಮ್​ಗೂ ಕುತ್ತು ಬಂದಿದೆ. ಈ ಬಗ್ಗೆ ಅವರು ಸೋಶೀಯಲ್​ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಮಾಡಿದ್ದಾರೆ.

‘ನಿನ್ನೆ ರಾತ್ರಿ ಚೀನಾದಿಂದ ನನ್ನ ಖಾತೆಗೆ ಲಾಗಿನ್​ ಆಗಲು ಯಾರೋ ಪ್ರಯತ್ನಿಸಿದ್ದಾರೆ ಎನ್ನುವ ಅಲರ್ಟ್​ ಬಂತು. ಇದಾದ ನಂತರ ಆ ಮೆಸೇಜ್​ ಮಾಯವಾಯಿತು. ನಾನು ಪೋಸ್ಟ್​ ಮಾಡಿದ್ದ ತಾಲಿಬಾನ್​ಗೆ ಸಂಬಂಧಿಸಿದ ಎಲ್ಲಾ ಸ್ಟೋರಿಗಳು ಮುಂಜಾನೆ ವೇಳೆಗೆ ಕಾಣೆಯಾಗಿದ್ದವು. ನಾನು ಇನ್​ಸ್ಟಾಗ್ರಾಮ್​​ ಅವರ ಜತೆ ಮಾತನಾಡಿದ ನಂತರವೇ ನನ್ನ ಖಾತೆಗೆ ಲಾಗಿನ್​ ಆಗೋಕೆ ಸಾಧ್ಯವಾಯಿತು. ನಾನು ಏನಾದರೂ ಬರೆಯೋಕೆ ಹೋದರೆ ಲಾಗ್​ಔಟ್​ ಆಗುತ್ತಿದೆ. ಇದು ದೊಡ್ಡ ಅಂತಾರಾಷ್ಟ್ರೀಯ ಪಿತೂರಿ’ ಎಂದು ಅವರು ದೂರಿದ್ದಾರೆ.

ನಟಿ ಕಂಗನಾ ರಣಾವತ್​ ಬಾಲಿವುಡ್​ನಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ನಟನೆ ಜತೆಗೆ ನಿರ್ದೇಶನದಲ್ಲೂ ಅವರು ಬ್ಯುಸಿ. ಈ ಮಧ್ಯೆ ಸಾಕಷ್ಟು ಸಿನಿಮಾ ಆಫರ್​ಗಳು ಅವರ ಕೈಯಲ್ಲಿವೆ. ಹಲವು ಸ್ಕ್ರಿಪ್ಟ್​ಗಳನ್ನು ಕಂಗನಾ ಕೇಳುತ್ತಿದ್ದಾರೆ. ಈ ಮಧ್ಯೆ ಕಂಗನಾಗೆ ಹಾಲಿವುಡ್​ನಿಂದ ಆಫರ್ ಬರುವ ಸೂಚನೆ ಸಿಕ್ಕಿತ್ತು. ಈ ಎಲ್ಲಾ ಬೆಳವಣಿಗೆ ಮಧ್ಯೆಯೇ ಕಂಗನಾ ಇನ್​ಸ್ಟಾಗ್ರಾಮ್​ ಖಾತೆ ಸಂಕಷ್ಟಕ್ಕೆ ಸಿಲುಕಿದೆ.

ಕಂಗನಾ, ‘ಥಲೈವಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ಕೆಲಸ ಸಂಪೂರ್ಣವಾಗಿ ಪೂರ್ಣಗೊಂಡಿದ್ದು, ರಿಲೀಸ್​ಗೆ ರೆಡಿ ಇದೆ. ಕೊವಿಡ್​ ಕಾರಣದಿಂದ ಸಿನಿಮಾ ಬಿಡುಗಡೆ ತಡವಾಗಿದೆ. ಇದಲ್ಲದೆ, ಧಾಕಡ್​ ಹಾಗೂ ತೇಜಸ್​ ಸಿನಿಮಾಗಳು ಅವರ ಕೈಯಲ್ಲಿವೆ. ಕಂಗನಾ ರಣಾವತ್​ ಅವರ ಟ್ವಿಟರ್​ ಖಾತೆಯನ್ನು ಟ್ಟಿಟರ್ ಬ್ಲಾಕ್​ ಮಾಡಿದೆ. ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ಟ್ವೀಟ್​ ಮಾಡಲಾಗುತ್ತಿದೆ ಎನ್ನುವ ಕಾರಣಕ್ಕೆ ಟ್ವಿಟರ್​ ಈ ನಿರ್ಧಾರಕ್ಕೆ ಬಂದಿತ್ತು.

