AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಟಿಯಲ್ಲಿ ಈ ವ್ಯಕ್ತಿಗೆ ಪದೇಪದೇ ಕಿಸ್ ಮಾಡಿದ ಕಂಗನಾ; ಫ್ಯಾನ್ಸ್​ಗೆ ಮೂಡಿತು ಅನುಮಾನ

ಕಂಗನಾ ದೊಡ್ಡ ಪಾರ್ಟಿ ಏರ್ಪಡಿಸಿದ್ದರು. ಈ ಪಾರ್ಟಿಯಲ್ಲಿ ಅನೇಕರು ಭಾಗಿಯಾಗಿದ್ದರು. ಆಗ ಕಂಗನಾ ವ್ಯಕ್ತಿಯೊಬ್ಬರಿಗೆ ನಿರಂತರವಾಗಿ ಕಿಸ್ ಮಾಡಿದ್ದಾರೆ.

ಪಾರ್ಟಿಯಲ್ಲಿ ಈ ವ್ಯಕ್ತಿಗೆ ಪದೇಪದೇ ಕಿಸ್ ಮಾಡಿದ ಕಂಗನಾ; ಫ್ಯಾನ್ಸ್​ಗೆ ಮೂಡಿತು ಅನುಮಾನ
TV9 Web
| Edited By: |

Updated on: May 17, 2022 | 9:47 PM

Share

ನಟಿ ಕಂಗನಾ ರಣಾವತ್ (Kangana Ranaut)​ ಸದಾ ಸುದ್ದಿಯಲ್ಲಿರೋಕೆ ಬಯಸುತ್ತಾರೆ. ಅವರು ನೆಗೆಟಿವ್ ವಿಚಾರಗಳಿಗೆ ಸುದ್ದಿ ಆಗೋದು ಹೆಚ್ಚು. ಅವರು ನಡೆದುಕೊಳ್ಳುವ ರೀತಿ ಅನೇಕರಿಗೆ ಇಷ್ಟವಾಗುವುದಿಲ್ಲ. ಈ ಕಾರಣಕ್ಕೆ ಅವರನ್ನು ಹಿಗ್ಗಾಮುಗ್ಗಾ ಟ್ರೋಲ್ ಮಾಡಲಾಗುತ್ತದೆ. ಈಗ ಕಂಗನಾ ಸಖತ್ ಸುದ್ದಿ ಆಗಿದ್ದಾರೆ. ‘ಧಾಕಡ್’ ಸಿನಿಮಾ (Dhaakad Movie) ತೆರೆಕಾಣುವುದಕ್ಕೂ ಮೊದಲು ಕಂಗನಾ ಗ್ರ್ಯಾಂಡ್ ಪಾರ್ಟಿ ಆಯೋಜನೆ ಮಾಡಿದ್ದರು. ಈ ಪಾರ್ಟಿಯಲ್ಲಿ ಅವರು ವ್ಯಕ್ತಿಯೊಬ್ಬರಿಗೆ ಪದೇಪದೇ ಕಿಸ್ ಮಾಡಿದ್ದಾರೆ. ಸದ್ಯ ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ. ಈ ವಿಡಿಯೋ ನೋಡಿದ ಅನೇಕರು ಅಚ್ಚರಿ ಹೊರಹಾಕಿದ್ದಾರೆ. ಇನ್ನೂ ಕೆಲವರು ಕಂಗನಾ ಬಗ್ಗೆ ಕೀಳಾಗಿ ಕಮೆಂಟ್ ಮಾಡುತ್ತಿದ್ದಾರೆ.

‘ಧಾಕಡ್​​’ ಸಿನಿಮಾದಲ್ಲಿ ಸ್ಪೈ ಏಜೆಂಟ್ ಅಗ್ನಿ ಪಾತ್ರದಲ್ಲಿ ಕಂಗನಾ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾ ಮೇ 20ರಂದು ತೆರೆಗೆ ಬರುತ್ತಿದೆ. ಸಿನಿಮಾ ತೆರೆಗೆ ಬರುವುದಕ್ಕೂ ಮೊದಲು ಕಂಗನಾ ದೊಡ್ಡ ಪಾರ್ಟಿ ಏರ್ಪಡಿಸಿದ್ದರು. ಈ ಪಾರ್ಟಿಯಲ್ಲಿ ಅನೇಕರು ಭಾಗಿಯಾಗಿದ್ದರು. ಆಗ ಕಂಗನಾ ವ್ಯಕ್ತಿಯೊಬ್ಬರಿಗೆ ನಿರಂತರವಾಗಿ ಕಿಸ್ ಮಾಡಿದ್ದಾರೆ. ಸದ್ಯ, ಈ ವಿಡಿಯೋ ವೈರಲ್ ಆಗುತ್ತಿದೆ.

