AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ಉಗ್ರರಿಂದ ಹತ್ಯೆಯಾದ ಕಾಶ್ಮೀರಿ ಹುಡುಗಿ ಪಾತ್ರದಲ್ಲಿ ಕಂಗನಾ? ಸೆನ್ಸೇಷನ್​ ಸೃಷ್ಟಿಸಿದೆ ಹೊಸ ಸಿನಿಮಾ ಸುದ್ದಿ

Kangana Ranaut | Kashmir: ಕಂಗನಾ ರಣಾವತ್​ ಜೊತೆ ಖ್ಯಾತ ನಿರ್ದೇಶಕ ಮಧುರ್​ ಭಂಡಾರ್ಕರ್ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ವಿಷಯ ಕೇಳಿ ಅಭಿಮಾನಿಗಳು ಥ್ರಿಲ್​ ಆಗಿದ್ದಾರೆ.

Kangana Ranaut: ಉಗ್ರರಿಂದ ಹತ್ಯೆಯಾದ ಕಾಶ್ಮೀರಿ ಹುಡುಗಿ ಪಾತ್ರದಲ್ಲಿ ಕಂಗನಾ? ಸೆನ್ಸೇಷನ್​ ಸೃಷ್ಟಿಸಿದೆ ಹೊಸ ಸಿನಿಮಾ ಸುದ್ದಿ
ಕಂಗನಾ ರಣಾವತ್
TV9 Web
| Edited By: |

Updated on: Aug 03, 2022 | 8:20 AM

Share

ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಈ ವರ್ಷ ಮಾರ್ಚ್​ ತಿಂಗಳಲ್ಲಿ ಬಿಡುಗಡೆಯಾಗಿ ಸೂಪರ್​ ಹಿಟ್​ ಆಯಿತು. ಬಾಕ್ಸ್​ ಆಫೀಸ್​ನಲ್ಲಿ 250 ಕೋಟಿ ರೂಪಾಯಿಗಿಂತಲೂ ಅಧಿಕ ಹಣ ಗಳಿಸಿದ್ದು ಮಾತ್ರವಲ್ಲದೇ ದೇಶಾದ್ಯಂತ ಸಂಚಲನ ಮೂಡಿಸುವಲ್ಲಿ ಆ ಚಿತ್ರ ಯಶಸ್ವಿ ಆಯಿತು. ಈಗ ಕಾಶ್ಮೀರದ (Kashmir) ಇನ್ನಷ್ಟು ಕಥೆಯನ್ನು ಸಿನಿಮಾ ಮಾಡಲು ಪ್ರಯತ್ನಗಳು ನಡೆಯುತ್ತಿವೆ. ಖ್ಯಾತ ನಿರ್ದೇಶಕ ಮಧುರ್​ ಭಂಡಾರ್ಕರ್​ (Madhur Bhandarkar) ಅವರು ಇಂಥದ್ದೊಂದು ಸಿನಿಮಾ ಮಾಡುವ ಬಗ್ಗೆ ಸುದ್ದಿ ಕೇಳಿಬಂದಿದೆ. ಉಗ್ರರಿಂದ ಹತ್ಯೆಯಾದ ಕಾಶ್ಮೀರಿ ಗಾಯಕಿಯ ಕಥೆ ಈ ಸಿನಿಮಾದಲ್ಲಿ ಇರಲಿದೆ. ನಟಿ ಕಂಗನಾ ರಣಾವತ್​ (Kangana Ranaut) ಅವರು ಈ ಚಿತ್ರದಲ್ಲಿ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಚಿತ್ರತಂಡದಿಂದ ಈವರೆಗೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

‘ಫ್ಯಾಷನ್​’, ‘ಹೀರೋಯಿನ್​’, ಕ್ಯಾಲೆಂಡರ್​ ಗರ್ಲ್ಸ್​’, ‘ಇಂದೂ ಸರ್ಕಾರ್​’, ‘ಪೇಜ್​ 3’ ಮುಂತಾದ ಸಿನಿಮಾಗಳನ್ನು ಮಾಡಿದ ಖ್ಯಾತಿ ಮಧುರ್​ ಭಂಡಾರ್ಕರ್​ ಅವರಿಗೆ ಸಲ್ಲುತ್ತದೆ. ಈಗ ಅವರು ‘ಬಬ್ಲಿ ಬೌನ್ಸರ್​’ ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ನಂತರ ಕಂಗನಾ ರಣಾವತ್​ ಜೊತೆ ಸಿನಿಮಾ ಮಾಡಲಿದ್ದಾರೆ ಎಂಬ ಗುಸುಗುಸು ಹರಿದಾಡುತ್ತಿದೆ.