ಇದನ್ನೂ ಓದಿ: Kangana Ranaut: ನಟಿ ಕಂಗನಾರ ಹಾಟ್ ಫೊಟೊಸ್ ವೈರಲ್ ಆದ ಬೆನ್ನಲ್ಲೇ ಡಿನ್ನರ್ ಡೇಟ್ ಚಿತ್ರಗಳೂ ವೈರಲ್!

ಎಐನಿಂದಾಗುವ ಅಪಾಯಗಳ ತಗ್ಗಿಸುವ ಉಪಾಯ ಕಂಡುಕೊಳ್ಳಬೇಕು: ಅಶ್ವಿನಿ ವೈಷ್ಣವ್
ಎಐನಿಂದಾಗುವ ಅಪಾಯಗಳ ತಗ್ಗಿಸುವ ಉಪಾಯ ಕಂಡುಕೊಳ್ಳಬೇಕು: ಅಶ್ವಿನಿ ವೈಷ್ಣವ್
ಎಐ ಇಂಪ್ಯಾಕ್ಟ್​ ಶೃಂಗಸಭೆ: ವಿಶ್ವನಾಯಕರೊಂದಿಗೆ ಪ್ರಧಾನಿ ಮೋದಿ ಮಾತುಕತೆ
ಎಐ ಇಂಪ್ಯಾಕ್ಟ್​ ಶೃಂಗಸಭೆ: ವಿಶ್ವನಾಯಕರೊಂದಿಗೆ ಪ್ರಧಾನಿ ಮೋದಿ ಮಾತುಕತೆ
ಬೆಂಗಳೂರಿನಲ್ಲಿ ಕಸದ ಸಮಸ್ಯೆ: ನಿಂತಲ್ಲೇ ನಿಂತ ತ್ಯಾಜ್ಯ ಸಂಗ್ರಹಣೆ ವಾಹನಗಳು
ಬೆಂಗಳೂರಿನಲ್ಲಿ ಕಸದ ಸಮಸ್ಯೆ: ನಿಂತಲ್ಲೇ ನಿಂತ ತ್ಯಾಜ್ಯ ಸಂಗ್ರಹಣೆ ವಾಹನಗಳು
KSRTC ಬಸ್​​ನ ಟಿಕೆಟ್ ಮೆಷಿನ್​​ನನ್ನೇ ಕದ್ದೊಯ್ದ ಕಳ್ಳ!
KSRTC ಬಸ್​​ನ ಟಿಕೆಟ್ ಮೆಷಿನ್​​ನನ್ನೇ ಕದ್ದೊಯ್ದ ಕಳ್ಳ!
ಮೆಜೆಸ್ಟಿಕ್ ರೈಲ್ವೆ ಪಾರ್ಕಿಂಗ್ ಲಾಟ್‌ನಲ್ಲಿ ಕಾರಿಗೆ ಬೆಂಕಿ
ಮೆಜೆಸ್ಟಿಕ್ ರೈಲ್ವೆ ಪಾರ್ಕಿಂಗ್ ಲಾಟ್‌ನಲ್ಲಿ ಕಾರಿಗೆ ಬೆಂಕಿ
ವೇಗವಾಗಿ ಬಂದು ಕಾಲುವೆಗೆ ಉರುಳಿದ ಕಾರು
ವೇಗವಾಗಿ ಬಂದು ಕಾಲುವೆಗೆ ಉರುಳಿದ ಕಾರು
ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ
ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