ಇದನ್ನೂ ಓದಿ
Image
ಮಹೇಶ್​ ಬಾಬು ಮಾತಿಗೆ ಬೆಂಬಲ ನೀಡಿದ ಕಂಗನಾ; ಬಾಲಿವುಡ್ ವರ್ಸಸ್​​ ಸೌತ್​ ಚರ್ಚೆ ಇನ್ನಷ್ಟು ಜೋರು
Image
ಕಂಗನಾ ರಣಾವತ್​ ಯಾಕಿನ್ನೂ ಮದುವೆ ಆಗಿಲ್ಲ? ಅದಕ್ಕೆ ಕಾರಣ ಆಗಿದ್ದು ಒಂದೇ ಒಂದು ಗಾಸಿಪ್​; ಏನದು?
Image
Kangana Ranaut: ಯೋಗಿ ಆದಿತ್ಯನಾಥ್​ ಭೇಟಿ ಮಾಡಿದ ನಟಿ ಕಂಗನಾ ರಣಾವತ್​; ಈ ಮೀಟಿಂಗ್​ ಉದ್ದೇಶ ಏನು?
Image
‘ಅಜಯ್​ ದೇವಗನ್​ ಹೇಳಿದ್ರಲ್ಲಿ ತಪ್ಪಿಲ್ಲ, ಆದ್ರೆ ಸಂಸ್ಕೃತ ರಾಷ್ಟ್ರ ಭಾಷೆ ಆಗಲಿ’: ಕಂಗನಾ ಹೊಸ ಟ್ವಿಸ್ಟ್​

ಇದನ್ನೂ ಓದಿ: ಬಾಲಿವುಡ್​ನ ಯಾರೊಬ್ಬರಿಗೂ ನನ್ನ ಮನೆಗೆ ಬರುವ ಅರ್ಹತೆ ಇಲ್ಲ; ಕಂಗನಾ ನೇರ ನುಡಿ

ಕಂಗನಾ ಈ ರೀತಿ ಕಿಸ್ ಮಾಡಿದ್ದು ಶಿವಂ​ ಸಿಂಗ್ ಅವರಿಗೆ. ಶಿವಂ​ ಅವರು ಇತ್ತೀಚೆಗೆ ಪೂರ್ಣಗೊಂಡ ‘ಲಾಕಪ್​’ ಶೋನಲ್ಲಿ ಸ್ಪರ್ಧಿ ಆಗಿ ಕಾಣಿಸಿಕೊಂಡಿದ್ದರು. ಈ ಶೋ ಅನ್ನು ಕಂಗನಾ ನಡೆಸಿಕೊಟ್ಟಿದ್ದರು. ಇಬ್ಬರ ನಡುವೆ ಒಳ್ಳೆಯ ಬಾಂಧವ್ಯ ಬೆಳೆದಿತ್ತು. ಶೋ ಮುಗಿದ ಬಳಿಕವೂ ಅದು ಮುಂದುವರಿದಿದೆ. ಹೀಗಾಗಿ, ಕಂಗನಾ ಅವರು ಶಿವಂಗೆ ಕಿಸ್ ಮಾಡಿದ್ದಾರೆ.

ಇದನ್ನೂ ಓದಿ: ಬಾಲಿವುಡ್​ನ ಯಾರೊಬ್ಬರಿಗೂ ನನ್ನ ಮನೆಗೆ ಬರುವ ಅರ್ಹತೆ ಇಲ್ಲ; ಕಂಗನಾ ನೇರ ನುಡಿ

ಈ ವಿಡಿಯೋಗೆ ನಾನಾ ರೀತಿಯ ಕಮೆಂಟ್​ಗಳು ಬರುತ್ತಿವೆ. ‘ಕಂಗನಾಗೆ ಒಂಟಿಯಾಗಿದ್ದು ಸಾಕಾಗಿದೆ. ಅದಕ್ಕಾಗಿ ಈ ರೀತಿ ಆಡುತ್ತಿದ್ದಾರೆ. ಅವರು ಒಂದು ಮದುವೆ ಆದರೆ ಎಲ್ಲವೂ ಸರಿ ಆಗುತ್ತದೆ’ ಎಂದು ಕೆಲವರು ಬರೆದುಕೊಂಡಿದ್ದಾರೆ. ಇನ್ನೂ ಕೆಲವರು ‘ಕಂಗನಾ ಉಳಿದವರ ಬಗ್ಗೆ ಕೀಳಾಗಿ ಮಾತನಾಡುತ್ತಾರೆ. ಆದರೆ, ತಮ್ಮ ವಿಚಾರದ ಬಂದಾಗ ಈ ರೀತಿ ಮಾಡುತ್ತಾರೆ’ ಎಂದಿದ್ದಾರೆ.

ಬಾಲಿವುಡ್​ನಲ್ಲಿ ನನಗೆ ಗೆಳೆಯರಿಲ್ಲ ಎಂದಿದ್ದ ಕಂಗನಾ:

ಯೂಟ್ಯೂಬ್ ಚಾನೆಲ್ ಒಂದಕ್ಕೆ ಕಂಗನಾ ಸಂದರ್ಶನ ನೀಡಿದ್ದಾರೆ. ‘ಬಾಲಿವುಡ್​ನ ಮೂವರನ್ನು ಮನೆಗೆ ಊಟಕ್ಕೆ ಕರೆಯುವುದಾದರೆ ಅವರು ಯಾರ್ಯಾರು’ ಎಂದು ಕಂಗನಾಗೆ ಕೇಳಲಾಯಿತು. ಇದಕ್ಕೆ ಕಂಗನಾ ಒಂದು ಕ್ಷಣವೂ ಯೋಚಿಸದೆ ಉತ್ತರ ನೀಡಿದ್ದಾರೆ. ‘ಇದಕ್ಕೆ ಬಾಲಿವುಡ್​ನ ಯಾರೊಬ್ಬರೂ ಅರ್ಹರಲ್ಲ. ಮನೆಯಿಂದ ಹೊರಗೆ ಅವರನ್ನು ಭೇಟಿ ಆಗುವುದು ಓಕೆ. ಆದರೆ, ಮನೆಗೆ ಆಮಂತ್ರಿಸಲು ಯಾರೂ ಅರ್ಹರಲ್ಲ’ ಎಂದಿದ್ದರು ಕಂಗನಾ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್