ಈ ಸುದ್ದಿ ಕೇಳಿ ಅಭಿಮಾನಿಗಳು ಥ್ರಿಲ್​ ಆಗಿದ್ದಾರೆ. ಆದರೆ ಕಂಗನಾ ರಣಾವತ್​ ಅವರಾಗಲೀ, ಮಧುರ್​ ಭಂಡಾರ್ಕರ್​ ಅವರಾಗಲೀ ಈ ಪ್ರಾಕೆಜ್ಟ್​ ಬಗ್ಗೆ ಅಧಿಕೃತವಾಗಿ ಯಾವುದೇ ಹೇಳಿಕೆ ನೀಡಿಲ್ಲ. ಇನ್ನೊಂದು ಮೂಲದ ಪ್ರಕಾರ, ಈ ಚಿತ್ರ ಸೆಟ್ಟೇರುವುದು ಅನುಮಾನ ಎನ್ನಲಾಗುತ್ತಿದೆ. ಯಾಕೆಂದರೆ, ಕಂಗನಾ ರಣಾವತ್​ ಅವರ ಇತ್ತೀಚಿನ ಚಿತ್ರಗಳು ಗೆದ್ದಿಲ್ಲ. ನಾಯಕಿ ಪ್ರಧಾನ ಕಥೆಯನ್ನು ಆಯ್ಕೆ ಮಾಡಿಕೊಂಡ ಅವರಿಗೆ ಸೂಕ್ತ ಫಲ ಸಿಗುತ್ತಿಲ್ಲ. ‘ಪಂಗಾ’, ‘ಧಾಕಡ್​’ ಮುಂತಾದ ಚಿತ್ರಗಳು ಸೋತಿವೆ. ಹಾಗಾಗಿ ಮಧುರ್​ ಭಂಡಾರ್ಕರ್​ ಕೊಂಚ ಹಿಂದೇಟು ಹಾಕುತ್ತಿದ್ದಾರೆ ಎಂಬ ಗಾಸಿಪ್​ ಹಬ್ಬಿದೆ.

ಇದನ್ನೂ ಓದಿ
Image
Emergency: ‘ಇಂದಿರಾ ಗಾಂಧಿ ಈ ವಿಡಿಯೋದಲ್ಲಿ ಕಂಗನಾ ರೀತಿ ಮಾಡ್ತಿದ್ದಾರೆ’: ರಾಮ್​ ಗೋಪಾಲ್​ ವರ್ಮಾ
Image
Emergency: ಇದು ಇಂದಿರಾ ಗಾಂಧಿ ಅಲ್ಲ, ಕಂಗನಾ ರಣಾವತ್! ಗಮನ ಸೆಳೆದ ‘ಎಮರ್ಜೆನ್ಸಿ’ ಫಸ್ಟ್​ ಲುಕ್​
Image
Kangana Ranaut: ‘ಶಿವಸೇನೆ ಹನುಮಾನ್​ ಚಾಲೀಸ ಬ್ಯಾನ್​ ಮಾಡಿದ್ರೆ ಅವರನ್ನು ಶಿವ ಕೂಡ ಕಾಪಾಡಲ್ಲ’: ಕಂಗನಾ ರಣಾವತ್​
Image
ನಿರ್ಮಾಪಕರ​ ಹೊಟ್ಟೆ ಮೇಲೆ ಹೊಡೆದ ಕಂಗನಾ; ಒಟಿಟಿಯಲ್ಲೂ ‘ಧಾಕಡ್​’ ಚಿತ್ರಕ್ಕೆ ಬೇಡಿಕೆ ಇಲ್ಲ

ಕಂಗನಾ ರಣಾವತ್​ ಅವರು ಸದ್ಯ ‘ಎಮರ್ಜೆನ್ಸಿ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಅವರು ಇಂದಿರಾ ಗಾಂಧಿ ಪಾತ್ರವನ್ನು ಮಾಡುತ್ತಿದ್ದಾರೆ. ದೇಶದಲ್ಲಿ ಹೇರಲಾಗಿದ್ದ ತುರ್ತು ಪರಿಸ್ಥಿತಿಯನ್ನು ಆಧರಿಸಿ ಈ ಸಿನಿಮಾ ಮೂಡಿಬರುತ್ತಿದೆ. ಈಗಾಗಲೇ ಇದರ ಟೀಸರ್​ ಮತ್ತು ಪೋಸ್ಟರ್​ಗಳು ಗಮನ ಸೆಳೆಯುತ್ತಿವೆ. ಆ ಚಿತ್ರದ ಕೆಲಸಗಳು ಮುಗಿದ ನಂತರವೇ ಅವರು ಮುಂದಿನ ಸಿನಿಮಾದ ಬಗ್ಗೆ ಅನೌನ್ಸ್​ ಮಾಡುವ ನಿರೀಕ್ಷೆ ಇದೆ.

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?